ಹಾಸನ : ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದರು. ಪ್ರಾಯೋಗಿಕ ನೀರನ್ನು …
Read More »ಕುಖ್ಯಾತ ರೌಡಿ ಲಿಂಗರಾಜನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು : 16 ಆರೋಪಿಗಳು ಅಂದರ್
ಹಾಸನ,- ಚನ್ನರಾಯಪಟ್ಟಣ ತಾಲೂಕು ಹಿರೀಸಾವೆ ಹಿರೀಸಾವೆ ಪೊಲೀಸ್ ಠಾಣಾ ಸರಹದ್ದಿನ ಕಮವರಳ್ಳಿಯಲ್ಲಿ ವಾರದ ಹಿಂದೆ ನಡೆದಿದ್ದ ಬೆಂಗಳೂರಿನ ಕುಖ್ಯಾತರೌಡಿ ಶೀಟರ್ ಲಿಂಗರಾಜನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 16 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ @ ಡಬ್ಬಲ್ ಮೀಟರ್ ಮೋಹನ, ನಂಜಪ್ಪ @ ನಂಜ @ ಕರಿಯ, ನಾಗರಾಜ @ ನಾಗ, ಗ್ರೇಸ್ ವಾಲ್ಟರ್ @ ವಾಲ್ಟರ್, ನವೀನ್ ಕುಮಾರ, ಪ್ರದೀಪ @ ದಾಸರಹಳ್ಳಿ ಪ್ರದೀಪ, ಸುನೀಲ್ಕುಮಾರ @ ಸುನೀಲ್, …
Read More »ರೈತ ವಿರುದ್ದ ಕಾಯ್ದೆಯಾಗಿದ್ದರೆ ಜೆಡಿಎಸ್ ವಿರೋಧಿಸುತ್ತಿತ್ತು : ನಮ್ಮ ಪಕ್ಷ ರೈತರ ಪರವಿದೆ
ಹಾಸನ: ನಮ್ಮ ಜೆಡಿಎಸ್ ಪಕ್ಷವು ರೈತರ ವಿರುದ್ಧ ಇಲ್ಲ. ರೈತರ ಪರವಾಗಿದ್ದು, ಏನಾದರೂ ರೈತರ ವಿರುದ್ಧದ ಕಾಯಿದೆ ಇದ್ದರೇ ನಮ್ಮ ಸಂಪೂರ್ಣ ವಿರೋಧವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ. ಹಾಸನದಲ್ಲಿ ಸಂಸದರ ನಿವಾಸದಲ್ಲಿ ಮಾತನಾಡಿದ ಅವರು, “ಭೂಸುಧಾರಣಾ ಕಾಯ್ದೆಗೆ ಈಗಲೂ ನಮ್ಮದು ವಿರೋಧವಿದೆ. ರೈತರಿಗೆ ಕೆಲವು ವಿಷಯ ಮಾರ್ಪಾಡು ಮಾಡುತ್ತೇವೆ ಎಂದಾಗ ನಾವು ಬೆಂಬಲಿಸಿದ್ದೇವೆ. ಕೆಲ ವಿಷಯಗಳನ್ನ ಮಾರ್ಪಾಡು ಮಾಡಿದ ಬಳಿಕ ನಾವು …
Read More »,ಪಿಡಿಒಗಳಿಂದ ಬಿಜೆಪಿ ಹಣ ವಸೂಲಿಎಚ್.ಡಿ.ರೇವಣ್ಣ ಗಂಭೀರ ಆರೋಪ
ಹಾಸನ: ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಪಿಡಿಓಗಳು 10 ಸಾವಿರ ಹಣ ನೀಡುವಂತೆ ದೊಡ್ಡಮಟ್ಟದ ಬಿಜೆಪಿ ನಾಯಕರು ಸೂಚಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಎಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆಗೆ ವಂತಿಕೆ ನೀಡಬೇಕು ಎಂದು ಪಿಡಿಓ -ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಹಾಗೂ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ …
Read More »ವೈದ್ಯರ ನಿರ್ಲಕ್ಷ್ಯ ಆರೋಪ – ಹುಟ್ಟುತ್ತಲೇ ಹೆಣ್ಣು ಮಗು ಸಾವು
ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆತ್ತೂರು ಗ್ರಾಮದ ಚಾಂದಿನಿ ಅವರು ಹೆರಿಗೆ ನೋವಿನಿಂದ ನಿನ್ನೆ ಬೆಳಗ್ಗೆ 11 ಗಂಟೆಗೆ ಹಾಸನ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಂದೆ, ತಾಯಿ ಇಲ್ಲದ ಚಾಂದಿನಿಯನ್ನು ಅವರ ಅಣ್ಣನೇ ಕಾಳಜಿ ವಹಿಸಿ ಕಳೆದ ಒಂದು ವರ್ಷದ ಹಿಂದೆ ಮದುವೆ ಮಾಡಿದ್ದರುಹೆರಿಗೆ ನೋವಿನ ಕಾರಣ ಹಾಸನ ಹಿಮ್ಸ್ …
Read More »ನಮಗೆ ನೀರು ಕೊಡದಿದ್ರೆ ಪೈಪ್ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ
ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ ಕೃಷ್ಣಾ ಬೇಸಿನ್ ನಲ್ಲಿ ನಮಗೂ ಹಕ್ಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಎರಡು ಹೋಬಳಿಗಳು ಕೃಷ್ಣಾ ಬೇಸಿನ್ಗೆ ಸೇರಿದೆ. ನಮಗೆ ನೀರು ಕೊಡ್ತೀವಿ …
Read More »ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ …
Read More »ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ:ರೇವಣ್ಣ ಕಿಡಿ
ಹಾಸನ: ಒಂದು ವೋಟಿಗೆ ಐದು ಸಾವಿರ, ಮೂರು ಸಾವಿರ ಎಂದು ಹಂಚಿದ ಮೇಲೆ ಚುನಾವಣೆ ಯಾಕೆ ಮಾಡಬೇಕು ಎಂದು ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ. ಶಿರಾ ಕ್ಷೇತ್ರದ ಒಂದು ಊರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಊರೊಳಗಡೆ ಬಿಟ್ಟಿಲ್ಲ. ಆದರೂ ಆ ಊರಿನಲ್ಲಿ ಶೇ, 80ರಷ್ಟು ಮತಗಳು ಲೀಡ್ ಇದೆ ಅಂತಾ …
Read More »ನನ್ನನ್ನು ಜೈಲಿಗೆ ಹಾಕಲಿ,ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ:
ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ …
Read More »ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …
Read More »