Breaking News

ಹಬ್ಬಳ್ಳಿ

ಹುಬ್ಬಳ್ಳಿ:ಜಗದೀಶ್ ಶೆಟ್ಟರ್ ಪುತ್ರನಿಂದ ಆಹಾರ ಕಿಟ್ ವಿತರಣೆ……

ಹುಬ್ಬಳ್ಳಿ: ಕೊರೊನಾ ವೈರಸ್ ಲಾಕ್‍ಡೌನ್ ನಡುವೆ ಸಚಿವ ಜಗದೀಶ್ ಶೆಟ್ಟರ್ ಅವರ ಮಗ ಸರ್ಕಾರದ ಆಹಾರ ಕಿಟ್ ವಿತರಣೆ ಮಾಡಿರುವುದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಹೌದು, ಯಾವುದೇ ಚುನಾಯಿತ ಪ್ರತಿನಿಧಿ ಅಲ್ಲದಿದ್ದರು ಕೂಡ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಕಾರ್ಮಿಕ ಇಲಾಖೆಯ ವತಿಯಿಂದ ವಿತರಿಸಲಾಗುತ್ತಿರುವ ಆಹಾರ ಕಿಟ್ ವಿತರಣೆ ಮಾಡಿ ಫೇಸ್‍ಬುಕ್ ಪೋಸ್ಟ್ ಹಾಕಿರುವುದು ಟೀಕೆಗೆ ಗುರಿಯಾಗಿದೆ. ಅಲ್ಲದೇ ಯಾವುದೇ ಚುನಾಯಿತ ವ್ಯಕ್ತಿ ಆಗಿಲ್ಲದಿದ್ದರು ಕೂಡ ತಂದೆಯ …

Read More »

ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ ಮಾಡುವುದು ಬೆಳಕಿಗೆ ಬಂದಿದೆ. ಕಳೆದ 25ದಿನಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧಕಡೆ ದಾಳಿ ನಡೆಸಿ 40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಮದ್ಯ ಮಾರಾಟಗಾರರು ತಮ್ಮ ಅಂಗಡಿ ಕಳ್ಳತನವಾಗಿದೆ ಎಂದು ಪ್ರತಿ ಬಿಂಬಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು, ನಿಮ್ಮ ಬಳಿ ಇರುವ ಮದ್ಯ ಮತ್ತು ಬೀಯರ್ …

Read More »

ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ; ಆತಂಕ ಹೆಚ್ಚಿಸಿದೆ

ಹುಬ್ಬಳ್ಳಿ,(ಏ.14): ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ ಪಾಸಿಟಿವ್​ ಕಾಣಿಸಿಕೊಂಡ ಹಿನ್ನೆಲೆ ಆತಂಕ ಹೆಚ್ಚಾಗಿದೆ.  ಮುಲ್ಲಾ ಓಣಿಯ ನಿವಾಸಿ 37 ವರ್ಷದ ವ್ಯಕ್ತಿಯ(ಪಿ-236) ಪ್ರಯಾಣ ವಿವರ ದಂಗು ಬಡಿಸಿದೆ. ಈ ವ್ಯಕ್ತಿಯಿಂದಲೇ ಈತನ ಕುಟುಂಬಸ್ಥರಿಗೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯ ಪ್ರಯಾಣ ಹಿನ್ನೆಲೆ ಜಿಲ್ಲಾಡಳಿತಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಪಿ-236 ವ್ಯಕ್ತಿ ಮಾರ್ಚ್​ 23ರಂದು ಬೆಳಗ್ಗೆ ಡ್ರೈವರ್ ಜೊತೆ ಕಾರಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ ಪ್ರಯಾಣಿಸಿದ್ದಾರೆ. ಮಧ್ಯಾಹ್ನದವರೆಗೆ ಯಲ್ಲಾಪುರದಲ್ಲಿನ …

Read More »

ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……

ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ. ಅಂದೇ ಭಾರತ …

Read More »

ಕ್ವಾರಂಟೈನ್ ಸೇವೆ ನೀಡಿದ ಪ್ರಪ್ರಥಮ NIMA ವೈದ್ಯ

ಹುಬ್ಬಳ್ಳಿ: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ (NIMA) ಸಂಸ್ಥೆಯ ಹಿರಿಯ ಸದಸ್ಯರಾದ ಡಾ.ಗುರುನಾಥ ಕಂಠಿಯವರು ಏಪ್ರಿಲ್ 4ರಂದು ಹುಬ್ಬಳ್ಳಿಯ ಕ್ವಾರಂಟೈನ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಕ್ವಾರಂಟೈನ್ ಸೇವೆ ಸಲ್ಲಿಸಿದ ಧಾರವಾಡ ಜಿಲ್ಲೆಯ ಪ್ರಪ್ರಥಮ NIMA ವೈದ್ಯಕೀಯ ಸಂಸ್ಥೆಯ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಯುರ್ವೇದ ವೈದ್ಯರುಗಳಾದ ಡಾ.ಗುರುನಾಥ ಕಂಠಿ, ಡಾ.ಎನ್.ಎನ್.ಭರದ್ವಾಡ ಮತ್ತು ಡಾ.ಎಂ.ಸಿ.ಪಾಟೀಲ್ ಇವರು ಮಾರ್ಚ್ 9 ರಂದು ಕೊವಿಡ್-19 ಸೇವೆಗಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‍ವೊಂದರ ಕ್ವಾರಂಟೈನ್ …

Read More »

ಹುಬ್ಬಳ್ಳಿಯಲ್ಲಿ ಪಶು ವೈದ್ಯರ ಮಾನವೀಯತೆ; ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗರ್ಭಿಣಿ ಹಸುವಿಗೆ ಮರುಜೀವ

ಹುಬ್ಬಳ್ಳಿ(ಏ.12): ಕೊರೋನಾ ಸೋಂಕಿನ ವಿರುದ್ಧ  ವಿಶ್ವದ ವೈದ್ಯರು ಮನುಕುಲದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಪಶುವೈದ್ಯರು ಮೃತ್ಯುವಿನ ಬಾಗಿಲು ತಟ್ಟಿದ್ದ ಅನಾಥ ಗರ್ಭಿಣಿ ಹಸುವಿಗೆ  ಮರುಜನ್ಮ ನೀಡಿದ್ದಾರೆ. ಈ ಹೃದಯಸ್ಪರ್ಶಿ  ಘಟನೆ ಉಣಕಲ್  ಸಿದ್ದಪ್ಪಜ್ಜನ ಹೊಸಮಠದ ಆವರಣದಲ್ಲಿ ನಡೆದಿದೆ. ಉಣಕಲ್ ಕ್ರಾಸ್ ರಾಮಲಿಂಗೇಶ್ವರ ದೇವಸ್ಥಾನದ ಬಯಲಿನಲ್ಲಿ ಪರಸ್ಪರ ಬಡಿದಾಡುತ್ತ ಬಂದ ನಾಲ್ಕಾರು ಬೀಡಾಡಿ ದನಗಳು ತುಂಬು ಗರ್ಭಿಣಿ ಹಸುವೊಂದನ್ನು ಕೆಳಗೆ ಬೀಳಿಸಿದ್ದವು. ಹಸುವಿನ ಮೇಲೆ ದಾಳಿ …

Read More »

ಹುಬ್ಬಳ್ಳಿ:ನೈರುತ್ಯ ರೈಲ್ವೆಯಲ್ಲಿ 80,000 ಬೆಡ್‍ಗಳ 312 ಐಸೋಲೇಷನ್ ಬೋಗಿಗಳ ನಿರ್ಮಾಣ

ಹುಬ್ಬಳ್ಳಿ , ಏ.11- ರೈಲ್ವೆ ಇಲಾಖೆಯ 10 ದಿನದಲ್ಲಿ 80,000 ಬೆಡ್‍ಗಳ ಐಸೊಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೊಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್‍ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20,000 …

Read More »

ಹುಬ್ಬಳ್ಳಿಯ ಕಮರಿಪೇಟೆ ಠಾಣೆಯ ಐವರು ಪೊಲೀಸರು ಹೋಂಕ್ವಾರಂಟೈನ್‍ಗೆ

ಹುಬ್ಬಳ್ಳಿ, ಏ.11- ಪೊಲೀಸ್ ಇಲಾಖೆಗೂ ಕೊರೊನಾ ವೈರಸ್ ಬಿಸಿ ತಟ್ಟಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಕಮರಿಪೇಟೆ ಪೊಲೀಸ್ ಠಾಣೆಯ ಐದು ಜನ ಪೊಲೀಸರನ್ನು ಹೋಂ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. ಐದು ಜನ ಪೊಲೀಸ್ ಸಿಬ್ಬಂದಿ ಕೈಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಹಾಕಿ ಹೋಂ ಕ್ವಾರಂಟೈನ್‍ನಲ್ಲಿಡಲಾಗಿದೆ. ಹುಬ್ಬಳ್ಳಿಯ ಮುಲ್ಲಾ ಓಣಿಯ ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿಡಲಾಗಿದೆ. ಕಮರಿಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ಮುಲ್ಲಾ ಓಣಿಯಲ್ಲಿರುವ …

Read More »

ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ; ಕೇಂದ್ರ ಸಚಿವ ಸುರೇಶ್ ಅಂಗಡಿ

ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20 ಸಾವಿರ ಐಸೋಲೇಷನ್ …

Read More »

ಯುವಕನಿಗೆ ಬಂದಿದ್ದು ಜಾಂಡೀಸ್‌ ರೋಗ, ಕೊಂದಿದ್ದು ಮಾತ್ರ ಕೊರೋನಾ..!

ಹುಬ್ಬಳ್ಳಿ,ಏ10- ಆ ಯುವಕನಿಗೆ ಯಾವುದೇ ಹೇಳಿಕೊ ಳ್ಳುವಂತಹ ಮಾರಣಾಂತಿಕ ಕಾಯಿಲೆ ಇರಲಿಲ್ಲ.‌ಆದರೆ ಅವನಿಗೆ ಕರೋನಾ ವೈರಸ್ ಸೋಂಕು ತಗುಲಿರಬಹುದೆಂದು ಶಂಕೆ ವ್ಯಕ್ತಪಡಿಸಿ ಯುವಕನನ್ನು ಬಲಿ ಪಡೆಯಲಾಯಿತು ಎನ್ನಲಾಗಿದೆ. ಹೌದು ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಏ. 3ರಂದು ಮೃತಪಟ್ಟ ಧಾರವಾಡದ 31 ವರ್ಷದ ಎಂಜಿನಿಯರ್‌ ರಾಜು ನಾಯ್ಕ್‌ ಸಾವು ಇದಕ್ಕೆ ಜ್ವಲಂತ ಸಾಕ್ಷಿ. ನ್ಯುಮೋನಿಯಾ, ಜಾಂಡೀಸ್‌ನಿಂದ ಬಳಲುತ್ತಿದ್ದ ರಾಜುಗೆ ಕೋವಿಡ್‌-19 ಇರಬಹುದೆಂದು ಶಂಕಿಸಿ ಬೇರಾವುದೇ ಚಿಕಿತ್ಸೆ ನೀಡಲೇ ಇಲ್ಲ ಕೋವಿಡ್‌-19 ವರದಿ …

Read More »