ಹಾವೇರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆಯಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಫಲಿತಾಂಶ ಬಂದ ಬೆನ್ನಲ್ಲೇ ಕಡಿಮೆ ಅಂಕ ಬಂದಿದೆ ಹಾಗೂ ಅನುತ್ತೀರ್ಣನಾಗಿದ್ದೇನೆ ಎಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಿತ ವಿಷಯದಲ್ಲಿ ಫೇಲಾದ ಕಾರಣಕ್ಕೆ ಹಾವೇರಿಯ ದ್ಯಾಮವ್ವನ ಗುಡಿ ಓಣಿಯಲ್ಲಿ ವೈಷ್ಣವಿ ರಿತ್ತಿ (16) ಮನೆಯಲ್ಲಿ ವಿಷ ಸೇವಿಸಿದ್ದಾಳೆ. …
Read More »ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ ಅವರ ಸಹೋದರ ಬಾಳೆಕುಂದ್ರಿ ಕೆ.ಎಚ್.ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಜಾಧವ ವಿರುದ್ಧ ಕ್ರಿಮಿನಲ್ ಪ್ರಕರಣ
ಬೆಳಗಾವಿ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ ಅವರ ಸಹೋದರ ಬಾಳೆಕುಂದ್ರಿ ಕೆ.ಎಚ್.ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಜಾಧವ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಅವರ ಸದಸ್ಯತ್ವ ರದ್ದುಪಡಿಸಬೇಕೆಂದು ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಪ್ರಶಾಂತ ಅವರು ವಿರುದ್ಧ 26,78,473 ರುಪಾಯಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ವಿಚಾರಣೆ ನಡೆಸಿದೆ. ಅಲ್ಲದೆ ಅವರ ವಿರುದ್ಧ ಹಲವಾರು ಗಂಭೀರ ಆರೋಪಗಳ ಕೇಳಿ ಬಂದಿವೆ. ಗ್ರಾಮ ಪಂಚಾಯಿತಿಯ ಕರವಸೂಲಾತಿಯಲ್ಲಿ …
Read More »ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ
ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …
Read More »ನನ್ನ ಹೇಳಿಕೆಗೆ ನಾನು ಬದ್ಧ. ನನ್ನ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಲು ಸಿದ್ಧ
ಶಿವಮೊಗ್ಗ: ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಈಶ್ವರಪ್ಪನವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಈ ಈಶ್ವರಪ್ಪ, ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ನನ್ನ ಇಡೀ ಜೀವನವನ್ನು ಬೇಕಾದರೂ ಜೈಲಿನಲ್ಲೇ …
Read More »ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಭತ್ತದ ನಾಟಿ
ಹಾವೇರಿ: ಹಾವೇರಿಯಲ್ಲಿ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಜನರು ಭತ್ತದ ನಾಟಿ ಮಾಡುವ ಮೂಲಕ ವಿನೂತನವಾಗಿ ಆಡಳಿತದ ಗಮನ ಸೇಳೆದರು. ಸೋಮವಾರ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ 26 ರಲ್ಲಿ ಕಳೆದ ಮೂವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ರಸ್ತೆ ಕೇಸರು ಗದ್ದೆಯಾಗಿ ನಿರ್ಮಾಣವಾಗಿದೆ. ಆದರೆ ಜಿಲ್ಲಾಡಳಿತ, ತಾಲ್ಲೂಕಾಡಳಿತ ಮಾತ್ರ ಇತ್ತ ಗಮನ ಹರಿಸುತ್ತಿಲ್ಲ …
Read More »ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ – 60 ಅಡಿ ಆಳದಲ್ಲಿ ಅರ್ಚಕರ ಎರಡು ಕಾರು ಪತ್ತೆ
ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್ಡಿಆರ್ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಇದೀಗ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ. ಕಳೆದ ನಾಲ್ಕು ದಿನಗಳಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರವಾದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಎರಡು ಕಾರುಗಳು ಪತ್ತೆಯಾಗಿವೆ. ಎರಡು …
Read More »ಗೃಹ ಸಚಿವರ ಚಪ್ಪಲಿಯನ್ನು ಎತ್ತಿಕೊಂಡು ಹೋಗಿದ್ದ ಸಮುದ್ರದ ಚಪ್ಪಲಿಯನ್ನು ದಡಕ್ಕೆ ಎಸೆದಿದೆ
ಉಡುಪಿ: ರಾಜ್ಯ ಗೃಹ ಸಚಿವ ಉಡುಪಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಮೇಲೆ ಸಮುದ್ರ ರಾಜ ಎರಗಿದ್ದಾನೆ. ಉಡುಪಿಯ ನೆರೆಪೀಡಿತ ಪ್ರದೇಶಗಳ ಪ್ರವಾಸ ಕೈಗೊಂಡ ಸಂದರ್ಭ ಸಮುದ್ರದ ಅಲೆ ಸಚಿವ ಬೊಮ್ಮಾಯಿ ಅವರಿಗೆ ಬಡಿದಿದೆ. ಉಡುಪಿ ಜಿಲ್ಲೆ ಕಾಪು ತಾಲೂಕು ಪಡುಬಿದ್ರೆ ಕಡಲಕಿನಾರೆಗೆ ಬಸವರಾಜ್ ಬೊಮ್ಮಾಯಿ ಮೊದಲ ಭೇಟಿ ಕೊಟ್ಟರು. ಸಮುದ್ರ ಕೊರೆತ ವೀಕ್ಷಿಸಿದ ಬೊಮ್ಮಾಯಿ, ಅರಬ್ಬಿ ಸಮುದ್ರಕ್ಕೆ ಇಳಿದರು. ಈ ಸಂದರ್ಭ ಬೃಹತ್ ಗಾತ್ರದ ಅಲೆ ಗೃಹ ಸಚಿವ …
Read More »ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲಿಗೆ ಡೀಸೆಲ್ ತುಂಬಿಸಿದ್ದಾರೆ.
ಶಿವಮೊಗ್ಗ: ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲಿ ಡೀಸೆಲ್ ಹಾಕಿ ಬಂಕ್ ಸಿಬ್ಬಂದಿ ಎಡವಟು ಮಾಡಿದ್ದಾರೆ.ವಿಜಯ್ ರಾಘವೇಂದ್ರ ಕುಟುಂಬದ ಜೊತೆ ಶಿವಮೊಗ್ಗ ಪ್ರವಾಸಕ್ಕೆ ಬಂದಿದ್ದರು. ಜೋಗ ನೋಡಿಕೊಂಡು ನಗರದ ಬಂಕ್ ನಲ್ಲಿ ಕಾರ್ ಗೆ ಪೆಟ್ರೋಲ್ ತುಂಬಿಸುವಂತೆ ಹೇಳಿದ್ದಾರೆ. ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲಿಗೆ ಡೀಸೆಲ್ ತುಂಬಿಸಿದ್ದಾರೆ. ತಪ್ಪಿನ ಅರಿವಾಗುತ್ತಲೇ ಎಚ್ಚೆತ್ತ ಸಿಬ್ಬಂದಿ ವಿಜಯ್ ರಾಘವೇಂದ್ರ ಅವರ ಬಳಿ ಕ್ಷಮೆ ಕೇಳಿದ್ದಾರೆ. ನಂತರ …
Read More »ಅಂಜಲಿ ನಿಂಬಾಳ್ಕರ್ ಮಾಡಿರುವ ಟ್ವಿಟ್ ವೊಂದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ವಿಧಾನ ಸಭೆ ಮತಕ್ಷೇತ್ರದಲ್ಲಿ ಬರುವ ಮಣಗುತ್ತಿ ಗ್ರಾಮದಲ್ಲಿಯ ಶಿವಾಜಿ ಪ್ರತಿಮೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಮಾಡಿರುವ ಟ್ವಿಟ್ ವೊಂದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಮಣಗುತ್ತಿಯಲ್ಲಿಯ ಶಿವಾಜಿ ಪ್ರತಿಮೆಯನ್ನು ತೆರವು ಮಾಡಿದ್ದನ್ನು ಆಕ್ಷೇಪಿಸಿದ ಶಾಸಕಿ ನಿಂಬಾಳ್ಕರ್ ಅವರು, ಸಕಲ ಸರಕಾರಿ ಗೌರವದೊಂದಿಗೆ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಬೇಕು ಮತ್ತು ರಾಜ್ಯ ಸರ್ಕಾರ ಕ್ಷಮೆಯನ್ನು ಕೇಳಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದು ಕನ್ನಡಿಗರ …
Read More »ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಉದ್ಯಮಿ
ಕೊಪ್ಪಳ: ಆ ಮಹಿಳೆಗೆ ಹೀಗೆಯೇ ಮನೆಕಟ್ಟಿಸಬೇಕೆಂದು ಕನಸಿತ್ತು. ಮನೆ ನಿರ್ಮಾಣದ ಭೂಮಿ ಪೂಜೆಗೆ ಇದ್ದ ಆಕೆ ಮನೆಯ ಗೃಹ ಪ್ರವೇಶಕ್ಕೆ ಜೀವಂತವಾಗಿದ್ದಿಲ್ಲ. ಆದರೆ ಅದೇ ಮನೆಯಲ್ಲಿ ಜೀವಂತ ಪ್ರತಿಮೆಯಾಗಿದ್ದಳು. ಅರೇ ಇದೇನಪ್ಪ ಜೀವಂತ ಪ್ರತಿಮೆ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ. ಒಂದೆಡೆ ಜೀವಂತ ಇರಬೇಕಾದಾಗಿನ ಫೋಟೋದಲ್ಲಿನ ಮಹಿಳೆ, ಇನ್ನೊಂದೆಡೆ ಮನೆಯಲ್ಲಿ ಜೀವಂತ ಇದ್ದಾರೇನೋ ಎನ್ನುವ ರೀತಿಯಲ್ಲಿ ಪ್ರತಿಮೆಯಾಗಿ ಕುಳಿತಿರುವ ಮಹಿಳೆ. ಮತ್ತೊಂದೆಡೆ ಮನೆಯೊಡತಿ ಜೊತೆ ಕುಳಿತಿರುವ ಪತಿ, ಮಕ್ಕಳು. …
Read More »
Laxmi News 24×7