ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅವರಿಬ್ಬರ ಮಾತುಕತೆಯ ವಿವರ ಇನ್ನೂ ಲಭ್ಯವಾಗಿಲ್ಲ. ಆದರೆ ಕಳೆದ 2 ತಿಂಗಳಲ್ಲಿ ಅವರಿಬ್ಬರದ್ದು ಇದು ಮೂರನೇ ಭೇಟಿ. ಒಂದು ಬಾರಿ ಹುಬ್ಬಳ್ಳಿಯಲ್ಲೇ ಇದೇ ರೀತಿ ರಾತ್ರಿ ವೇಳೆ ಭೇಟಿಯಾಗಿದ್ದರೆ ಮತ್ತೊಮ್ಮೆ ಬೆಂಗಳೂರಿನ ರಮೇಶ ಜಾರಕಿಹೊಳಿ ಅವರ ಮನೆಗೆ …
Read More »ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …
Read More »ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..
ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …
Read More »ಶ್ರೀ ಬಿ. ಎಲ್. ಸಂತೋಷ್ ಅವರ ಸಮಾರೋಪಜನಸಂವಾದ ಕಾರ್ಯಕ್ರಮ………..
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ಇಂದು ಕರ್ನಾಟಕ ಜನಸಂವಾದ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದರು. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ವಾರ್ಡ್ ನಂಬರ್ 47 ಬಿಜೆಪಿ ಪದಾಧಿಕಾರಿಗಳು ವೀಕ್ಷಣೆ ಮಾಡಿದರು . ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಮಹೇಂದ್ರ ಕೌತಾಳ , ಬಗರ್ ಹುಕುಂ ಸದಸ್ಯರಾದ ರಾಮು ಯಾದಗಿರಿ , ಸೀಳನ್ ಜೆವಿರ್ , ಧಾರವಾಡ ಜಿಲ್ಲಾ ಎಸ್ಸಿ …
Read More »ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿ
ಧಾರವಾಡ: ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ಹಾಗೂ ಅಧಿಕಾರಿಗಳು ಮನವೊಲಿಸಿ, ಪರೀಕ್ಷೆ ಬರೆಸಿದ್ದಾರೆ. ಧಾರವಾಡದ ಅಳ್ನಾವರ ತಾಲೂಕಿನ ವಿದ್ಯಾರ್ಥಿನಿ ನಿರೀಕ್ಷಾ(ಹೆಸರು ಬದಲಿಸಲಾಗಿದೆ) ಕೊರೊನಾ ಭಯದಿಂದ ದ್ವಿತೀಯ ಭಾಷೆ ಪರೀಕ್ಷೆಗೆ ಗೈರಾಗಿದ್ದಳು. ಪಾಲಕರು ಸಹ ಏನೂ ಮಾತನಾಡಿರಲಿಲ್ಲ. ಆದರೆ ಪರೀಕ್ಷೆಗೆ ಗೈರಾಗಿದ್ದನ್ನು ಗಮನಿಸಿದ ಶಿಕ್ಷಕರು ಹಾಗೂ ಅಧಿಕಾರಿಗಳು, ಇಂದು ಬಾಲಕಿ ಮನೆಗೆ ತೆರಳಿ ವಿದ್ಯಾರ್ಥಿನಿ ಹಾಗೂ ಪೋಷಕರನ್ನು ಮನವೊಲಿಸಿದ್ದಾರೆ. ಅಧಿಕಾರಿಗಳ ಮನವೊಲಿಕೆ ಬಳಿಕ ಅಳ್ನಾವರದ ಕಸ್ತೂರಬಾ …
Read More »ಪತಿಯ ಅಂತ್ಯಕ್ರಿಯೆಗೆ ತೆರಳಲು 20 ನಿಮಿಷದಲ್ಲೇ ಪಾಸ್ ನೀಡಿದ ತಾಲೂಕಾಡಳಿತ………
ಹುಬ್ಬಳ್ಳಿ: ಪತಿಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ಇಲ್ಲದೆ ಪುಟ್ಟ ಮಕ್ಕಳೊಂದಿಗೆ ಪರದಾಡುತ್ತಿದ್ದ ಮಹಿಳೆಗೆ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಹುಬ್ಬಳ್ಳಿ ತಾಲೂಕ ಆಡಳಿತ ಕಾರ್ಯದಕ್ಷತೆಯನ್ನು ಮೆರೆದಿದೆ. ಅರವಿಂದ ನಗರದ ಯಶೋಧ ಲೋಕಾಪುರ ಎಂಬವರ ಪತಿ ಬಾಗಲಕೋಟೆಯ ನವನಗರದಲ್ಲಿ ಸಾವನ್ನಪ್ಪಿದ್ದರು. ಬಾಗಲಕೋಟೆಗೆ ತೆರಳು ಪಾಸ್ ಇಲ್ಲದೆ ಎರಡು ಚಿಕ್ಕ ಮಕ್ಕಳ ಜೊತೆ ತಹಶೀಲ್ದಾರ ಕಚೇರಿಗೆ ಆಗಮಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ನೀಡುವಂತೆ ಮನವಿ ಮಾಡಿದ್ದಾರೆ. ಮಹಿಳೆಯ …
Read More »ಲ್ಯಾಪ್ಟಾಪ್ ಬಿಟ್ಟು ನೇಗಿಲ ಹೊತ್ತ ಟೆಕ್ಕಿಗಳು..!
ಹುಬ್ಬಳ್ಳಿ, ಮೇ 5ಅವರು ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತುಕೊಂಡು ಲ್ಯಾಪ್ ಟ್ಯಾಪ್ ಮುಂದಿಸಿಕೊಂಡು ತಾಂತ್ರಿಕ ಲೋಕದಲ್ಲಿ ಸದಾ ಮಗ್ನರಾಗುತ್ತಿದ್ದ ಯುವಕರು ಈಗ ಬದಲಾದ ಸಂದರ್ಭದಲ್ಲಿ ಹೊಲಗಳತ್ತ ಬಂದಿದ್ದಾರೆ. ಅದು ನೇಗಿಲು ಹೊತ್ತುಕೊಂಡು. ತಮ್ಮ ತಂದೆ ,ತಾಯಿ, ಅಣ್ಣ ತಂಗಿ, ತಮ್ಮಂದಿರ, ಆಳು ಕಾಳು ಜೊತೆಗೆ. ಇನ್ನು ಕೇಲವರು ಬೀದಿ ಬದಿಯಲ್ಲಿ ತರಕಾರಿ ಮಾರಾಟದಲ್ಲಿ ತೊಡಗಿದ್ದಾರೆ. ಹೌದು ಇದು ಕರೋನಾ ವೈರಸ್ ತಂದಿಟ್ಟ ಪರಿಸ್ಥಿತಿ. ಲಂಡನ್, ಕಲ್ಕತ್ತಾ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ …
Read More »ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ……..
ಹುಬ್ಬಳ್ಳಿ: ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಆರೋಗ್ಯ ತಪಾಸಣೆಯನ್ನು ನಗರದ ಕಿಮ್ಸ್ ನ ಪಿಎಂಎಸ್ಎಸ್ ವೈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪತ್ರಕರ್ತರಿಗೆ ಕೋವಿಡ್ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಟ್ಟದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಗಂಟಲು ದ್ರವ ಸಂಗ್ರಹಿಸಲಾಯಿತು. ರಾಜ್ಯದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, …
Read More »ಹುಬ್ಬಳ್ಳಿಯ ಒಂದೇ ಕುಟುಂಬದ 7 ಮಂದಿಗೆ ಕೊರೊನಾ ಸೋಂಕು
ಹುಬ್ಬಳ್ಳಿ: ದೆಹಲಿಗೆ ವ್ಯಾಪಾರಕ್ಕಾಗಿ ಹೋಗಿ ಬಂದಿದ್ದ ಹುಬ್ಬಳ್ಳಿಯ ಮುಲ್ಲಾ ಓಣಿಯ ನಿವಾಸಿ ರೋಗಿ ನಂಬರ್-194ರ ಸಂಪರ್ಕದಿಂದ ಇದೀಗ ಹುಬ್ಬಳ್ಳಿಯಲ್ಲಿ ಮತ್ತೆ ಎರಡು ಕೊರೊನಾ ಪಾಸಿಟಿವ್ ಬಂದಿದೆ. ಈ ಮೂಲಕ ಒಬ್ಬನಿಂದ ಒಂದೇ ಕುಟುಂಬದ ಏಳು ಜನರಿಗೆ ಸೋಂಕು ತಗುಲಿದೆ. ತಮ್ಮನಿಂದಾಗಿ ಸಹೋದರ, ಸಹೋದರಿಯರ ಮಕ್ಕಳಿಗೂ ಸೋಂಕು ತಗುಲಿದೆ. ಕೊರೊನಾ ವೈರಸ್ ಮುಲ್ಲಾ ಓಣಿಯ ಕುಟುಂಬಕ್ಕೆ ಸಂಕಷ್ಟವನ್ನು ತಂದೊಡ್ಡಿದ್ದು, ಈಗ ಒಂದೇ ಕುಟುಂಬದಲ್ಲಿಯೇ 7 ಜನರಿಗೆ ಸೋಂಕು ತಗುಲುವ ಮೂಲಕ ಕೊರೊನಾ …
Read More »ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ವ್ಯಕ್ತಿ ಸಾವು……
ಹುಬ್ಬಳ್ಳಿ: ಲಾಕ್ಡೌನ್ ಎಫೆಕ್ಟ್ ನಿಂದ ಮದ್ಯ ಸಿಗದೆ ಮದ್ಯ ವ್ಯಸನಿಗಳು ಪರದಾಡುತ್ತಿದ್ದಾರೆ. ಈ ಮಧ್ಯೆ ಎಣ್ಣೆ ಸಿಗದೆ ವ್ಯಕ್ತಿಯೋರ್ವ ಸ್ಯಾನಿಟೈಸರ್ ಕುಡಿದು ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಗಂಬ್ಯಾಪುರ ಗ್ರಾಮದ ನಿವಾಸಿ ಬಸವರಾಜ್ ವೆಂಕಪ್ಪ ಕುರುವಿನಕೊಪ್ಪ(45) ಮೃತ ವ್ಯಕ್ತಿ. ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದ ಪರಿಣಾಮ ಮೂರು ದಿನಗಳ ಹಿಂದೆ ಬಸವರಾಜ್ ಅಸ್ವಸ್ಥಗೊಂಡಿದ್ದನು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಸವರಾಜ್ನನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಕಿಮ್ಸ್ ನಲ್ಲಿ …
Read More »
Laxmi News 24×7