ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದೆ. ‘ಅವರು ಹೋಂ ಐಸೊಲೇಷನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ಸಹೋದರ ಸಂತೋಷ ಪಾಟೀಲ ‘ಪ್ರಜಾವಾಣಿ’ಗೆ ಖಚಿತಪಡಿಸಿದರು. ಶಾಸಕರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.
Read More »ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಕನ್ನಡಿಗರು ಹರಸಾಹಸ ಪಡಬೇಕಾ…?
ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ? ಎಂದು ನಿಖಿಲ್ ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರು ಅವರು ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪುಂಡಾಟಿಕೆ ಮಾಡುತ್ತಿರುವ ಕೆಲವು ಸಂಘಟನೆಗಳನ್ನು ಸರ್ಕಾರ ಕೂಡಲೇ …
Read More »ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಗೆ ಮತ್ತೆ ಎದುರಾಗಿದೆ ಕೊರೊನಾ ಭೀತಿ..!
ಬೆಳಗಾವಿ: ಶಾಸಕ ಅಭಯ ಪಾಟೀಲ ಅವರಿಗೆ ನಿನ್ನೆಯಷ್ಟೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದ್ರೆ, ಮೂಲಗಳು ಹೇಳುವ ಪ್ರಕಾರ ಶಾಸಕರು ಆಸ್ಪತ್ರೆಗೆ ದಾಖಲಾಗಿಲ್ಲ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಭೀತಿ ಶುರುವಾಗಿದೆ. ಹೌದು, ಇತ್ತಿಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೂಡ ಪಾಲ್ಗೊಂಡಿದ್ದರು ಎನ್ನುವುದು …
Read More »ಬೆಳಗಾವಿ: 789 ಮಂದಿ ಗುಣಮುಖ, ಬಿಡುಗಡೆ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 290 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಮೂವರು ಹಾಗೂ ಖಾನಾಪುರ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು. 789 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದೆ.
Read More »ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ
ಗೋಕಾ: ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ. ‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ …
Read More »ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು DC ಎತ್ತಂಗಡಿ
ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಇಂದು ಮೈಸೂರು ಡಿಸಿ ಅಭಿರಾಂ ಜಿ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ಅಭಿರಾಂ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ಕಲಬುರ್ಗಿ ಡಿಸಿ ಶರತ್ ಅವರನ್ನ ನೇಮಕ ಮಾಡಲಾಗಿದೆ. ಶರತ್ ಅವರು ಈ ಹಿಂದೆ ಮಂಡ್ಯ ಜಿಪಂ ಸಿಇಓ ಆಗಿದ್ದರು. ನಂಜನಗೂಡು ತಾಲೂಕಾಧಿಕಾರಿ ಡಾ.ನಾಗೇಂದ್ರ ಅವರ ಮೃತದೇಹ …
Read More »₹ 5 ಕೋಟಿ ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಭೂಮಿಪೂಜೆ
ಹುಣಸಗಿ: ‘ಪ್ರಸಕ್ತ ಸಾಲಿನ ಕೋವಿಡ್ ಸಂದರ್ಭದಲ್ಲಿಯೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆದಿದ್ದು, ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ’ ಎಂದು ಶಾಸಕ ರಾಜುಗೌಡ ಹೇಳಿದರು. ಹುಣಸಗಿ ತಾಲ್ಲೂಕಿನ ಯರಿಕ್ಯಾಳ ಗ್ರಾಮದ ಬಳಿ ಹಳ್ಳಕ್ಕೆ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ‘ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಸುಮಾರು ₹ 200 ಕೋಟಿ ವೆಚ್ಚದಲ್ಲಿ ಈ ಬಾರಿ ಸಿ.ಸಿ ರಸ್ತೆ, ಕಾಲುವೆ …
Read More »ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ
ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮರ್ಕುಮಾರ್ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ. ‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು. …
Read More »ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್ಗೆ ಮತ್ತೆ ಸಂಕಷ್ಟ
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿದೆ. ಆರೋಪಿಗಳಾದ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೋಹಂತಿ ಮತ್ತು ಎ.ಎಂ ಪ್ರಸಾದ್ ವಿಚಾರಣೆಗೆ ನೊಟೀಸ್ ನೀಡಿದೆ. ಪ್ರಕರಣದಲ್ಲಿ ಕೆ.ಜೆ.ಜಾರ್ಜ್, ಪ್ರಣಬ್ ಮೋಹಂತಿ, ಎ.ಎಂ.ಪ್ರಸಾದ್ ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ ಎಂದು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನ ಪ್ರಶ್ನಿಸಿ ಮೃತ ಗಣಪತಿ …
Read More »A.D.G.P.ಅಮರಕುಮಾರ್ ಪಾಂಡೆ ಅವರ ಸಂಧಾನಸಭೆ ಸಕ್ಸಸ್
ಬೆಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ವಿವಾದ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಎಡಿಜಿಪಿ ಅಮರಕುಮಾರ್ ಪಾಂಡೆ ಅವರು ನಡೆಸಿದ, ಸಂಧಾನಸಭೆ ಸಕ್ಸಸ್ ಆಗಿದೆ ಎಡಿಜಿಪಿ ಅಮರಕುಮಾರ ಪಾಂಡೆ ಅವರು ನಡೆಸಿದ ಕನ್ನಡಿಗರ – ಮರಾಠಿಗ ಭಾಷಿಕ ಮುಖಂಡರ ಜೊತೆ ನಡೆದ ಸಭೆ ಸಫಲವಾಗಿದೆ. ಪೀರನವಾಡಿಯ ಲಕ್ಷ್ಮೀ ಮಹಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ನಾಯಕರ ಸಭೆಯಲ್ಲಿ ಸೌಹಾರ್ದಯುತ ಸಲಹೆಗಳು …
Read More »
Laxmi News 24×7