Breaking News
Home / ಜಿಲ್ಲೆ / ಹಾವೇರಿ (page 4)

ಹಾವೇರಿ

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..

ಬೆಳಗಾವಿ. ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..   ಜಾಗನೂರ, ಪಾಮಲದಿನ್ನಿ, ಬಡಿಗವಾಡ ಹಾಗೂ ರಾಜಪೂರ ಗ್ರಾಮಸ್ಥರ ಕತ್ತಿ ವಿರುದ್ಧ ಕತ್ತಿ ಮಸೆಯತೊಡಗಿದ್ದಾರೆ ಕತ್ತಿ ಒಡೆತನದವಿಶ್ವರಾಜ್ ಸಕ್ಜರೆ ಕಾರ್ಖಾನೆಯ ವಿಷಪೂರಿತ ರಾಸಾಯನಿಕ ನೀರು ಹಳ್ಳಗಳಿಗೆ ಬಿಡುತ್ತಿರುವ ಹಿನ್ನಲೆ ಜಾನುವಾರುಗಳಿಗೆ ಚರ್ಮ ರೋಗ ಕಾಯಿಲೆ ಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.   ಸಚಿವ ಕತ್ತಿ ಪ್ರಭಾವದಿಂದಾಗಿ ಸ್ಥಳಕ್ಕೆ ತಹಶಿಲ್ದಾರ …

Read More »

ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಬಹಳ ಮುಖ್ಯ : ಬಿ.ಸಿ.ಪಾಟೀಲ

ಹಾವೇರಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ತರುವುದಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಗೆಲ್ಲಿಸುವುದು ಬಹಳ ಮುಖ್ಯವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಜಿಲ್ಲೆಯ ಹಿರೇಕೆರೂರ ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ದಿವಂಗತ ಸಿ.ಎಂ.ಉದಾಸಿ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ನೀರಾವರಿ, ರಸ್ತೆ ಸೇರಿದಂತೆ ಅನೇಕ ಯೋಜನೆಗಳನ್ನು ಈ …

Read More »

ಬಾಲಕನ ಹೊಟ್ಟೆಯ ಮೇಲೆ ಹರಿದ ಕಬ್ಬು ತುಂಬಿದ ಟ್ರ್ಯಾಕ್ಟರ್

ಹಾವೇರಿ: ಕಬ್ಬಿನ ಟ್ರ್ಯಾಕ್ಟರ್ ಬಾಲಕನ ಹೊಟ್ಟೆಯ ಮೇಲೆ ಹರಿದು ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ರಾಣೇಬೆನ್ನೂರ ರಸ್ತೆಯ ಬಳಿ ನಡೆದಿದೆ.   ಪಟ್ಟಣದ ಗಣೇಶ ವಡ್ಡರ (11) ವರ್ಷದ ಬಾಲಕನ ಮೇಲೆ ಹಿಂಬದಿಯ ಟ್ರ್ಯಾಲಿ ಹರಿದಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ಗುತ್ತಲ ಸಮುದಾಯ ಆರೋಗ್ಯ ಕೇಂದ್ರದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ತೀವ್ರವಾಗಿ ನರಳುತ್ತಾ ಬಿದ್ದಿದ್ದ ಬಾಲಕನ ಸ್ಥಿತಿ ಕಂಡು ಮಾಹಿಳಾ ಸಂಬಂಧಿಯೊಬ್ಬರು …

Read More »

ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು

ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ. …

Read More »

ಮಹದಾಯಿ ಹಾಗೂ ಮೇಕೆದಾಟು ಯೋಜನೆ ಶೀಘ್ರದಲ್ಲಿ ಆರಂಭ: ಸಿಎಂ ಬೊಮ್ಮಾಯಿ

ಹಾವೇರಿ: ಮಹದಾಯಿ ಹಾಗೂ ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಕ್ರಿಯೆ ಕುರಿತು ದೆಹಲಿಯಲ್ಲಿ ಚರ್ಚೆ ಮಾಡಿ ಚಾಲನೆ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಿರೇಕೇರೂರಿನ ಬಸರಿಹಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪರ್ ಕೃಷ್ಣಾ,ಮಹದಾಯಿ, ಮೇಕೆದಾಟು ಯೋಜನೆ ಪ್ರಕ್ರಿಯೆಗಳನ್ನ ದೆಹಲಿಗೆ ಹೋಗಿ ಕಾನೂನು ತಜ್ಞರ ಜೊತೆ ಚರ್ಚಿಸಲಾಗುತ್ತೆ. ಆ ಯೋಜನೆಯನ್ನು ನೋಟಿಪಿಕೇಷನ್ ಮಾಡುವುದಕ್ಕೆ ತೀವ್ರಗತಿಯಲ್ಲಿ ಜಾರಿ ಮಾಡುತ್ತೇವೆ. ಸುಪ್ರೀಂ ಕೋರ್ಟ್ …

Read More »

ಆಂಟಿ ಹಿಂದೆ ಬಿದ್ದು ಸಂಬಂಧ ಬೆಳೆಸಿ ಆಕೆಯಿಂದಲೇ ಹೆಣವಾದ ಯುವಕ

ಹಾವೇರಿ: ಮಹಿಳೆಯೊಬ್ಬಳು ಪ್ರಿಯಕರನನ್ನೇ ಕೊಲೆಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಧಾರವಾಡದ ನಾಗರಾಜ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಹಿಳೆಯ ಸಹವಾಸ ಮಾಡಿದ್ದ ನಾಗರಾಜ ಆಕೆಯಿಂದಲೇ ಕೊಲೆಯಾಗಿದ್ದಾನೆ. ಗಂಡ ಜೈಲಿಗೆ ಹೋದ ನಂತರ ಯುವಕನೊಂದಿಗೆ ಲವ್ವಿಡವ್ವಿ ಶುರುಮಾಡಿದ್ದ ಮಹಿಳೆ, ತನ್ನನ್ನು ಬಿಟ್ಟು ಬೇರೆ ಯುವತಿ ಮದುವೆಯಾಗಲು ಮುಂದಾಗಿದ್ದ ಯುವಕ ನಾಗರಾಜನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಧಾರವಾಡದ ಶೋಭಾ ಎಂಬಾಕೆಯೇ ಕೃತ್ಯವೆಸಗಿದ ಆರೋಪಿಯಾಗಿದ್ದಾಳೆ. ಮೊದಲೇ ಮದುವೆಯಾಗಿ ಹೆಣ್ಣು ಮಗುವಿದ್ದ ಶೋಭಾ ಗಂಡನನ್ನು ಬಿಟ್ಟು …

Read More »

ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ‘ಮನೆ ಕಳೆದು ಕೊಂಡವರಿಗೆ ತಕ್ಷಣ ₹10 ಸಾವಿರ ಪರಿಹಾರ ಪಾವತಿ ನೀಡಬೇಕು. ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯ ಕುರಿತು ಸಮೀಕ್ಷೆ ನಡೆಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರವಾಹ ಹಾಗೂ ಅತಿವೃಷ್ಟಿ ಪರಿಶೀಲನೆಗಾಗಿ ಶನಿವಾರ ಶಿಗ್ಗಾವಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡ ಪ್ರಮಾಣದ ಮಳೆ ಕಾರಣ ಜಿಲ್ಲೆಯ …

Read More »

ಕುರ್ಚಿ ದಾಹ ಬಿಡ್ರಿ, ಸರಿಯಾಗಿ ಕೆಲಸ ಮಾಡಿ: ಎಂ.ಬಿ.ಪಾಟೀಲ್ ಕಿಡಿ

ಹಾವೇರಿ: ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ನಿರ್ವಹಣೆ ಬಿಟ್ಟು ಅಧಿಕಾರ ದಾಹ ಪ್ರದರ್ಶನ ಮಾಡುತ್ತಿದ್ದಾರೆ. ಕುರ್ಚಿ ದಾಹ ಬಿಡ್ರಿ, ಸರಿಯಾಗಿ ಕೆಲಸ ಮಾಡಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ಮೇಳ ಇಲ್ಲ. ಸಿಎಂ ಬದಲಾವಣೆ ಮಾಡಬೇಕು ಅಂತಾರೆ. ಪರಸ್ಪರ ಸಹಕಾರವಿಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸೋ ಕೆಲಸ ಮಾಡಬೇಕು ಎಂದು ಎಂ.ಬಿ.ಪಾಟೀಲ್ ಅವರು ಸರ್ಕಾರದ ವಿರುದ್ಧ …

Read More »

ಪ್ರೀತಿಸಿದ ‘ಯುವ ಜೋಡಿ’ಗೆ ಕುಟುಂಬಸ್ಥರೇ ವಿಲನ್ : ‘ಯುವ ಪ್ರೇಮಿ’ಗಳು ಆತ್ಮಹತ್ಯೆಗೆ ಶರಣು

ಹಾವೇರಿ : ನಾಲ್ಕು ವರ್ಷಗಳಿಂದ ಪ್ರೀತಿಸಿದ್ದ ಆ ಇಬ್ಬರು ಯುವ ಪ್ರೇಮಿಗಳು, ಮದುವೆ ಆಗೋದಕ್ಕೂ ನಿರ್ಧರಿಸಿದ್ದರು. ಆದ್ರೇ.. ಕುಟುಂಬಸ್ಥರೇ ವಿಲನ್ ಆಗಿ ಪರಿಣಮಿಸಿ, ಯುವತಿಗೆ ಬೇರೆ ಹುಡುಗನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದರು. ಇದರಿಂದ ಮನನೊಂದು ಇಬ್ಬರು ಯುವ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹಾವೇರಿ ತಾಲೂಕಿನ ನಾನೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಇರ್ಷಾದ್ ಕುಡಚಿ ಹಾಗೂ ವಿದ್ಯಾಶ್ರೀ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇರ್ಷಾದ್ ಡಿಪ್ಲೋಮಾ …

Read More »

35 ಮಂದಿ ರೈತರ ಮೇಲೆ ಎಫ್‍ಐಆರ್ ದಾಖಲು

ಹಾವೇರಿ: ಕೊರೊನಾ ನಿಯಮ ಉಲ್ಲಂಘಿಸಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಇಂಡಿಯನ್ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದ 30 ರಿಂದ 35 ರೈತರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. 2019ರಲ್ಲಿ ಸಾಲಮನ್ನಾ ಯೋಜನೆಯಡಿ ಹಣ ಬಿಡುಗಡೆಯಾದ್ರೂ ರೈತರ ಖಾತೆಗೆ ಹಣ ಜಮಾ ಆಗಿಲ್ಲವೆಂದು ರೈತರು ಪ್ರತಿಭಟನೆ ಮಾಡಿದ್ದರು. ಕೊರೊನಾ ಎರಡನೇ ಅಲೆಯ ಅಬ್ಬರವಿದ್ದರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಿದ್ದಕ್ಕೆ, ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಣೆಬೆನ್ನೂರು ನಗರಠಾಣೆ …

Read More »