Breaking News

ಜಿಲ್ಲೆ

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ

ವಿಜಯಪುರ:  ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಟಾಪ್ ನರ್ಸ್ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ.   ನಸುಕಿನ ಜಾವ 5 ಗಂಟೆ ಸುಮಾರಿಗೆ ಆ್ಯಂಬುಲೆನ್ಸ್​​ ಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಇಎಂಟಿ  ಸ್ಟಾಪ್ ನರ್ಸ್ ತುಳಸಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ …

Read More »

ಸಿಎಂ ಬದಲಾವಣೆವಿಚಾರಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹಲವಾರು ಸುದ್ದಿಗಳು ಓಡಾಡುತ್ತಿದ್ದು ಈ ನಡುವೆ ಎರಡು ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಯ ಲೆಕ್ಕಾಚಾರ ನಡೆಸುತ್ತಿದೆ ಎಂದು ಹೇಳಲಾಗಿದೆ. 2023ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಬದಲಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ ಎಂದು ಹೇಳಲಾಗಿದೆ. ಹೊಸ ಸಿಎಂ …

Read More »

ಕೊಹ್ಲಿಯನ್ನು ಟಗರಿಗೆ ಹೋಲಿಸಿದ ಶಿವಣ್ಣ

ಬೆಂಗಳೂರು: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಟಗರಿಗೆ ಹೋಲಿಸಿದ್ದಾರೆ. ನಾಳೆಯಿಂದ ಐಪಿಎಲ್ ಹಂಗಾಮ ಆರಂಭವಾಗಲಿದೆ. ಐಪಿಎಲ್ ಆಡಲು ಆರ್‌ಸಿಬಿ ತಂಡ ಕೂಡ ಯುಎಇಯಲ್ಲಿ ಭರ್ಜರಿ ಸಿದ್ಧತೆ ನಡೆಸಿದೆ. ಚೊಚ್ಚಲ ಬಾರಿ ಐಪಿಎಲ್ ಟ್ರೋಫಿ ಗೆಲ್ಲಲು ಬೆಂಗಳೂರು ತಂಡ ಕಾತುರದಿಂದ ಕಾಯುತ್ತಿದೆ. ಈ ಮಧ್ಯೆ ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯಲ್ಲಿ ಮಾತನಾಡಿರುವ ಶಿವಣ್ಣ ಕೊಹ್ಲಿಯನ್ನು ಹೊಗಳಿದ್ದಾರೆ. ಮಾಜಿ ಕ್ರಿಕೆಟ್ ಆಟಗಾರ ಕನ್ನಡಿಗ …

Read More »

ಸೊಳ್ಳೆ ಕಚ್ತಿದೆಂದು ನಿದ್ರಿಸದೆ ಸಂಜನಾ ರಂಪಾಟ!

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಪರಪ್ಪನ ಅಗ್ರಹಾರ ಜೈಲು ಸೇರಿರುವ ತುಪ್ಪದ ಬೆಡಗಿ ಏನು ಮಾಡಬೇಕೆಂದು ತಿಳಿಯದೇ ಒದ್ದಾಡುತ್ತಿದ್ದಾರೆ. ಈಗ ಸಂಜನಾ ಕೂಡ ಅವರಿಗೆ ಸಾಥ್ ಕೊಟ್ಟಿದ್ದಾರೆ. ಇಬ್ಬರೂ ಒಂದೇ ಕೋಣೆಯಲ್ಲಿ ವಾಸ ಮಾಡುತ್ತಿದ್ದಾರೆ. ಇಷ್ಟು ದಿನ ಸುಪ್ಪತ್ತಿಗೆಯಲ್ಲಿದ್ದ ನಟಿಮಣಿಯರು ಈಗ ಜೈಲು ಸೇರಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ರಾಗಿಣಿ ಜೈಲುವಾಸ 4ನೇ ದಿನಕ್ಕೆ ಕಾಲಿಟ್ಟಿದ್ದರೆ, ಸಂಜನಾ ಜೈಲುವಾಸ ಒಂದು ದಿನ ಪೂರೈಸಿದೆ. ಜೈಲು ಅಧಿಕಾರಿಗಳು ಸಂಜನಾ-ರಾಗಿಣಿಯನ್ನು ಕ್ವಾರಂಟೈನ್ ಕೇಂದ್ರದ …

Read More »

ಹೆಂಡ್ತಿಗೆ ಫೋನ್ ಮಾಡ್ಬೇಕು ಅಂತ ಲವ್ವರ್‌ಗೆ ಕಾಲ್ – ತಗ್ಲಾಕ್ಕೊಂಡ ವೈಭವ್

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದ ಆರೋಪಿಯಾಗಿರುವ ವೈಭವ್ ಜೈನ್ ಹೆಂಡತಿಗೆ ಫೋನ್ ಮಾಡಬೇಕು ಎಂದು ಲವ್ವರ್‌ಗೆ ಕಾಲ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಡ್ರಗ್ಸ್ ಕೇಸ್ ಆರೋಪಿ ವೈಭವ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಹೆಂಡತಿಗೆ ಫೋನ್ ಮಾಡಬೇಕು ಎಂದು ಹೇಳಿ ಸಿಕ್ಕಿಬಿದ್ದಿದ್ದಾನೆ. ಇವತ್ತು ನಾನು ಮದುವೆಯಾದ ದಿನ. ಹೀಗಾಗಿ ನನ್ನ ಪತ್ನಿಗೆ ಫೋನ್ ಮಾಡಿ ಶುಭಾಶಯ ತಿಳಿಸಬೇಕು. ದಯವಿಟ್ಟು ನಿಮ್ಮ ಫೋನ್ ಕೊಡಿ …

Read More »

ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್‍ವೈ ಸಂದೇಶ ನೀಡಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು …

Read More »

ಸಂಪುಟ ಪುನರ್ರಚನೆ ಆದರೆ ಮೂವರು ಸಚಿವರಿಗೆ ಕೊಕ್ಜೊಲ್ಲೆ, ಸಿ.ಸಿ.ಪಾಟೀಲ್ ಮತ್ತು ಕೋಟಾ ಶ್ರೀನಿವಾಸ್ ಪೂಜಾರಿ ಕೈ ಬಿಡುವ ಸಾಧ್ಯತೆ ಇದೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ ನಡೆಯುತ್ತಿದ್ದು, ಸಂಪುಟ ಪುನರ್ರಚನೆ ಆದರೆ ಮೂವರು ಸಚಿವರಿಗೆ ಕೊಕ್ ನೀಡಲು ಮತ್ತು ಏಳು ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ಮಾಡಿದೆ .ಸಿಎಂ ಯಡಿಯೂರಪ್ಪ ಬದಲಿಗೆ ಪರ್ಯಾಯ ನಾಯಕನ ಆಯ್ಕೆ ಆಗಲಿದ್ಯಾ?, ಬಿಜೆಪಿ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಕೈ ಹಾಕಲಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೇ ಒಂದು ವೇಳೆ ನಾಯಕತ್ವ ಬದಲಾದರೆ ಹೈಕಮಾಂಈ ನಡುವೆ ಬಿಎಸ್‍ವೈ ಒಂದು ಸಂಪುಟ …

Read More »

ನಕಲಿ ಖಾತೆ ಸೃಷ್ಟಿಸಿ ಟ್ವೀಟ್ ಮಾಡಿದವರಿಗೆ ತಿರುಗೆಟ್ಟು ಕೊಟ್ಟ ನಟ ಜಗ್ಗೇಶ್

ಬೆಂಗಳೂರು, ಸೆ.18- ಗಣ್ಯರ, ಸೆಲೆಬ್ರಿಟಿಗಳ ಟ್ವಿಟರ್ ಖಾತೆಯನ್ನು ನಕಲಿ ಮಾಡಿ ಅವರ ಸಿದ್ಧಾಂತಕ್ಕೆ ವಿರುದ್ಧವಾಗಿ ಟ್ವಿಟ್ ಮಾಡುವ ಮೂಲಕ ಮುಜುಗರದ ಸನ್ನಿವೇಶ ಸೃಷ್ಟಿಸುವ ಕಿಡಿಗೇಡಿಗಳು ಈಗ ಹಿರಿಯ ನಟ ಜಗ್ಗೇಶ್ ಖಾತೆಯನ್ನು ನಕಲಿ ಮಾಡಿದ್ದಾರೆ. ಜಗ್ಗೇಶ್ ಅವರ ಟ್ವಿಟರ್ ಖಾತೆ ಜಗ್ಗೇಶ್ 2 ಎಂಬ ಲಾಗಿನ್ ಐಡಿ ಹೆಸರಿನಲ್ಲಿದೆ. ಹೊಸದಾಗಿ ಮೂರು ತಿಂಗಳ ಹಿಂದೆ ನಕಲಿ ಖಾತೆ ಸೃಷ್ಟಿಸಿರುವ ಕಿಡಿಗೇಡಿ ಅಭಿಮಾನ್7284 ಹೆಸರಿನಲ್ಲಿ ಕಿತಾಪತಿ ಮಾಡಿದ್ದಾನೆ. ನಕಲಿ ಖಾತೆಯಲ್ಲಿ ಒಂದುವರೆ …

Read More »

ನಮ್ಮಗೆ ವೀರಶೈವ ಲಿಂಗಾಯತ ಜಾತಿ ಪ್ರಮಾಣ ಪತ್ರ ಬೇಡಾ ಲಿಂಗಾಯತ ಪ್ರಮಾಣ ಪತ್ರ ನೀಡಿ ಎಂದು ತಹಸೀಲ್ದಾರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

  ಗೊಕಾಕದಲ್ಲಿ ಲಿಂಗಾಯತ ಸಮುದಾಯಕ್ಕೆ ವೀರಶೈವ ಲಿಂಗಾಯತ ಪ್ರಮಾಣ ಪತ್ರ ನೀಡುವುದನ್ನು ವಿರೋದಿಸಿ ಶೂನ್ಯ ಸಂಪಾದನಮಠದ ಸ್ವಾಮಿಗಳಾದ ಪೀಠಾದಿಪತಿಗಳಾದ ಶ್ರೀ ಮುರುಘರಾಜೇಂದ್ರ ಇವರ ನೇತೃತ್ವದಲ್ಲಿ ಗೋಕಾಕದ ಬಸವೇಶ್ವರ ವೃತ್ತದಿಂದ ಪಾದಯಾತ್ರೆ ಮಾಡುವ ಮೂಲಕ ತೆರಳಿ ತಹಸಿಲ್ದಾರರಿಗೆ ಮನವಿ ನೀಡಿ ಸನ್ 2002 ರವರೆಗೆ ಕಂದಾಯ ಇಲಾಖೆಯಿಂದ ಲಿಂಗಾಯತ ಜಾತಿ ಪ್ರಮಾಣ ಪತ್ರ ನೀಡುತಿದ್ದರು, ಆದರೆ ಕೆಲವು ಮಠಾದಿಶರ ಒತ್ತಾಯಕ್ಕೆ ಮಣಿದು ಸರಕಾರ ವೀರಶೈವ ಎಂಬ ಪದವನ್ನು ಸೇರಿಸಿ ಲಿಂಗಾಯತ ಸಮುದಾಯಕ್ಕೆ …

Read More »

2024ಕ್ಕೆ ದೇಶಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ’

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು 2024ಕ್ಕೆ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು ಎಂದು ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಆಶಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಶಾಸಕ ಎಸ್‌.ಎ.ರಾಮದಾಸ್‌ ಆಯೋಜಿಸಿದ್ದ ಪ್ರಧಾನಿ ನರೇಂದ್ರಮೋದಿ ಅವರ 70ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರಮೋದಿ ಅವರು 2024ಕ್ಕೂ ಆಯ್ಕೆಯಾಗಬೇಕು. 2029ರ ವೇಳೆಗೆ ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ …

Read More »