ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಿರಂತರ ತನಿಖೆ ಕೈಗೊಂಡಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರತಿದೆ. ಮೈಸೂರು ಭಾಗದ ಓರ್ವ ಶಾಸಕರ ಪುತ್ರ ಹಾಗೂ ಉತ್ತರ ಕರ್ನಾಟಕ ಭಾಗದ ಮತ್ತೋರ್ವ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್ ಸೇವನೆ ಆರೋಪ ಕೇಳಿಬಂದಿದೆ. ಇಬ್ಬರು ತಾವು ಮಾತ್ರವಲ್ಲದೆ ತಮ್ಮದೆಯಾದ ಗುಂಪು ಕಟ್ಟಿಕೊಂಡು ಡ್ರಗ್ಸ್ ಸೇವೆನೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇವರ ವಿಚಾರಣೆ ಮತ್ತು ತನಿಖೆಗೆ ಮುಂದಾಗಿದ್ದು, ಸೂಕ್ತ …
Read More »ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು: ನಟಿ, ರಾಜಕಾರಣಿ ತಾರಾ
ಬೆಂಗಳೂರು: ನಮ್ಮನ್ನ ಅನುಸರಿಸುವವರು ಇದ್ದಾರೆ. ಹೀಗಾಗಿ ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು ಎಂದು ನಟಿ, ರಾಜಕಾರಣಿ ತಾರಾ ಪ್ರಶ್ನಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಯಾಂಡಲ್ ವುಡ್ ಡ್ರಗ್ಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತ ದೇವರಿಗೆ ನಮಸ್ಕಾರ ಮಾಡಿದೆ. ನಾನು ಸಿಎಂಗೆ ಇಂದು ಸಲಹೆ ನೀಡುವೆ. ನಾವೆಲ್ಲರೂ ಎಲ್ಲ ಬೆಳವಣಿಗೆ ವೀಕ್ಷಿಸುತ್ತಿದ್ದೀವಿ ಎಂದರು. ಡ್ರಗ್ಸ್ ವಿಚಾರ ನಮ್ಮ ರಂಗಕ್ಕೆ …
Read More »ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ………..
ಚಿಕ್ಕಬಳ್ಳಾಪುರ: ಟೋಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕರ್ನಾಟಕ ಆಂಧ್ರ ಗಡಿಭಾಗದ ಬಾಗೇಪಲ್ಲಿ ಟೋಲ್ ಪ್ಲಾಜಾದಲ್ಲಿ ಅಪಘಾತ ನಡೆದಿದೆ. ಬೆಂಗಳೂರು ಕಡೆಯಿಂದ ಬಂದ ಸ್ಕಾರ್ಪಿಯೋ ಕಾರು, ಸರದಿ ಸಾಲಿನಲ್ಲಿದ್ದ ಸ್ವಿಫ್ಟ್ ಡಿಜೈರ್ ಹಾಗೂ ಹುಂಡೈ ಕ್ರೆಟಾ ಕಾರಿಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ನಂತರ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದೆ. ಈ …
Read More »ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ ಸೆ.30ರವರೆಗೆ ಬಂದ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ ಸೆ.30ರವರೆಗೆ ಬಂದ್ ಮಾಡಲಾಗಿದೆ. ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ, ಚಿಂಚಲಿ ಮಾಯಕ್ಕ , ಜೋಗುಳಬಾವಿ ಸತ್ಯಮ್ಮ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮುಂದುವರೆದಿದೆ. ಈ ಮೂರು ದೇವಾಲಯಗಳಿಗೂ ಮಹಾರಾಷ್ಟ್ರಾದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕೊರೊನಾ ಹಿನ್ನೆಲೆ ಭಕ್ತರ ಹಿತದೃಷ್ಟಿಯಿಂದ ಇನ್ನೂ ಒಂದು ತಿಂಗಳವರೆಗೂ ಈ ದೇವಾಲಯಗಳ ಬಾಗಿಲು ತೆರೆಯದಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ …
Read More »ಶ್ರೀ ಸಂತೋಷ. ರ. ಜಾರಕಿಹೊಳಿಯವರಿಂದ ಪ್ರತಿಕಾ ಮಿತ್ರರಿಗೆ ಖಡಕ್ ವಾರ್ನಿಂಗ್
ಗೋಕಾಕ ನಗರದ ಎಲ್ಲಾ ಪತ್ರಿಕಾ ಮಾಧ್ಯಮದ ಮಿತ್ರ ರನ್ನ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಒಂದು ಔತಣ ಕೂಟಕ್ಕೆ ಕರೆದಿದ್ದರು ಇಲ್ಲಿ ಸುಮಾರು ಜನ ಕೂಡ ಭಾಗ ವಹಿಸಿದ್ದರು, ಗೋಕಾಕ ನಗರದ ಎಲ್ಲಾ ವಾರ ಪತ್ರಿಕೆ,ದಿನ ಪತ್ರಿಕೆ ,ಹಾಗೂ ಯೂಟ್ಯೂಬ್ ಚಾನಲ್ ಗಳ ವರದಿಗಾರರು ಈ ಸಭೆಯಲ್ಲಿ ಭಾಗ ವಹಿಸಿದ್ದರು, ಸಭೆಯ ಮುಖ್ಯ ಉದ್ದೇಶ ಏನಂದ್ರೆ ಎಲ್ಲರೂ ಒಂದಾಗಿ ಇರಿ ನಿಮ್ಮ , …
Read More »ಅಕ್ಟೋಬರ್ನಲ್ಲಿ ಗ್ರಾಪಂ ಚುನಾವಣೆ? ಮೀಸಲಾತಿ ಪಟ್ಟಿ ಸಿದ್ಧ; ಕರೊನಾ ಕಾಲದ ನಿಯಮ ಪಾಲನೆಗೂ ಬದ್ಧ
ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ 6025 ಗ್ರಾಪಂಗಳ ಪೈಕಿ ಶೇ.90ರ ಅವಧಿ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೊನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತ ಅಧಿಕಾರ ಬಳಸಿ ‘ಅಸಾಧಾರಣ ಸಂದರ್ಭ’ವೆಂದು ಪರಿಗಣಿಸಿ ಚುನಾವಣೆ ಮುಂದೂಡಿತ್ತು. ರಾಜ್ಯ ಸರ್ಕಾರ ಕೂಡ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. …
Read More »ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ
ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗ್ರಾಮಪಂಚಾಯತ್ ಬಿಲ್ ಕಲೆಕ್ಟರ್, ಕ್ಲರ್ಕ್, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್, ವಾಟರ್ಮೆನ್, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು …
Read More »ಸ್ಥಳೀಯ ಉದ್ಯಮಿಗಳೇ ಹೂಡಿಕೆಗೆ ಮುಂದಾಗಿ: ಸಚಿವ ಶೆಟ್ಟರ
ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮ ವಲಯ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಆದರೆ, ಹೊರಗಿನವರು ಬಂದು ಹೂಡಿಕೆ ಮಾಡಲಿ ಎಂದು ಕಾಯುವುದಕ್ಕಿಂತ ಸ್ಥಳೀಯರೇ ಮುಂದೆ ಬಂದರೆ ಹೆಚ್ಚು ಪ್ರಯೋಜನವಾಗಲಿದೆ. ಯಾವುದೇ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಹೂಡಿಕೆಯ ಪಾತ್ರ ದೊಡ್ಡದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ …
Read More »ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢ
ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವೆ ಶಶಿಕಲಾ ಜೊಲ್ಲೆ, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೇನ್ ಆಗಬೇಕಾಗಿ ವಿನಂತಿ. ಸದ್ಯಕ್ಕೆ …
Read More »ಮಾದಕ ವಸ್ತುಗಳನ್ನು ಮಾರಾಟ ಮಾಡ್ತಿದ್ದ ಮೂವರ ಬಂಧನ………..
ಬೆಂಗಳೂರು: ಮಾದಕವಸ್ತುಗಳ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಬಂಧಿತ ಆರೋಪಿಗಳು. ಇವರು ಪಶ್ಚಮ ಬಂಗಾಳ ಮೂಲದವರು ಎನ್ನಲಾಗಿದೆ. ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ ಸೇರಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳು ಮಾದಕ ವಸ್ತುಗಳನ್ನು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ …
Read More »
Laxmi News 24×7