ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯಂದು, ಬೆಳಗಾವಿಯ ಪೀರನವಾಡಿಯಲ್ಲಿ ಅವರ ಪ್ರತಿಮೆ ತೆರವುಗೊಳಿಸಿರುವುದು ನಿಜಕ್ಕೂ ಕನ್ನಡಿಗರಿಗೆ ಆಗಿರುವ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಕಾನೂನು ರೀತಿಯಲ್ಲಿ ಅನುಮತಿ ನೀಡಿ, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಅವರು ಮನವಿ ಮಾಡಿದ್ದಾರೆ. ಆ. 15 ರಂದು ಬೆಳಗಿನ ಜಾವ ಕೆಲ ಯುವಕರು ಪೀರಣವಾಡಿಯ …
Read More »ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. …
Read More »ಪ್ರಥಮ್ ವಿರುದ್ಧ ಪ್ರಕರಣ…………
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪ್ರಥಮ್ ವಿರುದ್ಧ ಪ್ರಕರಣ ದಾಖಲಾಗಿದೆ.ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಸ್ಡಿಪಿಐ ಸದಸ್ಯ ಉಮರ್ ಫಾರೂಕ್ ಎಂಬವರು ದೂರು ನೀಡಿದ್ದಾರೆ. ದೂರಿನ ಅನ್ವಯ ಐಪಿಸಿ ಸೆಕ್ಷನ್ 295(ಧಾರ್ಮಿಕ ಭಾವನೆಗೆ ಧಕ್ಕೆ) ಅಡಿ ಪ್ರಕರಣ ದಾಖಲಾಗಿದೆಚಿತ್ರನಟ ಪ್ರಥಮ್ ಫೇಸ್ಬುಕ್ನಲ್ಲಿ ಮುಸ್ಲಿಮ್ ಸಮುದಾಯದ ಧಾರ್ಮಿಕ ಭಾವನೆಗೆ ನೋವುಂಟು ಮಾಡುವಂತಹ , ಇಂತಹ ಮುಗ್ಧ ಮುಸ್ಲಿಮ್ಗಳು ಅನ್ ಎಜ್ಯುಕೇಟೆಡ್ ಇರಬೇಕು. ಇಲ್ಲ ಅಂದ್ರೆ …
Read More »ಹವಾಮಾನ ವೈಪರೀತ್ಯ- ದಾರಿ ಮಧ್ಯೆ ಲ್ಯಾಂಡ್ ಆದ ಹೆಲಿಕಾಪ್ಟರ್
ಶಿವಮೊಗ್ಗ: ಹವಾಮಾನ ವೈಪರಿತ್ಯದಿಂದಾಗಿ ಎಂಎಲ್ಸಿ ರಘು ಆಚಾರ್ ಸಂಚಾರ ಮಾಡುತ್ತಿದ್ದ ಹೆಲಿಕಾಪ್ಟರ್ ದಾರಿ ಮಧ್ಯದಲ್ಲಿಯೇ ಲ್ಯಾಂಡ್ ಆದ ಘಟನೆ ಇಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಅಂಚೆ ಸಿದ್ದಾಪುರದಲ್ಲಿ ನಡೆದಿದೆ.ಶಿವಮೊಗ್ಗದಲ್ಲಿ ಇಂದು ನಡೆದ ಶಾಸಕ ಬಿ.ಕೆ ಸಂಗಮೇಶ್ ಅವರ ಸಹೋದರನ ಪುತ್ರಿಯ ವಿವಾಹ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಎಂಎಲ್ಸಿ ರಘು ಆಚಾರ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದರು. ಆದರೆ ಹೆಲಿಕಾಪ್ಟರ್ ಭದ್ರಾವತಿ ಸಮೀಪ ಬರುತ್ತಿದ್ದಂತೆ ಮೋಡ ಕವಿದ …
Read More »ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ನಾಲ್ವರು ನಾಪತ್ತೆ
ರಾಯಚೂರು: ದಿನಸಿ ತರಲು ತೆಲಂಗಾಣಕ್ಕೆ ತೆರಳಿದ್ದ ರಾಯಚೂರು ತಾಲೂಕಿನ ಕುರ್ವಕಲಾ ನಡುಗಡ್ಡೆ ಗ್ರಾಮದ 13 ಜನ ಮರಳಿ ಬರುವಾಗ ತೆಪ್ಪ ಮುಗುಚಿ ಬಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ. ಕುರ್ವಾಕಲಾ ಗ್ರಾಮದ ಪಾರ್ವತಿ (55) ನರಸಮ್ಮ (36) ಸುಮಲತಾ (32) ಪೂಜಾ (10) ನಾಪತ್ತೆಯಾದವರು. ತೆಲಂಗಾಣದ ಪಂಚಪಾಡಕ್ಕೆ ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ಘಟನೆ ನಡೆದಿದೆ. 13 ಜನರಲ್ಲಿ 9 ಜನ ಈಜಿ ದಡ ಸೇರಲು ಹರಸಾಹಸ …
Read More »ಗುಟ್ಟು ಗುಟ್ಟಾಗಿ ಪರಿಹಾರ ಕೊಡಿ ಅನ್ನೋ ಪಕ್ಷದ ನಾಯಕರ ಮಾತಿಗೆ ಜಮೀರ್ ಅಹ್ಮದ್ ಗೊಂದಲದಲ್ಲಿ ಸಿಲುಕಿದ್ದಾರೆ
ಬೆಂಗಳೂರು: ಕೆಜಿ ಹಳ್ಳಿ ಗಲಾಟೆಯಲ್ಲಿ ಮೃತರಾದ ಮೂವರ ಕುಟುಂಬಕ್ಕೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ 5 ಲಕ್ಷ ರೂ. ಪರಿಹಾರ ನೀಡುವದಾಗಿ ಘೋಷಣೆ ಮಾಡಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ನೀಡಿರುವ ಎಚ್ಚರದ ಸಂದೇಶಕ್ಕೆ ಜಮೀರ್ ಅಹ್ಮದ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ …
Read More »ಕೊರೊನಾ ಸಂಕಷ್ಟದ ನಡುವೆ ಬಿಜೆಪಿ ನಾಯಕರಿಂದ ಸ್ಥಾನಮಾನಕ್ಕೆ ಲಾಬಿ
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ದೇಶದ್ಯಾಂತ ಲಾಕ್ಡೌನ್ ಮಾಡಲಾಗಿತ್ತು. ಲಾಕ್ಡೌನ್ ನಿಂದಾಗಿ ರಾಜ್ಯದಲ್ಲಿ ಅಲ್ಲ ಇಡೀ ದೇಶದ ರಾಜಕೀಯ ವಿದ್ಯಮಾನಗಳು ಸ್ತಬ್ಧವಾಗಿದ್ದವು. ಆದರೆ ಲಾಕ್ಡೌನ್ ಅನ್ಲಾಕ್ ಆಗ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಪುನಾರಂಭಗೊಂಡಿದೆ. ಸ್ಥಾನಮಾನದ ಲೆಕ್ಕಾಚಾರದಲ್ಲಿರುವ ಆಡಳಿತ ಪಕ್ಷದ ನಾಯಕರು ದೆಹಲಿ ದಂಡಯಾತ್ರೆ ಶುರು ಮಾಡಿದ್ದು ಹೈಕಮಾಂಡ್ ನಾಯಕರ ಮನ ಗೆಲಲ್ಲು ಪ್ರಯತ್ನ ಆರಂಭಿಸಿದ್ದಾರೆ. ಅನ್ಲಾಕ್ ಬಳಿಕ ನಾಲ್ಕನೇ ಬಾರಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ದೆಹಲಿ ದಂಡಯಾತ್ರೆ ಮಾಡುತ್ತಿದ್ದಾರೆ. …
Read More »ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ಗಳಿಗೆ ನೋಟಿಸ್
ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಶಾಸಕ ಅಖಂಡ ಶ್ರೀನಿವಾಸ್ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ …
Read More »ಘಟಪ್ರಭಾ ನದಿಗೆ 72800 ಕ್ಯೂಸೆಕ್ಸ್ ನೀರು ಹರಿವು: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ:ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ …
Read More »ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವ್ರ ಲಿಸ್ಟ್ ಇದೆ: ಅಶೋಕ್
ಬೆಂಗಳೂರು: ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವರ ಲಿಸ್ಟ್ ಎಲ್ಲಾ ಇದೆ. ಯಾವ ಯಾವ ಕಾಂಗ್ರೆಸ್ ನಾಯಕರ ಕೈಲಿ ಕೊತ್ತಂಬರಿ, ಕರಿಬೇವಿನ ಸೊಪ್ಪು ಇದೆ ಅಂತ ಮಾಹಿತಿ ಇದೆ ಎಂದು ಕಂದಾಯ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಅಖಂಡ ಶ್ರೀನಿವಾಸ ಮೂರ್ತಿಯವರನ್ನು ಸೆಳೆಯಲು ಬಿಜೆಪಿ ಒತ್ತಡ ಹಾಕ್ತಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅಖಂಡ ಶ್ರೀನಿವಾಸ ಮೂರ್ತಿಯವರನ್ನು ಬಿಜೆಪಿಗೆ ಕರೆಯೋದೇ ಇಲ್ಲ. …
Read More »
Laxmi News 24×7