ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ …
Read More »ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.
ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …
Read More »ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.
ಬೆಳಗಾವಿ, ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …
Read More »ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ
ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್ಸಿ …
Read More »ರೈತ ವಿರೋಧಿ ಮಸೂದೆ ವಿರುದ್ಧ ಜೆಡಿಎಸ್ ಶಾಸಕ ಏಕಾಂಗಿ ಪ್ರತಿಭಟನೆ
ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ ಶಾಸಕರು ತಮ್ಮದೇ ಆದ ರೀತಿಯಲ್ಲಿ ಬಂದ್ಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಹೆಸರನ್ನು ಹೊಂದಿರುವ ರಾಮಸ್ವಾಮಿಯವರು ಜೆಡಿಎಸ್ ಪಕ್ಷದ ನಿಷ್ಠಾವಂತ ರಾಜಕೀಯ ಮುಖಂಡರಲ್ಲಿ ಒಬ್ಬರು. ನೇರ ಮಾತುಗಾರಿಕೆಯಿಂದ …
Read More »ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು
ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್ನ ಹಿರಿಯ ಮುಖಂಡ ಹೆಚ್ಕೆ ಪಾಟೀಲ್ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಚಿವರ …
Read More »10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ. ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ …
Read More »ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ
ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …
Read More »ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್ಸಿಬಿ ಜಯ
ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …
Read More »ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ
ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು …
Read More »
Laxmi News 24×7