Breaking News
Home / ಜಿಲ್ಲೆ / ಹಾಸನ (page 7)

ಹಾಸನ

ಎದೆ ಮಟ್ಟದ ನೀರಿನಲ್ಲಿ ತೆರಳಿ ವಿದ್ಯುತ್ ಸಂಪರ್ಕ ಸರಿಪಡಿಸಿದ ಪವರ್ ಮ್ಯಾನ್

ಹಾಸನ: ಎದೆ ಮಟ್ಟದ ನೀರಿನಲ್ಲಿ ತೆರಳಿ ವಿದ್ಯುತ್ ಸಂಪರ್ಕವನ್ನು ಪವರ್ ಮ್ಯಾನ್ ಸರಿಪಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಗ್ರಾಮಸ್ಥರಿಗೆ ಸಹಾಯವಾಗಲಿ ಎಂದು ಪವರ್ ಮ್ಯಾನ್ ಅಮಿತ್ ಎದೆಮಟ್ಟದವರೆಗೆ ನಿಂತಿದ್ದ ನೀರಿನಲ್ಲೇ ಸುಮಾರು 500 ಮೀಟರ್ ತೆರಳಿ ವಿದ್ಯುತ್ ಸಂಪರ್ಕ ಸರಿಪಡಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಕಳೆದ 3 ದಿನದಿಂದ ಸತತವಾಗಿ ಮಳೆ ಆರ್ಭಟ ಜೋರಾಗಿದ್ದು, ರಾಮನಾಥಪುರ ವ್ಯಾಪ್ತಿಯ ತೋಟವೊಂದರಲ್ಲಿ …

Read More »

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ.

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ. ಹಾಸನ ಹೊರ ವಲಯದಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಯುವತಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಸಚಿವ ಸಿಟಿ.ರವಿ, ರಸ್ತೆಯಲ್ಲಿ ಜನ ಗುಂಪು ಕಟ್ಟಿರುವುದನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿ ವಿಚಾರಿಸಿದ್ದಾರೆ.ಈ ವೇಳೆ ಯುವತಿ ಪ್ರಜ್ಞಾಹೀನವಾಗಿದ್ದನ್ನು ಗಮನಿಸಿದ ಸಚಿವರು ತಕ್ಷಣ ಯುವತಿಯನ್ನು ತಮ್ಮ ವಾಹನದಲ್ಲಿ ಹಾಸನದ ಹಿಮ್ಸ್ …

Read More »

ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್‌ಐ ಆತ್ಮಹತ್ಯೆ; ತನಿಖೆಗೆ ಮಾಜಿ ಪ್ರಧಾನಿ ಒತ್ತಾಯ

ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ -ಪಿಎಸ್ ಐ ಕಿರಣ್ ಕುಮಾರ್ ಅವರು ಇಂದು ಬೆಳಗ್ಗೆ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲೆ ಪ್ರಕರಣವೊಂದನ್ನು ನಿನ್ನೆ ಮಧ್ಯ ರಾತ್ರಿಯಷ್ಟೇ ಭೇದಿಸಿದ್ದ ಅವರು, ಆರೋಪಿ‌ ಬಂಧನ ಸಂಬಂಧ ಕಾರ್ಯಪ್ರವೃತ್ತರಾಗಿದ್ದರು. ಕೊಲೆ‌ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಕುಮಾರ್ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ …

Read More »

ಸೌಲಭ್ಯವಿಲ್ಲ ಊರಿಗೆ ಕಳುಹಿಸಿ ಎಂದ ಸೋಂಕಿತರ ಮನವೊಲಿಸಿದ ಶಾಸಕ ಬಾಲಕೃಷ್ಣ

ಹಾಸನ: ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯಿಲ್ಲ ನಮ್ಮನ್ನು ಊರಿಗೆ ಕಳುಹಿಸಿ ಎಂದು ಕೇಳಿಕೊಂಡ ಸೋಂಕಿತರ ಬಳಿ ತೆರಳಿದ ಶಾಸಕ ಬಾಲಕೃಷ್ಣ, ನೀವು ಊರಿಗೆ ಹೋದ ತಕ್ಷಣ ಅಕ್ಕಪಕ್ಕದ ಮನೆಯವರು ಬೇರೆ ರೀತಿ ನಿಮ್ಮನ್ನು ನೋಡಬಹುದು, ಹೀಗಾಗಿ ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಚನ್ನರಾಯಪಟ್ಟಣದಲ್ಲಿ ನಡೆದಿದೆ. ಕೊರೊನಾ ರೋಗ ಲಕ್ಷಣಗಳು ಇಲ್ಲದೆ ಪಾಸಿಟಿವ್ ಬಂದಿರುವವರನ್ನು ತಾಲೂಕು ಕೇಂದ್ರದಲ್ಲೇ ಪ್ರತ್ಯೇಕ ವ್ಯವಸ್ಥೆ ಮಾಡಿ ಕ್ವಾರಂಟೈನ್ ಮಾಡಲಾಗಿದೆ. ಚನ್ನರಾಯಪಟ್ಟಣ …

Read More »

ಕೊರೊನಾ ಸಂಕಷ್ಟವೇ ಬಂಡವಾಳ- ಮಾಟಕ್ಕೆ ಪರಿಹಾರ ಮಾಡುತ್ತೇನೆಂದು ಪೂಜಾರಿ ವಂಚನೆ

ಹಾಸನ: ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಪೂಜಾರಿಗಳ ತಂಡ, ನಿಮಗೆ ಆಗದವರು ನಿಮ್ಮ ಜಮೀನಿನಲ್ಲಿ ಹಂದಿ ತಲೆ ಹೂತಿಟ್ಟು ಮಾಟ ಮಾಡಿಸಿದ್ದಾರೆ. ತಲೆಯನ್ನು ನಾವು ಹೊರ ತೆಗೆದು ಮಾಟದಿಂದ ಮುಕ್ತಿ ಕೊಡಿಸುತ್ತೇವೆ ಎಂದು ವಂಚಿಸುತ್ತಿದೆ. ಜಿಲ್ಲೆಯ ಗಾಣಿಗರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ತಂಡವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದಾರೆ. ದೇವರ ವಿಗ್ರಹದೊಂದಿಗೆ ಆಗಮಿಸಿದ ದಿಲೀಪ್, ತಾನೇ ತಂದಿರುವ ಹಂದಿ ತಲೆಯನ್ನು ಮೊದಲೇ ಹೂತಿಟ್ಟು, ನಂತರ ಅದೇ ಜಾಗದಲ್ಲಿ ಗುಂಡಿ ತೆಗೆಸಿ …

Read More »

ಮಾಸ್ಕ್‌ ಧರಿಸದೇ ಎಂಟ್ರಿ – ಪ್ರಶ್ನಿಸಿದ್ದಕ್ಕೆ ಕಂಪ್ಯೂಟರ್‌ ಎತ್ತಿ, ಪೀಠೋಪಕರಣ ಧ್ವಂಸ

ಹಾಸನ: ಪಾನಮತ್ತ ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಗ್ರಾಮ ಪಂಚಾಯಿತಿಗೆ ನುಗ್ಗಿ ಅಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಆತಂಕ ಸೃಷ್ಟಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನಲ್ಲಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ. ಗುರುವಾರ ಬ್ಯಾಕರವಳ್ಳಿ ಗ್ರಾಮ ಪಂಚಾಯತಿಗೆ ನುಗ್ಗಿದ ಹರೀಶ್, ನನಗೆ ಹೆಲ್ತ್ ಕಾರ್ಡ್ ಮಾಡಿಕೊಡಬೇಕು ಎಂದು ಸಿಬ್ಬಂದಿಗೆ ಜೋರು ದನಿಯಲ್ಲಿ ಕೇಳಿದ್ದಾನೆ. ಆಗ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೊರಗೆ ಹೋಗಿದ್ದಾರೆ ಅವರು ಬಂದ …

Read More »

ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು …

Read More »

ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಕೊರೊನಾ ಹೆಚ್ಚಾಗಲಿದ್ದು ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ಮಾತನಾಡಿದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ, ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು. ಜನರು ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.ಸ್ವಚ್ಛತೆ, ಸಾಮಾಜಿಕ ಅಂತರದ ಕಡೆ ಗಮನ ಕೊಡಬೇಕು. ಇನ್ನೂ ಕೆಲ ತಿಂಗಳು ಕೊರೊನಾ ಅಟ್ಟಹಾಸ …

Read More »

ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್………

ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಂದಿನ 96 ಪಾಸಿಟಿವ್ ಪ್ರಕರಣಗಳು ಸೇರಿ ಹಾಸನದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಕೋವಿಡ್ ಸೋಂಕಿನಿಂದ ಮೃತರಾದವರ ಸಂಖ್ಯೆ 33ಕ್ಕೇರಿದೆ. ಇಂದು ಪಾಸಿಟಿವ್ ಬಂದ 96 ಜನರಲ್ಲಿ ಸುಮಾರು 18 ಜನ ಬೆಂಗಳೂರು ಟ್ರಾವೆಲ್ ಹಿಸ್ಟರಿಯನ್ನು ಹೊಂದಿದ್ದಾರೆ. ಹಾಸನದಲ್ಲಿ ಇದುವರೆಗೂ 1,049 …

Read More »

ಹಾಸನದಲ್ಲಿ ಮುಂದುವರಿದ ಸಾವಿನ ಸರಣಿ – ಓರ್ವ ಸಾವು, 41 ಜನರಿಗೆ ಕೊರೊನಾ

ಹಾಸನ: ಜಿಲ್ಲೆಯಲ್ಲಿ ಇಂದು ಒಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹೊಸದಾಗಿ 41 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 886ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ. ಇದುವರೆಗೆ 553 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 305 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 28 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 16 ಜನ ತೀವ್ರ …

Read More »