Breaking News

ಬೆಳಗಾವಿ

ಶಬರಿ ಗಿರಿ ಸ್ವಾಮಿಗೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ನಲ್ಲಿ ಪೂಜೆ

ಗೋಕಾಕ: ಇದು ಕಾರ್ತಿಕ ಮಾಸ ಈ ಮಾಸ ಪ್ರಾರಂಭ ಆಗುತ್ತಿದ್ದ ಹಾಗೆ ನಾವು ಎಲ್ಲ ಕಡೆ ಅಯ್ಯಪ್ಪ ನ ಮಾಲಾ ದಾ ರಿ ಗಳು ಸುಮಾರು ಕಡೆ ನಮಗೆ ಕಾಣಿಸುತ್ತಾರೆ   ಇಂದು ಸಂತೋಷ್ ಜಾರಕಿಹೊಳಿ ಅವರ ಒಡೆತನದ ಕಾರ್ಖಾನೆಯಲಿ ಅಯ್ಯಪ್ಪನ ಪೂಜೆ ಮಾಡಿ ಭಕ್ತಿಭಯನ್ನಾ ಮೇರೆದಿದ್ದಾರೆ, ಪೂಜೆ, ಭಜನೆ,ಮಂಗಳರಾತಿ, ಹಾಗೂ ಪ್ರಸಾದ ವಿತರಣೆ ಕೂಡ ನಡೆಯಿತು, ಸುಮಾರು ಜನಾ ಆಯ್ಯಪನ ಭಕ್ತರು ಈ ಸಾಮಾ ರಂಭದಲ್ಲಿ ಭಾಗ ವಹಿಸಿ …

Read More »

ಸೀಲಿಂಗ್ ತುಂಡಾಗಿ ಕಾರ್ಮಿಕ ಸಾವು

ಚಿಕ್ಕೋಡಿ: ಕ್ರೇನ್ ಸೀಲಿಂಗ್​ ತುಂಡಾಗಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಇಂದು ನಡೆದಿದೆ. ಮಧ್ಯಪ್ರದೇಶದ ಸಂತೋಷ ಮುಣ್ಣಾ ವಿಶ್ವಕರ್ಮ (28) ಮೃತಪಟ್ಟಿದ್ದಾರೆ. ಜಂಬಗಿ ಗ್ರಾಮದ ಶಾವಂತ ಪಾಟೀಲ್ ಎಂಬ ರೈತನ ಜಮೀನಿನಲ್ಲಿ ಮಧ್ಯಪ್ರದೇಶದ ಐವರು ಕಾರ್ಮಿಕರು ಬಾವಿ ಕೊರೆಯುವ ಕೆಲಸ ಮಾಡುತ್ತಿದ್ದರು. ಇಬ್ಬರು ಬಾವಿಗಿಳಿಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಸೀಲಿಂಗ್ ತುಂಡಾಗಿದೆ. ಅಂದಾಜು ನೂರು ಅಡಿ ಆಳದ ಬಾವಿಗೆ …

Read More »

ಕನಿಷ್ಠ ವೇತನಕ್ಕೆ ಆಗ್ರಹಿಸಿ ಜಾಡಮಾಲಿ‌ ನೌಕರರು ಪ್ರತಿಭಟನೆ

ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 977 ಜಾಡಮಾಲಿ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​​ನಲ್ಲಿ ಇಂದು ನೌಕರರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. 2017ಕ್ಕಿಂತ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಾಡಮಾಲಿಗಳನ್ನು ಮರುನೇಮಕಗೊಳಿಸಿ ಕನಿಷ್ಠ ವೇತನ ನೀಡಬೇಕು. ಸರ್ಕಾರ ನೇರವಾಗಿ ವೇತನ ಪಾವತಿಸಬೇಕು. ನಮ್ಮನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಲು ಇರುವ ಕಾನೂನು ನ್ಯೂನತೆ …

Read More »

ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ.:ಬಸವಜಯ ಮೃತ್ಯುಂಜಯ ಶ್ರೀ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ. ಎಲ್ಲಾ ಪಕ್ಷಗಳಿಗೂ ಪಂಚಮಸಾಲಿ ಮತಗಳು ಬೇಕು. ಹೀಗಾಗಿ ಲೋಕಸಭೆ ಚುನಾವಣೆಯೊಳಗೆ ಮೀಸಲಾತಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇಂದು ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಸರ್ವಪಕ್ಷಗಳ ಪಂಚಮಸಾಲಿ ಸಮಾಜದ ಹಾಲಿ ಹಾಗೂ ಮಾಜಿ ಶಾಸಕರ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಸರಿಯಾದ ನ್ಯಾಯ …

Read More »

ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ: ಜೊಲ್ಲೆ

ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ ಪ್ರಸ್ತಾವಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಯನ್ನು ನಗರದ ಮುಂದಿನ 50 ವರ್ಷಗಳ ಕಾಲಾವಧಿಯ ಜನಸಂಖ್ಯೆಯ ಆಧಾರದ ಮೇಲೆ ಲೆಕ್ಕಾಚಾರ ಮಾಡಿ ರೂಪುರೇಷೆ ಸಿದ್ಧಪಡಿಸಿ ಕಾಮಗಾರಿಯ ವಿಸ್ತೃತ ಯೋಜನಾ ವರದಿಯನ್ನು …

Read More »

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

ಬೆಳಗಾವಿ : ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದು ರಾತ್ರಿಯೇ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಬೀದಿಗಳಿಯಬೇಕಾಗುತ್ತದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ‌ ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಸ್ಸಿ ಮೋರ್ಚಾ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಅವರ …

Read More »

ರಮೇಶ್​ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ , ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಪ್ರಕರಣ ದಾಖಲ

ಬೆಳಗಾವಿ : ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಆಪ್ತ ಹಾಗೂ ಬಿಜೆಪಿ ಮುಖಂಡನ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಮವಾರ ಸಂಜೆ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಐದಾರು ಜನರು ಏಕಾಏಕಿ ಬಂದು, ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೃಥ್ವಿ ಸಿಂಗ್ ಅವರು ಕೆಲವರ ಜೊತೆಗೆ ಮಾತನಾಡುತ್ತಿರುವುದು ಅವರ ಮನೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ತಕ್ಷಣ ಪೃಥ್ವಿ …

Read More »

ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ

ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ಎಂದು ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು. ನಗರದ ಅಡಿಬಟ್ಟಿ ಬಡಾವಣೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ, ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಲಯನ್ಸ್ ಕಬ್ಲ್ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಉದ್ಘಾಟಿಸಿ ಅವರು …

Read More »

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.   ನಗರದಲ್ಲಿಂದು ಮಾಧ್ಯಮಗಳೊಂದಿಗೆ ನಾಲ್ಕು ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಡ್​ದಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ …

Read More »

ಕಲಾಪದಲ್ಲಿ ಜಂಟಿ ಸಮರ; ಬಿಜೆಪಿ-ಜೆಡಿಎಸ್​ ನಾಯಕರಿಂದ ರಹಸ್ಯ ಸಮಾಲೋಚನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ವಿರುದ್ಧ ಪಟ್ಟಾಗಿ ಕುಸ್ತಿಗೆ ಇಳಿಯಲು ದೋಸ್ತಿಗಳು ಸಜ್ಜಾಗಿದ್ದಾರೆ. ರೇಸ್​ಕೋರ್ಸ್ ರಸ್ತೆಯಲ್ಲಿನ ಅಪಾರ್ಟ್​ವೆುಂಟ್​ವೊಂದರಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ರಹಸ್ಯ ಸಮಾಲೋಚನೆ ನಡೆಸಿ, ಸದನದಲ್ಲಿ ಹೂಡಲಿರುವ ಜಂಟಿ ಸಮರದ ತಂತ್ರಗಳಿಗೆ ಅಂತಿಮ ಸ್ಪರ್ಶ ನೀಡಿದರು. ರಾಜ್ಯದ ಹಿತ, ರಚನಾತ್ಮಕವಾಗಿ ಜವಾಬ್ದಾರಿ ನಿರ್ವಹಣೆ, ಸದನದ ಅಮೂಲ್ಯ ಸಮಯ ವ್ಯರ್ಥವಾಗದಂತೆ ನೋಡಿಕೊಳ್ಳುವ ವಿಚಾರದಲ್ಲಿ ಉಭಯ ಪಕ್ಷಗಳು ಬದ್ಧವಾಗಿರಲು ಸಮ್ಮತಿಸಿವೆ. ವೈಫಲ್ಯಗಳನ್ನು ಎತ್ತಿ ಹಿಡಿಯುವ, ಕಟ್ಟಿಹಾಕುವ …

Read More »