Breaking News

ಶಿವಮೊಗ್ಗ

ಶಿವಮೊಗ್ಗ, ಚಿತ್ರದುರ್ಗದಲ್ಲಿ ಕ್ವಾರಂಟೈನ್‍ಗೆ ತೀವ್ರ ವಿರೋಧ- ಪೊಲೀಸರ ಜೊತೆ ಜನತೆ ವಾಗ್ವಾದ

ಶಿವಮೊಗ್ಗ/ಚಿತ್ರದುರ್ಗ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಲ್ಲಿಯೇ ಲಾಕ್ ಆಗಿದ್ದ ಕಾರ್ಮಿಕರು, ಜನರು ಇದೀಗ ತಮ್ಮ ತಮ್ಮ ಊರುಗಳತ್ತ ಬರುತ್ತಿದ್ದಾರೆ. ಇದೀಗ ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಬೇರೆಬೇರೆ ರಾಜ್ಯಗಳಿಂದ ಕಾರ್ಮಿಕರು ಬರುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ಜಿಲ್ಲಾಡಳಿತ ಸರ್ಕಾರಿ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲು ಸಿದ್ಧತೆ …

Read More »

ಉತ್ತಮ ಆಹಾರ, ಊಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ಕೊರೊನಾ ವಾರಿಯರ್ಸ್ ಆಕ್ರೋಶ

ಶಿವಮೊಗ್ಗ: ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಹಗಲು ರಾತ್ರಿ ಎನ್ನದೇ, ಮನೆಗೂ ಹೋಗದೆ ನರ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಊಟ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸದೆ ಗೋಳಾಡುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮನೆಗೆ ಹೋಗುವಂತಿಲ್ಲ. ಕೊರೊನಾ ವಾರಿಯರ್ ಗಳು ಉಳಿದುಕೊಳ್ಳಲು ಜಿಲ್ಲಾಡಳಿತ ನಗರದ ವಿವಿಧ ಹೋಟೆಲ್ ಗಳಲ್ಲಿ ವ್ಯವಸ್ಥೆ ಮಾಡಿದೆ. ಆದರೆ ಹೋಟೆಲ್ ನಲ್ಲಿ ಕೊಠಡಿಗಳು …

Read More »

ಶಿವಮೊಗ್ಗ:ಕೊರೊನಾ ಪರಿಹಾರದಲ್ಲೂ ವಸೂಲಿಗಿಳಿದ ಆಫೀಸರ್ಸ್………….

ಶಿವಮೊಗ್ಗ: ಕೊರೊನಾ ವೈರಸ್ ಕಾಣಿಸಿಕೊಂಡ ದಿನದಿಂದಲೂ ಒಬ್ಬೊಬ್ಬರು ಒಂದೊಂದು ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಅದರಲ್ಲಿಯೂ ಅತೀ ಹೆಚ್ಚು ಸಮಸ್ಯೆಗೆ ಒಳಗಾದವರು ಅಂದ್ರೆ ದಿನ ದುಡಿಮೆಯ ಕಾರ್ಮಿಕರು. ಹೀಗಾಗಿ ರಾಜ್ಯ ಸರ್ಕಾರ ಇವರ ನೆರವಿಗೆ ನಿಂತಿದೆ. ಅದರಲ್ಲೂ ವಸೂಲಿ ಶುರುವಾಗಿದೆ. ಹೌದು. ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಆಟೋ ಚಾಲಕರು ಅಧಿಕಾರಿಗಳಿಗೆ ಧಿಕ್ಕಾರ ಹಾಕಿದ್ದಾರೆ. ಕೊರೊನಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ಪರಿಹಾರ ಘೋಷಣೆ …

Read More »

ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿ – ಮಲೆನಾಡಿಗರನ್ನು ಆವರಿಸಿಕೊಂಡ ಕೊರೊನಾ ಭೀತಿ…

ಶಿವಮೊಗ್ಗ: ಗ್ರೀನ್ ಝೋನ್‍ನಲ್ಲಿದ್ದ ಚಿತ್ರದುರ್ಗ ಜಿಲ್ಲೆ ತಬ್ಲಿಘಿಗಳ ಎಂಟ್ರಿಯಿಂದ ರೆಡ್ ಝೋನ್‍ಗೆ ಬಂದಿದ್ದು, ಇದೇ ಹಾದಿಯಲ್ಲೀಗ ಶಿವಮೊಗ್ಗ ಇದೆ ಎನಿಸುತ್ತಿದೆ. ಯಾಕಂದ್ರೆ ಇದೀಗ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮತ್ತು ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದು, ಇದು ಮಲೆನಾಡಿಗರಲ್ಲಿ ಭೀತಿ ಹೆಚ್ಚಿಸಿದೆ. ಮಾರ್ಚ್ 5ರಂದು ಗುಜರಾತ್‍ನ ಅಹಮದಾಬಾದ್‍ಗೆ ದಾವಣಗೆರೆಯಿಂದ ರೈಲಿನ …

Read More »

ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ: ಕೊರೊನಾ ಬಂದ ಕಾರಣ ಕೂಲಿ ಕಾರ್ಮಿಕರಿಗೆ ಒಂದೆಡೆ ಕೂಲಿ ಕೆಲಸವಿಲ್ಲ, ಇನ್ನೊಂದೆಡೆ ಕೂಲಿ ಇಲ್ಲದೆ ಜೀವನ ಸಾಗಿಸುವುದೇ ಕಷ್ಟವಾಗಿದೆ. ಆದರೆ ಇಂತಹ ಸಮಯದಲ್ಲಿಯೂ ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿ ಕೆಲಸಗಳು ಆರಂಭವಾಗಿವೆ. ಅದರಂತೆ ಶಿವಮೊಗ್ಗ ಜಿಲ್ಲೆಯ 271 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿವೆ. ಹೀಗಾಗಿ …

Read More »

ಕಾರ್ಯಕ್ರಮದಲ್ಲಿ ಕೊರೊನಾ ಭಯವಿಲ್ಲದೇಸಾಮಾಜಿಕ ಅಂತರ ಕಾಣದೇ ಇರುವುದು ವಿಪರ್ಯಾಸ….

ಶಿವಮೊಗ್ಗ: ದುಡಿಯುವ ಕೈಗಳಿಗೆ ಕೆಲಸ ನೀಡಬೇಕೆನ್ನುವ ಗುರಿ ಒಂದು ಕಡೆಯಾದರೆ, ಲಾಕ್‍ಡೌನ್ ಕಾರಣದಿಂದ ಮತ್ತೊಂದು ಕಡೆ ಕೆಲಸವಿಲ್ಲದೇ ಜನರು ಕಂಗಾಲಾಗಿರುವುದು. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಈಗಾಗಲೇ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ಸಾವಿರಾರು ಜನರಿಗೆ ಕೆಲಸ ನೀಡಿರುವ ಇಲಾಖೆ ಇದೀಗ ಅಂತರ್ಜಲ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಿದೆ. ರಾಜ್ಯ ಸರ್ಕಾರ ಕೊರೊನಾ ಮಹಾಮಾರಿ ಅಟ್ಟಹಾಸದ …

Read More »

ನಾಳೆಯಿಂದ ಮದ್ಯದಂಗಡಿಗಳು ಓಪನ್ – ಒಬ್ಬರಿಗೆ ಎಷ್ಟು ಕ್ವಾಟರ್ ಎಣ್ಣೆ? ನಿಯಮ ಏನು?

ಶಿವಮೊಗ್ಗ: ನಾಳೆಯಿಂದ ಕಂಟೈನ್‍ಮೆಂಟ್ ಜೋನ್‍ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ ಲಾಕ್‍ಡೌನ್ ನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರವೂ ಕೆಲ ನಿಮಗಳು ಮತ್ತು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಒಂದು ದಿನಕ್ಕೆ ಒಬ್ಬರಿಗೆ ಇಂತಿಷ್ಟೇ ಮದ್ಯ ನೀಡಬೇಕು ಎಂದು ನಿಗದಿ ಮಾಡಿದೆ. ಪ್ರತಿಯೊಬ್ಬ …

Read More »

ಶಿವಮೊಗ್ಗ:ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ: ಕೊರೊನಾ ಲಾಕ್‍ಡೌನ್‍ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ, ಆರಾಧನೆ, ಪೂಜೆ ಪುನಸ್ಕಾರಕ್ಕೆ ಸೀಮಿತವಾಗಿದ್ದ ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಶೇಖರಣೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಇರುವ ರೋಗಿಗಳಿಗೆ ರಕ್ತ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಕೊರೊನಾ ಸಮಸ್ಯೆ ಹೊರತುಪಡಿಸಿ, ಇತರೆ ರೋಗಿಗಳಿಗೆ ರಕ್ತದ …

Read More »

ಊಟಕ್ಕೆ ಇಲ್ಲದಿದ್ರೂ ಪರವಾಗಿಲ್ಲ, ನನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ………

ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್‍ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಇದೀಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ. ಶಿವಮೊಗ್ಗದ ಕೃಷಿನಗರದ ಚಾನಲ್ ಬಳಿ ಇರುವ ಕುಟುಂಬವೊಂದು ಲಾಕ್‍ಡೌನ್ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಕುಟುಂಬಕ್ಕೆ …

Read More »

ಆಯುಷ್ ವೈದ್ಯರ, ಸ್ಟಾಫ್ ನರ್ಸ್ ಗಳ ವೇತನ ಹೆಚ್ಚಳ ಮಾಡಿ: ಆಯನೂರು ಮಂಜುನಾಥ್.

ಶಿವಮೊಗ್ಗ : ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಮ್ಮದೇ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೊರೊನಾ ಸೋಂಕಿನ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಶ್ರಮದಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಸರ್ಕಾರ ಕೇವಲ ಎಂಬಿಬಿಎಸ್ ವೈದ್ಯರ …

Read More »