Breaking News

ಹಾಸನ

ವೈದ್ಯರ ನಿರ್ಲಕ್ಷ್ಯ ಆರೋಪ – ಹುಟ್ಟುತ್ತಲೇ ಹೆಣ್ಣು ಮಗು ಸಾವು

ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆತ್ತೂರು ಗ್ರಾಮದ ಚಾಂದಿನಿ ಅವರು ಹೆರಿಗೆ ನೋವಿನಿಂದ ನಿನ್ನೆ ಬೆಳಗ್ಗೆ 11 ಗಂಟೆಗೆ ಹಾಸನ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಂದೆ, ತಾಯಿ ಇಲ್ಲದ ಚಾಂದಿನಿಯನ್ನು ಅವರ ಅಣ್ಣನೇ ಕಾಳಜಿ ವಹಿಸಿ ಕಳೆದ ಒಂದು ವರ್ಷದ ಹಿಂದೆ ಮದುವೆ ಮಾಡಿದ್ದರುಹೆರಿಗೆ ನೋವಿನ ಕಾರಣ ಹಾಸನ ಹಿಮ್ಸ್ …

Read More »

ನಮಗೆ ನೀರು ಕೊಡದಿದ್ರೆ ಪೈಪ್‍ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ

ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ ಕೃಷ್ಣಾ ಬೇಸಿನ್ ನಲ್ಲಿ ನಮಗೂ ಹಕ್ಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಎರಡು ಹೋಬಳಿಗಳು ಕೃಷ್ಣಾ ಬೇಸಿನ್‍ಗೆ ಸೇರಿದೆ. ನಮಗೆ ನೀರು ಕೊಡ್ತೀವಿ …

Read More »

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ …

Read More »

ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ:ರೇವಣ್ಣ ಕಿಡಿ

ಹಾಸನ: ಒಂದು ವೋಟಿಗೆ ಐದು ಸಾವಿರ, ಮೂರು ಸಾವಿರ ಎಂದು ಹಂಚಿದ ಮೇಲೆ ಚುನಾವಣೆ ಯಾಕೆ ಮಾಡಬೇಕು ಎಂದು ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ. ಶಿರಾ ಕ್ಷೇತ್ರದ ಒಂದು ಊರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಊರೊಳಗಡೆ ಬಿಟ್ಟಿಲ್ಲ. ಆದರೂ ಆ ಊರಿನಲ್ಲಿ ಶೇ, 80ರಷ್ಟು ಮತಗಳು ಲೀಡ್ ಇದೆ ಅಂತಾ …

Read More »

ನನ್ನನ್ನು ಜೈಲಿಗೆ ಹಾಕಲಿ,ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ:

ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ …

Read More »

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …

Read More »

ಸಿಎಂ ಅಸಹಾಯಕ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ: ಶಾಸಕ ಶಿವಲಿಂಗೇಗೌಡ

ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕ ಸ್ಥಿತಿ ತಲುಪಿದ್ದು, ಅವರನ್ನು ಈ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ. ಅರಸೀಕೆರೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಳಿಕ ಮಾತನಾಡಿದ ಅವರು, ಅರಸೀಕೆರೆ ನಗರದ ಅಭಿವೃದ್ಧಿ ಕುಲಗೆಡಿಸಲು ಮಾಡಿದ ಅನೈತಿಕ ಮೀಸಲಾತಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದೆ. ಅವರು ರಾಜಕೀಯದ ಒತ್ತಡದಿಂದ ಇದೆಲ್ಲ ಆಗುತ್ತಿದೆ ಎಂದು ಅಸಹಾಯಕತೆ ತೋಡಿಕೊಂಡರು. ಅವರನ್ನು ಅಸಹಾಯಕ ಸ್ಥಿತಿಗೆ …

Read More »

ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆ : 3 ಜನರ ಆರೋಪಿಗಳು ಅರೆಸ್ಟ್

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆಯಾದ ಪ್ರಕರಣವನ್ನು 24 ಗಂಟೆಯೊಳಗೆ ಬೇಧಿಸಿರುವ ಪೊಲೀಸರು, ಕೊಲೆಯಾದ ಯುವಕನ ಪತ್ನಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಚನ್ನರಾಯಪಟ್ಟಣ ತಾಲ್ಲೂಕಿನ ಲಕ್ಷ್ಮೀಪುರದ ಗ್ರಾಮದ ದಿನೇಶ್‌ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಸಾಣೇನಹಳ್ಳಿಯ ದಿನೇಶನ ಪತ್ನಿ ಅಭಿಲಾಷ (22), ಆಕೆಯ ತಂದೆ ಮಂಜುನಾಥ (55), ಸಹೋದರ ಬಸವರಾಜು (21) ಎಂಬುವವರನ್ನು ಬಂಧಿಸಲಾಗಿದೆ. ಸುಟ್ಟ ಕಾರಿನ …

Read More »

ಪತಿಗೆ ಮದ್ಯ ಕುಡಿಸಿ, ತಲೆಗೆ ಹೊಡೆದು ಕತ್ತು ಕೊಯ್ದು ಕೊಲೆ – ಕೊಲೆಗೈದು ಕಾರಿನ ಡಿಕ್ಕಿಯಲ್ಲಿಟ್ಟು ಬೆಂಕಿ ಹಚ್ಚಿದ ಪತ್ನಿ

ಹಾಸನ: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಇಲ್ಲಿ ಹೆಂಡತಿಯೇ ಗಂಡನನ್ನ ಕೊಲೆ ಮಾಡಿ ಕಾರಿನ ಡಿಕ್ಕಿಯಲ್ಲಿಟ್ಟು ಗುರುತೇ ಸಿಗದಂತೆ ಸುಟ್ಟು ಹಾಕಿದ ತಪ್ಪಿಗೆ ಇಬ್ಬರು ಮಕ್ಕಳನ್ನು ಅನಾಥರನ್ನಾಗಿ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಅಕ್ಟೋಬರ್ 28 ರಂದು ಬೆಳ್ಳಂಬೆಳಗ್ಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆ ಗ್ರಾಮದ ಸಮೀಪ ಕಾರೊಂದು ಸುಟ್ಟ ಸ್ಥಿತಿಯಲ್ಲಿದ್ದು, ಅದರ ಡಿಕ್ಕಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. …

Read More »

ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ.

ಹಾಸನ: ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ 10:45 ರ ಸುಮಾರಿಗೆ ವ್ಯಕ್ತಿಯೊಬ್ಬರು ಎಂಜಿ ರಸ್ತೆಗೆ ಕುಟುಂಬದವರ ಜೊತೆಗೆ ಹಬ್ಬಕ್ಕೆ ದಿನಸಿ ಖರೀದಿಸಲು ಬಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿದರೂ ಸುಮಾರು ಅರ್ಧ ಗಂಟೆ ಆಂಬುಲೆನ್ಸ್ ತಡವಾಗಿ ಬಂದಿದೆ. ಅಷ್ಟರಲ್ಲಾಗಲೇ ವ್ಯಕ್ತಿಯ …

Read More »