ವರದಿ ಬೆನ್ನಲ್ಲೆ ಗ್ರಾಮಕ್ಕೆ ಬಂತು ಹೊಸ ಬೋಟ್ ನಿಂಗಾಪುರ ಗ್ರಾಮಸ್ಥರಲ್ಲಿ ಹರ್ಷ *ಬೆಳಗಾವಿ:* ನಿಂಗಾಪುರ ಗ್ರಾಮಸ್ಥರು ಹೊಸ ಬೋಟ್ ಸಿಗುತ್ತಿದ್ದಂತೆಯೇ ಹರ್ಷದಿಂದ ಕುಣಿದರು. ಬೋಟ್ ವ್ಯವಸ್ಥೆ ಇಲ್ಲದೆ, ಗಾಳಿ ತುಂಬಿದ ಟ್ಯೂಬ್ ಮೇಲೆ ಶಾಲಾ ಮಕ್ಕಳು ಹಿಂಜರಿಯುತ್ತಿದ್ದ ನಂತರ, ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ, ಜಿಲ್ಲಾಡಳಿತವು ತಕ್ಷಣ ಪ್ರತಿಕ್ರಿಯಿಸಿತು. ನಿಂಗಾಪುರ ಗ್ರಾಮ, ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿರುವ ಹಿಂದುಳಿದ ಪ್ರದೇಶವಾಗಿದೆ, ಇತ್ತೀಚಿನ ಭಾರಿ ಮಳೆಯಿಂದಾಗಿ ಗ್ರಾಮಸ್ಥರು ಹುಲಿಕೆರೆಯನ್ನು ದಾಟಲು …
Read More »ಸಿಡಿಲು ಬಡಿದು ಆರು ಜನರಿಗೆ ಗಾಯ
ರೋಣ (ಗದಗ ಜಿಲ್ಲೆ): ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಆರು ಜನರು ಗಾಯಗೊಂಡ ಘಟನೆ ತಾಲ್ಲೂಕಿನ ಹೊನ್ನಿಗನೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಅಂದಾನಗೌಡ ಪವಾಡಿಗೌಡ್ರ, ಸುನಂದಾ ಪವಾಡಿಗೌಡ್ರ, ಕಸ್ತೂರೆವ್ವ ಪವಾಡಿಗೌಡ್ರ, ಶರಣವ್ವ ಮಾದರ, ರೂಪ ಪಾಟೀಲ, ಸುಜಾತಾ ಪಾಟೀಲ ಸಿಡಿಲು ಬಡಿದು ಗಾಯಗೊಂಡವರು. ಎಲ್ಲರನ್ನೂ ರೋಣ ಪಟ್ಟಣದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊನ್ನಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು …
Read More »ಮಳೆಗಾಲದಲ್ಲಿ ‘ಟ್ಯೂಬ್ ತೆಪ್ಪ’ದಲ್ಲೇ ಶಾಲಾ ಮಕ್ಕಳ ಪಯಣ
ಕಿತ್ತೂರು: ಎರಡು ಲಾರಿ ಟ್ಯೂಬ್ ಗಳಿಗೆ ಗಾಳಿ ತುಂಬಿಸಿ ಅದರ ಮೇಲೆ ಕಟ್ಟಿಗೆಯಿಟ್ಟು, ಎರಡೂ ದಂಡೆಗೆ ನೆಡಲಾಗಿರುವ ಗೂಟಗಳಿಗೆ ಹಗ್ಗ ಕಟ್ಟಿ ಮಾಡಿರುವ ‘ಜಗ್ಗುವ ಟ್ಯೂಬ್ ತೆಪ್ಪ’ದಲ್ಲಿ ತಾಲ್ಲೂಕಿನ ಕುಲವಳ್ಳಿಯ ನಿಂಗಾಪುರ ಗ್ರಾಮಸ್ಥರು, ಶಾಲಾ ಮಕ್ಕಳು, ಮಹಿಳೆಯರು, ರೈತರಿಗೆ ಇದೇ ಸಂಚಾರದ ಜಲಮಾರ್ಗವಾಗಿದೆ. ‘ಧಾರವಾಡ ತಾಲ್ಲೂಕಿನ ಅಳ್ನಾವರ ಬಳಿಯ ಹುಲಿಕೆರೆ ಭರ್ತಿಯಾದರೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ನಿಂಗಾಪುರಕ್ಕೆ ಈ ಅಪಾಯಕಾರಿ ನೀರ ಮೇಲಿನ ಸಂಚಾರ ತಪ್ಪಿದ್ದಲ್ಲ’ ಎನ್ನುತ್ತಾರೆ ಗ್ರಾಮಸ್ಥರು. ‘ಅಲ್ಲದೇ, …
Read More »ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು
ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು ಕರ್ನಾಟಕದ ಎರಡನೇ ದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ಆಡಳಿತದ ಸುಧಾರಣೆಯ ದೃಷ್ಟಿಯಿಂದ ವಿಭಜನೆ ಮಾಡಬೇಕೆಂಬ ಬೇಡಿಕೆಗಳು ಮತ್ತೆ ಎದ್ದಿವೆ. 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಜಿಲ್ಲೆ, 18 ವಿಧಾನಸಭಾ ಮತ್ತು 2 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಬೆಳಗಾವಿ ಜಿಲ್ಲೆಯನ್ನು ಚಿಕ್ಕೋಡಿ ಮತ್ತು ಗೋಕಾಕವೆಂಬ ಎರಡು ಜಿಲ್ಲಾ ಕೇಂದ್ರಗಳಾಗಿ ವಿಭಜಿಸುವ ಹೋರಾಟ ಕಳೆದ ಎರಡು ದಶಕಗಳಿಂದ ನಡೆಯುತ್ತಿದೆ. ಇತ್ತ ಅಥಣಿ ಮತ್ತು …
Read More »ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.
ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ …
Read More »ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ
ಗೋಕಾಕ (ಬೆಳಗಾವಿ ಜಿಲ್ಲೆ): ‘ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ. ಅಂಥವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು ಇದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಕೇಳಿದ್ಧಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸೊಕ್ಕಿಕೊಂಡಿದ್ದಾರೆ. ಯಾವ ನೈತಿಕತೆ ಇದೆ ಅವರಿಗೆ’ ಎಂದರು. …
Read More »ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು
ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು ಬೆಳಗಾವಿ: ನದಿ ನೀರಿನ ಪ್ರವಾಹದಲ್ಲಿ ಸಿಲುಕಿ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು, ನಮ್ಮಸಮಸ್ಯೆ ಬಗೆಹರಿಸುವಂತೆ ಸಂತ್ರಸ್ತ ಮಹಿಳೆಯರು ಬೇಡಿಕೊಂಡ ಘಟನೆ ಸೋಮವಾರ (ಆ 05) ನಡೆದಿದೆ. ಗೋಕಾಕ ನಗರದಲ್ಲಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿದಾಗ, ಅನೇಕ ಮಹಿಳೆಯರು ಕೈ ಮುಗಿದು ಬೇಡಿಕೊಂಡರು. ನಮಗೆ ಪರಿಹಾರ ಕೊಡಿ, …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ರಾಜನಕಟ್ಟಿ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ಬಾದರವಾಡಿ, ಮಲ್ಲಪ್ಪಾ ನಿ …
Read More »ಬೆಳಗಾವಿ | ಬೋಟ್ ಪಲ್ಟಿ: ತಪ್ಪಿದ ಅನಾಹುತ
ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್ಡಿಆರ್ಎಫ್ ತಂಡ ಬೋಟ್ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್ ಜಾಕೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ಇಲ್ಲಿರುವ ಜಾಕ್ವೆಲ್ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್ಡಿಆರ್ಎಫ್ ತಂಡದವರು ಬೋಟ್ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್ ನಿಯಂತ್ರಣ …
Read More »ಹೊಟ್ಟೆ ತುಂಬಿಸದ ಕಾಳಜಿ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ
ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿನ ಆಹಾರ ತಯಾರಿಸುತ್ತಿದ್ದಾರೆ. ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ …
Read More »