Breaking News
Home / ಜಿಲ್ಲೆ / ಹಾಸನ (page 4)

ಹಾಸನ

ಸಿಎಂ ಅಸಹಾಯಕ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ: ಶಾಸಕ ಶಿವಲಿಂಗೇಗೌಡ

ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕ ಸ್ಥಿತಿ ತಲುಪಿದ್ದು, ಅವರನ್ನು ಈ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ. ಅರಸೀಕೆರೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಳಿಕ ಮಾತನಾಡಿದ ಅವರು, ಅರಸೀಕೆರೆ ನಗರದ ಅಭಿವೃದ್ಧಿ ಕುಲಗೆಡಿಸಲು ಮಾಡಿದ ಅನೈತಿಕ ಮೀಸಲಾತಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದೆ. ಅವರು ರಾಜಕೀಯದ ಒತ್ತಡದಿಂದ ಇದೆಲ್ಲ ಆಗುತ್ತಿದೆ ಎಂದು ಅಸಹಾಯಕತೆ ತೋಡಿಕೊಂಡರು. ಅವರನ್ನು ಅಸಹಾಯಕ ಸ್ಥಿತಿಗೆ …

Read More »

ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆ : 3 ಜನರ ಆರೋಪಿಗಳು ಅರೆಸ್ಟ್

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆಯಾದ ಪ್ರಕರಣವನ್ನು 24 ಗಂಟೆಯೊಳಗೆ ಬೇಧಿಸಿರುವ ಪೊಲೀಸರು, ಕೊಲೆಯಾದ ಯುವಕನ ಪತ್ನಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಚನ್ನರಾಯಪಟ್ಟಣ ತಾಲ್ಲೂಕಿನ ಲಕ್ಷ್ಮೀಪುರದ ಗ್ರಾಮದ ದಿನೇಶ್‌ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಸಾಣೇನಹಳ್ಳಿಯ ದಿನೇಶನ ಪತ್ನಿ ಅಭಿಲಾಷ (22), ಆಕೆಯ ತಂದೆ ಮಂಜುನಾಥ (55), ಸಹೋದರ ಬಸವರಾಜು (21) ಎಂಬುವವರನ್ನು ಬಂಧಿಸಲಾಗಿದೆ. ಸುಟ್ಟ ಕಾರಿನ …

Read More »

ಪತಿಗೆ ಮದ್ಯ ಕುಡಿಸಿ, ತಲೆಗೆ ಹೊಡೆದು ಕತ್ತು ಕೊಯ್ದು ಕೊಲೆ – ಕೊಲೆಗೈದು ಕಾರಿನ ಡಿಕ್ಕಿಯಲ್ಲಿಟ್ಟು ಬೆಂಕಿ ಹಚ್ಚಿದ ಪತ್ನಿ

ಹಾಸನ: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಇಲ್ಲಿ ಹೆಂಡತಿಯೇ ಗಂಡನನ್ನ ಕೊಲೆ ಮಾಡಿ ಕಾರಿನ ಡಿಕ್ಕಿಯಲ್ಲಿಟ್ಟು ಗುರುತೇ ಸಿಗದಂತೆ ಸುಟ್ಟು ಹಾಕಿದ ತಪ್ಪಿಗೆ ಇಬ್ಬರು ಮಕ್ಕಳನ್ನು ಅನಾಥರನ್ನಾಗಿ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಅಕ್ಟೋಬರ್ 28 ರಂದು ಬೆಳ್ಳಂಬೆಳಗ್ಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆ ಗ್ರಾಮದ ಸಮೀಪ ಕಾರೊಂದು ಸುಟ್ಟ ಸ್ಥಿತಿಯಲ್ಲಿದ್ದು, ಅದರ ಡಿಕ್ಕಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. …

Read More »

ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ.

ಹಾಸನ: ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ 10:45 ರ ಸುಮಾರಿಗೆ ವ್ಯಕ್ತಿಯೊಬ್ಬರು ಎಂಜಿ ರಸ್ತೆಗೆ ಕುಟುಂಬದವರ ಜೊತೆಗೆ ಹಬ್ಬಕ್ಕೆ ದಿನಸಿ ಖರೀದಿಸಲು ಬಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿದರೂ ಸುಮಾರು ಅರ್ಧ ಗಂಟೆ ಆಂಬುಲೆನ್ಸ್ ತಡವಾಗಿ ಬಂದಿದೆ. ಅಷ್ಟರಲ್ಲಾಗಲೇ ವ್ಯಕ್ತಿಯ …

Read More »

ಅಂದಾಜು ಸುಮಾರು ನೂರು ಬಾಕ್ಸ್ ನಷ್ಟು ಬಿಯರ್ವ್ಯರ್ಥವಾಗಿ ಹರಿದು ಹೋದ ಘಟನೆ

ಹಾಸನ: ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿ ರಸ್ತೆ ಬದಿ ಬಿಯರ್ ವ್ಯರ್ಥವಾಗಿ ಹರಿದು ಹೋದ ಘಟನೆ ಹಾಸನ ಜಿಲ್ಲೆಯ, ಹೊಳೆನರಸೀಪುರದಲ್ಲಿ ನಡೆದಿದೆ. ಹಾಸನದಿಂದ ಕೇರಳಕ್ಕೆ ಲಾರಿಯಲ್ಲಿ ಸುಮಾರು 900 ಬಾಕ್ಸ್ ಬಿಯರ್ ಸಾಗಿಸಲಾಗುತ್ತಿತ್ತು. ಆದರೆ ಹೊಳೆನರಸೀಪುರ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ ಲಾರಿ ರಸ್ತೆ ಬದಿಯಲ್ಲಿ ಒಂದು ಕಡೆ ವಾಲಿಕೊಂಡಿದೆ. ಇದರಿಂದ ಒಂದಷ್ಟು ಬಿಯರ್ ಬಾಟಲಿ ಲಾರಿಯೊಳಗೇ ಒಡೆದು ಹೋದರೆ, ಮತ್ತಷ್ಟು …

Read More »

ಓವರ್ ಟೆಕ್ ಮಾಡುವಾಗ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ

ಹಾಸನ: ಮುಂದೊಂದು ಚಲಿಸುತ್ತಿರುವ ಸಾರಿಗೆ ಬಸ್ ಅನ್ನು ಓವರ್ ಟೆಕ್ ಮಾಡುವಾಗ.. ಎದುರಿಗೆ ಬಂದ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ತುಮಕೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಡುವೆ ಈ ಡಿಕ್ಕಿ ಸಂಭವಿಸಿದೆ. …

Read More »

150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ

ಹಾಸನ: 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಹೇಳಿದರು. ರಾಜ್ಯದ …

Read More »

ಹಾಸನಾಂಬೆಯ ದರ್ಶನಕ್ಕೆ ಜನ-ಪ್ರತಿನಿಧಿಗಳ ಇಬ್ಬಗೆ ನೀತಿ ಹಾಸನ ಜನರ ಕೋಪಕ್ಕೆ ಕಾರಣವಾಗಿದೆ.

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಕೊರೊನಾದಿಂದಾಗಿ ಈ ವರ್ಷ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿಲ್ಲ. ಆದರೆ ಈ ವಿಷಯದಲ್ಲಿ ಜನ-ಪ್ರತಿನಿಧಿಗಳ ಇಬ್ಬಗೆ ನೀತಿ ಹಾಸನ ಜನರ ಕೋಪಕ್ಕೆ ಕಾರಣವಾಗಿದೆ. ಹಾಸನ ನಗರದ ಹೊಸಲೈನ್ ರಸ್ತೆಯಲ್ಲಿರುವ ಹಾಸನಾಂಬ ದೇವಾಲಯದ ಬಾಗಿಲನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಭಕ್ತಾದಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವುದು ಬಹಳ …

Read More »

ರೈತ ವಿರೋಧಿ ಮಸೂದೆ ವಿರುದ್ಧ ಜೆಡಿಎಸ್ ಶಾಸಕ ಏಕಾಂಗಿ ಪ್ರತಿಭಟನೆ

ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ ಶಾಸಕರು ತಮ್ಮದೇ ಆದ ರೀತಿಯಲ್ಲಿ ಬಂದ್‍ಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಹೆಸರನ್ನು ಹೊಂದಿರುವ ರಾಮಸ್ವಾಮಿಯವರು ಜೆಡಿಎಸ್ ಪಕ್ಷದ ನಿಷ್ಠಾವಂತ ರಾಜಕೀಯ ಮುಖಂಡರಲ್ಲಿ ಒಬ್ಬರು. ನೇರ ಮಾತುಗಾರಿಕೆಯಿಂದ …

Read More »

ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್

ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …

Read More »