Breaking News

ಬೆಳಗಾವಿ

ಲಾರಿ ಡಿಕ್ಕಿ: ಆಟೊ ಚಾಲಕ ಸ್ಥಳದಲ್ಲೇ ಸಾವು

ಬೆಳಗಾವಿ: ಯಡಿಯೂರಪ್ಪ ಮಾರ್ಗಕ್ಕೆ ಹೊಂದಿಕೊಂಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಗೂಡ್ಸ್‌ ಆಟೊ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಆಟೊ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ಅಮಿನ್ ಯರಗಟ್ಟಿ (45) ಮೃತ ವ್ಯಕ್ತಿ.   ಆಟೊದಲ್ಲಿ ತರಕಾರಿ ತುಂಬಿಕೊಂಡು ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗಡೆ ಬಿದ್ದ ಆಟೊ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರು. ಲಾರಿ ಕೂಡ ರಸ್ತೆ ಪಕ್ಕಕ್ಕೆ …

Read More »

ಸಂಚಾರಿ ಕುರಿಗಾಹಿಗಳಿಗೆ ಬೇಕು ಸೌಕರ್ಯ

ರಾಯಬಾಗ: ರಾಜ್ಯದಲ್ಲಿ ಕುರುಬ ಸಮಾಜದ ಸಂಖ್ಯೆ 60 ಲಕ್ಷಕ್ಕೂ ಅಧಿಕವಿದೆ. ಸುಮಾರು 18 ಲಕ್ಷಕ್ಕೂ ಅಧಿಕ ಸಂಚಾರಿ ಕುರಿಗಾಹಿಗಳಿದ್ದಾರೆ. ಒಟ್ಟಾರೆ ಜನಸಂಖ್ಯೆಯ ಶೇ 30ರಷ್ಟು ಮಂದಿ ಸಂಚಾರಿ ಕುರಿಗಾಹಿಗಳೇ ಇದ್ದಾರೆ. ಆದರೆ, ಈ ಸಮಾಜಕ್ಕೆ ಸಲ್ಲಬೇಕಾದ ಕನಿಷ್ಠ ಸೌಕರ್ಯಗಳು ಇನ್ನೂ ಸಿಕ್ಕಿಲ್ಲ. ಆದಿವಾಸಿ ಬುಡಕಟ್ಟು ಸಂಸ್ಕತಿಯನ್ನೇ ಜೀವಾಳವಾಗಿಸಿಕೊಂಡು ಕುರಿ ಸಾಕಾಣಿಕೆ, ಕಂಬಳಿ ನೇಕಾರಿಕೆ ಮೂಲಕ ಜೀವನ ಸಾಗಿಸುತ್ತಿರುವ ಹಾಲುಮತ ಕುರುಬರು ಇನ್ನೂ ಸಂಕಷ್ಟದಲ್ಲಿದ್ದಾರೆ. ಸಂಚಾರಿ ಕುರುಬರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. …

Read More »

ಕೋಥಳಿ-ಕುಪ್ಪಾಣವಾಡಿ ಆಶ್ರಮದ ಸಾಕಾನೆ ‘ಉಷಾರಾಣಿ’ ಸಾವು

ಚಿಕ್ಕೋಡಿ: ತಾಲ್ಲೂಕಿನ ಕೋಥಳಿ-ಕುಪ್ಪಾನವಾಡಿಯ ಆಚಾರ್ಯ ದೇಶಭೂಷಣ ಜೈನ ಆಶ್ರಮದ ಸಾಕು ಆನೆ ಉಷಾರಾಣಿ (50) ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ದು, ಆಚಾರ್ಯ ದೇಶ ಭೂಷಣ ಆಶ್ರಮ ಟ್ರಸ್ಟ್ ಹಾಗೂ ಶಾಂತಿಗಿರಿ ಟ್ರಸ್ಟ್ ವತಿಯಿಂದ ಅಂತಿಮ ನಮನಗಳನ್ನು ಸಲ್ಲಿಸಲಾಯಿತು. ಆಶ್ರಮದ ಆವರಣದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಜೈನ ಮುನಿಗಳು ಹಾಗೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿಸಲಾಗಿದೆ. 1977ರಲ್ಲಿ 3 ವರ್ಷದ ಮರಿ ಇದ್ದಾಗ ಶಿವಮೊಗ್ಗದ ಅರಣ್ಯ ಪ್ರದೇಶದಿಂದ ತರಲಾಗಿದ್ದ …

Read More »

ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸರ ದಿಢೀರ್ ದಾಳಿ

ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸರ ದಿಢೀರ್ ದಾಳಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ನೇತೃತ್ವದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿದಂತೆ 260ಕ್ಕೂ ಅಧಿಕ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ದಾಳಿಯ ವೇಳೆ ತಂಬಾಕು ಪಾಕೇಟ್, ಸಿಗರೇಟ್, ಮೂರು ಚಾಕುಗಳು, ಸ್ಮಾಲ್ ಹಿಟರ್ ವೈಯರ್ ಬಂಡಲ್, ಮತ್ತು ಎಲೆಕ್ಟ್ರಿಕಲ್ ಒಲೆಗಳನ್ನು ಜಪ್ತಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಅಸುoಡಿ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.     ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ …

Read More »

ಕಾರ್ಖಾನೆ ಆಡಳಿತ ಮಂಡಳಿಯಿಂದ ಮೃತ ಕಾರ್ಮಿಕ ಕುಟುಂಬಕ್ಕೆ 18 ಲಕ್ಷ ರೂ ಪರಿಹಾರ

ಬೆಳಗಾವಿ, ಆಗಸ್ಟ್​​ 09: ಕಾರ್ಖಾನೆಯಲ್ಲಿ ಅಗ್ನಿ ದುರಂತದಲ್ಲಿ (Fire Tragedy) ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಕುಟುಂಬಕ್ಕೆ ಕಾರ್ಖಾನೆ ಆಡಳಿತ ಮಂಡಳಿಯಿಂದ ಒಟ್ಟು 18 ಲಕ್ಷ ರೂ. ಪರಿಹಾರ ನೀಡಲಾಗಿದೆ. ಆ.6ರಂದು ಜಿಲ್ಲೆಯ ನಾವಗೆ ಬಳಿಯ ಸ್ನೇಹಂ ಟೇಪಿಂಗ್ ಕಾರ್ಖಾನೆಯಲ್ಲಿ ನಡೆದಿದ್ದ ದುರ್ಘಟಯಲ್ಲಿ ಲಿಫ್ಟ್‌ನಲ್ಲಿ ಕಾರ್ಮಿಕ ಯಲ್ಲಪ್ಪ‌ ಗುಂಡ್ಯಾಗೋಳ ಸಜೀವದಹನವಾಗಿದ್ದ. ಸರ್ಕಾರ‌ ಹಾಗೂ ಜಿಲ್ಲಾಡಳಿತಕ್ಕೂ ಮೊದಲು ಕಾರ್ಖಾನೆ ಆಡಳಿತ ಮಂಡಳಿ 18 ಲಕ್ಷ ರೂ. ಪರಿಹಾರ ನೀಡಿದೆ. ಮುಂಚೆ 10 ಲಕ್ಷ ರೂ. ಪರಿಹಾರ ಬೇಡ …

Read More »

ಸ್ವಾತಂತ್ರ್ಯ ದಿನ: ಪ್ರಧಾನಿಯೊಂದಿಗೆ ಭಾಗವಹಿಸಲು ವಿದ್ಯಾರ್ಥಿ ಸಾಗರ ಆಯ್ಕೆ

ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ 77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳ ಪೈಕಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ …

Read More »

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದಮಂಗನ ಕಾಟ

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ. ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು. ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.

Read More »

ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಸಹಕರಿಸಿ: ಜಿಲ್ಲಾಧಿಕಾರಿ

ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಈ ಬಾರಿ ಶಾಂತಿ, ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕೋರಿದರು. ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ನಡೆದ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಗಣೇಶೋತ್ಸವ ಆಚರಣೆ ನೆಪದಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗಣೇಶನ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ನಗರದ ಎಂಟು ಠಾಣೆಗಳಲ್ಲಿ ಏಕಗವಾಕ್ಷಿ ಪದ್ಧತಿ …

Read More »

ಚನ್ನಮ್ಮನ ಕಿತ್ತೂರು: ನಿಂಗಾಪುರಕ್ಕೆ ಬಂತು ದೋಣಿ…

ಚನ್ನಮ್ಮನ ಕಿತ್ತೂರು: ಹುಲಿಕೆರೆ ಹಿನ್ನೀರಿನಿಂದಾಗಿ ಟ್ಯೂಬ್ ತೆಪ್ಪದಲ್ಲಿ ಅಪಾಯಕಾರಿಯಾಗಿ ಸಂಚರಿಸುತ್ತಿದ್ದ ತಾಲ್ಲೂಕಿನ ಕುಲವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಂಗಾಪುರದ ಮಕ್ಕಳು ಮತ್ತು ನಾಗರಿಕರ ದಶಕಗಳ ಸಮಸ್ಯೆಗೆ ಮುಕ್ತಿ ಸಿಕ್ಕಂತಾಗಿದೆ. ಈ ಗ್ರಾಮಸ್ಥರ ಸಮಸ್ಯೆ ಮೇಲೆ ಬೆಳಕು ಚೆಲ್ಲಲು ‘ಪ್ರಜಾವಾಣಿ’ ಆ.6ರ ಸಂಚಿಕೆಯಲ್ಲಿ ‘ಟ್ಯೂಬ್ ತೆಪ್ಪ’ದಲ್ಲೇ ಪಯಣ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ, ಆ ಊರಿಗೆ ಫೈಬರ್ ದೋಣಿಯ ವ್ಯವಸ್ಥೆ ಮಾಡಿತು. ಮಂಗಳವಾರ ಸಂಜೆ ತಾಲ್ಲೂಕು ಆಡಳಿತ ಸೌಧಕ್ಕೆ …

Read More »