ರಾಯಚೂರು: ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಕ್ಷಾಂತರದಿಂದ ತೆರವಾಗಿರುವ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ರಾಜಕೀಯ ಚುರುಕುಗೊಂಡಿದೆ. ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ …
Read More »ಹುಳುಹತ್ತಿದ ಕಳಪೆ ಬೀಜ ಮಾರಾಟ- ವಿವಿಧ ತಾಲೂಕುಗಳ ರೈತರು ಮೋಸಹೋಗಿದ್ದಾರೆ.
ರಾಯಚೂರು: ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಹುಳು ಹತ್ತಿದ ಕಳಪೆ ಬೀಜ ವಿತರಣೆ ಮಾಡಿದ್ದರಿಂದ ವಿವಿಧ ತಾಲೂಕುಗಳ ರೈತರು ಮೋಸಹೋಗಿದ್ದಾರೆ. ಮಸ್ಕಿ ತಾಲೂಕಿನ ಕುಣಿಕಲ್ ಗ್ರಾಮದ ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಕಡಲೇಬೀಜ ಖರೀದಿ ಮಾಡಿ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ರೈತರ ಕಷ್ಟಕ್ಕೆ ಮಾತ್ರ ಕೊನೆಯಿಲ್ಲ. ಒಂದೆಡೆ ಭಾರೀ ಮಳೆಯಿಂದ ಜಿಲ್ಲೆಯ ರೈತರು ಹಲವು ತೊಂದರೆಗೆ ಒಳಗಾಗಿದ್ದಾರೆ. ಇನ್ನೊಂದೆಡೆ ರೈತರು ಮಳೆ ಚೆನ್ನಾಗಿ ಆಗಿದ್ದರಿಂದ ಖುಷಿಯಾಗಿ …
Read More »ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ: ಲಕ್ಷಣ ಸವದಿ
ರಾಯಚೂರು: ಸಿಎಂ ಬದಲಾವಣೆ ಹೇಳಿಕೆ ವಿಚಾರ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ .ನಗರದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಬಳಿಕ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಆ ಬಗ್ಗೆ ಸೂಕ್ತ ಸಂದರ್ಭದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದರು. ಕಳೆದ ವರ್ಷದ ಬೆಳೆ ವಿಮೆಯ ಹಣ ರೈತರಿಗೆ ಸಿಗದೆ ಹೋಗಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು. ಭತ್ತ, ತೊಗರಿ, ಉದ್ದು …
Read More »ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಜಾಥಾಕ್ಕೆ ಡಿಸಿ ಚಾಲನೆ
ರಾಯಚೂರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ನಗರದ ಚಂದ್ರಮೌಳೇಶ್ಚರ ವೃತ್ತದಲ್ಲಿ ಚಾಲನೆ ನೀಡಿದರು. ನಗರದ ಚಂದ್ರಮೌಳೇಶ್ಚರ ವೃತ್ತದಿಂದ ಆರಂಭಗೊಂಡ ಜಾಥಾವು ನಗರದ ವಿವಿಧ ಪ್ರಮುಖ ವೃತ್ತಗಳಾದ ಬಸವನಬಾವಿ ವೃತ್ತ, ಕನಕದಾಸ ವೃತ್ತದ ಮೂಲಕ ಪುನಃ ಜಿಲ್ಲಾ ಪೊಲೀಸ್ ಕಚೇರಿಗೆ ತಲುಪಿತು.. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠರಾದ …
Read More »ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ
ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …
Read More »ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ.
ರಾಯಚೂರು: ಜಿಲ್ಲೆಯಲ್ಲಿ ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ. ಒಂದು ತಿಂಗಳಿನಿಂದ ಅತಿಯಾಗಿ ಸುರಿದ ಮಳೆ ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಜನರ ಬದುಕನ್ನ ಕಸಿದುಕೊಂಡಿದೆ. ಆಶ್ರಯ ಸಿಕ್ಕರೂ ಅನ್ನ ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ. ಸರ್ಕಾರಿ ಶಾಲೆ, ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಆಶ್ರಯ ನೀಡಿದೆ. ಆದ್ರೆ ಯಾವುದೇ ವ್ಯವಸ್ಥೆಗಳನ್ನ ಮಾಡಿಲ್ಲ. ಹೀಗಾಗಿ ಸುಮಾರು 56 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿವೆ. ಚಿಕ್ಕಮಕ್ಕಳು, ವೃದ್ದರು, …
Read More »ರಸ್ತೆ ದಾಟಿ ಬಂದ ಮೇಲೆ ಮೈಕೈ ನೋವು ಗ್ಯಾರೆಂಟಿ. ವಾಹನಗಳು ಸುರಕ್ಷಿತವಾಗಿ ಇರುತ್ತವೆ ಅನ್ನೋ ನಂಬಿಕೆಯೂ ಇಲ್ಲಾ
ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು ಬಿದ್ದಿವೆ. ಇದರ ಜೊತೆ ಜೊತೆಗೆ ಜಿಲ್ಲೆಯ ರಸ್ತೆಗಳು ಸಹ ಹಾಳಾಗಿ ಹೋಗಿವೆ. ಜಿಲ್ಲೆಯಿಂದ ಆರಂಭವಾಗುವ ರಾಯಚೂರು- ಬಾಚಿ ರಾಜ್ಯ ಹೆದ್ದಾರಿ ಸಂಖ್ಯೆ 20 ಇದು ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ರಸ್ತೆ ತುಂಬಾ ಎಲ್ಲಿ ನೋಡಿದ್ರೂ ಆರಡಿ ಮೂರಡಿ ಗುಂಡಿಗಳೇ ಕಾಣಿಸುತ್ತವೆ. ರಾಯಚೂರು ಹೊರವಲಯದ ಸಾಥಮೈಲ್ ನಿಂದ ಕಲ್ಮಲವರೆಗೆ ಇರುವ ರಸ್ತೆ ಆ …
Read More »ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ.
ರಾಯಚೂರು: ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ. ಹನುಮಂತರಾಯ ಮನೆಗೆ ಕಳ್ಳತನಕ್ಕೆ ಬಂದಿದ್ದ ಮೂವರು ಕಿರಾತಕರು ಕಳ್ಳತನಕ್ಕೆ ಮಹಿಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಗ್ರಾಮದಲ್ಲಿ ಭಾರಿ ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಮೂವರು ಖದೀಮರು ಕಳ್ಳತನಕ್ಕೆ ಬಂದಿದ್ದರು. ಹನುಮಂತರಾಯನ ಮನೆಯಲ್ಲಿ ನಗದು, ಚಿನ್ನಾಭರಣ ಕದ್ದಿದ್ದಾರೆ. ಈ ವೇಳೆ ಅವರ ಕೃತ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಿಳೆಯ …
Read More »ಸಾಲಿ ಇಲ್ವಾ.. ನಡೀ ಕೂಲಿ ಮಾಡೋಕೆ: ವಿದ್ಯಾಗಮ ಮಕ್ಕಳು ಆಗಿದ್ದಾರೆ ಬಾಲ ಕಾರ್ಮಿಕರು!
ರಾಯಚೂರು: ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದ ವಿದ್ಯಾಗಮ ಯೋಜನೆಯನ್ನು ಕೊರೊನಾ ಅಬ್ಬರದ ನಡುವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಅತ್ತ ಮಕ್ಕಳು ಮತ್ತು ಅವರಿಗೆ ಪಾಠ ಮಾಡ್ತಿದ್ದ ಶಿಕ್ಷಕರಿಗೆ ಕಂಟಕವಾಗಿದ್ದ ಯೋಜನೆಗೆ ಬ್ರೇಕ್ ಹಾಕಲಾಯ್ತು ಎಂದು ಹಲವರು ಸಂತಸಪಡುತ್ತಿದ್ದರೇ ಇತ್ತ ಗ್ರಾಮೀಣ ಭಾಗದ ಮಕ್ಕಳಿಗೆ ಇದೀಗ ಮತ್ತೊಂದು ತಲೆನೋವು ಶುರುವಾಗಿದೆ. ನಿತ್ಯ 250 ರೂಪಾಯಿ ಕೂಲಿ ಕಾಸಿನ ಆಸೆಗೆ ಹೌದು, ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತವಾದ ಬೆನ್ನಲ್ಲೇ ವಠಾರ ಶಾಲೆಗಳು ಬಂದ್ ಆಗಿವೆ. ಈ …
Read More »ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಅಟ್ಯಾಕ್..
ರಾಯಚೂರು: ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಉದಯನಗರದಲ್ಲಿ ನಡೆದಿದೆ. ಸುಮಾರು 8ಜನರ ಗುಂಪು ಏಕಾಏಕಿ ಮನೆಗೆ ನುಗ್ಗಿ ಕಾಂಗ್ರೆಸ್ ಪಕ್ಷದ ಮುಖಂಡ ಲಾಲಪ್ಪ ನಾಯಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಗಾಯಾಳು ಲಾಲಪ್ಪ ನಾಯಕ್ಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ರಾಯಚೂರು ನಗರದ ಪಶ್ಚಿಮ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ …
Read More »
Laxmi News 24×7