Breaking News
Home / ಜಿಲ್ಲೆ / ಹಾಸನ (page 6)

ಹಾಸನ

ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್

ಮಂಡ್ಯ: ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್ಲ. ನಮ್ಮ ಯಾವುದೇ ಒಬ್ಬ ಮುಖಂಡ ಡ್ರಗ್ಸ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಈ ವಿಚಾರದಲ್ಲಿ ಸರ್ಕಾರ ಹಿಟ್ ರನ್ ಮಾಡಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಯಾವುದೇ ಮುಖಂಡ ಡ್ರಗ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಡ್ರಗ್ಸ್ ದಂಧೆಯನ್ನ ಬುಡಸಮೇತ ಕೀಳುವವರೆಗೆ …

Read More »

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್……………..

ಹಾಸನ: ಕಳೆದ ಭಾನುವಾರದಂದು ಚನ್ನರಾಯಪಟ್ಟಣದಲ್ಲಿ ನಡೆದ ಜೋಡಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಎರಡೇ ದಿನದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಆರೋಪಿಯು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ …

Read More »

ಕಾಮದಾಹ ತೀರಿಸದ್ದಕ್ಕೆ ಕಲ್ಲು ಎತ್ತಾಕಿ ಕೊಂದು ಅತ್ಯಾಚಾರ…………..

ಹಾಸನ: ಸೋಮವಾರ ರಾತ್ರಿ ರಸ್ತೆ ಪಕ್ಕದಲ್ಲೇ ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಮದ ದಾಹ ತೀರಿಸಲು ಒಪ್ಪದ ನಿರ್ಗತಿಕ ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ಬಳಿಕ ಕಾಮುಕ ಅತ್ಯಾಚಾರ ಎಸಗಿದ್ದಾನೆ .ನಗರದ ಬಿಎಂ ರಸ್ತೆಯಲ್ಲಿನ ಎನ್‍ಆರ್ ವೃತ್ತದ ಸಮೀಪವಿರುವ ಶ್ರೀ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್ ಎದುರು ಕೊಲೆ ನಡೆದಿತ್ತು. ಮಹಿಳೆ ಸುಮಾರು 45 ವರ್ಷದವಳಾಗಿದ್ದರು. ತನ್ನ …

Read More »

ಕೊರೊನಾ ವಾರಿಯರ್ ಗಳನ್ನ ಅಶ್ಲೀಲ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಹಾಸನ: ಕೊರೊನಾ ವಾರಿಯರ್ ಗಳನ್ನ ಅಶ್ಲೀಲ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಅಶ್ಲೀಲವಾಗಿ ತಮ್ಮನ್ನು ನಿಂದಿಸಿದ ಕುಟುಂಬಸ್ಥರ ವಿರುದ್ಧ ವೈದ್ಯಕೀಯ ಸಿಬ್ಬಂದಿ ಆಕ್ರೋಶ ಹೊರ ಹಾಕಿದ್ದಾರೆ. ಆಲೂರು ತಾಲೂಕಿನ ಹಳ್ಳಿಯೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರ ಮನೆ ಸೀಲ್‍ಡೌನ್ ಮಾಡಲು ಅಧಿಕಾರಿಗಳು ತೆರಳಿದ್ದರು. ಆದ್ರೆ ಮನೆಯವರು ಒಂದು ವರದಿಯಲ್ಲಿ ನೆಗೆಟಿವ್ ಎಂದಿದೆ. ಮತ್ತೊಂದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ ಎಂದು ವರದಿಯ …

Read More »

ಡಾಕ್ಟರ್ ನಿವೇದಿತಾ ಮತ್ತು ಡಾಕ್ಟರ್ ಸವಿತಾ ಅವರು ಹಾಸನ ರಕ್ತನಿಧಿಗೆ ಬಂದು ಬಿ – ನೆಗೆಟಿವ್ ರಕ್ತವನ್ನು ರಕ್ತದಾನ ಮಾಡಿ ಜೀವ ಉಳಿಸುವ ಕೆಲಸ ಮಾಡಿದ್ದಾರೆ .

ಹಾಸನ: ಇಂದು ಹಾಸನದ ಎಸ್.ಡಿ.ಎಂ.ಎ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಂಕ್ರಪ್ಪ ಎಂಬುವರಿಗೆ ರಕ್ತದ ಅಂಶ ಕಡಿಮೆ ಇರುವ ಕಾರಣ ಬಿ – ನೆಗೆಟಿವ್ ರಕ್ತ ಅವಶ್ಯಕತೆ ಇದೆ ಎಂದು ಹಾಸನದಲ್ಲಿ ಇರುವ ಎಲ್ಲಾ ರಕ್ತ ನಿಧಿಗಳಿಗೆ ಭೇಟಿ ನೀಡಿದರು ಕೂಡ ಬಿ – ನೆಗೆಟಿವ್ ರಕ್ತ ದೊರೆಯಲಿಲ್ಲ. ಹಾಗೂ ಶಂಕ್ರಪ್ಪ ಅವರು ಬೆಂಗಳೂರಿನವರಾಗಿದ್ದಾರೆ ಅವರ ಸಂಬಂಧಿಕರು ಕೂಡ ಬೇಗ ಮುಂದೆ ಬರಲು ಆಗದ ಕಾರಣ , ಅಲ್ಲೇ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ಸ್ …

Read More »

ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ

ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ  ಅರಸಿಕೇರೆಯ ಚಲುವನಹಳ್ಳಿಯಲ್ಲಿ ಗುರುವಾರ ನಡೆದಿದೆ. ಮೂಲ ಬಿಜೆಪಿ ಕಡೆಗಣಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ ಮಾಡಿಕೊಂಡಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಚಿವ ಗೋಪಾಲಯ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಮಾರ್ ಕಾರ್ಯಕರ್ತರ ಸಮಾಧಾನ ಪಡೆಸಲು ಹರಸಾಹಸ ಪಟ್ಟ ಪ್ರಸಂಗ …

Read More »

ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ರೈತರು

ಹಾಸನ : ಕೋವಿಡ್‌-19ನ ಲಾಕ್‌ಡೌನ್‌ ಸಮಸ್ಯೆಯಿಂದ ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ಪ್ರತಿ ರೈತರಿಗೆ ನೇರವಾಗಿ 5,000 ರು.ಗಳನ್ನು ನೇರ ನಗದು ವರ್ಗಾವಣೆ ಮಾಡುವ ಯೋಜನೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಒಟ್ಟು 48,255 ರೈತರಿಗೆ ನೇರ ನಗದು ವರ್ಗಾವಣೆ ಮಾಡಿರುವುದಾಗಿ ಸಚಿವ ಗೋಪಾಲಯ್ಯ ಹೇಳಿದರು. ಜಿಲ್ಲಾ ಪಂಚಾಯತ್‌ ವತಿಯಿಂದ ಒಟ್ಟು 22 ಇಲಾಖೆಗಳಿಗೆ ಈಗಾಗಲೇ 112 ಕೋಟಿ ರು. ಬಿಡುಗಡೆಯಾಗಿದ್ದು, 105 ಕೋಟಿ ರು. ವೆಚ್ಚ ಮಾಡಲಾಗಿದೆ. 2019-20ನೇ ಸಾಲಿನಲ್ಲಿ …

Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು…………

ಹಾಸನ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ 45 ವರ್ಷದ ರೈತ ಚಂದ್ರೇಗೌಡ ಮೃತ ದುರ್ದೈವಿ. ತಮ್ಮ ಹೊಲದಲ್ಲಿ ಬೆಳೆಯಲಾಗಿದ್ದ ಶುಂಠಿ ಬೆಳೆಗೆ ಕೀಟನಾಶಕ ಸಿಂಪಡಣೆ ಮಾಡಲು ಹೋಗಿದ್ದಾಗ, ಹೊಲದಲ್ಲಿ ತುಂಡಾಗಿ ಬಿದ್ದಿದ್ದ ತಂತಿಯನ್ನು ತುಳಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಮನೆಯ ಆಧಾರ ಸ್ತಂಭವಾಗಿದ್ದ ವ್ಯಕ್ತಿಯನ್ನು …

Read More »

ವಿವಾದಿತ ಪೋಸ್ಟ್ ಹಾಕಿ ನಂತ್ರ ಫೇಸ್‍ಬುಕ್ ಹ್ಯಾಕ್ ಆಗಿದೆ ಅಂತ ಹೇಳ್ತಾರೆ

ಹಾಸನ: ವಿವಾದಿತ ಪೋಸ್ಟ್ ಹಾಕಿ ನಂತ್ರ ಫೇಸ್‍ಬುಕ್ ಹ್ಯಾಕ್ ಆಗಿದೆ ಅಂತ ಹೇಳ್ತಾರೆ ಎಂದು ಬೆಂಗಳೂರ ಗಲಾಟೆಯ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಸಮಸ್ಯೆ ಇದ್ದಾಗ ಪೊಲೀಸರು, ಶಾಸಕರ ಜೊತೆ ಕುಳಿತು ಮಾತನಾಡಬೇಕು. ಯಾರೂ ಕೂಡ ಕಾನೂನನ್ನು ಕೈಗೆತ್ತಿಗೊಳ್ಳಬಾರದು. ವಿವಾದಿತ ಪೋಸ್ಟ್ ಹಾಕಲು ಫೇಸ್ ಬುಕ್ ಹ್ಯಾಕ್ ಆಗಿದೆ ಅಂತಿದ್ದಾರೆ. ಅದನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ಯಾರೇ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. …

Read More »

ದಲಿತ ಸಂಘಟನೆಗಳ ಬೃಹತ್‌ ಪ್ರತಿಭಟನೆ

ಹಾಸನ: ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಹಾಸನ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಆಗ್ರಹಿಸಿದಲಿತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಹಾವೀರ ವೃತ್ತ, ಕಸ್ತೂರಬಾ ರಸ್ತೆ ಮೂಲಕ ಸಾಗಿ ಎನ್‌.ಆರ್‌. ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ಹಾಸನ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ …

Read More »