ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ. ಭಾನುವಾರ ನಾಲ್ವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕದ ಸಂಗತಿ ಎಂದರೆ ಈ ನಾಲ್ವರು ಒಂದೇ ಕುಟುಂಬವರಾಗಿದ್ದಾರೆ. ಸೋಂಕಿತರಲ್ಲಿ 19 ವರ್ಷದ ಮಹಿಳೆ (ಪಿ-11963), 80 ವರ್ಷದ ವೃದ್ಧೆ (ಪಿ-11964), 56 ವರ್ಷದ ಪುರುಷ (ಪಿ-11965) ಹಾಗೂ 20 ವರ್ಷದ ಯುವತಿ (ಪಿ- 11966) ಇದ್ದಾರೆ. ಭಾನುವಾರ ಪತ್ತೆಯಾದ ನಾಲ್ವರು ಸೋಂಕಿತರಿಗೂ ತಮ್ಮ ಸಂಬಂಧಿಯಿಂದಲೇ ಕೊರೋನಾ ತಗುಲಿರುವ ಸಾಧ್ಯತೆ …
Read More »ಶಿವಮೊಗ್ಗದಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 3ರ ವರೆಗೆ ಮಾತ್ರ ವ್ಯಾಪಾರ, ವಹಿವಾಟು
ಶಿವಮೊಗ್ಗ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹಬ್ಬುತ್ತಿದ್ದು, ಸಮುದಾಯಕ್ಕೂ ಹರಡುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ದಿನಸಿ ವರ್ತಕರು ಸೋಮವಾರದಿಂದ ಬೆಳಗ್ಗೆ 8ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಿ, ಮಧ್ಯಾಹ್ನದ ನಂತರ ಸ್ವಯಂ ಪ್ರೇರಿತರಾಗಿ ಲಾಕ್ಡೌನ್ ಮಾಡಲು ನಿರ್ಧರಿಸಿದ್ದಾರೆ. ವ್ಯಾಪಾರಿಗಳು, ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಹಾಗೂ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ. …
Read More »ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ.
ಶಿವಮೊಗ್ಗ : ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ. ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು ಸುಂದರವಾದ ಕೆರೆ ಪುನರ್ ನಿರ್ಮಾಣಕ್ಕೆ ಕೈ ಜೋಡಿಸಿ, ಎಲ್ಲರ ಮನೆ ಮಾತಾಗಿದ್ದಾರೆ. ಸ್ವಗ್ರಾಮ ಸಮಿತಿಯ ಸದಸ್ಯರೊಂದಿಗೆ ಕೈ ಜೋಡಿಸಿ ಒತ್ತುವಾರಿಯಾಗಿದ್ದ ಇಡೀ ಕೆರೆಯನ್ನು ಬಿಡಿಸಿಕೊಂಡು, ಕೆರೆಯಲ್ಲಿ ತುಂಬಿದ್ದ ಹೂಳು ತೆಗೆದು ಇದೀಗ ಜೀವ ಕಳೆ ನೀಡಿದ್ದಾರೆ. ಕೇವಲ 80 ಲಕ್ಷ ಲೀ. ನೀರು ತುಂಬುತ್ತಿದ್ದ …
Read More »ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ
ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …
Read More »ಶಿವಮೊಗ್ಗಕ್ಕೆ ಬಿಎಸ್ವೈಯಿಂದ ಸಿಹಿಸುದ್ದಿ- ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾರ್ಖಾನೆಗೆ ಹೊಸ ಕಾಯಕಲ್ಪ
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, …
Read More »ಕೊರೊನಾ ಅಲ್ಲ, ಇದು ಪ್ರೀತಿಯ ಸೋಂಕು- ವಿಭಿನ್ನ ಲಗ್ನ ಪತ್ರಿಕೆ .. ವೈರಲ್
ಶಿವಮೊಗ್ಗ: ಕೊರೊನಾ ಸೋಂಕಲ್ಲ, ಇದು ಪ್ರೀತಿಯ ಸೋಂಕು ಎಂದು ವರನೋರ್ವ ವಿಶೇಷವಾಗಿ ಲಗ್ನ ಪತ್ರಿಕೆಯೊಂದನ್ನು ಮುದ್ರಿಸಿದ್ದು, ಈ ಪತ್ರಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯುವಕ ವಿನೋದ್ ಇದೇ ತಿಂಗಳ ಜೂ. 15ರಂದು ಚಂದನಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಇವರ ವಿವಾಹಕ್ಕೆ ವರ ವಿನೋದ್ ವಿಭಿನ್ನವಾದ ಲಗ್ನ ಪತ್ರಿಕೆ ಮಾಡಿಸಿದ್ದು, ಇದರಲ್ಲಿ ನಿಶ್ಚಿತಾರ್ಥವನ್ನು ಲಾಕ್ಡೌನ್ಗೆ ಮತ್ತು ಮದುವೆಯನ್ನು ಸೀಲ್ಡೌನ್ಗೆ ಹೋಲಿಸಲಾಗಿದೆ. ಈ ಪತ್ರಿಕೆಯ …
Read More »ಸೀಲ್ಡೌನ್ ಮಾಡಿದ್ರೂ ಕಳ್ಳದಾರಿಯಲ್ಲಿ ಓಡಾಟ- ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಹಲ್ಲೆ
ಶಿವಮೊಗ್ಗ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ತಾಲೂಕಿನ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪನ್ನು ಜಿಲ್ಲಾಡಳಿತ ಕಂಟೈನ್ಮೆಂಟ್ ವಲಯ ಎಂದು ಘೋಷಿಸಿ ಸೀಲ್ಡೌನ್ ಮಾಡಿದೆ. ಕಳೆದ 4 ದಿನಗಳ ಹಿಂದೆ ಪಂಜಾಬ್ ನಿಂದ ಆಗಮಿಸಿದ್ದ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪ್ ನ ಮೂವರಿಗೆ ಕೊರೊನಾ ಪಾಸಿಟಿವ್ ಕಾಣಿಸಿತ್ತು. ಹಾಗಾಗಿ ಆ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿತ್ತು. ಹೀಗಾಗಿ ಗ್ರಾಮಸ್ಥರು ಮನೆಯಿಂದ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಮನವಿ ಸಹ ಮಾಡಿದೆ. ಹೀಗಿದ್ದರೂ ಜಿಲ್ಲಾಡಳಿತ ಮನವಿ …
Read More »ಶಿವಮೊಗ್ಗಕ್ಕೂ ಪಾದರಾಯನಪುರದ ವೈರಸ್ ಎಂಟ್ರಿ…………
ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದೀಗ ಬೆಂಗಳೂರಿನ ಪಾದರಾಯನಪುರ ಹಾಗೂ ಶಿವಾಜಿನಗರ ಸಹ ಮಲೆನಾಡಿಗೆ ಕಂಟಕವಾಗಿ ಕಾಡುತ್ತಿದೆ. ಪಾದರಾಯನಪುರದಲ್ಲಿ ಗಲಭೆಯಾದಾಗ ಶಿವಮೊಗ್ಗದಿಂದ 22 ಮಂದಿ ಕೆಎಸ್ಆರ್ಪಿ ಪೊಲೀಸರು ಕರ್ತವ್ಯಕ್ಕೆ ತೆರಳಿದ್ದರು. ಇವರೆಲ್ಲರೂ 4 ದಿನಗಳ ಹಿಂದೆ ಜಿಲ್ಲೆಗೆ ವಾಪಸ್ ಬಂದಿದ್ದರು. ವಾಪಸ್ಸಾದ ಕೆಎಸ್ಆರ್ಪಿ ಪೊಲೀಸರನ್ನು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ತಪಾಸಣೆ ನಡೆಸಿ ಕ್ವಾರಂಟೈನ್ಗೆ ಒಳಪಡಿಸಿತ್ತು. ಇದೀಗ ಅವರಲ್ಲಿ 7 ಮಂದಿ …
Read More »ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ,ಇನ್ಸ್ಪೆಕ್ಟರ್ ನನ್ನು ಅಮಾನತುಗೊಳಿಸಿ: ಡಿಕೆಶಿ ಆಗ್ರಹ
ಬೆಂಗಳೂರು: ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ನೀಡಿರುವ ಸುಳ್ಳು ದೂರು ಆಧರಿಸಿ ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ಕೂಡಲೇ ಆ ಅಧಿಕಾರಿಯನ್ನ ಅಮಾನತು ಮಾಡಬೇಕು ಎಂದು …
Read More »ತಾಯಿಯ ಶವದೊಂದಿಗೆ 5 ದಿನ ಮನೆಯಲ್ಲೇ ಕಳೆದ ಮಗಳು………
ಶಿವಮೊಗ್ಗ: ತಾಯಿ ಮೃತಪಟ್ಟು ಐದು ದಿನವಾದರೂ ಮಗಳು ಶವದೊಂದಿಗೆ ಐದು ದಿನಗಳ ಕಾಲ ಕಳೆದಿರುವ ಘಟನೆ ಶಿವಮೊಗ್ಗದ ಬಸವನಗುಡಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬಸವನಗುಡಿ ನಿವಾಸಿ ನಿವೃತ್ತ ಶಾಲಾ ಶಿಕ್ಷಕಿ ರಾಜೇಶ್ವರಿ ಎಂದು ಗುರುತಿಸಲಾಗಿದೆ. ಮೃತ ರಾಜೇಶ್ವರಿ ಪತಿ ಸಹ ಕಳೆದ 20 ವರ್ಷದ ಹಿಂದೆಯೇ ಮೃತಪಟ್ಟಿದ್ದರು. ಹೀಗಾಗಿ ಮನೆಯಲ್ಲಿ ತಾಯಿ ಮಗಳು ಇಬ್ಬರೇ ವಾಸಿಸುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ಮೃತ ರಾಜೇಶ್ವರಿ ಸ್ತನ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. …
Read More »
Laxmi News 24×7