Breaking News

ಶಿವಮೊಗ್ಗ

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‍ಕಾಮ್ಸ್ ನೆರವಿನಿಂದ ಪ್ರತಿ ವಾರ್ಡಿನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ …

Read More »

ಶಿವಮೊಗ್: ಹೇಳದೆ ಕೇಳದೇ ಆಸ್ಪತ್ರೆಯಿಂದ ಓಡಿ ಹೋದ ಮಹಿಳೆ

ಶಿವಮೊಗ್ಗ: ಮಂಗನಕಾಯಿಲೆ ಸೋಂಕು ತಗುಲಿದ್ದ ಮಹಿಳೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮದ ಸುಮಿತ್ರಮ್ಮ ಮೆಗ್ಗಾನ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ನಂತರ ಮಹಿಳೆಗೆ ಕೆಎಫ್‍ಡಿ ಪಾಸಿಟಿವ್ ಇರುವ ಅಂಶ ದೃಢಪಟ್ಟಿತ್ತು. ಹೀಗಾಗಿ ಮಹಿಳೆಯ ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳೆದ ನಾಲ್ಕು ದಿನದ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ರಮ್ಮ ಅವರಿಗೆ ಖಾಯಿಲೆ ಸ್ವಲ್ಪ ವಾಸಿಯಾಗಿತ್ತು. …

Read More »

ಅಕಾಲಿಕ ಮಳೆ – ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರದ ಕೊಂಬೆ

ಕಾರವಾರ/ಶಿವಮೊಗ್ಗ: ಇಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆಯಾಗಿದ್ದು, ಭೂಮಿಗೆ ಮಳೆರಾಯ ತಂಪೆರೆದಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಾಗಿದ್ದು, ಸುಮಾರು ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು ಸಹಿತ ಭಾರೀ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಭೂಮಿ ತಂಪಾಗಿದ್ದು, ಬಿಸಿಲಿನಿಂದ ಬಳಲಿದ್ದ ಜನರು ಒಮ್ಮಿಂದೊಮ್ಮೆಲೆ ಸುರಿದ ಮನೆಯಿಂದ ಸಂತಸಗೊಂಡಿದ್ದಾರೆ. ಇತ್ತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಕಾಲಿಕ ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ …

Read More »

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌ ಶಿವಮೊಗ್ಗ: ನನಗೆ ಒಂದು ಆಸೆಯಿದೆ. ಆ ಆಸೆಯನ್ನು ನಾನು ಗುರಿ ಎಂದು ಕರೆಯುವುದಿಲ್ಲ. ಇನ್ನು ಮೂರು ವರ್ಷದಲ್ಲಿ ಪಾಲಕರು ಸರಕಾರಿ ಶಾಲೆಯ ಎದುರು ಸರದಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ಹೇಳಿದರು. ಶಿವಮೊಗ್ಗ ಜಿಲ್ಲೆ ಸಾಗರ …

Read More »

ಬಿಎಸ್‍ವೈ ಅವರ 78ನೇ ಹುಟ್ಟು ಹಬ್ಬ 1 ಲಕ್ಷ ಮಂದಿಗೆ ಆಯುಷ್ಮಾನ್ ಕಾರ್ಡ್ ವಿತರಣೆ

ಶಿವಮೊಗ್ಗ: ಪ್ರೇರಣಾ ಎಜುಕೇಶನಲ್ ಮತ್ತು ಸೋಷಿಯಲ್ ಟ್ರಸ್ಟ್ ಹಾಗೂ ಬಿ.ಎಸ್ ಯಡಿಯೂರಪ್ಪನವರ ಅಭಿಮಾನಿ ಬಳಗದವರ ವತಿಯಿಂದ ಬಿಎಸ್‍ವೈ ಅವರ 78ನೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಫೆ. 27ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಇಂದು ಸುದ್ದಿಗೊಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಈ …

Read More »

 ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ: ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ತಾಲೂಕಿನ ಕಾರ್ಗಲ್‍ನ ಶಮಿ ಅಲಿಯಾಸ್ ಮೊಹಮ್ಮದ್ ಬಂಧಿತ ಆರೋಪಿ. ಈತ 2001 ರಲ್ಲಿ ಕುಂಸಿಯ 19 ವರ್ಷದ ಯುವತಿಯನ್ನು ಅಪಹರಿಸಿ ಕೆಲ ದಿನಗಳ ಕಾಲ ಯಾರಿಗೂ ತಿಳಿಯದಂತೆ ಅಜ್ಞಾತ ಸ್ಥಳದಲ್ಲಿ ಇರಿಸಿದ್ದ. ನಂತರ ಪ್ರಕರಣ ಪತ್ತೆ ಹಚ್ಚಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಆರೋಪಿಯು …

Read More »

7ದಿನದ ಹಸುಗೂಸಿಗೆ ಹೃದಯ ಸಮಸ್ಯೆ – ಜೀರೋ ಟ್ರಾಫಿಕ್‍ನಲ್ಲಿ ಶಿವಮೊಗ್ಗದಿಂದ ಬೆಂಗ್ಳೂರಿಗೆ ರವಾನೆ

ಶಿವಮೊಗ್ಗ: ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 7 ದಿನದ ಹಸುಗೂಸಿನ ಜೀವ ಉಳಿಸಲು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಂಬುಲೆನ್ಸ್‌ನಲ್ಲಿ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಶಿವಮೊಗ್ಗದಿಂದ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಕಂದಮ್ಮನನ್ನು ಅಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿ ಮಲ್ಲೂರು ಗ್ರಾಮದ ಸ್ವಾಮಿ ಹಾಗೂ ಸುಧಾ ದಂಪತಿಗೆ ಫೆ. 4ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಜನನದ ನಂತರ ಮಗುವನ್ನು …

Read More »