Breaking News

ಹಾವೇರಿ

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

ಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ. ತಹಶೀಲ್ದಾರ್​ಗೆ …

Read More »

ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಅಧಿಕಾರಿಗಳ ವರ್ಗಾವಣೆಗೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದ್ರೂ ಸಿಎಂ, ಡಿಸಿಎಂ ತುಟಿ ಪಿಟಕ್ ಅಂತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. …

Read More »

ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಶಿವಾನಂದ ಪಾಟೀಲ್

ಹಾವೇರಿ : ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಪ್ರಶ್ನಿಸಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಶತ 7 ರಷ್ಟಾದರೂ ಆಗಿದೆಯಲ್ಲ. ಹೆಚ್. ಕೆ. ಪಾಟೀಲ್ ಇನ್ನಷ್ಟು ವೇಗ ಪಡೆಯಲಿ ಎಂದಿದ್ದಾರೆ. ತೃಪ್ತಿ ತಂದಿಲ್ಲ. ಆದರೆ ಅವರು ನೆನಪು ಮಾಡಿದ ನಂತರ ಮತ್ತಷ್ಟು ವೇಗ ಪಡೆಯುತ್ತೆ …

Read More »

ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ

ಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕೋವಿಡ್​ನಿಂದ ಹೆಚ್ಚು ಸಾವು ಕಂಡ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಸಹ ಒಂದಾಗಿತ್ತು. ನಂತರ ಎರಡನೇ ಅಲೆ, ಮೂರನೇ ಅಲೆ ಕಾಣಿಸಿಕೊಂಡರೂ ಸಹ ಹೇಳಿಕೊಳ್ಳುವಂತಹ ಅನಾಹುತಗಳು ಸಂಭವಿಸಿರಲಿಲ್ಲ. ಮತ್ತೆ ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಹಾವೇರಿ ತಾಲೂಕಿನ 73 ವರ್ಷದ ವೃದ್ಧನೊಬ್ಬನಿಗೆ ಕೊರೊನಾ …

Read More »

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಲಿವಾಳ ಗ್ರಾಮದ 125 ಸೈನಿಕರು ದೇಶ ಸೇವೆ ಸಲ್ಲಿಸುತ್ತಿದ್ದಾರೆ.

ಹಾವೇರಿ: ಸವಣೂರು ತಾಲೂಕಿನ ಕಲಿವಾಳ ಗ್ರಾಮ ಜಿಲ್ಲೆಯ ಚಿಕ್ಕಗ್ರಾಮಗಳಲ್ಲಿ ಒಂದು. ಸುಮಾರು 400 ಮನೆಗಳಿರುವ ಈ ಗ್ರಾಮವೀಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸೈನಿಕರನ್ನು ಸೇನೆಗೆ ನೀಡಿದ ಖ್ಯಾತಿ ಗಳಿಸಿದೆ. ಕಲಿವಾಳದಲ್ಲಿನ ಸುಮಾರು 125 ಸೈನಿಕರು ದೇಶ ಸೇವೆ ಮಾಡುತ್ತಿದ್ದಾರೆ. 20ಕ್ಕೂ ಅಧಿಕ ಜನ ನಿವೃತ್ತರಾಗಿದ್ದು ಪೊಲೀಸ್, ರೈಲು, ಬ್ಯಾಂಕ್ ಸೇರಿದಂತೆ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲವು ಮಾಜಿ ಯೋಧರು ಸರ್ಕಾರಿ ಕೆಲಸ ಪಡೆದಿದ್ದಾರೆ. ಭೂಸೇನೆ, ನೌಕಾದಳ, ವಾಯುದಳದಲ್ಲಿ ಗ್ರಾಮದ ಯುವಕರು ಕಾರ್ಯ …

Read More »

120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ; 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳು

ಹಾವೇರಿ: ಪ್ರತಿಯೊಬ್ಬರಿಗೂ ಒಂದೊಂದು ಹವ್ಯಾಸ ಇರುತ್ತದೆ. ಕೆಲವರಿಗೆ ಹಳೆಯ ಕಾರ್​​ಗಳ ಸಂಗ್ರಹದ ಹವ್ಯಾಸ, ಇನ್ನು ಕೆಲವರಿಗೆ ಅಂಚೆ ಚೀಟಿ ಸಂಗ್ರಹಿಸುವ ಹವ್ಯಾಸ ಇರುತ್ತದೆ. ಆದರೆ, ಹಾವೇರಿಯಲ್ಲೊಬ್ಬ ವಿಶಿಷ್ಟ ಹವ್ಯಾಸವಿರುವ ಯುವಕನೊಬ್ಬನಿದ್ದಾನೆ. ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ …

Read More »

ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್‌

ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್‌   ಹಾವೇರಿ: ‘ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ಹಿಂದೂ ಮಹಾಸಭಾ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ರಟ್ಟೀಹಳ್ಳಿ ಪ್ರವೇಶಿಸದಂತೆ ಜಿಲ್ಲಾಧಿಕಾರಿಯವರು ನನಗೆ ನಿರ್ಬಂಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕದಲ್ಲಿ ಇದೆಯೋ ಅಥವಾ ಪಾಕಿಸ್ತಾನದ ಭಾಗವೋ’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಪ್ರಶ್ನಿಸಿದರು. ನಗರದಲ್ಲಿ‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ …

Read More »

ತಹಶೀಲ್ದಾರ್ ಕಚೇರಿಯಲ್ಲಿ ಕೊಡೆ ಹಿಡಿದು ಕೆಲಸ

ಹಾವೇರಿ: ಇಲ್ಲಿಯ ತಹಶೀಲ್ದಾರ್‌ ಕಚೇರಿಯು ಹಲವು ವರ್ಷಗಳಿಂದ ಶಿಥಿಲ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಸ್ಯೆಯಾಗಿದೆ. ಕಂದಾಯ ದಾಖಲೆಗಳು ಒದ್ದೆಯಾಗುವ ಭೀತಿ ಒಂದೆಡೆಯಿದ್ದರೆ, ಮತ್ತೊಂದೆಡೆ ಬಕೆಟ್ ಇರಿಸಿ ನೀರು ಸಂಗ್ರಹಿಸಿ ಚೆಲ್ಲಬೇಕಿದೆ. ಕೊಡೆ ಹಿಡಿದು ಕೆಲಸ ಮಾಡಬೇಕಿದೆ. ‘ಪ್ರತಿ ವರ್ಷ ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಕಚೇರಿ ಸ್ಥಳಾಂತರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಸೋರುವಕಡೆಯಲ್ಲ ಬಕೆಟ್‌ ಇಡುತ್ತೇವೆ. ಕಂದಾಯ ದಾಖಲೆಗಳು ಒದ್ದೆಯಾಗದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ’ ಎಂದು ನೌಕರರು …

Read More »

ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ 3 ಸಾವು! ಮಲಗಿದ್ದವರನ್ನ ಬಲಿಪಡೆದ ಜವರಾಯ, ಪರಿಹಾರ ಘೋಷಣೆ

ಹಾವೇರಿ: ಬಡವ ನೀ ಮಡಗಿದಂಗೆ ಇರು ಎಂಬಂತೆ ತಾವಾಯಿತು ತಮ್ಮ ಕೆಲಸವಾಯಿತು ಎನ್ನುತ್ತಿದ್ದ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾರೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ (Rain) ಕಾರಣ ಈ ಕುಟುಂಬಸ್ಥರು ರಾತ್ರಿ ಹಾಯಾಗಿ ನಿದ್ರೆಗೆ ಜಾರಿದ್ದರು. ಆದರೆ ನಸುಕಿನಜಾವ ಮಲಗಿದ್ದವರ ಮೇಲೆ ಆ ಮನೆಯ ಮೇಲ್ಚಾವಣಿ (Roof) ಯಮಸ್ವರೂಪಿಯಾಗಿದೆ. ಏಕಾಏಕಿ ಕುಸಿದಿದ್ದರಿಂದ ಮೈಮೇಲೆ ಮಣ್ಣು ಕುಸಿದು ಮಲಗಿದ್ದ ಕುಟುಂಬ ಮೂವರ ಉಸಿರುಗಟ್ಟಿ (suffocation) ಸಾವನ್ನಪ್ಪಿದ್ದಾರೆ. ಮಳೆಯಿಂದಾದ ಈ ದುರಂತದಲ್ಲಿ …

Read More »

ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ಮಕ್ಕಳು ಹಾಗೂ ಮಹಿಳೆ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಜು.19ರ ಶುಕ್ರವಾರ ಬೆಳಗಿನ ಜಾವ ಸವಣೂರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.   ನಸುಕಿನ ಜಾವ 4 ಗಂಟೆಯ ಸುಮಾರು ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಬಾವಣಿ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ …

Read More »