Breaking News

ಬೆಳಗಾವಿ

ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು

ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು ಕರ್ನಾಟಕದ ಎರಡನೇ ದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ಆಡಳಿತದ ಸುಧಾರಣೆಯ ದೃಷ್ಟಿಯಿಂದ ವಿಭಜನೆ ಮಾಡಬೇಕೆಂಬ ಬೇಡಿಕೆಗಳು ಮತ್ತೆ ಎದ್ದಿವೆ. 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಜಿಲ್ಲೆ, 18 ವಿಧಾನಸಭಾ ಮತ್ತು 2 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.   ಬೆಳಗಾವಿ ಜಿಲ್ಲೆಯನ್ನು ಚಿಕ್ಕೋಡಿ ಮತ್ತು ಗೋಕಾಕವೆಂಬ ಎರಡು ಜಿಲ್ಲಾ ಕೇಂದ್ರಗಳಾಗಿ ವಿಭಜಿಸುವ ಹೋರಾಟ ಕಳೆದ ಎರಡು ದಶಕಗಳಿಂದ ನಡೆಯುತ್ತಿದೆ. ಇತ್ತ ಅಥಣಿ ಮತ್ತು …

Read More »

ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ …

Read More »

ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ

ಗೋಕಾಕ (ಬೆಳಗಾವಿ ಜಿಲ್ಲೆ): ‘ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ. ಅಂಥವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು‌ ಇದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಕೇಳಿದ್ಧಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸೊಕ್ಕಿಕೊಂಡಿದ್ದಾರೆ. ಯಾವ ನೈತಿಕತೆ ಇದೆ ಅವರಿಗೆ’ ಎಂದರು. …

Read More »

ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು

ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು ಬೆಳಗಾವಿ: ನದಿ ನೀರಿನ ಪ್ರವಾಹದಲ್ಲಿ ಸಿಲುಕಿ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು, ನಮ್ಮ‌ಸಮಸ್ಯೆ ಬಗೆಹರಿಸುವಂತೆ ಸಂತ್ರಸ್ತ ಮಹಿಳೆಯರು ಬೇಡಿಕೊಂಡ ಘಟನೆ ಸೋಮವಾರ (ಆ 05) ನಡೆದಿದೆ. ಗೋಕಾಕ ನಗರದಲ್ಲಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿದಾಗ, ಅನೇಕ‌ ಮಹಿಳೆಯರು ಕೈ ಮುಗಿದು ಬೇಡಿಕೊಂಡರು. ನಮಗೆ ಪರಿಹಾರ ಕೊಡಿ, …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ರಾಜನಕಟ್ಟಿ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ಬಾದರವಾಡಿ, ಮಲ್ಲಪ್ಪಾ ನಿ …

Read More »

ಬೆಳಗಾವಿ | ಬೋಟ್‌ ಪಲ್ಟಿ: ತಪ್ಪಿದ ಅನಾಹುತ

ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್‌ಡಿಆರ್‌ಎಫ್‌ ತಂಡ ಬೋಟ್‌ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್‌ ಜಾಕೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ಇಲ್ಲಿರುವ ಜಾಕ್ವೆಲ್‌ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್‌ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್‌ಡಿಆರ್‌ಎಫ್‌ ತಂಡದವರು ಬೋಟ್‌ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್‌ ನಿಯಂತ್ರಣ …

Read More »

ಹೊಟ್ಟೆ ತುಂಬಿಸದ ಕಾಳಜಿ‌ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ

ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿ‌ನ ಆಹಾರ ತಯಾರಿಸುತ್ತಿದ್ದಾರೆ. ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ‌ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ …

Read More »

ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಿ’

ಬೆಳಗಾವಿ: ‘ಜಿಲ್ಲೆಯ ಎಲ್ಲ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪ್ರವಾಹದಿಂದ ಜನರು ಮತ್ತು‌ ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚಿಸಿದರು.   ಅತಿವೃಷ್ಟಿಯಿಂದ ಉಂಟಾದ ಹಾನಿ, ಪ್ರವಾಹ ನಿರ್ವಹಣೆ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿ‌ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಹೆಚ್ಚುವ ಸಾಧ್ಯತೆ …

Read More »

ಬೆಳಗಾವಿ ಹುಡುಗನ ಫ್ಯೂಸ್ ಕಿತ್ತ ಗೌಡ್ತಿ

ಬೆಳಗಾವಿ : ಬೆಂಗಳೂರಿನ ಕಸ್ತೂರಬಾ ನಗರದ ಯುವತಿ ಪ್ರಿಯಾಂಕಾ(24) ಬೆಳಗಾವಿಯ ಅಲಾರವಾಡ ಗ್ರಾಮದ ರಾಹುಲ್ ಎಂಬ ಯುವಕ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದ ಸುದ್ದಿ ನಿನ್ನೆ ವೈರಲ್ ಆಗಿತ್ತು. ಆದರೆ ಸಧ್ಯ ಈ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಾರಂಭವಾದ ಪ್ರೀತಿ ಮದುವೆಗೆ ಬಂದು ನಿಂತಿತ್ತು. ನಿನ್ನೆಯಷ್ಟೇ ಯುವತಿ ಹಾಗೂ ಬೆಳಗಾವಿ ಯುವಕನ ಜೊತೆ ಮದುವೆಯಾಗಿತ್ತು.

Read More »

ಕಣಕುಂಬಿ ಅರಣ್ಯ: 11.5 ಸೆಂ.ಮೀ ಮಳೆ

ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನ ಉಳಿದೆಡೆ ಸಾಧಾರಣ ಮಳೆಯಾಗಿದೆ. ಕಂದಾಯ ಇಲಾಖೆಯಂತೆ ಕಣಕುಂಬಿ ಅರಣ್ಯದಲ್ಲಿ 11.5 ಸೆಂ.ಮೀ, ಲೋಂಡಾ-9 ಸೆಂ.ಮೀ, ಜಾಂಬೋಟಿ ಸುತ್ತಮುತ್ತ 6.2 ಸೆಂ.ಮೀ ಮತ್ತು ಉಳಿದೆಡೆ ಸರಾಸರಿ 5 ಸೆಂ.ಮೀ ಮಳೆ ಸುರಿದಿದೆ.   ಪಟ್ಟಣದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ತಾಲ್ಲೂಕಿನ ನಂದಗಡ, ಹಲಸಿ ಭಾಗದಲ್ಲಿ ಸಂಜೆ ತುಂತುರು ಮಳೆಯಾಗಿದೆ. …

Read More »