ನಾವು ಕಲ್ಲೂರು ಮಠದ ಸ್ವಾಮೀಜಿ, ಮಠಕ್ಕೆ ರಾಜಕಾರಣಿಗಳಿಂದ 350 ಕೋಟಿ ಹಣ ಬಂದಿದೆ ಎಂದು ಗುತ್ತಿಗೆದಾರನನ್ನ ನಂಬಿಸಿ 3 ಲಕ್ಷಕ್ಕೆ ಟೋಪಿ ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಮೂಲದ ವಿಜಯ್ಕುಮಾರ್ ಅವರೇ ವಂಚನೆಗೆ ಒಳಗಾದವರು. ಮಠಕ್ಕೆ ರಾಜಕಾರಣಿಗಳಿಂದ ಅನುದಾನ ಬಂದಿದ್ದು, ಇದನ್ನು ಸಾಲದ ರೂಪದಲ್ಲಿ ಜನರಿಗೆ ನೀಡುತ್ತಿದ್ದೇವೆ ಎಂದು ನಂಬಿಸಿದ್ದಾರೆ. ಕಾವಿ ಬಟ್ಟೆ ಧರಿಸಿದ ಖದೀಮರು ಶಿವಮೊಗ್ಗದಲ್ಲಿ ವಿಜಯ್ಕುಮಾರ್ …
Read More »ಹಾಸನ ಡಿಸಿ ಎಷ್ಟು ದಿನ ಆಟ ಆಡುತ್ತಾರೆ ಎಂದು ನಾನೂ ನೋಡುತ್ತೇನೆ: ಎಚ್.ಡಿ. ರೇವಣ್ಣ
ಹಾಸನ, ಮೇ 5: ಚೆನ್ನಾಗಿದ್ದ ತಾಲೂಕು ಕಚೇರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದಂತೆ ಡಿಸಿ ಕಚೇರಿಯನ್ನೂ ಒಡೆದರೆ ಪರಿಣಾಮ ಬೇರೆಯಾಗುತ್ತದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು. ಹಾಸನದಲ್ಲಿ ಮಾತಾನಾಡಿದ ಅವರು, ಅಧಿಕಾರ ಇದೆ ಎಂದು ದರ್ಪ ನಡೆಸೋದು ಸರಿಯಲ್ಲ. ಹಾಸನ ಜಿಲ್ಲಾಧಿಕಾರಿ ಅನ್ ಫಿಟ್ ಆಗಿದ್ದಾರೆ. ಅವರು ರಬ್ಬರ್ ಸ್ಟಾಂಪ್ ಇದ್ದಂತೆ. ರಾತ್ರೋರಾತ್ರಿ ಕಟ್ಟಡ ಹೊಡೆಯಲು ಅವರನ್ನು ಇಟ್ಟುಕೊಂಡಿದ್ದಾರೆ. ಡಿಸಿ ಎಷ್ಟು ದಿನ ಆಟ ಆಡುತ್ತಾರೆ ನಾನೂ …
Read More »ಹುಟ್ಟುಹಬ್ಬದಂದು ಪ್ರೇಯಸಿ ಸಿಗದ ನೋವಿನಲ್ಲಿ ಎಡವಟ್ಟು ಮಾಡಿಕೊಂಡ ಹಾಸನದ ಯುವಕ:
ಹಾಸನ: ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ. ಈತ ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಕಳೆದ 9 ವರ್ಷಗಳಿಂದ ಪ್ರೀತಿಸಿ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾಳೆಂದು ಯುವತಿ ವಿರುದ್ಧ ಜೀವಿತ್ ಆರೋಪಿಸಿದ್ದಾನೆ. ಮನೆಯವರ ಒತ್ತಡದಿಂದ ಆಕೆ ತನ್ನನ್ನು ನಿರಾಕರಿಸುತ್ತಿದ್ದಾಳೆ. ಒಂಬತ್ತು ವರ್ಷಗಳಿಂದ ಆಕೆಯ ಹುಟ್ಟು ಹಬ್ಬಕ್ಕೆ ನಾನೇ ಕೇಕ್ ಕಟ್ …
Read More »ಎಂಎಲ್ಸಿ ಟಿಕೆಟ್ ರೇಸ್ನಲ್ಲಿ ಸೊಸೆ, ಮೊಮ್ಮಗ: ನನಗೆ ಕೆಟ್ಟ ಹೆಸರು ತರಬೇಡಿ ಎಂದ ದೇವೇಗೌಡ
ಹಾಸನ, ನವೆಂಬರ್ 12: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಯೂ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಹಾಸನ ಜಿಲ್ಲೆಯ ರಾಜಕೀಯ ಭದ್ರಕೋಟೆಯಾಗಿರುವ ಪ್ರಮುಖ ಪ್ರಾದೇಶಿಕ ಪಕ್ಷ ಎಂದರೆ ಜೆಡಿಎಸ್. ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವೇ ಇಲ್ಲಿ ಪ್ರಾಬಲ್ಯ ಹೊಂದಿದೆ. ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಕೇವಲ ಮೂರು ಸಾವಿರದ ಐದುನೂರಷ್ಟು ಮಾತ್ರ ಮತದಾರರಿದ್ದು, ಈ …
Read More »ಹಾಸನಾಂಬೆಯ ಮೊದಲ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು
ಹಾಸನ: ಎರಡು ವರ್ಷಗಳ ಬಳಿಕ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಭಾಗ್ಯ ದೊರೆತಿದೆ. ಹಾಸನಾಂಬೆಯ ಮೊದಲ ದಿನದ ದರ್ಶನೋತ್ಸವ ಇಂದು (ಅಕ್ಟೋಬರ್ 29) ಆರಂಭವಾಗಿದ್ದು, ಬೆಳಿಗ್ಗೆಯೇ ದೇವಾಲಯ ದತ್ತ ಸಹಸ್ರಾರು ಭಕ್ತರು ಲಗ್ಗೆಯಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ನೆನ್ನೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ …
Read More »ಬಿಜೆಪಿ ಜತೆ ಹೊಂದಾಣಿಕೆ ಬೇಡ: ಎಚ್ಡಿ ರೇವಣ್ಣ
ಹಾಸನ: ‘ಜೆಡಿಎಸ್ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಹೇಳಿದರು. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್ ಬೆಂಬಲನೀಡಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಷ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ …
Read More »ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ ಗಳು
ಹಾಸನ: ಅರಸೀಕೆರೆಯ ಮಾಡಾಳು ಗೌರಮ್ಮ ಪುಣ್ಯ ಕ್ಷೇತ್ರದಲ್ಲಿ ರಾಜ್ಯ ಬಿಜೆಪಿ ಬಗ್ಗೆ ಗುರುವಾರ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಭಾರತ ಸಾಧು ಸಂತರ ಪೂಜೆ, ಜಪತಪ, ದೇವರನ್ನು ನಂಬಿರೋ ದೇಶ. ಪ್ರವಾಹ, ಕರೊನಾದಂತಹ ಕೆಟ್ಟ ಕಾಲದಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸೋದು ಬೇಡ ಅಂತ ಸಲಹೆ ಕೊಡಲು ಸ್ವಾಮೀಜಿಗಳು ಬಂದಿದ್ದರು. ಆದ್ರೆ ಅವರ ಮಾತುಗಳನ್ನೇ ಧಿಕ್ಕರಿಸಿದರು. ಸದ್ಯದಲ್ಲೇ ಅದರ ಫಲವನ್ನ ಇವರೆಲ್ಲ ಉಣ್ಣುತ್ತಾರೆ ನೋಡಿ. ಹೇಗೆ ಅಂತ ಈಗ ಹೇಳಲ್ಲ, ಎಲ್ಲ …
Read More »ನಿತ್ಯವೂ ಜೆಡಿಎಸ್ ಜತೆ ನಾವು ಗುದ್ದಾಡಿದ್ರೆ, ಇನ್ನೊಬ್ರು ಅಡ್ಜಸ್ಟ್ಮೆಂಟ್ ಮಾಡ್ಕೋತಾರೆ: ಸಿಎಂ ವಿರುದ್ಧ ಪ್ರೀತಂಗೌಡ ಗರಂ
ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ …
Read More »ಹದಿನೇಳು ದಿನಗಳ ಅಂತರದಲ್ಲಿ ಮದುವೆಯಾದ ಇಬ್ಬರು ಹೆಣ್ಣುಮಕ್ಕಳು ಗಂಡನ ಮನೆಯಲ್ಲಿ ಸಾವು!
ಹಾಸನ: ಅದೊಂದು ಬಡಕುಟುಂಬ. ಆದರೆ ಅವರ ಸಂಸಾರದಲ್ಲಿ ಸುಖ, ಸಂತೋಷಕ್ಕೇನು ಕಡಿಮೆಯಿರಲಿಲ್ಲ. ತಂದೆ – ತಾಯಿ ಕೂಲಿ ಮಾಡಿ ತಮ್ಮ ನಾಲ್ಕು ಹೆಣ್ಣು ಮಕ್ಕಳಿಗೆ ಯಾವುದಕ್ಕೂ ಕೊರತೆಯಾಗದಂತೆ ಸಾಕುತ್ತಿದ್ದರು. ಆದರೆ ಆ ಸುಂದರ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ, ಒಂದೇ ತಿಂಗಳಲ್ಲಿ ಮದುವೆಯಾಗಿದ್ದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಇಡೀ ಕುಟುಂಬದ ಕಣ್ಣೀರಿನಲ್ಲಿ ಮುಳುಗಿದೆ. ಹಾಗಾದ್ರೆ ಆ ಕುಟುಂಬದಲ್ಲಿ ಅಂತಹದ್ದು ಏನಾಯಿತು. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು ಹೇಗೆ ಈ …
Read More »ಸಿದ್ದರಾಮಯ್ಯ ಇಲ್ಲಾಂದ್ರೆ ಕಾಂಗ್ರೆಸ್ ಝೀರೋ, ಇಡೀ ಪಕ್ಷ ಮುಳುಗಿ ಹೋಗುತ್ತೆ: ಎಚ್.ಡಿ.ರೇವಣ್ಣ
ಹಾಸನ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಇದೆ ಅಂದ್ರೆ ಅದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಅಂತೆ. ಅವರಿಲ್ಲ ಅಂದ್ರೆ ಇಡೀ ಪಕ್ಷವೇ ಝೀರೋ ಆಗುತ್ತಂತೆ… ಹೌದು, ಹೀಗಂತ ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ. ಸದ್ಯ ಕಾಂಗ್ರೆಸ್ನನ್ನು ಶೇ.70ಕ್ಕೆ ನಿಲ್ಲಿಸಿರೋದು ಸಿದ್ದರಾಮಯ್ಯ. ಅವರಿಲ್ಲ ಅಂದ್ರೆ ಕಾಂಗ್ರೆಸ್ ಝೀರೋ. …
Read More »
Laxmi News 24×7