Breaking News

ಶಿವಮೊಗ್ಗ

ವಾಕಿಂಗ್ ಮಾಡುತ್ತಿದ್ದವರಿಗೆ ವ್ಯಾನ್ ಹತ್ತಿ ಎಂದ ಪೊಲೀಸರು……..

ಶಿವಮೊಗ್ಗ: ವಾಕಿಂಗ್ ಹಾಗೂ ಆಟವಾಡಲು ಬಂದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದು, ಇದ್ದಕ್ಕಿದ್ದಂತೆ ಬನ್ನಿ ವ್ಯಾನ್ ಹತ್ತಿ ಎಂದು ಕರೆದೊಯ್ದಿದ್ದಾರೆ. ನಗರದ ವಿವಿಧ ಬಡಾವಣೆಗಳಲ್ಲಿ ವಾಯುವಿಹಾರ ಮಾಡುತ್ತಿದ್ದವರನ್ನು ನಗರದ ಒಳಾಂಗಣ ಕ್ರೀಡಾಂಗಣದ ಆವರಣಕ್ಕೆ ಕರೆತಂದು ಡಿಸಿ ಶಿವಕುಮಾರ್, ಎಸ್‍ಪಿ ಶಾಂತರಾಜ್ ಪಾಠ ಮಾಡಿದ್ದಾರೆ. ಇನ್ನೂ ವಿಶೇಷವೆಂದರೆ ಇದಕ್ಕೂ ಮುನ್ನ ಟೀ, ಬಿಸ್ಕೆಟ್ ನೀಡಿ ಆರೈಕೆ ಮಾಡಿದ್ದಾರೆ. ವಿವಿಧ ಬಡಾವಣೆಗಳಿಂದ ಸುಮಾರು 300ಕ್ಕೂ ಹೆಚ್ಚು ಜನ ವಾಕಿಂಗ್‍ಗೆ ಬಂದವರಿಗೆ, ಒಂದೇ ಜಾಗದಲ್ಲಿ ಕರೆ …

Read More »

ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದ ದುಡಿಯುವ ಕೈಗಳಿಗೆ ಕೆಲಸ ನೀಡಿದ ಈಶ್ವರಪ್ಪ

ಶಿವಮೊಗ್ಗ: ದೇಶವೇ ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದು, ಅದೆಷ್ಟೋ ದುಡಿಯುವ ಮಂದಿ ಕೈಕಟ್ಟಿ ಮನೆಯಲ್ಲೇ ಕುಳಿತುಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾತ್ರ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿ ನಡೆಸಿದ್ದಾರೆ. ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ, ದೂರ ದೂರ ನಿಂತು ಕೆಲಸ ಮಾಡುವಂತೆ ಸೂಚನೆ ಕೂಡ ನೀಡಿದ್ದು, ಜಿಲ್ಲೆಯ …

Read More »

ಶಿವಮೊಗ್ಗ/ಬೆಳಗಾವಿ:ಬಿರುಗಾಳಿ ಸಹಿತ ಭಾರೀ ಮಳೆ – ಶಿವಮೊಗ್ಗದಲ್ಲಿ ಅವಾಂತರ ಸೃಷ್ಟಿ

ಶಿವಮೊಗ್ಗ/ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇತ್ತ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಶಿವಮೊಗ್ಗದಲ್ಲಿ ಇಂದು ಸಂಜೆ ಅರ್ಧ ಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದು, ಮಳೆಗೆ ಹಲವು ಅವಾಂತರ ಸಹ ಸೃಷ್ಟಿಯಾಗಿದೆ. ನಗರದ ಹಲವೆಡೆ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಮರಗಳು ಉರುಳಿ ಬಿದ್ದಿದ್ರೆ, ಕೆಲವು ಮನೆ ಮೇಲೂ ಮರಗಳು ಉರುಳಿ ಬಿದ್ದಿದೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ …

Read More »

ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಲಾಕ್‍ಡೌನ್‍ನಿಂದಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಈಗ ಮುಚ್ಚಿರುವ ಮದ್ಯದ ಅಂಗಡಿಗಳನ್ನು ಮತ್ತೆ ತೆರೆಯಲು ಅವಕಾಶ ಕೊಡದೆ, ಶಾಶ್ವತವಾಗಿ ಮುಚ್ಚುವಂತೆ ಶಿವಮೊಗ್ಗದಲ್ಲಿ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ರೈತ ಸಂಘದ ಮುಖಂಡರು ಕೊರೊನಾ ವೇಳೆ ಮದ್ಯಪಾನ ನಿಷೇಧದಿಂದಾಗಿ ಕುಡಿತಕ್ಕೆ ಒಳಗಾದವರ ಕುಟುಂಬಗಳು ನೆಮ್ಮದಿಯಿಂದ ಇವೆ. ಹೀಗಾಗಿ ಇದೇ ರೀತಿ ಮದ್ಯದ ಅಂಗಡಿಗಳನ್ನು …

Read More »

ಶಿವಮೊಗ್ಗ:ಜೋಗದ ರಸ್ತೆಯಲ್ಲಿ ಚಿರತೆ – ಓಡಾಡುತ್ತಿರುವ ದೃಶ್,,,,,,,.

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗದ ಪ್ರಮುಖ ರಸ್ತೆಗಳಲ್ಲಿ ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಮಹಾತ್ಮ ಗಾಂಧಿ ಜಲವಿದ್ಯುತ್ ಕೇಂದ್ರಕ್ಕೆ ತೆರಳುವ ಮಾರ್ಗದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಎರಡು ದಿನದ ಹಿಂದೆ ರಸ್ತೆಯಲ್ಲಿ ಓಡಾಡುತ್ತಿದ್ದ ಚಿರತೆಯನ್ನು ನೋಡಿದ ಸ್ಥಳೀಯರು ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ಹಿಂದೆ ಜೋಗದ ಸುತ್ತಮುತ್ತಲಿನ ಗ್ರಾಮಗಳಾದ ಶ್ರೀಪುರ, ಬಾಳೆಗದ್ದೆ, ಕೆಮ್ಮಣ್ಣುಗಾರು ಸೇರಿದಂತೆ ಅನೇಕ ಕಡೆ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೇ ಕಳೆದ 10 ದಿನಗಳಿಂದ …

Read More »

ಕೊರೊನಾ ಲಾಕ್‍ಡೌನ್ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಸಿನಿಮಾ ಜೋಡಿಯೊಂದು ಸಪ್ತಪದಿ

ಶಿವಮೊಗ್ಗ: ಕೊರೊನಾ ಲಾಕ್‍ಡೌನ್ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಸಿನಿಮಾ ಜೋಡಿಯೊಂದು ಸಪ್ತಪದಿ ತುಳಿದಿದೆ. ಚಲನಚಿತ್ರ ನಟ ನಟಿಯರಾಗಿರುವ ಅರ್ನವ್ ವಿನ್ಯಾಸ್ ಮತ್ತು ವಿಹಾನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮಲೆನಾಡಿನ ತವರೂರು ಎಂದೇ ಕರೆಸಿಕೊಳ್ಳುವ ಶಿವಮೊಗ್ಗದಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾರೆ. ಅಂದಹಾಗೆ ಅರ್ನವ್ ವಿನ್ಯಾಸ್ ಹೊಂಬಣ್ಣ ಎಂಬ ಚಿತ್ರದಲ್ಲಿ ಹೀರೋ ಪಾತ್ರದಲ್ಲಿ ಮಿಂಚಿದ್ದು, ಅದೇ ರೀತಿ ಹೀರೋಯಿನ್ ವಿಹಾನಾ ನೆನಪುಗಳು ಎಂಬ ಚಲನಚಿತ್ರದಲ್ಲಿ ನಟಿಸಿ, ಉತ್ತಮ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಮಂಡ್ಯ ಮೂಲದ ನಟ …

Read More »

ಅಧಿಕಾರಿಗಳ ದಾಳಿ – ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಜಾಲ ಪತ್ತೆ

ಶಿವಮೊಗ್ಗ: ಕೊರೊನಾ ಭೀತಿಯಿಂದ ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಸಾಯಬಾರದು ಎಂಬ ಕಾರಣದಿಂದ ರಾಜ್ಯ ಸರ್ಕಾರ ಕಳೆದ ಎರಡು ದಿನಗಳಿಂದ ಎರಡು ತಿಂಗಳಿನದ್ದು ಪಡಿತರ ಅಕ್ಕಿ, ಗೋಧಿ ವಿತರಿಸುತ್ತಿದೆ. ಆದರೆ ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡ ದಂಧೆಕೋರರು ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿ ಮೇರೆಗೆ ನಗರದ ಹೊರ ವಲಯದ ಕಲ್ಲೂರು ಬಳಿಯ ಫಾರಂ ಹೌಸ್‍ವೊಂದರ …

Read More »

ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡಿನಲ್ಲಿ ಬೆಂಕಿ ಅವಘಡ ಪ್ರಕರಣ – ತನಿಖೆಗೆ ಈಶ್ವರಪ್ಪ ಸೂಚನೆ

ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡಿನಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಸರ್ಜಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳು ಹಾಗೂ ತಾಯಂದಿರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಭಾನುವಾರ ಅನಾಮಿಕ ವ್ಯಕ್ತಿಯೊಬ್ಬರು ನನಗೆ ದೂರವಾಣಿ ಕರೆ ಮಾಡಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಹಿಂದೆಯೇ ಎಲೆಕ್ಟ್ರಿಕ್ ಸಮಸ್ಯೆ ಇದೆ ಸರಿಪಡಿಸಿ ಎಂದು …

Read More »

ಕೋಳಿ ಮತ್ತು ಮೊಟ್ಟೆ ತಿಂದು ಕೊರೊನಾ ಸೋಂಕಿನಿಂದ ದೂರವಿರಿ : ಸಚಿವ ಕೆ.ಎಸ್‍.ಈಶ್ವರಪ್ಪ

ಶಿವಮೊಗ್ಗ, ಮಾ.31- ಕೋಳಿ ಮತ್ತು ಮೊಟ್ಟೆ ತಿನ್ನುವುದರಿಂದ ಉಷ್ಣಾಂಶ ಹೆಚ್ಚಾಗುತ್ತದೆ, ಆ ಮೂಲಕ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಹಾಗಾಗಿ ಜನ ಸಾಮಾನ್ಯರು ಇನ್ನು ಮುಂದೆ ಕೋಳಿ ಮೊಟ್ಟೆ ಹೆಚ್ಚಾಗಿ ತಿನ್ನಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್‍.ಈಶ್ವರಪ್ಪ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈವರೆಗೂ ಒಂದೇ ಒಂದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಜನ ಸಾಮಾನ್ಯರು ವದ್ಧಂತಿಗಳಿಗೆ ಕಿವಿಗೊಟ್ಟು …

Read More »

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಯಲ್ಲಿಯೂ ಹಾಲು ಖರೀದಿ ಸ್ಥಗಿತಗೊಳಿಸಲಾಗುತ್ತಿದೆ.

ಶಿವಮೊಗ್ಗ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಇಂದು ಮತ್ತು ನಾಳೆ ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಹಾಲು ಒಕ್ಕೂಟ ರೈತರಿಂದ ಹಾಲು ಖರೀದಿಸದಿರಲು ನಿರ್ಧರಿಸಿದೆ. ಈಗಾಗಲೇ ಡೈರಿಯಲ್ಲಿಯೆ ಹೆಚ್ಚಿನ ಪ್ರಮಾಣದ ಹಾಲು ಶೇಖರಣೆ ಆಗಿದ್ದು, ಸರಬರಾಜು ಆಗುತ್ತಿಲ್ಲ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಯಲ್ಲಿಯೂ ಹಾಲು ಖರೀದಿ ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತು ಹಾಲು ಒಕ್ಕೂಟದ …

Read More »