Breaking News

ಜಿಲ್ಲೆ

ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ

ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ  ಅಶ್ವಥ್ ವೈದ್ಯ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ​ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Read More »

ದುಬೈನಲ್ಲಿ ಮಿಂಚಿದ ಸದಲಗಾ ಪಟ್ಟಣದ ಡಾ.ಶಿವಶಂಕರ ಮರಜಕ್ಕೆ

ಚಿಕ್ಕೊಡಿ:ಸದಲಗಾ ಪಟ್ಟಣದವರು ಹಾಗೂ ಕೊಲ್ಲಾಪುರ ಸಿದ್ದಗಿರಿ ಕನೇರಿ ಮಠದ ಆಸ್ಪತ್ರೆಯಲ್ಲಿ 12 ವರ್ಷದಿಂದ ತಜ್ಞ ನರ ಶಸ್ತ್ರ ಚಿಕಿತ್ಸಾ ವೈದ್ಯರಾಗಿ ಸೇವೆ ಸಲ್ಲಿಸಿಸುತ್ತಿರುವ ಡಾ.ಶಿವಶಂಕರ ಮರಜಕ್ಕೆ ಅವರು ದುಬೈನಲ್ಲಿ ನಡೆದ ವಿಶ್ವ ನರ ಶಸ್ತ್ರಚಿಕಿತ್ಸಾ ಒಕ್ಕೂಟದ ಸಮ್ಮೇಳನದಲ್ಲಿ ಮೂರು ಪ್ರಬಂಧ ಮಂಡಿಸಿ ನರ ಚಿಕಿತ್ಸಕರ ಮೆಚ್ಚುಗೆಗೆ ಪಾತ್ರರಾದರು. ದುಬೈನಲ್ಲಿ ನಡೆದ ಮೂರು ದಿನ ನಡೆದ ಸಮ್ಮೇಳನದಲ್ಲಿ ವಿವಿಧ ದೇಶದ 2000ಕ್ಕೂ ಹೆಚ್ಚು ನರ ಶಿಸ್ತ್ರ ಚಿಕಿತ್ಸಕರು ಭಾಗವಹಿಸಿದ ಸಂದರ್ಭದಲ್ಲಿ ಡಾ.ಶಿವಶಂಕರ್ …

Read More »

ಶ್ರೀನಗರದಲ್ಲಿ ಹಿಂದೂ ಸಮ್ಮೇಳನ

ಬೆಳಗಾವಿ: ಮಹಾಂತೇಶ ನಗರ, ಶ್ರೀನಗರ ಹಾಗೂ ಶಿವಬಸವ ನಗರ ಹಿಂದೂ ಸಮ್ಮೇಳನ ಸಮಿತಿಯಿಂದ ಫೆ.6ರಂದು ಸಂಜೆ 6ಕ್ಕೆ ಶ್ರೀನಗರ ಸಾಯಿ ಮಂದಿರ ಎದುರಿನ ಮೈದಾನದಲ್ಲಿ  ವಿರಾಟ ಹಿಂದೂ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎ.ಆರ್.ಪಾಟೀಲ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರಮುಖ ಭಾಷಣ ಮಾಡುವರು. ಸಮುತ್ಕರ್ಷದ ಜಿಲ್ಲಾ ಮುಖ್ಯಸ್ಥೆ ಪರಿಣಿತಾ ಪಾಟೀಲ ಇತರರು …

Read More »

ಆಸ್ತಿ ದಾಖಲೆ ಡಿಜಿಟಲೀಕರಣಕ್ಕೆ ಮುಂದಾದ ಪಾಲಿಕೆ!

ಬೆಳಗಾವಿ: ಆಡಳಿತದಲ್ಲಿ ಪಾರದರ್ಶಕತೆ, ಖಾಸಗಿ, ಸರ್ಕಾರಿ ಆಸ್ತಿಗಳ ದಾಖಲೆ ಸಂರಕ್ಷಣೆ ಹಾಗೂ ಅಕ್ರಮ ಕಡಿವಾಣಕ್ಕೆ ಹಾಕುವ ನಿಟ್ಟಿನಲ್ಲಿ 50 ವರ್ಷದ ಹಳೆ ದಾಖಲೆ ಡಿಜಿಟಲೀಕರಣಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ! ಹೌದು. ಮಹಾನಗರ ಪಾಲಿಕೆಯ ಕಂದಾಯ ವಿಭಾಗದಲ್ಲಿ 58 ವಾರ್ಡ್ ವ್ಯಾಪ್ತಿಯ ಪ್ರದೇಶದಲ್ಲಿ ಅಂದಾಜು 1.52 ಲಕ್ಷ ವಸತಿ, ವಾಣಿಜ್ಯ ಮಳಿಗೆ, ಖಾಲಿ ನಿವೇಶನಗಳು ಹಾಗೂ ಸರ್ಕಾರಿ ಆಸ್ತಿಗಳಿವೆ.  ಆದರೆ, 1980 ರಿಂದ 2020ರ ನಡುವಿನ ಅವಧಿಯಲ್ಲಿ ಆಸ್ತಿ ಮೂಲ ದಾಖಲೆಗಳು ಸಿಗುತ್ತಿಲ್ಲ. …

Read More »

ಯೋಧನಿಗೆ ಅಂತಿಮ ವಿದಾಯ

ಬೆಳಗಾವಿ: ಪಂಜಾಬ ರಾಜ್ಯದ ಭಟಿಂಡಾದಲ್ಲಿ ನಡೆದ ಸೇನಾವಾಹನ ಅಪಘಾತದಲ್ಲಿ ಸೋಮವಾರ ಮೃತಪಟ್ಟಿದ್ದ ತಾಲೂಕಿನ ಕಂಗ್ರಾಳಿ ಖುರ್ದ (ಕೆಎಚ್) ಗ್ರಾಮದ ಯೋಧ ಹವಾಲ್ದಾರ್ ಜಗದೀಶ ಮನೋಹರ ಶಿಂಧೆ ಅಂತ್ಯಕ್ರಿಯೆ ಸಕಲ ಸೇನಾ ಹಾಗೂ ಸರ್ಕಾರಿ ಗೌರವಗಳೊಂದಿಗೆ  ಬುಧವಾರ ನೆರವೇರಿತು. 24 ವರ್ಷಗಳಿಂದ ಸೇನೆಯಲ್ಲಿದ್ದ ಜಗದೀಶ ಇನ್ನು ನಾಲ್ಕು ತಿಂಗಳಿಗೆ ನಿವೃತ್ತರಾಗಲಿದ್ದರು. ಭಟಿಂಡಾ ಆರ್ಮಿ ಏರ್ ಡಿಫೆನ್ಸ್ ಸೇನಾ ಕೇಂದ್ರದಲ್ಲಿ ಅವರು ಸೇವೆಯಲ್ಲಿದ್ದರು. ಜಗದೀಶ ಅವರ ಪಾರ್ಥಿವ ಶರೀರ ಬುಧವಾರ ಬೆಳಗ್ಗೆ ಸಾಂಬ್ರಾ ವಿಮಾನ …

Read More »

ಆಲ್ ಇಂಡಿಯಾ ಕ್ರಿಕೆಟ್ ಟೂರ್ನಿ 12ರಿಂದ

ಬೆಳಗಾವಿ: ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲಿ ಮುರುಘೇಂದ್ರಗೌಡ ಫೌಂಡೇಷನ್ ಆಶ್ರಯದಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಪಟುಗಳನ್ನು ಒಳಗೊಂಡಿರುವ ‘ಆಲ್ ಇಂಡಿಯಾ ಓಪನ್ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ-26’  ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಮುರೇಂದ್ರಗೌಡ ಪಾಟೀಲ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸರ್ದಾರ ಮೈದಾನದಲ್ಲಿ ಫೆ.12ರಿಂದ ಫೆ.22ರ ವರೆಗೆ 11 ದಿನಗಳ ಕಾಲ ನಡೆಯಲಿರುವ  ಟೂರ್ನಿಯಲ್ಲಿ 48 ತಂಡಗಳಿಗೆ ಭಾಗವಹಿಸಲು ಅವಕಾಶವಿದೆ. ಕರ್ನಾಟಕ ಮಾತ್ರವಲ್ಲದೆ ಉತ್ತರಪ್ರದೇಶ, …

Read More »

belagavi-ರಾಮಕೃಷ್ಣ ಮಿಷನ್ ಆಶ್ರಮದ ವಾರ್ಷಿಕೋತ್ಸವ

ಬೆಳಗಾವಿ : ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಾರ್ಷಿಕೋತ್ಸವ ಫೆ.6ರಿಂದ 8ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶುಕ್ರವಾರ(ಫೆ.6) ಬೆಳಗ್ಗೆ 10ಕ್ಕೆ ವ್ಯಕ್ತಿತ್ವ ನಿರ್ಮಾಣ ಕುರಿತ ಯುವ ಸಮ್ಮೇಳನದಲ್ಲಿ ‘ನಮ್ಮ ಆಂತರಿಕ ಸಾಮರ್ಥ್ಯ ಅನ್ವೇಷಣೆ’ ಕುರಿತು ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮ ಪ್ರಾಣಾನಂದ, ‘ವ್ಯಕ್ತಿತ್ವ ನಿರ್ಮಾಣದಲ್ಲಿ ಧ್ಯಾನದ ಪ್ರಾಮುಖ್ಯ ಮತ್ತು ಅಭ್ಯಾಸ ವಿಧಾನ’ ಕುರಿತು ಸ್ವಾಮಿ ಮೋಕ್ಷಾತ್ಮನಾನಂದ, ‘ನವತಾರುಣ್ಯದ ಆಶಾಕಿರಣ ಸ್ವಾಮಿ ವಿವೇಕಾನಂದ’ ವಿಷಯವಾಗಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಾತನಾಡುವರು. ನಂತರ …

Read More »

ಬ್ಯಾಲೆಟ್ ಪೇಪರ್​​ನಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್: ಸಚಿವ ಸಂಪುಟ ಮಹತ್ವದ ನಿರ್ಧಾರ

ಬೆಂಗಳೂರು:ಕರ್ನಾಟಕದ ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ  ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು (ಫೆಬ್ರವರಿ 05) ಸಿದ್ದರಾಮಯ್ಯ …

Read More »

ಬಾಗಲಕೋಟೆ | ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ PhD ಪ್ರಮಾಣ ಪತ್ರ ಸಲ್ಲಿಕೆ ಆರೋಪ

ಬಾಗಲಕೋಟೆ: ಜಿಲ್ಲೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ  ಸಲ್ಲಿಸಿ ನೌಕರಿ ಪಡೆದ ಆರೋಪ ಕೇಳಿಬಂದಿದೆ. ಬಾಗಲಕೋಟೆ  ಜಿಲ್ಲೆಯಲ್ಲಿರುವ 18 ಸರ್ಕಾರಿ ಕಾಲೇಜಗಳಲ್ಲಿ 100ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಅದ್ರಲ್ಲಿ ಶೇ.60 ರಷ್ಟು ಅತಿಥಿ ಉಪನ್ಯಾಸಕರು ಹೊರ ರಾಜ್ಯದಿಂದ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಪಡೆದು ಕೆಲಸ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಒಂದೊಂದು ಪ್ರಮಾಣಪತ್ರಕ್ಕೆ 3-4 ಲಕ್ಷ ಹಣ …

Read More »

ಖಾಸಗಿ ಆಸ್ಪತ್ರೆ ಮುಂದೆ ಕಸ ಸುರಿದು ಬಿಸಿ ಮುಟ್ಟಿಸಿದ ಬಳ್ಳಾರಿ ಪಾಲಿಕೆ‌ ಸಿಬ್ಬಂದಿ

ಬಳ್ಳಾರಿ: ಖಾಸಗಿ ಅಸ್ಪತ್ರೆಯವರಿಗೆ ಬುದ್ದಿ ಕಲಿಸಲು ಮಹಾನಗರ ಬಳ್ಳಾರಿ  ಪಾಲಿಕೆ ಸಿಬ್ಬಂದಿ ಕಸವನ್ನು ತಂದು ಅಸ್ಪತ್ರೆ ಮುಂದೆ ಸುರಿದು ಬಿಸಿ ಮುಟ್ಟಿಸಿದ್ದಾರೆ. ಬಳ್ಳಾರಿಯ ಪಾರ್ವತಿ ನಗರದ ಪದ್ಮಾವತಿ ಕಿಡ್ನಿಕೇರ್ ಸೆಂಟರ್ ಮತ್ತು ಮೋಕಾ ರಸ್ತೆಯ ದ್ವಾರಕಾ ಆಸ್ಪತ್ರೆ ಮುಂದೆ ಪಾಲಿಕೆ ಸಿಬ್ಬಂದಿ ವಾಹನದಲ್ಲಿ ಕಸ ತಂದು ಸುರಿದಿದ್ದಾರೆ. ಪದ್ಮಾವತಿ ಕಿಡ್ನಿಕೇರ್ ಆಸ್ಪತ್ರೆ ಮತ್ತು ದ್ವಾರಕ ಅಸ್ಪತ್ರೆ ಸಿಬ್ಬಂದಿ ಮೆಡಿಕಲ್ ‌ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಕುತ್ತಿದ್ದರು. ಈ ಎರಡು ಅಸ್ಪತ್ರೆಗೆ ಪಾಲಿಕೆ ನೋಟಿಸ್ …

Read More »