ಬೆಳಗಾವಿ: ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಹೇಗೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಉತ್ತರವಲಯ ಡಿಐಜಿ ಟಿ.ಪಿ.ಶೇಷ ಅವರು ಜೈಲಿನ ಸೂಪರಿಂಟೆಂಡೆಂಟ್ ಜ್ಞಾಪನಾ ಪತ್ರ ಬರೆದಿದ್ದಾರೆ. ‘ದರ್ಶನ್ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಬೇಕು. ಆ ಕೊಠಡಿಗೆ 24×7 ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರಿಸಬೇಕು. ಪ್ರತಿನಿತ್ಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಶೇಖರಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ‘ದರ್ಶನ್ ಇರುವ ಸೆಲ್ನ ಕರ್ತವ್ಯಕ್ಕೆ ಪ್ರತ್ಯೇಕವಾಗಿ ಒಬ್ಬ ಮುಖ್ಯವೀಕ್ಷಕ ಅಧಿಕಾರಿ ನಿಯೋಜಿಸಬೇಕು. …
Read More »19 ಕೋಟಿ ವೆಚ್ಚದಲ್ಲಿ ಕೆರೆ ಭರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಹಿರೇಬಾಗೇವಾಡಿ: ‘ಈ ವರ್ಷ ಉತ್ತಮ ಮಳೆಯಾದ ಕಾರಣ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ₹19 ಕೋಟಿ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ ಕೆರೆಗೆ ಬುಧವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಬಾವಿ ಕೆರೆ ತುಂಬಿಸುವ …
Read More »ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ:
ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯಲ್ಲಿರುವ ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ ಎಂದು ಮಂಜುನಾಥ ಅಮರಪ್ಪನವರ ಹೇಳಿದರು. ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಇವರು. ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆ ಮುಂದೆ ಅಷ್ಟೇ ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಓಡಾಡುವುದಿಲ್ಲ. ಪಟ್ಟಣದ ಕೋಟೆಯ ಮುಂದೆ ಇರುವ ಮದ್ಯದ ಅಂಗಡಿ ಸೇರಿದಂತೆ ಎಲ್ಲ ಮದ್ಯದ ಅಂಗಡಿಗಳ ಮುಂದೆ ಸಾರ್ವಜನಿಕರು ಓಡಾಡುತ್ತಾರೆ. …
Read More »ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ:ಹೆಬ್ಬಾಳಕರ
ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು. ಕಾಂಗ್ರೆಸ್ ಎಂದೆಂದಿಗೂ …
Read More »ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಬೆಳಗಾವಿಯಲ್ಲಿ ಪ್ರವಾಹದ ಆತಂಕ
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು ಇದರಿಂದ ಕೃಷ್ಣಾ ಘಟಪ್ರಭಾ ಮತ್ತು ದೂಧ್ ಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಒಂದು ಲಕ್ಷ ಕ್ಯೂಸೆಕ್ಸ್ ದಾಟಿದ್ದು ನದಿ ತೀರದ ಗ್ರಾಮಗಳಲ್ಲಿ ಇನ್ನೂ ಪ್ರವಾಹದ ಆತಂಕ ಮನೆ ಮಾಡಿದೆ. ಈಗ ಲಭ್ಯವಾದ ಮಾಹಿತಿಯಂತೆ ಮಹಾರಾಷ್ಟ್ರದ ರಾಜಾಪುರ ಬಳಿ ಕೃಷ್ಣಾ ನದಿಗೆ ಒಂದು ಲಕ್ಷ ಮತ್ತು ದೂಧ್ ಗಂಗಾ ನದಿಯಿಂದ …
Read More »ಕೊಯ್ನಾ ಜಲಾಶಯದಿಂದ ನೀರು ಬಿಡುವ ಸೂಚನೆ: ನದಿ ತೀರದಲ್ಲಿ ಎಚ್ಚರಿಕೆ
ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ …
Read More »‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ.
ಕಿತ್ತೂರು: ‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ. ಮಾನವರ ಸತತ ಮಲೀನತೆಯ ‘ದಾಳಿ’ಗೆ ಒಳಗಾಗಿರುವ ಇಲ್ಲಿನ ಗುರುವಾರ ಪೇಟೆಯ ಐತಿಹಾಸಿಕ ರಣಗಟ್ಟಿ ಕೆರೆ ತನ್ನ ರಕ್ಷಣೆಗೆ ಮೊರೆ ಇಡುವಂತೆ ಭಾಸವಾಗುತ್ತಿದೆ’ ಎನ್ನುತ್ತಾರೆ ಜನರು. ‘ಈ ಕೆರೆಗೂ ಒಂದು ಐತಿಹಾಸಿಕ ಹಿನ್ನೆಲೆಯಿದೆ. ಕ್ರಾಂತಿನೆಲದ ರಕ್ತಲೇಪಿತ ಖಡ್ಗವನ್ನು ಇದೇ ನೀರಿನಲ್ಲಿ ತೊಳೆಯುತ್ತಿದ್ದರು. ಹಾವು ಕಡಿದರೆ ಇಲ್ಲಿನ ನೀರು ಕುಡಿಯಲು ಕೊಡುತ್ತಿದ್ದರು. ಒಂದು ಕಾಲಕ್ಕೆ ಔಷಧಿಯ …
Read More »ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯ: ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …
Read More »ಚಿಕ್ಕೋಡಿ: ಮಹಡಿ ಮನೆ ಮೊರೆ ಹೋದ ಜನರು
ಚಿಕ್ಕೋಡಿ: ಮೇಲಿಂದ ಮೇಲೆ ಬರುವ ನದಿ ಪ್ರವಾಹ ಭೀತಿಯಿಂದ ಹೊರ ಬರಲು ನದಿ ತೀರದ ಬಹುತೇಕ ಜನರು ಮಹಡಿ ಮನೆಗಳ ಮೊರೆ ಹೋಗಿದ್ದಾರೆ. ತೋಟದ ವಸತಿ ಪ್ರದೇಶದಲ್ಲೂ ಮಹಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ಹಾಗೂ ಉಪ ನದಿಗಳಲ್ಲಿ ಪ್ರತಿ ವರ್ಷ ಮಳೆಗಾಲ ಬಂದರೆ ಸಾಕು ನದಿ ತೀರದ ಜನರು ಜೀವ ಕೈಯಲ್ಲಿ ಹಿಡಿದು ದಿನ ದೂಡಬೇಕಾಗುತ್ತದೆ. ಅದರಲ್ಲೂ ಕೃಷ್ಣಾ ನದಿ ತೀರದ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ, …
Read More »ಪಾಲಿಕೆಯಿಂದ ₹20 ಕೋಟಿ ಪರಿಹಾರ ನೀಡಲು ಸಮ್ಮತಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ‘ಸ್ಮಾರ್ಟ್ಸಿಟಿ ಯೋಜನೆ ಅಡಿ ಮಾಡಿದ ಕಾಮಗಾರಿಗೆ ಮಹಾನಗರ ಪಾಲಿಕೆ ಪರಿಹಾರ ಕೊಡುವುದು ಸರಿಯಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿಯೂ ಇದೆ. ಈ ವಿಚಾರದಲ್ಲಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ಕೈಗೊಂಡ ನಿರ್ಣಯಕ್ಕೆ ನನ್ನ ಸಮ್ಮತಿ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ‘ನಗರದಲ್ಲಿ ರಸ್ತೆಯೊಂದರ ವಿಸ್ತರಣೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಇದಕ್ಕೆ ₹20 ಕೋಟಿ ಪರಿಹಾರ ಕೊಡಬೇಕು ಎಂದು ಮಾಲೀಕರು ನ್ಯಾಯಾಲಯ ಮೊರೆ ಹೋಗಿದ್ದರು. ಪರಿಹಾರ …
Read More »
Laxmi News 24×7