Breaking News

ಜಿಲ್ಲೆ

ಸಿಎಂ ಬಿಎಸ್‌ವೈಗೆ ಕೊರೋನಾ ಸೋಂಕು, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವವರು ಯಾರು..?

ಬೆಂಗಳೂರು,ಆ.7-ಕೊರೋನಾ ಬಾಧೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸುವವರು ಯಾರು ಎಂಬ ಈಗ ಪ್ರಶ್ನೆ ಎದುರಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರೂ ಕ್ವಾರಂಟೈನ್ ಕಟ್ಟುಪಾಡಿನ ಪ್ರಕಾರ ಯಡಿಯೂರಪ್ಪನವರು 14 ದಿನಗಳ ಕಾಲ ಅಂದರೆ 16ನೇ ತಾರೀಖಿನವರೆಗೆ ಮನೆಯಲ್ಲಿಯೇ ಇರಬೇಕಾಗುತ್ತದೆ. ಈ ಕಾರಣ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅನುಮಾನ. ಹಾಗೊಂದು ವೇಳೆ ಅವರು ಭಾಗವಹಿಸಲೇಬೇಕು ಎಂದಾದರೇ ಕ್ವಾರಂಟೈನ್ ನಿಯಮಗಳನ್ನು ಸಡಿಲಿಸಬೇಕಾಗುತ್ತದೆ. ಸಾಮಾನ್ಯವಾಗಿ ಮುಖ್ಯಮಂತ್ರಿ ಗೈರಿನಲ್ಲಿ …

Read More »

ಮಡಿಕೇರಿ -ಮೈಸೂರು ರಸ್ತೆ ಸಂಪರ್ಕ ಬಂದ್

ಮಡಿಕೇರಿ/ಮೈಸೂರು: ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ಮಡಿಕೇರಿ – ಮೈಸೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕುಶಾಲನಗರ ಬಳಿಯ ರಸ್ತೆಯ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಕಾರಣ ಹೆದ್ದಾರಿ ಜಲಾವೃತವಾಗಿದೆ. ಹೆದ್ದಾರಿ ಬಂದ್‌ ಆಗಿರುವ ಕಾರಣ ಎರಡು ಕಡೆ ವಾಹನಗಳು ಸಾಲಾಗಿ ನಿಂತಿವೆ.ಭಾರೀ ಮಳೆಯಿಂದ ಸೂತ್ತೂರು ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೂತ್ತೂರು ಕ್ಷೇತ್ರದ ಸುತ್ತ ಮುತ್ತ ತೋಟ ಜಮೀನಿಗೆ ನೀರು ನುಗ್ಗಿದೆ.ಕಬಿನಿ ಡ್ಯಾಂನಿಂದ ನದಿಗೆ 50ಸಾವಿರ …

Read More »

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫೇಸ್‌ಬುಕ್‌ನಲ್ಲಿ ಈ ವಿಚಾರವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುದ್ದಿ ಗೋಷ್ಠಿ ನಡೆಸಿ ಸುರೇಶ್‌ ಕುಮಾರ್‌ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98 ರಷ್ಟು …

Read More »

ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಎಚ್ಚರಿಕೆಯಿಂದರಲೂ ಮುನ್ಸೂಚನೆ

ಬೆಳಗಾವಿ: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ  ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಉಂಟಾಗಿದೆ. ಖಾನಾಪುರ ಮತ್ತು ಬೈಲಹೊಂಗಲದ ಸುತ್ತಮುತ್ತಲೂ  ಮಳೆಯು ನಿಂತಿದ್ದು, ಬಿಸಿಲಿನ ವಾತಾವರಣ ಉಂಟಾಗಿದ್ದರಿಂದ ಒಳಹರಿವಿನಲ್ಲಿ ಗಮನಾರ್ಹ ಬದಲಾವಣೆಯಾಗಿದೆ.    ಒಟ್ಟು 37.7 ಟಿ ಎಮ್ ಸಿ  ಸಾಮರ್ಥ್ಯದ ಆಣೆಕಟ್ಟಿನಲ್ಲಿ ಸದ್ಯ 22 ಟಿ ಎಮ್ ಸಿ ನೀರಿನ ಸಂಗ್ರಹವಿದೆ.ಒಟ್ಟು 2079.5 …

Read More »

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ,

ಬೆಂಗಳೂರು- ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಈ ಹಿಂದಿನ‌ ರೀತಿಯೇ ಪರಿಹಾರವನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌ ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಎಂದು ಅವರು ಸೂಚಿಸಿದರು.   ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿ ಈಗಾಗಲೇ …

Read More »

ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ

ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಳೆ ವೇಳೆಗೆ ನೀರಿನ ಹೊರ ಹರಿವು ಜಾಸ್ತಿಯಾಗುವ ಸಾಧ್ಯತೆಯಿದೆ.ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಇದಾಗಿದ್ದು, ಈಗಾಗಲೇ ಜಲಾಶಯ ಭರ್ತಿಯಾಗಿದೆ. ಇನ್ನೂ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದವಾಗುತ್ತಿದ್ದು, ಕೃಷ್ಣಾ ನದಿ ತೀರಕ್ಕೆ ಜನರು ತೆರಳದಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ. ಈಗಾಗಲೇ ನದಿ …

Read More »

ಆಲಮಟ್ಟಿ, ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ, ಪ್ರವಾಹ ಭೀತಿ

ವಿಜಯಪುರ/ ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ‌ ಮಳೆಯಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಳವಾಗಿದ್ದು 26 ಗೇಟ್ ಗಳ ಪೈಕಿ 22 ಗೇಟ್ ಗಳ ಮೂಲಕ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.1.47 ಲಕ್ಷ ಕ್ಯುಸೆಕ್‌ ಒಳ ಹರಿವು ದಾಖಲಾಗಿದ್ದು,1.50 ಲಕ್ಷ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಕ್ಷಣ ಕ್ಷಣಕ್ಕೂ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಹತ್ತಿರದ ಗ್ರಾಮಗಳ ಮೀನುಗಾರರು, ಗ್ರಾಮಸ್ಥರು ನದಿಗೆ ಇಳಿಯದಂತೆ ಜಿಲ್ಲಾಡಳಿತ …

Read More »

ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪತ್ರ ನೀಡುತ್ತಿರುವುದಕ್ಕೆ ಯಡಿಯೂರಪ್ಪ ಅವರಿಗೆ ಕೃತಜ್ಞತೆ

ಕೋಲಾರ: ಎಂಎಲ್‍ಸಿ ಆಕಾಂಕ್ಷಿಯಾಗಿದ್ದ ನನಗೆ ಮಂಡಳಿ ಅದ್ಯಕ್ಷರನ್ನಾಗಿ ಮಾಡಿದ್ದು, ಪ್ರಾರಂಭದಲ್ಲಿ ಇಷ್ವವಿರಲಿಲ್ಲ. ಆದರೆ ಇದೀಗ ತೃಪ್ತಿ ತಂದಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೋಲಾರದಲ್ಲಿ ಹೇಳಿದ್ದಾರೆ.ಕೋಲಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ಶಾಸಕನಾಗಿ, ಎಂಎಲ್‍ಸಿ ಆಗಬೇಕೆಂಬುವ ಆಸೆ ಇತ್ತು. ಆದರೆ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಿದ್ದು, ಇದೀಗ ತೃಪ್ತಿತಂದಿದೆ ಎಂದರು. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಯಡಿಯೂರಪ್ಪ …

Read More »

ಕೊಡಗಿಗೆ ಈ ವರ್ಷವು ಮಹಾಮಳೆಯ ಆತಂಕ ಎದುರಾಗಿದೆ.

ಮಡಿಕೇರಿ: ಕೊಡಗಿಗೆ ಮತ್ತೆ ಜಲಗಂಡಾಂತರ ಎದುರಾಗಿದೆ. ಎರಡು ವರ್ಷದ ಹಿಂದೆ ಭಾರೀ ಮಳೆಯಿಂದಾಗಿ ನಡೆದಿದ್ದ ಭೂಕುಸಿತ ಮತ್ತೆ ಮರುಕಳಿಸುವಂತ ಲಕ್ಷಣ ದಟ್ಟವಾಗಿದೆ.ಕೊಡಗು ಜಿಲ್ಲೆಯಾದ್ಯಂತ ಎಡಬಿಡೆ ಸುರಿಯತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸುವ ಸಾಧ್ಯತೆ ಇದೆ. ಕೊಡಗಿನಲ್ಲಿ ಹಲವು ಗುಡ್ಡಗಳು ಕುಸಿಯುವುದು ಬಹುತೇಕ ಸ್ಪಷ್ಟವಾಗಿದ್ದು, ಎರಡು ದಿನಗಳ ಮಳೆಗೆ 40 ಪ್ರದೇಶದಲ್ಲಿ ಈಗಾಗಲೇ ಗುಡ್ಡ ಕುಸಿತವಾಗಿದೆ. ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಗಳ ಸಂಪರ್ಕ …

Read More »

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ

ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‍ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ …

Read More »