ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಸರ್ಕಾರದ ಕೆಲ ನೀತಿಗಳನ್ನ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆ 11ಕ್ಕೆ ಪ್ರಾರಂಭವಾಗುವ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ವರೆಗೂ ನಡೆಯಲಿದೆ. ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಈಗಾಗಲೇ ಮುಂಜಾನೆಯೇ ಸಾವಿರಾರು ರೈತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಭದ್ರತೆಗಾಗಿ 500ಕ್ಕೂ …
Read More »ಕೋವಿಡ್ನಿಂದ ಮೃತಪಟ್ಟ ವ್ಯಕ್ತಿ ಅಂತ್ಯಕ್ರಿಯೆಗೆ ನಿವಾಸಿಗಳ ವಿರೋಧ
ಬೆಳಗಾವಿ: ಇಲ್ಲಿನ ಸದಾಶಿವ ನಗರದ ಲಿಂಗಾಯತ ರುದ್ರಭೂಮಿಯಲ್ಲಿ ಕೋವಿಡ್-19ನಿಂದ ಮೃತರಾದ ವ್ಯಕ್ತಿಯ ಅಂತ್ಯಕ್ರಿಯೆಗೆ ಅವಕಾಶ ಕೊಡುವುದಿಲ್ಲ ಎಂದು ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿ, ಗುಂಡಿ ತೋಡಲು ಜೆಸಿಬಿಯೊಂದಿಗೆ ಬಂದಿದ್ದ ಕುಟುಂಬದವರನ್ನು ಮತ್ತು ಪಾಲಿಕೆ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲು ಅವರು ಬಂದಿದ್ದರು. ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಸಮಾಜಸೇವಕಿ ಸರಳಾ ಹೆರೇಕರ್ ಅವರಿಗೆ ವಿಷಯ ತಿಳಿಸಿದ್ದರು. ಅವರು ಬಂದ ಬಳಿಕ ನಿವಾಸಿಗಳು, …
Read More »ಕೊರೋನಾ : ರಾಜ್ಯದಲ್ಲಿ ಈಗೇಲ್ಲಿಗೆ ತಲುಪಿದೆ ಮಹಾಮಾರಿ ಹಂತ?
ಬೆಂಗಳೂರು : ರಾಜ್ಯದಲ್ಲಿ ಭಾನುವಾರ ಹೊಸದಾಗಿ 8,445 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದ್ದು, 8,611 ಮಂದಿ ಗುಣಮುಖರಾಗಿದ್ದಾರೆ. ಇದೇ ದಿನ 101 ಮಂದಿ ಮೃತಪಟ್ಟಿದ್ದು ಈವರೆಗೆ ಸಾವಿಗೀಡಾದವರ ಸಂಖ್ಯೆ ಸಂಖ್ಯೆ 8 ಸಾವಿರದ ಸಂಖ್ಯೆ ದಾಟಿ 8023ಕ್ಕೆ ಏರಿದೆ. ಸೆಪ್ಟೆಂಬರ್ 11ರಂದು ಸಾವಿನ ಸಂಖ್ಯೆ 7 ಸಾವಿರ ದಾಟಿತ್ತು. ಆ ನಂತರದ 10 ದಿನದಲ್ಲಿ 1000 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ, 8,611 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರೊಂದಿಗೆ ಈವರೆಗೆ 4.13 ಲಕ್ಷ ಜನರು …
Read More »ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ
ಬೆಂಗಳೂರು: ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪ ನಡೆದಿದೆ. ಕೊಲೆಯಾದ ಯುವಕನನ್ನು ರಾಜೇಶ್ (35) ಎಂದು ಗುರುತಿಸಲಾಗಿದೆ. ರಾಜೇಶ್ ಒಂದು ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ನಂತರ ಆ ಯುವತಿಯನ್ನು ಪ್ರೀತಿಯನ್ನು ನಿರಾಕರಣೆ ಮಾಡಿದ್ದ. ಇದರಿಂದ ಮನನೊಂದ ಯುವತಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ, ನನ್ನ ತಂಗಿಯ ಬಾಳು ಈತನಿಂದಲೇ ಹಾಳಾಯ್ತು ಎಂದು ರಾಜೇಶ್ …
Read More »ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯ,ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ.
ಬೆಂಗಳೂರು: ಕತ್ತಲಾದ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯವಾಗುತ್ತದೆ. ಆದರೆ ಇಲ್ಲೊಬ್ಬ ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ ಮಾಡುವುದು ಅಪರಾಧವಾದರೂ ಯುವಕರು ಶೋಕಿಗಾಗಿ ವೀಲಿಂಗ್ ಮಾಡುತ್ತಿರುತ್ತಾರೆ. ಆದರೆ ಯುವಕ ವೀಲಿಂಗ್ ಮಾಡುವಾಗ ಬೈಕ್ ಹಿಂಬದಿ ಕುಳಿತಿದ್ದ ಯುವತಿ ಕೈಯಲ್ಲಿ ಡ್ರ್ಯಾಗರ್ ಹಿಡಿದು ಭಯ ಹುಟ್ಟಿಸುವಂತೆ ಪೋಸ್ ನೀಡಿದ್ದಾಳೆ. ಯುವತಿಯ ಈ ವಿಡಿಯೋ ಸಾಮಾಜಿಕ …
Read More »ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು
ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವನೋರ್ವ ಭಯಗೊಂಡು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಕೂಕಿನ ಚಂದನಲ್ಲಿ ಗ್ರಾಮದ ಬಳಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಪೀರಶೆಟ್ಟಿ (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆ ನೀರಿನಿಂದ ಹಳ್ಳ ಕೊಳ್ಳಗಳು ತುಂಬಿ ರಭಸದಿಂದ ಹರಿಯುತ್ತಿವೆ. ಈ ಸಮಯದಲ್ಲಿ ಹಳ್ಳ ದಾಟಲು ಹೋದ ಪೀರಶೆಟ್ಟಿ ನೀರನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಆದರೆ ಹಳ್ಳಕ್ಕೆ ಆಡಲಾಗಿ ಹಾಕಿದ್ದ ಕಂಬವನ್ನು …
Read More »ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್
ಶಿವಮೊಗ್ಗ: ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಆಗುಂಬೆ ಬಳಿ ಸಹ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್.ಹೆಚ್ 169-ಎ …
Read More »ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದ ವಿಧಾನಸಭೆ ಉಪಸಭಾಪತಿ, ಶಾಸಕ ಆನಂದ ಮಾಮನಿ
ಸವದತ್ತಿ) – ಬೆಂಗಳೂರಿನಲ್ಲಿ ಸೋಮವಾರ ಪ್ರಾರಂಭಗೊಳ್ಳುವ ಅಧಿವೇಶನದಲ್ಲಿ ಪ್ರಥಮ ಬಾರಿಗೆ ಉಪಸಭಾಪತಿ ಸ್ಥಾನವನ್ನು ಅಲಂಕರಿಸುವ ಮುನ್ನಾ ದಿನ ರವಿವಾರ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದ ವಿಧಾನಸಭೆ ಉಪಸಭಾಪತಿ, ಶಾಸಕ ಆನಂದ ಮಾಮನಿ ಅವರನ್ನು ದೇವಸ್ಥಾನ ವತಿಯಿಂದ ರವಿ ಕೊಟಾರಗಸ್ತಿ ಹಾಗೂ ದೇವಸ್ಥಾನ ಸಿಬ್ಬಂದಿ ಶಾಲೂಹೊದಿಸಿ ಸತ್ಕರಿಸಿದರು. ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ್ರ ಮಾಳಗಿ, ಆರ್ ಎಚ್ ಸವದತ್ತಿ, ಅಲ್ಲಮಪ್ರಭು ಪ್ರಭುನವರ, ಪ್ರಕಾಶ ಪ್ರಭುನವರ, ಪಂಡಿತ ಯಡೂರಯ್ಯ, …
Read More »ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧ………..
ಬೆಂಗಳೂರು: ಇವತ್ತಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ, ಲಾಕ್ಡೌನ್ ಬಳಿಕ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧವಾಗಿದ್ದು, ಕೊರೊನಾ ಹಗರಣ, ಕೇಂದ್ರದಿಂದ ಬರಬೇಕಿರುವ ಜಿಎಸ್ಟಿ ಪರಿಹಾರ ಬಾಕಿ, ಲಾಕ್ಡೌನ್ ಹೊತ್ತಲ್ಲೇ ರೈತರಿಗೆ ಸಂಬಂಧಿಸಿದ ಮಸೂದೆಗಳಿಗೆ ಮಾಡಲಾಗಿರುವ ತಿದ್ದುಪಡಿ. ಏರುತ್ತಿರುವ ಕೊರೋನಾ ಕೇಸ್, ಪ್ರವಾಹ ಪರಿಹಾರ, ಡ್ರಗ್ಸ್ ಕೇಸ್, ಡಿಜೆ ಹಳ್ಳಿ ಕೇಸ್ ಹೀಗೆ ಸರ್ಕಾರದ ವಿರುದ್ಧ ಅಸ್ತ್ರಗಳನ್ನು ಬಳಸಲು ಸಿದ್ಧವಾಗಿವೆ. ಕೊರೊನಾ ಹಿನ್ನೆಲೆಯಲ್ಲಿ …
Read More »ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಊಸರವಳ್ಳಿ:H.D.K.
ಬೆಂಗಳೂರು, ಸೆ.20- ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಅವಕಾಶ ವಾದಿ ಪಕ್ಷ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚï.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ,ಸ್ಥಾನ- ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗ ರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ …
Read More »
Laxmi News 24×7