Breaking News
Home / ಜಿಲ್ಲೆ / ಹಬ್ಬಳ್ಳಿ

ಹಬ್ಬಳ್ಳಿ

ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್​ ಶೋ

ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು. ಹುಬ್ಬಳ್ಳಿ: ಕಾಂಗ್ರೆಸ್​ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಕುಂದಗೋಳದಲ್ಲಿ ರೋಡ್​ ಶೋ ನಡೆಸಿ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ನೇರವಾಗಿ ಹೆಲಿಪ್ಯಾಡ್ ಸುತ್ತುವರಿದಿದ್ದ ಜನರತ್ತ ಹೋಗಿ ಕೈ ಕುಲುಕಿದರು. ನಂತರ ಪ್ರಚಾರದ ವಾಹನ ಏರಿದ ಅವರು ಹುಬ್ಬಳ್ಳಿ – ಲಕ್ಷ್ಮೇಶ್ವರ ರಾಜ್ಯ …

Read More »

ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …

Read More »

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ.

ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್​ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ.   ಉದ್ಯಮಿ ಭರತ್ ಜೈನ್​ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್​ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ …

Read More »

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …

Read More »

ಹುಬ್ಬಳ್ಳಿ: ಸಾವಿನಲ್ಲೂ ಒಂದಾದ ವೃದ್ಧ ದಂಪತಿ!

ದಶಕಗಳ ಕಾಲ ಜೊತೆಗೂಡಿ ಸಂಸಾರ ನಡೆಸಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಹುಬ್ಬಳ್ಳಿ-ಧಾರವಾಡದಲ್ಲಿ ಸಂಭವಿಸಿದೆ. ಹುಬ್ಬಳ್ಳಿತಾಲೂಕಿನಶಿರಗುಪ್ಪಗ್ರಾಮದ ನಿವಾಸಿಗಳಾದ ಶಿವಪುತ್ರಪ್ಪನೆಲಗುಡ್ಡ (90) ಹಾಗೂಬಸಮ್ಮ (86) ಸಾವಿನಲ್ಲೂಒಂದಾದದಂಪತಿ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಿವಪುತ್ರಪ್ಪ ಅವರು ವಯೋಸಹಜ ಮರಣವನ್ನು ಹೊಂದಿದ್ದರು . ತನ್ನ ಪತಿಯ ಸಾವಿನಿಂದ ತೀವ್ರ ನೋವಿನಲ್ಲಿದ್ದ ಪತ್ನಿ ಬಸಮ್ಮ , ಶಿವಪುತ್ರಪ್ಪ ಅವರ ಅಂತ್ಯಕ್ರಿಯೆ ಸಮಯದಲ್ಲಿ ಹೃದಯಾಘಾತದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ . ಕುಟುಂಬಸ್ಥರು ಅಕ್ಕಪಕ್ಕವೇ ದಂಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ದಂಪತಿಯ …

Read More »

BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್‍ ರೇಪ್’ ಗೆ ಯತ್ನ : ಕಾಮುಕರು ಅಂದರ್

ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ …

Read More »

ಟಿಕೆಟ್ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್​ ಹೃದಯಾಘಾತದಿಂದ ಸಾವು

ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್​ನಲ್ಲಿ ಹೃದಯಾಘಾತದಿಂದ ಕಂಡಕ್ಟರ್​ ಸಾವಿಗೀಡಾಗಿರುವ ಘಟನೆ ನಡೆದಿದೆ. ಮಹೇಶ್​ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು.‌ ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್​ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್​ಗೆ …

Read More »

ಹುಬ್ಬಳ್ಳಿಯಲ್ಲಿ ರಸ್ತೆ ಸಮಸ್ಯೆ ಕಂಡು ಧರೆಗಿಳಿದ ದೇವತೆ..!

ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ರಸ್ತೆಗಳ ಪರಿಸ್ಥಿತಿ ನೋಡಿದರೆ ಭಯ ಮೂಡುವಂತಿದೆ. ಇಲ್ಲಿನ ರಸ್ತೆಗಳ ದುಸ್ಥಿತಿ ಬಗ್ಗೆ ಬಾಲಕಿಯೊಬ್ಬಳು ವಿನೂತನ ರೀತಿಯಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾಳೆ. ಹುಬ್ಬಳ್ಳಿಯ ಹರ್ಷಿತಾ ಮೆಹರವಾಡೆ ಎಂಬ ಬಾಲಕಿ ರಾಜಧಾನಿ ಕಾಲೋನಿಯಲ್ಲಿರುವ ರಸ್ತೆ ಅವ್ಯವಸ್ಥೆ ಕುರಿತು ದೇವತೆ ವೇಷದಲ್ಲಿ ಸಾಕ್ಷ್ಯಚಿತ್ರದ ಮೂಲಕ ಜನಪ್ರತಿನಿಧಿಗಳ ಗಮನ ಸೆಳೆದಿದ್ದಾಳೆ. ದಸರಾ ಸಂದರ್ಭದಲ್ಲಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನಾತ್ಮಕ ಪ್ರದರ್ಶನ ಮಾಡಲಾಗಿದೆ. ದುರ್ಗಾ ದೇವಿ ವೇಶ ಧರಿಸಿರುವ ಬಾಲಕಿ …

Read More »

ಬಣ್ಣ ಹಚ್ಚಿದ ಇನ್​​ಸ್ಪೆಕ್ಟರ್ ಕಾಲಿಮಿರ್ಚಿ; ಖಡಕ್ ಡ್ಯೂಟಿಗೂ ಸೈ, ಬಯಲಾಟಕ್ಕೂ ಜೈ

ಹುಬ್ಬಳ್ಳಿ: ಪೊಲೀಸ್ ಇಲಾಖೆ (Police Department) ಅಂದ್ರೆ ಸದಾ ಒತ್ತಡದ ಕೆಲಸ. ಒಂದಷ್ಟು ನಿದ್ದೆ ಮಾಡೋಕೆ ಟೈಮ್ ಸಿಕ್ಕರೂ ಸಾಕು ಅನ್ನೋ ಅಧಿಕಾರಿಗಳಿದ್ದಾರೆ. ಹೀಗಿರುವಾಗ ಇಲ್ಲೊಬ್ಬ ಅಧಿಕಾರಿ ಡ್ಯೂಟಿಗೂ ಸೈ, ಬಯಲಾಟಕ್ಕೂ (Bayalata) ಜೈ ಅಂತಿದಾರೆ. ಅದರಲ್ಲಿಯೂ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆ (Gokul Road Police Station) ಅಂದ್ರೆ ಅದರ ಕಥೆ ಹೇಳುವಂತೆಯೇ ಇಲ್ಲ. ಸದಾ ಕರ್ತವ್ಯ ನಿರತವಾಗಿರೋ ಅನಿವಾರ್ಯತೆ ಇರೋ ಈ ಠಾಣೆಯಲ್ಲಿ ಕೆಲಸ ಮಾಡುತ್ತಲೇ …

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …

Read More »