ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಹಗರಣದ ಜಾಲ ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯನ್ನೂ ಆವರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಆಂತರಿಕ ಭದ್ರತಾ ದಳ ಹಲವು ಕಿರುತೆರೆ ನಟ ನಟಿಯರಿಗೆ ನೋಟಿಸ್ ನೀಡಿದ್ದು, ಇಂದು ನಟ ಅಭಿಷೇಕ್ ಮತ್ತು ನಟಿ ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. ಐಎಸ್ ಡಿ ಪೊಲೀಸರು ಇತ್ತೀಚೆಗಷ್ಟೇ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದರು. ಅವರುಗಳು ಹಲವು ಸಿನಿಮಾ ಮತ್ತು ಕಿರುತೆರೆ ನಟರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು …
Read More »ಶಿಕ್ಷಕನಿಂದ : ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ
ಕೋಣಂದೂರು: ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಗೆ ‘ವಿದ್ಯಾಗಮ’ ಯೋಜನೆಯಡಿ ಪಾಠ ಮಾಡುವಾಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಉಮೇಶ್ ನಾಯಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಜೊತೆ ಶಿಕ್ಷಕ ಉಮೇಶ್ ನಾಯಕ್ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾರೆ.
Read More »ಇಂಗು ಬಚ್ಚಲು ಗುಂಡಿ ಅಭಿಯಾನಕ್ಕೆ ಚಾಲನೆ
ತೆಲಸಂಗ: ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ನಿರ್ಮಲ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಇಂಗು ಬಚ್ಚಲು ಗುಂಡಿ ನಿರ್ಮಾಣ(ಸೋಕ್ ಪಿಟ್) ಅಭಿಯಾನ ಪ್ರಾರಂಭವಾಗಿದೆ. ಅಂತರ್ಜಲ ವೃದ್ಧಿಗೆ ಹಾಗೂ ಆರೋಗ್ಯ ಸುರಕ್ಷತೆಗೆ ಪ್ರತಿಯೊಬ್ಬರೂ ಸರಕಾರದ ಸಹಾಯಧನದೊಂದಿಗೆ ಇಂಗು ಬಚ್ಚಲು ಗುಂಡಿ ನಿರ್ಮಾಣ ಮಾಡಿಕೊಳ್ಳಬೇಕು ಎಂದು ತಾಪಂ ಇಒ ರವಿ ಬಂಗಾರೆಪ್ಪನವರ ಹೇಳಿದರು. ಗ್ರಾಮದಲ್ಲಿ ಇಂಗು ಬಚ್ಚಲು ಗುಂಡಿ ನಿರ್ಮಾಣ ಅಭಿಯಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ 46 ಗ್ರಾಪಂಗಳಲ್ಲಿ …
Read More »ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ 7.5 ಮೀಸಲಾತಿಗೆ ಆಗ್ರಹ
ಬೆಳಗಾವಿ: ‘ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ 7.5ರಷ್ಟು ಹೆಚ್ಚುವರಿ ಮೀಸಲಾತಿ ನೀಡಬೇಕು’ ಎಂದು ನಾಯಕ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ತಳವಾರ ಒತ್ತಾಯಿಸಿದರು. ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜಕ್ಕೆ 1978ರಿಂದ ಇಲ್ಲಿಯವರೆಗೆ ಕೇವಲ ಶೇ. 3ರಷ್ಟು ಮೀಸಲಾತಿ ನೀಡುತ್ತಾ ಬರಲಾಗಿದೆ. ಇದರಿಂದಾಗಿ ನಾವು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ’ ಎಂದು ತಿಳಿಸಿದರು. ‘ನಾವು ತೀರಾ ಹಿಂದುಳಿದಿದ್ದೇವೆ. ಇಷ್ಟು ಕಡಿಮೆ ಪ್ರಮಾಣದ ಮೀಸಲಾತಿಯಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಂದೆ ಬರಲು …
Read More »ವಿವಿಧ ಬೇಡಿಕೆಗೆ ಆಗ್ರಹಿಸಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು
ಬೆಳಗಾವಿ: ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು . ಮಾಸಿಕ 12 ಸಾವಿರ ವೇತನ ನೀಡಬೇಕು ಹಾಗೂ ಈ ಹಿಂದೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆಗೊಳಿಸಬೇಕು ಅಂತ ಒತ್ತಾಯಿಸಿದ್ರು. ಕೊರೊನಾ ವಾರಿಯರ್ಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಅಂತ ರಾಜ್ಯ ಸರ್ಕಾರದ …
Read More »ಹಲ್ಲು ಮುರಿದು ಹಾವಿನಂತೆ ISD ಗೆ ಜೀವ ಬಂದಿದ್ದು ಹೇಗೆ
ಬೆಂಗಳೂರು : ಬೆಂಗಳೂರು ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರೇ ಯಾವುದೇ ಪ್ರಕರಣ ದಾಖಲಾಗದೇ ಖಾಲಿಯಾಗಿ ಉಳಿದಿದ್ದ ಐಎಸ್ಡಿ(Internal security division) ಗೆ ಜೀವ ಕೊಟ್ಟರು. ರಾಜ್ಯ ಸರ್ಕಾರ 2008ರಲ್ಲಿ ಐಎಸ್ಡಿ ಸ್ಥಾಪಿಸಿದ್ದು, ಇದರಲ್ಲಿ 6 ವಿಂಗ್ಗಳಂತೆ ರಚನೆ ಮಾಡಲಾಗಿತ್ತು. ಆದರೆ ಇದರಲ್ಲಿ ಒಂದೇ ಒಂದು ದೂರು ಸಹ ದಾಖಲಾಗಿರಲಿಲ್ಲ. ಸಿಸಿಬಿ ನಗರಕ್ಕಷ್ಟೇ ಸೀಮಿತವಾಗಿತ್ತು.ಸಿಸಿಬಿಯ ನಾರ್ಕೋಟಿಕ್ ವಿಂಗ್ ನಗರಕ್ಕೆ ಸೀಮಿತವಾಗಿ ಕೆಲಸ ನಿರ್ವಹಿಸುತಿತ್ತು. ಆದರೆ ರಾಜ್ಯದಲ್ಲಿ ಡ್ರಗ್ ಪ್ರಕರಣಗಳ ಬಗ್ಗೆ ಎಲ್ಲಿ …
Read More »ಬಾಯಿಲೇರ್ ಪ್ರದೀಪನ ಪೂಜಾ ಸಮಾರಂಭ
ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಬಾಯಿಲೇರ್ ಪ್ರದೀಪನ ಪೂಜೆ ಮಾಡಲಾಯಿತು. ಈ ಸಮಾರಂಭದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅಧಿಕರಾವ ಪಾಟೀಲ ( GM) ದತ್ತಕುಮಾರ್ ರಕ್ತಾಲೇ ( CC) ಪ್ರಮೋದ್ ಸಾಬಳೆ ( Boiler Engineer) ಪ್ರಶಾಂತ್ ಪಾಟೀಲ (HR) ಎಲ್ಲಾ ಕಾರ್ಮಿಕರು ಮತ್ತು ರೈತ ಭಾಂದವರು ಉಪಸ್ಥಿತರಿದ್ದರು.
Read More »ಜಾನುವಾರು ಹುಲ್ಲುಗಾವಲಿಗೆ ಜಾಗ: ಹಲಗಾ ಗ್ರಾಮಸ್ಥರ ಆಗ್ರಹ
ಬೆಳಗಾವಿ: ‘ತಾಲ್ಲೂಕಿನ ಸುವರ್ಣ ವಿಧಾನಸೌಧದ ಸಮೀಪದಲ್ಲಿರುವ ಹಲಗಾ ಗ್ರಾಮದಲ್ಲಿ ಜಾನುವಾರುಗೆ ಹುಲ್ಲುಗಾವಲುಗಾಗಿ ಏಳು ಏಕರೆ ಜಾಗ ನೀಡಬೇಕು ಮತ್ತು ಪಶು ಆಸ್ಪತ್ರೆ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ‘ಹೈನುಗಾರಿಕೆ ಮತ್ತು ಕೃಷಿಯನ್ನು ಅವಲಂಬಿಸಿ ನಾವು ಜೀವನ ನಡೆಸುತ್ತಿದ್ದೇವೆ. ಸದ್ಯ ದನ, ಎಮ್ಮೆ, ಕರುಗಳನ್ನು ಮೇಯಿಸುವುದಕ್ಕೆ ನಿರ್ದಿಷ್ಟ ಜಾಗವಿಲ್ಲದೆ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಜಾಗ ನೀಡಿ ಅಲ್ಲಿ ಹುಲ್ಲುಗಾವಲು ಮಾಡಲು ಅವಕಾಶ ಕಲ್ಪಿಸಬೇಕು’ ಎಂದು …
Read More »ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ರೈತ ಮಹಿಳೆ ಹಿಗ್ಗಾಮುಗ್ಗಾ ವಾಗ್ದಾಳಿ.
ಬೆಂಗಳೂರು: ಕರ್ನಾಟಕ ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ರೈತರು ಮತ್ತೊಮ್ಮೆ ಪ್ರತಿಭಟನೆಗೆ ಇಳಿದಿದ್ದಾರೆ. ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರೋ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಜೊತೆಗೆ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೈತ ಮಹಿಳೆ ಮಂಜುಳಾ, ‘ಈ ಕಾಯ್ದೆಗಳು ರೈತರನ್ನು ಮುಗಿಸಲು ಹೊರಟಿವೆ. ರೈತರ ಕಷ್ಟ …
Read More »ಕೆಪಿಸಿಸಿ ವಕ್ತಾರರಾಗಿ ಲಕ್ಷ್ಮಿ ಹೆಬ್ಬಾಳಕರ ನೇಮಕ
ಬೆಳಗಾವಿ: ಇಲ್ಲಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ‘ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ಹೀಗಾಗಿ, ಅವರಿಗೆ ಇರುವ ಅನುಭವ ಮತ್ತು ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯ ಗಮನಿಸಿ ಈ ನೇಮಕ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ‘ನನ್ನ ಮೇಲೆ ಸಂಪೂರ್ಣ ವಿಶ್ವಾಸವನ್ನಿಟ್ಟು ವಕ್ತಾರರನ್ನಾಗಿ ನೇಮಿಸಿದ ಅಧ್ಯಕ್ಷರಿಗೆ ಹೃದಯಪೂರ್ವಕ ಧನ್ಯವಾದ …
Read More »
Laxmi News 24×7