Breaking News

ಜಿಲ್ಲೆ

ಪೊಲೀಸರಿಂದ ಬಂಧನಕ್ಕೆ ಒಳಗಾದ ನಟಿ ರಾಗಿಣಿಗೆ ಅಲರ್ಜಿ ಸಮಸ್ಯೆ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ ಡೀಲ್ ಪ್ರಕರಣದಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರಿಂದ ಬಂಧನಕ್ಕೆ ಒಳಗಾದ ನಟಿ ರಾಗಿಣಿಗೆ ಅಲರ್ಜಿ ಸಮಸ್ಯೆ ಕಾಣಿಸಿದೆ. ನನಗೆ ಅಲರ್ಜಿ ಸಮಸ್ಯೆಯಾಗುತ್ತಿದೆ. ಹೀಗಾಗಿ ಡಾಕ್ಟರ್‌ ಸೇವೆ ಅಗತ್ಯವಿದೆ ಎಂದು ರಾಗಿಣಿ ಪೊಲೀಸರ ಬಳಿ ಕೇಳಿಕೊಂಡಿದ್ದಾರೆ. ಈ ಹಿಂದೆ ರಾಗಿಣಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ರಾಗಿಣಿಯ ಮನವಿಯಂತೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ. ಐಷಾರಾಮಿ ಜೀವನ ನಡೆಸುತ್ತಿದ್ದ ರಾಗಿಣಿ ಸದ್ಯ ಸಾಮಾನ್ಯ ಕೊಠಡಿಯಲ್ಲಿ ಕಾಲ …

Read More »

ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರ ಅಡ್ಡಿ

ಖಾನಾಪುರ: ತಾಲ್ಲೂಕಿನಲ್ಲಿ  ಸಂಸದ ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರು ಅಡ್ಡಿ ಪಡೆಸಿದ್ದು,  ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಾಸಕಿ ಅಂಜಲಿ ನಿಂಬಾಳಕರ ಕೊರೊನಾದಿಂದ ಕ್ವಾರಂಟೈನ್ ನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಭೂಮಿ ಪೂಜೆಯನ್ನು ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಭೂಮಿ ಪೂಜೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ …

Read More »

5 ತಿಂಗಳಿಂದ ಪ್ರವಾಸಿಗರಿಂದ ದೂರವಿದ್ದ ವಿಶ್ವ ಪ್ರಸಿದ್ದ ಗಿರಿಧಾಮ ಈಗ ಮುಕ್ತ

ಚಿಕ್ಕಬಳ್ಳಾಪುರ : ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಅವಕಾಶ ನಿಡುತ್ತಿದ್ದು ಗಿರಿಧಾಮ ವೀಕ್ಷಣೆಗೆ ಪ್ರವಾಸಿಗರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರತಿ ಶನಿವಾರ, ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಲಗ್ಗೆ ಇಟ್ಟು ಬೆಟ್ಟದ ಕಾನನ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದು ಹೋಗುತ್ತಿದ್ದ ಐಟಿ, ಬಿಟಿ ಉದ್ಯೋಗಿಗಳಿಗೆ, ಪ್ರೇಮಿಗಳಿಗೆ ಸತತ ಐದು ತಿಂಗಳಿಂದ ಗಿರಿಧಾಮಕ್ಕೆ ಪ್ರವೇಶವಿಲ್ಲವಾಗಿತ್ತು. ಆದರೆ ಕೇಂದ್ರ ಸರ್ಕಾರ …

Read More »

ಒಂದೇ ವಾರದಲ್ಲಿ  145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನುಬಂಧಿಸಲಾಗಿದೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಗಾಂಜಾ ಮಾರಾಟ ಹಾಗೂ ಸೇವೆನೆ ಎಗ್ಗಿಲ್ಲದೆ ನಡೆಯುತ್ತಿದ್ದು,  ಒಂದೇ ವಾರದಲ್ಲಿ  145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನು ಬಂಧಿಸಿದ್ಧಾರೆ. 2 ಲಕ್ಷ 25 ಸಾವಿರ ಬೆಲೆಯ 145 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ.  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ದೂರು ದಾಖಲಾಗಿದ್ದು, 14 ಜನರನ್ನು ಬಂಧಿಸಲಾಗಿದೆ ಎಂದು  ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಕಾರ್ಯಾಚರಣೆ …

Read More »

ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು

ಬೆಂಗಳೂರು: ನಮ್ಮ ಅಮ್ಮನ ಹಾರ್ಟ್ ವೀಕ್, ಈಗಾಗಲೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಶಾಂತ್ ಸಂಬರಗಿ ಇನ್ನಾ ಮಾತನಾಡಿ ನಮ್ಮ ಅಮ್ಮಗೆ ಏನಾದರೂ ಆದರೆ ನಾನು ಸತ್ತೋದರೂ ಅವನನ್ನು ನಾನು ಬಿಡಲ್ಲ ಎಂದು ನಟಿ ಸಂಜನಾ ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ನಟಿ ಸಂಜನಾ, ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು. ಎಲ್ಲಾ ರಾಜ್ಯಗಳಿಂದ 200 ಜನ …

Read More »

ಜೆಡಿಎಸ್ ಪಕ್ಷ ತೀರಿಸುವ ಕೆಲಸ ನಡೆಯುತ್ತಿದೆ : ಗಂಭೀರ ಆರೋಪ

ನಾಗಮಂಗಲ  : ಜಿಲ್ಲಾಡಳಿತ ಜೆಡಿಎಸ್‌ ಪಕ್ಷವನ್ನು ತೀರಿಸುವ ಕೆಲಸ ಮಾಡುತ್ತಿದೆ. ಜನರಿಂದ ಆಯ್ಕೆಯಾದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಕನಿಷ್ಠ ಪ್ರಯತ್ನವನ್ನೂ ಮಾಡುತ್ತಿಲ್ಲ. ಜನರಿಂದ ತಿರಸ್ಕೃತರಾದವರೇ ಅಧಿಕಾರಿಗಳಿಗೆ ಗಾಡ್‌ಫಾದರ್‌ಗಳಾಗಿದ್ದಾರೆ ಎಂದು ನಾಗಮಂಗಲ ಶಾಸಕ ಕೆ.ಸುರೇಶ್‌ಗೌಡ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಾಗಮಂಗಲ ಶಾಸಕ ಕೂಡ ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ಸಿಟ್ಟಿಗೆದ್ದಿದ್ದಾರೆ. …

Read More »

ಸತೀಶ ಜಾರಕಿಹೊಳಿ ಟೈಗರ್ ಗ್ಯಾಂಗ್ ಬಗ್ಗೆ ಹೇಳಿದ್ದೇನು….

ಗೋಕಾಕ:  ನಗರದಲ್ಲಿ  ಹಲವು ವರ್ಷಗಳಿಂದ ಸಕ್ರಿಯವಾಗಿದ್ದ ಟೈಗರ್ ಗ್ಯಾಂಗ್ ನ್ನು  ತಡವಾದರು ಕೂಡ ಪೊಲೀಸರು ಬಂಧಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ.  ನಿಷ್ಪಕ್ಷಪಾತ ತನಿಖೆಯಿಂದ ಮತ್ತಷ್ಟು ಮಾಹಿತಿ  ಹೊರ ಬರಲಿ ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??   ಟೈಗರ್ ಗ್ಯಾಂಗ್ ಬಂಧನ ವಿಚಾರವಾಗಿ ನಗರದಲ್ಲಿ …

Read More »

ಕೊರೋನಾ ಕಾಟ: ವಿಶಿಷ್ಟ ರೀತಿಯಲ್ಲಿ ಸಂಸತ್‌ ಅಧಿವೇಶನ, ಪ್ರಹ್ಲಾದ ಜೋಶಿ

ಹುಬ್ಬಳ್ಳಿ  : ಕೋವಿಡ್‌ ಹಿನ್ನೆಲೆಯಲ್ಲಿ ಅತ್ಯಂತ ವಿಶಿಷ್ಟ ಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್‌ ಅಧಿವೇಶನ ನಡೆಯಲಿದೆ. ಚರ್ಚೆಯೇ ಇಲ್ಲದೆ ಕೇರಳ, ರಾಜಸ್ತಾನ, ಪಶ್ಚಿಮ ಬಂಗಾಳದಲ್ಲಿ ಅಧಿವೇಶನ ಪೂರ್ಣಗೊಳಿಸಿದವರು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿರುವುದು ವಿಚಿತ್ರ ವರ್ತನೆ ಎಂದು ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಂತ ವಿಶಿಷ್ಟಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್‌ ಅಧಿವೇಶನ ನಡೆಯಲಿದೆ. …

Read More »

ನಟಿ ರಾಗಿಣಿಗೆ ಚಿತ್ರರಂಗದಿಂದ ನಿಷೇಧ?

ಬೆಂಗಳೂರು : ಡ್ರಗ್ಸ್‌ ಆರೋಪ ಸಾಬೀತಾದರೆ ನಟಿ ರಾಗಿಣಿ ಅವರಿಗೆ ಚಿತ್ರರಂಗದಿಂದ ನಿಷೇಧ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದ್ದು, ಡ್ರಗ್ಸ್‌ ಜಾಲದಲ್ಲಿ ರಾಗಿಣಿ ಪಾತ್ರ ಇರುವುದು ಸಾಕ್ಷ್ಯಸಮೇತ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ದೂರ ಇಡುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌.ಜೈರಾಜ್‌ ನಿರಾಕರಿಸಿದ್ದು, ಈ ಹಂತದಲ್ಲಿ …

Read More »

ಕೊರೊನಾದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಣಮುಖ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. …

Read More »