Breaking News

ಜಿಲ್ಲೆ

ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಕ್ಕೆ…

ಖಾನಾಪುರ: ಪಟ್ಟಣದ ತಹಸೀಲ್ದಾರ್ ಕಚೇರಿಯ ಆಹಾರ ಮತ್ತು ನಾಗರಿಕ ಪೂರೈಕೆ ಶಾಖೆಯ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಐವರನ್ನು ಬಂಧಿಸಿದ ಘಟನೆ ಬುಧವಾರ ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಬುಧವಾರ ತಾಲೂಕಿನ ಗೋಲಿಹಳ್ಳಿ ಗ್ರಾಮದ ಬಳಿ ಬೆಳಗಾವಿ ತಾಳಗುಪ್ಪ ಹೆದ್ದಾರಿಯಲ್ಲಿ ಹುಬ್ಬಳ್ಳಿಯಿಂದ ಅಕ್ಕಿಯ ಮೂಟೆಗಳನ್ನು ಹೊತ್ತುಕೊಂಡು ಮಹಾರಾಷ್ಟ್ರದತ್ತ ಹೊರಟಿದ್ದ ಎರಡು ಸರಕು ಸಾಗಾಣಿಕೆ ಲಾರಿಗಳನ್ನು ಪತ್ತೆ ಹಚ್ಚಿದ ಆಹಾರ ಇಲಾಖೆಯ …

Read More »

ಮೈಸೂರಿನ ಪ್ರತಿಷ್ಠಿತ ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ: ಮುತಾಲಿಕ್

ಮೈಸೂರು: ಜಿಲ್ಲೆಯ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ-ಕಾಲೇಜುಗಳ ಆವರಣದಲ್ಲಿ ಡ್ರಗ್ಸ್ ಸಿಗುತ್ತದೆ. ಮೈಸೂರಿನ ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ. ಇದು ಪೋಷಕರು, ಪಾಲಕರು, ಶಿಕ್ಷಕರಿಗೆ ಗೊತ್ತಿದೆ. ಆದ್ರೆ ಯಾರೊಬ್ಬರೂ ಮಾತನಾಡುತ್ತಿಲ್ಲ ಎಂದು ಹೇಳಿದರು. ಹೊರ ದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಕಾಲೇಜು ಸೇರುತ್ತಾರೆ. ಈಗಲೂ ಹಾಸ್ಟೆಲ್‍ಗಳ …

Read More »

ಶಾಸಕಿಯಾದ್ರೆ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆ, ಆದರೆ ಈಗಲೇ ಅನೇಕ ಸವಾಲು, ಸಂಘರ್ಷ ಎದುರಿಸುವಂತಾಗಿದೆ.

ಬೆಳಗಾವಿ : ನನಗೆ ಕೆಲವರು ತುಂಬಾ ಕಷ್ಟ ಕೊಡುತ್ತಿದ್ದಾರೆ. ಎಷ್ಟೇ ವಿರೋಧಿಸಿದರು ನಾನು ಜಗ್ಗುವುದಿಲ್ಲ ಎಂದು ಗ್ರಾಮೀಣ ಕ್ಷೇತ್ರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರ ಮುಂದೆ ತಮ್ಮ ಅಳಲು ತೋಡಿಕೊಂಡು ಜಿಲ್ಲಾಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ಇಲ್ಲಿನ ಸುಳೇಬಾವಿಯಲ್ಲಿ  ಮಾತನಾಡಿದ ಅವರು, ‘ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ವಿರೋಧಿಗಳು ಅಡ್ಡಿಯಾಗುತ್ತಿದ್ದಾರೆ. ಶಾಸಕರಾದ ಬಳಿಕ ಒಂದಲ್ಲಾಂದು  ಕಷ್ಟಗಳ ಕಾಡುತ್ತಿವೆ. ಶಾಸಕಿಯಾದ್ರೆ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆ, ಆದರೆ ಈಗಲೇ ಅನೇಕ …

Read More »

ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,  ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ. ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ.  ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ …

Read More »

ಕುಣಿಯೋಕೆ ಬಾರದವರು, ನೆಲ ಡೊಂಕು ಎಂಬ ಗಾದೆಯಂತಾಗಿದೆ.:ಲಕ್ಷ್ಮಣ ಸವದಿ

ಬೆಳಗಾವಿ : ಸಮ್ಮಿಶ್ರ ಸರ್ಕಾರ ಪತನಕ್ಕೆ ಡ್ರಗ್ಸ್ ಮಾಫಿಯಾ ಕಾರಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮೀ ಹೇಳಿಕೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕುಣಿಯೋಕೆ ಬಾರದವರು, ನೆಲ ಡೊಂಕು ಎಂಬ ಗಾದೆಯಂತಾಗಿದೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ಡ್ರಗ್ಸ್ ಮಾಫಿಯಾ ಬಂದ ಹಣದಿಂದ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಏಕೆ ಬಾಯಿ ಮುಚ್ಚಕೊಂಡ ಇದ್ರು ಎಂದು ವ್ಯಂಗ್ಯವಾಡಿದರು. ಅಧಿಕಾರದ …

Read More »

ಸಾಂತ್ವನ ಕೇಂದ್ರದಲ್ಲಿ ಗಲಾಟೆ, ಪೊಲೀಸ್ ವಾಹನದಲ್ಲಿ ಮಾತುಕತೆ………

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಈಗಾಗಲೇ ಸಿಸಿಬಿ ತನಿಖೆ ಎದುರಿಸುತ್ತಿದ್ದಾರೆ. ಮೊನ್ನೆಯಷ್ಟೇ ಸಾಂತ್ವನ ಕೇಂದ್ರದಲ್ಲಿ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು ಎಂದು ಮೂಲಗಳು ತಿಳಿಸಿತ್ತು. ಆದರೆ ಇಂದು ಈ ಇಬ್ಬರು ನಟಿಯರ ನಡುವೆ ಫ್ರೆಂಡ್‍ಶಿಪ್ ಆದ ಪ್ರಸಂಗ ನಡೆಯಿತು. ಹೌದು. ವಿಚಾರಣೆ ನಡೆಸುತ್ತಿರುವಾಗ ಈ ಇಬ್ಬರು ನಟಿಯರೂ ಪದೇ ಪದೇ ಅನಾರೋಗ್ಯದ ನೆಪವೊಡ್ಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಇಬ್ಬರ ಆರೋಗ್ಯ ತಪಾಸಣೆಗಾಗಿ …

Read More »

ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ.

ಬೆಂಗಳೂರು, ಸೆ.10- ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ. ಮೊನ್ನೆ ಮತ್ತು ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 40ಕ್ಕೂ ಹೆಚ್ಚು ವಾರ್ಡ್‍ಗಳಲ್ಲಿ ಸಾಕಷ್ಟು ಅನಾಹುತ ಸಂಭವಿಸಿದೆ. ಕೆಲ ಪ್ರದೇಶಗಳ ಪ್ರಮುಖ ರಸ್ತೆಗಳು ಕೊಳಚೆ ಗುಂಡಿಗಳಾಗಿ ಪರಿವರ್ತನೆಗೊಂಡಿದ್ದು , ಕೆಲವರ ಮನೆಗಳಿಗೆ ಕೊಳಚೆ ನೀರು ನುಗ್ಗಿ ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ನಾಯಂಡಹಳ್ಳಿ ಸಮೀಪ ರಾಜ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿದ್ದ ತಡೆಗೋಡೆ …

Read More »

ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಅನೇಕ ಬದಲಾವಣೆ ಗಳಾಗಿವೆ:ಗಣೇಶ ಹುಕ್ಕೇರಿ

ಚಿಕ್ಕೋಡಿ: ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಜನರ ಆರೋಗ್ಯ ಹಾಗೂ ಕೊರೊನಾ ಬಗ್ಗೆ ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟನೆ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಮತದಾರರ ಸಂಘ ಇವರ ಸಹಯೋಗದಲ್ಲಿ ಬುಧವಾರ  ‘ಆರೋಗ್ಯ ಹಸ್ತ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ …

Read More »

ಎತ್ತಿನಹೊಳೆ ಯೋಜನೆ ಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕು:ರಮೇಶ್ ಜಾರಕಿಹೊಳಿ‌ 

ಹಾಸನ: ಎತ್ತಿನಹೊಳೆ ಯೋಜನೆ , ಭೂ ಸ್ವಾಧೀನ ಕುರಿತು ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌  ಇಂದು ಚರ್ಚೆ ನಡೆಸಿದರು. ಇಲ್ಲಿನ ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ‌ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು ಚರ್ಚೆ ನಡೆಸಿದರು. …

Read More »

ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ

ಸವದತ್ತಿ: ‘ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದ್ದು, ಕಂಗಾಲಾಗಿರುವ ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತ ಸಂಘದವರು ಉಪ ತಹಶೀಲ್ದಾರ್‌ ಆರ್.ಎಸ್. ನೇಸರಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಿಜ್ಜೂರ ಮಾತನಾಡಿ, ‘ಬರ, ನೆರೆ, ಅತಿವೃಷ್ಟಿ ಹೀಗೆ ಒಂದಿಲ್ಲೊಂದು ತೊಂದರೆಗೆ ರೈತರು ಪ್ರತಿ ವರ್ಷವೂ ಸಿಲುಕುತ್ತಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆ ನಮ್ಮ ಕೈ ಸೇರುತ್ತಿಲ್ಲ. ಈ ಬಾರಿ ಅತಿವೃಷ್ಟಿಯಿಂದ ಹೆಸರು, ಮೆಕ್ಕೆಜೋಳ, …

Read More »