ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿರ್ಜರಾ ಹಾಗೂ ಆಕೆಯ ಪತಿ ಆನಂದ್ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ …
Read More »ಸವದತ್ತಿ: ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ
ಸವದತ್ತಿ: ರುದ್ರಭೂಮಿಗೆ ಹೋಗಲು ಸಮರ್ಪಕ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ತಾಲ್ಲೂಕಿನ ಕೆಂಚಲಾರಕೊಪ್ಪ ಗ್ರಾಮಸ್ಥರು ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಭಾನುವಾರ ಪ್ರತಿಭಟನೆ ನಡೆಸಿದರು. ‘ಈ ಹಿಂದೆ ಪುರಸಭೆ ಮುಖ್ಯಾಧಿಕಾರಿಗೆ ಹಾಗೂ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾರೂ ಇತ್ತ ಗಮನಹರಿಸುತ್ತಿಲ್ಲ. ಗ್ರಾಮದಲ್ಲಿ ಯಾರಾದರೂ ಮೃತರಾದರೆ ಸಂಸ್ಕಾರ ನಡೆಸಲು ರುದ್ರಭೂಮಿಗೆ ತೆರಳುವುದಕ್ಕೆ ಸರಿಯಾದ ರಸ್ತೆ ಇಲ್ಲ. ಇದರಿಂದ ಬಹಳ ತೊಂದರೆ ಆಗುತ್ತಿದೆ’ ಎಂದು ತಿಳಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್ …
Read More »ಯೋಧನ ಬಳಿ ಎಕೆ 47ನ ಜೀವಂತ ಗುಂಡು ಪತ್ತೆ
ಬೆಳಗಾವಿ : ಜೀವಂತ ಗುಂಡು ಸಮೇತ ಪ್ರಯಾಣಿಸುತ್ತಿದ್ದ ಯೋಧನೊಬ್ಬನನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಭದ್ರತಾ ಪಡೆಯ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಸಂಕೇಶ್ವರದ ಹನುಮಾನ ನಗರದ ಸುಬೇದಾರ್ ಅರುಣ ಮಾರುತಿ ಭೋಸಲೆ ಕಳೆದೊಂದು ತಿಂಗಳ ಹಿಂದೆ ರಜೆ ಮೇಲೆ ಬಂದು ಮರಳಿ ಕರ್ತವ್ಯಕ್ಕೆಂದು ಕಾಶ್ಮೀರಕ್ಕೆ ಹೋಗಲು ಬೆಳಗಾವಿ ನಿಲ್ದಾಣದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಪ್ರಯಾಣ ಬೆಳೆಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ ವೇಳೆ ಎಕೆ …
Read More »C.M.ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿ, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ
ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದ್ದು, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ. ಅಲ್ಲದೆ ಸಚಿವಾಕಾಂಕ್ಷಿಗಳ ಎದೆ ಬಡಿತವನ್ನು ಹೆಚ್ಚಿಸಿದೆ. ಸೆಪ್ಟೆಂಬರ್ 17ರ ಗುರುವಾರದಂದು ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಸಮಯ ನಿಗದಿಯಾಗಿದೆ. ಎರಡರಿಂದ ಮೂರು ದಿನಗಳ ಕಾಲ ಸಿಎಂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವರಿಷ್ಠರನ್ನು ಹಾಗೂ ವಿವಿಧ ಸಚಿವಾಲಯಗಳ ಸಚಿವರನ್ನು ಸಿಎಂ ಭೇಟಿ ಮಾಡಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ವರಿಷ್ಠರ ಜೊತೆ …
Read More »ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ
ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಅಪರಾಧ ವಿಭಾಗದ ಎಸಿಪಿ ಯಾಗಿ ನಾಯರಣ ಭರಮನಿ ಅವರನ್ನು ನೇಮಿಸಲಾಗಿದೆ. ಅಪರಾಧ ವಿಭಾಗದಲ್ಲಿ ಮಾಹಾಂತೇಶ ಜಿದ್ದಿ ಅವರನ್ನು ಖಾನಾಪುರ ಪೊಲೀಸ್ ತರಬೇತಿಗೆ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.
Read More »ಮಳೆ ಮುಂದುವರಿದರೆ ಬೆಳೆ ಕೊಳೆಯುವ ಸಾಧ್ಯತೆ ಇದೆ ಎಂದು ರೈತರು ಆತಂಕಗೊಂಡಿದ್ದಾರೆ.
ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಮುಂದುವರಿದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಕೆರೆ, ಕಟ್ಟೆಗಳು ತುಂಬಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ಬಾಗಮಂಡಲ ಮತ್ತು ತಲಕಾವೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ, ಮಡಿಕೇರಿ, ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಜೊತೆಗೆ ಭಾರೀ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿದ್ದು ಜನರು ತತ್ತರಿಸಿದ್ದಾರೆ. …
Read More »ರಾಜ್ಯದಲ್ಲಿಂದು ಹೊಸ 9140 ಕೋವಿಡ್ ಪ್ರಕರಣಗಳು ಪತ್ತೆ 94 ಜನ ಬಲಿ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ 9140 ಜನರಿಗೆ ಕೊರೊನಾ ಸೋಂಕು ತಗುಲಿದೆ. 94 ಜನ ಬಲಿಯಾಗಿದ್ದಾರೆ. 9557 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ಇಂದು ಮತ್ತೆ ಒಂದೇ ದಿನಕ್ಕೆ ಸೋಂಕಿತರಗಿಂತ ಹೆಚ್ಚು ದಾಖಲೆ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ನಿನ್ನೆಗಿಂತ …
Read More »ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ
ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ 298 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. …
Read More »ಬೆಳಗಾವಿ ಜಿಟಿಟಿಸಿಗೆ ‘ಉತ್ಕೃಷ್ಟ ಕೇಂದ್ರ’ ಸ್ಥಾನ
ಬೆಳಗಾವಿ: ಇಲ್ಲಿನ ಉದ್ಯಮಬಾಗ್ನಲ್ಲಿರುವ ಜಿಟಿಟಿಸಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ)ಗೆ ಉತ್ಕೃಷ್ಟ ಕೇಂದ್ರದ ಸ್ಥಾನಮಾನ ದೊರೆತಿದೆ. ’25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗ ಕಂಡುಕೊಂಡಿದ್ದಾರೆ. ಶೇ 100ರಷ್ಟು ಉದ್ಯೋಗ ದೊರೆಯುವಂತಹ ಕೌಶಲ ಆಧಾರಿತ ಕೋರ್ಸ್ಗಳನ್ನು ಇಲ್ಲಿ ನಡೆಸಲಾಗುತ್ತಿದೆ. ಇದನ್ನು ಆಧರಿಸಿ ಸ್ಥಾನಮಾನ ದೊರೆತಿದೆ’ ಎಂದು ಪ್ರಕಟಣೆ ತಿಳಿಸಿದೆ. ‘ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸಜ್ಜುಗೊಳಿಸುವ ಉದ್ದೇಶ ಕೇಂದ್ರದ್ದಾಗಿದೆ. ಉತ್ಕೃಷ್ಟ ಕೇಂದ್ರದ ಸ್ಥಾನಮಾನದಿಂದ …
Read More »ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೋಜು-ಮಸ್ತಿ
ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಅಂತ ಎಲ್ಲರು ಭಾವಿಸಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಈ ಆಸ್ಪತ್ರೆ ದುಸ್ಥಿತಿ ನೋಡಿದ್ರೆ ಎಂಥವರೂ ಒಮ್ಮೆ ಬೆಚ್ಚಿ ಬೀಳ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಘಟಕದ ಮುಂಭಾಗದಲ್ಲೇ ನೋವು ನೋವು ಅಂತ ರೋಗಿಯೊಬ್ಬರು ನರಳಾಡಿದ್ದಾರೆ. ಬೆಡ್ ಖಾಲಿ ಇಲ್ಲ ಅಂತ ನೆಪ ಹೇಳಿ, ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಯ ಮುಂಭಾಗದಲ್ಲಿಯೇ ಸ್ಟ್ರಚರ್ನಲ್ಲೇ ಬಿಟ್ಟು ಹೋಗಿ ಆಸ್ಪತ್ರೆ …
Read More »
Laxmi News 24×7