Breaking News
Home / ಜಿಲ್ಲೆ / ಹಾಸನ (page 2)

ಹಾಸನ

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ ಗಳು

ಹಾಸನ: ಅರಸೀಕೆರೆಯ ಮಾಡಾಳು ಗೌರಮ್ಮ ಪುಣ್ಯ ಕ್ಷೇತ್ರದಲ್ಲಿ ರಾಜ್ಯ ಬಿಜೆಪಿ ಬಗ್ಗೆ ಗುರುವಾರ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಭಾರತ ಸಾಧು ಸಂತರ ಪೂಜೆ, ಜಪತಪ, ದೇವರನ್ನು ನಂಬಿರೋ ದೇಶ. ಪ್ರವಾಹ, ಕರೊನಾದಂತಹ ಕೆಟ್ಟ ಕಾಲದಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸೋದು ಬೇಡ ಅಂತ ಸಲಹೆ ಕೊಡಲು ಸ್ವಾಮೀಜಿಗಳು ಬಂದಿದ್ದರು. ಆದ್ರೆ ಅವರ ಮಾತುಗಳನ್ನೇ ಧಿಕ್ಕರಿಸಿದರು. ಸದ್ಯದಲ್ಲೇ ಅದರ ಫಲವನ್ನ ಇವರೆಲ್ಲ ಉಣ್ಣುತ್ತಾರೆ ನೋಡಿ. ಹೇಗೆ ಅಂತ ಈಗ ಹೇಳಲ್ಲ, ಎಲ್ಲ …

Read More »

ನಿತ್ಯವೂ ಜೆಡಿಎಸ್ ಜತೆ ನಾವು ಗುದ್ದಾಡಿದ್ರೆ, ಇನ್ನೊಬ್ರು ಅಡ್ಜಸ್ಟ್​ಮೆಂಟ್ ಮಾಡ್ಕೋತಾರೆ: ಸಿಎಂ ವಿರುದ್ಧ ಪ್ರೀತಂಗೌಡ ಗರಂ

ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ‌ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ …

Read More »

ಹದಿನೇಳು ದಿನಗಳ ಅಂತರದಲ್ಲಿ ಮದುವೆಯಾದ ಇಬ್ಬರು ಹೆಣ್ಣುಮಕ್ಕಳು ಗಂಡನ ಮನೆಯಲ್ಲಿ ಸಾವು!

ಹಾಸನ: ಅದೊಂದು ಬಡಕುಟುಂಬ. ಆದರೆ ಅವರ ಸಂಸಾರದಲ್ಲಿ ಸುಖ, ಸಂತೋಷಕ್ಕೇನು ಕಡಿಮೆಯಿರಲಿಲ್ಲ. ತಂದೆ – ತಾಯಿ ಕೂಲಿ ಮಾಡಿ ತಮ್ಮ ನಾಲ್ಕು ಹೆಣ್ಣು ಮಕ್ಕಳಿಗೆ ಯಾವುದಕ್ಕೂ ಕೊರತೆಯಾಗದಂತೆ ಸಾಕುತ್ತಿದ್ದರು. ಆದರೆ ಆ ಸುಂದರ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ, ಒಂದೇ ತಿಂಗಳಲ್ಲಿ ಮದುವೆಯಾಗಿದ್ದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಇಡೀ ಕುಟುಂಬದ ಕಣ್ಣೀರಿನಲ್ಲಿ ಮುಳುಗಿದೆ. ಹಾಗಾದ್ರೆ ಆ ಕುಟುಂಬದಲ್ಲಿ ಅಂತಹದ್ದು ಏನಾಯಿತು. ‌ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು ಹೇಗೆ ಈ …

Read More »

ಸಿದ್ದರಾಮಯ್ಯ ಇಲ್ಲಾಂದ್ರೆ ಕಾಂಗ್ರೆಸ್ ಝೀರೋ, ಇಡೀ ಪಕ್ಷ ಮುಳುಗಿ ಹೋಗುತ್ತೆ: ಎಚ್​.ಡಿ.ರೇವಣ್ಣ

ಹಾಸನ: ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷ ಇದೆ ಅಂದ್ರೆ ಅದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಅಂತೆ. ಅವರಿಲ್ಲ ಅಂದ್ರೆ ಇಡೀ ಪಕ್ಷವೇ ಝೀರೋ ಆಗುತ್ತಂತೆ… ಹೌದು, ಹೀಗಂತ ಹಾಸನದಲ್ಲಿ ಮಾಜಿ ಸಚಿವ ಎಚ್​.ಡಿ.ರೇವಣ್ಣ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ. ಸದ್ಯ ಕಾಂಗ್ರೆಸ್​ನನ್ನು ಶೇ.70ಕ್ಕೆ ನಿಲ್ಲಿಸಿರೋದು ಸಿದ್ದರಾಮಯ್ಯ. ಅವರಿಲ್ಲ ಅಂದ್ರೆ ಕಾಂಗ್ರೆಸ್ ಝೀರೋ. …

Read More »

ರಕ್ತನಾಳ ಕೊಯ್ದುಕೊಂಡು ಕ್ರಷರ್​ ಮಾಲೀಕ ಆತ್ಮಹತ್ಯೆ!

ಹಾಸನ: ಕ್ರಷರ್ ಮಾಲೀಕನೊಬ್ಬ ಸ್ನಾನದ ಮನೆಯಲ್ಲೇ ಬ್ಲೇಡ್​ನಿಂದ ರಕ್ತನಾಳ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಗುರನಂದನ್ ಪ್ರಭು (42) ಆತ್ಮಹತ್ಯೆ ಮಾಡಿಕೊಂಡವ. ಈತ ಗುರುನಂದನ್ ಶೃತಿ ಲಾರಿ ಟ್ರಾಮ್ಸ್​ಪೋರ್ಟ್ ಮತ್ತು ಜನನಿ ಕ್ರಷರ್ ಮಾಲೀಕನಾಗಿದ್ದ. ಸೋಮವಾರ ರಾತ್ರಿ ಮನೆಯ ಬಾತ್​ ರೂಂಗೆ ಹೋದವ ರಕ್ತನಾಳ ಕುಯ್ದುಕೊಂಡು ಸತ್ತಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಇಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

39 ಮಕ್ಕಳಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

ಹಾಸನ: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ತಜ್ಞರ ಎಚ್ಚರಿಕೆ ಬೆನ್ನಲ್ಲೇ ಹಾಸನ ಜಿಲ್ಲೆಯಲ್ಲಿ 39 ಮಕ್ಕಳು ಕೊರೋನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವುದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ. ಹಾಸನದಲ್ಲಿ ಕಳೆದ 7 ದಿನಗಳಿಂದ 15 ವರ್ಷದೊಳಗಿನ 39 ಮಕ್ಕಳು ಕೊರೋನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಜಿಲ್ಲಾ ಸರ್ಜನ್ ಡಾ.ಕೃಷ್ಣಮೂರ್ತಿಯವರು ಮಾಹಿತಿ ನೀಡಿ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್‌) ಆಸ್ಪತ್ರೆಯಲ್ಲಿ 7 ಮಕ್ಕಳು …

Read More »

ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭವಿಷ್ಯವೊಂದನ್ನು ಹಾಸನ ಜಿಲ್ಲೆಯ ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಕೊರೊನಾದಂತಹ ಮಾರಣಾಂತಿಕ ಕಾಯಿಲೆ ದೂರವಾಗಲು ಸುಮಾರು 10 ವರ್ಷಗಳೇ ಬೇಕು. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ …

Read More »

ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಪ್ರಾಂಶುಪಾಲೆ

ಹಾಸನ: ವಿದ್ಯಾರ್ಥಿಗಳ ಹಿತ ಕಾಯಬೇಕಿದ್ದ ಮಹಿಳಾ ಪ್ರಾಂಶುಪಾಲರೊಬ್ಬರು ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದು, ಗುರು-ಶಿಷ್ಯರ ಸಂಬಂಧಕ್ಕೆ ಮಸಿ ಬೆಳೆದಿದ್ದಾರೆ. ಉದ್ದೇಶ ಪೂರ್ವಕವಾಗಿಯೇ ವಿದ್ಯಾರ್ಥಿಯೊಬ್ಬನ ಉತ್ತರ ಪತ್ರಿಕೆಯ ಉತ್ತರಗಳನ್ನು ವಿರೂಪಗೊಳಿಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಹಾಸನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಈ ಸಂಬಂಧ ಪ್ರಾಂಶುಪಾಲೆ ಶೋಭಾದೇವಮಾನೆ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನೊಂದ ವಿದ್ಯಾರ್ಥಿ ಚನ್ನಯ್ಯ ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ಕಾಲೇಜಿನ …

Read More »

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ

ಹಾಸನ: ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇರುತ್ತವೆ. ಹಾಗಾಗಿ ಯಾರೂ ಆತ್ಮಹತ್ಯೆ ಕಡೆಗೆ ಮುಖ ಮಾಡಬಾರದು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌. ನಂದಿನಿ ಹೇಳಿದರು. ನಗರದ ಎವಿಕೆ ಕಾಲೇಜಿನಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಪೂರ್ತಿ ರೇಂಜರ್‌ ಘಟಕ, ಭಾರತ ಸೇವಾದಳ ಜಿಲ್ಲಾ ಸಮಿತಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಶಿಬಿರದಲ್ಲಿ ಮಹಿಳೆ ಮತ್ತು ಕಾನೂನಿನ ರಕ್ಷಣೆ ಎಂಬ ವಿಷಯ ಕುರಿತು ಮಾತನಾಡಿದರು. ಮನೆಯಲ್ಲಿ …

Read More »

ಶೂಟಿಂಗ್ ವೇಳೆ ಸಂಭವಿಸಿದ ಅವಗಡ; ಅಪಾಯದಿಂದ ಪಾರಾದ ರಿಷಬ್ ಶೆಟ್ಟಿ

ಹಾಸನ : ಬೇಲೂರು ಬಳಿ ಚಿರಣ ನಡೆಸುತ್ತಿದ್ದ ಸಂದರ್ಭದಲ್ಲಿ ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಹೀರೋ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಂಬ್ ಗೆ ಬೆಂಕಿ ಹಿಡಿಯಿತು. ಅದರ ಬೆಂಕಿ ರಿಷಬ್ ಶೆಟ್ಟಿ ಅವರ ಬೆನ್ನಿಗೆ ಕೂಡ ತಗುಲಿತ್ತು ಎಂದು ವರದಿಗಳು ತಿಳಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಈ ಕುರಿತಾಗಿ ಹೇಳಿಕೆ ನೀಡಿರುವ ಚಿತ್ರತಂಡ ರಿಷಬ್ ಶೆಟ್ಟಿ …

Read More »