Breaking News

ಹಬ್ಬಳ್ಳಿ

ಹುಬ್ಬಳ್ಳಿ: ಸಾವಿನಲ್ಲೂ ಒಂದಾದ ವೃದ್ಧ ದಂಪತಿ!

ದಶಕಗಳ ಕಾಲ ಜೊತೆಗೂಡಿ ಸಂಸಾರ ನಡೆಸಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಹುಬ್ಬಳ್ಳಿ-ಧಾರವಾಡದಲ್ಲಿ ಸಂಭವಿಸಿದೆ. ಹುಬ್ಬಳ್ಳಿತಾಲೂಕಿನಶಿರಗುಪ್ಪಗ್ರಾಮದ ನಿವಾಸಿಗಳಾದ ಶಿವಪುತ್ರಪ್ಪನೆಲಗುಡ್ಡ (90) ಹಾಗೂಬಸಮ್ಮ (86) ಸಾವಿನಲ್ಲೂಒಂದಾದದಂಪತಿ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಿವಪುತ್ರಪ್ಪ ಅವರು ವಯೋಸಹಜ ಮರಣವನ್ನು ಹೊಂದಿದ್ದರು . ತನ್ನ ಪತಿಯ ಸಾವಿನಿಂದ ತೀವ್ರ ನೋವಿನಲ್ಲಿದ್ದ ಪತ್ನಿ ಬಸಮ್ಮ , ಶಿವಪುತ್ರಪ್ಪ ಅವರ ಅಂತ್ಯಕ್ರಿಯೆ ಸಮಯದಲ್ಲಿ ಹೃದಯಾಘಾತದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ . ಕುಟುಂಬಸ್ಥರು ಅಕ್ಕಪಕ್ಕವೇ ದಂಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ದಂಪತಿಯ …

Read More »

BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್‍ ರೇಪ್’ ಗೆ ಯತ್ನ : ಕಾಮುಕರು ಅಂದರ್

ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ …

Read More »

ಟಿಕೆಟ್ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್​ ಹೃದಯಾಘಾತದಿಂದ ಸಾವು

ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್​ನಲ್ಲಿ ಹೃದಯಾಘಾತದಿಂದ ಕಂಡಕ್ಟರ್​ ಸಾವಿಗೀಡಾಗಿರುವ ಘಟನೆ ನಡೆದಿದೆ. ಮಹೇಶ್​ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು.‌ ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್​ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್​ಗೆ …

Read More »

ಹುಬ್ಬಳ್ಳಿಯಲ್ಲಿ ರಸ್ತೆ ಸಮಸ್ಯೆ ಕಂಡು ಧರೆಗಿಳಿದ ದೇವತೆ..!

ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ರಸ್ತೆಗಳ ಪರಿಸ್ಥಿತಿ ನೋಡಿದರೆ ಭಯ ಮೂಡುವಂತಿದೆ. ಇಲ್ಲಿನ ರಸ್ತೆಗಳ ದುಸ್ಥಿತಿ ಬಗ್ಗೆ ಬಾಲಕಿಯೊಬ್ಬಳು ವಿನೂತನ ರೀತಿಯಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾಳೆ. ಹುಬ್ಬಳ್ಳಿಯ ಹರ್ಷಿತಾ ಮೆಹರವಾಡೆ ಎಂಬ ಬಾಲಕಿ ರಾಜಧಾನಿ ಕಾಲೋನಿಯಲ್ಲಿರುವ ರಸ್ತೆ ಅವ್ಯವಸ್ಥೆ ಕುರಿತು ದೇವತೆ ವೇಷದಲ್ಲಿ ಸಾಕ್ಷ್ಯಚಿತ್ರದ ಮೂಲಕ ಜನಪ್ರತಿನಿಧಿಗಳ ಗಮನ ಸೆಳೆದಿದ್ದಾಳೆ. ದಸರಾ ಸಂದರ್ಭದಲ್ಲಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನಾತ್ಮಕ ಪ್ರದರ್ಶನ ಮಾಡಲಾಗಿದೆ. ದುರ್ಗಾ ದೇವಿ ವೇಶ ಧರಿಸಿರುವ ಬಾಲಕಿ …

Read More »

ಬಣ್ಣ ಹಚ್ಚಿದ ಇನ್​​ಸ್ಪೆಕ್ಟರ್ ಕಾಲಿಮಿರ್ಚಿ; ಖಡಕ್ ಡ್ಯೂಟಿಗೂ ಸೈ, ಬಯಲಾಟಕ್ಕೂ ಜೈ

ಹುಬ್ಬಳ್ಳಿ: ಪೊಲೀಸ್ ಇಲಾಖೆ (Police Department) ಅಂದ್ರೆ ಸದಾ ಒತ್ತಡದ ಕೆಲಸ. ಒಂದಷ್ಟು ನಿದ್ದೆ ಮಾಡೋಕೆ ಟೈಮ್ ಸಿಕ್ಕರೂ ಸಾಕು ಅನ್ನೋ ಅಧಿಕಾರಿಗಳಿದ್ದಾರೆ. ಹೀಗಿರುವಾಗ ಇಲ್ಲೊಬ್ಬ ಅಧಿಕಾರಿ ಡ್ಯೂಟಿಗೂ ಸೈ, ಬಯಲಾಟಕ್ಕೂ (Bayalata) ಜೈ ಅಂತಿದಾರೆ. ಅದರಲ್ಲಿಯೂ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆ (Gokul Road Police Station) ಅಂದ್ರೆ ಅದರ ಕಥೆ ಹೇಳುವಂತೆಯೇ ಇಲ್ಲ. ಸದಾ ಕರ್ತವ್ಯ ನಿರತವಾಗಿರೋ ಅನಿವಾರ್ಯತೆ ಇರೋ ಈ ಠಾಣೆಯಲ್ಲಿ ಕೆಲಸ ಮಾಡುತ್ತಲೇ …

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …

Read More »

ವಿದ್ಯಾರ್ಥಿಗಳಿಂದ ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ.

ಹುಬ್ಬಳ್ಳಿ: ‘ಬಡ, ನಿರ್ಗತಿಕ ಹಾಗೂ ದಾಸೋಹ ಕೈಂಕರ್ಯ ನಡೆಸುತ್ತಿರುವ ಮಠಗಳಿಗೆ ವಿತರಿಸುವುದಕ್ಕಾಗಿ, ನಗರದ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ವಿದ್ಯಾರ್ಥಿಗಳು ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ ಆರಂಭಿಸಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಡಿ.ವಿ. ಹೊನಗಣ್ಣವರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 50 ವಿದ್ಯಾರ್ಥಿಗಳು ಜ. 1ರಿಂದ 20ರವರೆಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಇದುವರೆಗೆ 25 ಕೆ.ಜಿ.ಯ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗಿವೆ. …

Read More »

ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ: ಶಾಸಕರ ಗಲಾಟೆ ಕುರಿತು ಶೆಟ್ಟರ್ ಪ್ರತಿಕ್ರಿಯೆ

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.   ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ‌ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ …

Read More »

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.   ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು …

Read More »

ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?

ಹುಬ್ಬಳ್ಳಿ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು (ಸೆ.27) ಭಾರತ್ ಬಂದ್ಗೆ (Bharat Bandh) ಕರೆಕೊಟ್ಟಿದ್ದಾರೆ. ಸದ್ಯ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ಸಿಕ್ಕಿಲ್ಲ. ಈ ಬಗ್ಗೆ ಪ್ರತಿಕ್ರಿಯಿ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೊವಿಡ್ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು ಅಂತ ಹೇಳಿದ್ದಾರೆ. ಕಾಂಗ್ರೆಸ್ …

Read More »