Breaking News

ಜಿಲ್ಲೆ

ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ

ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ ಇರುವುದು ದೃಢಪಟ್ಟಿದ್ದು,ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಂಪರ್ಕಕ್ಕೆ ಬಂದಿದ್ದ ಜನರಿಗೆ ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಲಾಗಿದೆ.ಸಿಎಂ ಕುಟುಂಬದ ಎಲ್ಲ ಸದಸ್ಯರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕುಟುಂಬ ಸದಸ್ಯರಿಗೆ ಬಿಬಿಎಂಪಿ ಆಂಟಿಜೆನ್ ಟೆಸ್ಟ್ ಮಾಡ್ತಿದೆ.   ಸಿಎಂ ನಿವಾಸದ …

Read More »

ಸಿಎಂ ತವರು ಶಿವಮೊಗ್ಗದಲ್ಲಿ ಮತ್ತೊಬ್ಬ ಶಾಸಕರಿಗೆ ಕೋವಿಡ್-19 ಪಾಸಿಟಿವ್

ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ …

Read More »

ಜಿಲ್ಲಾಡಳಿತ ಮತ್ತು ಬಿಮ್ಸ್ ಎಡವಟ್ಟು: ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ?

ಬೆಳಗಾವಿ: ಜಿಲ್ಲಾಡಳಿತ ಮತ್ತು ಬಿಮ್ಸ್ ಆಸ್ಪತ್ರೆ ಎಡವಟ್ಟಿನಿಂದ ಕೊವಿಡ್ ವಿಚಾರದಲ್ಲಿ ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ ಎಂಬ ಆತಂಕ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ನಿತ್ಯವೂ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ ಇನ್ನೂರು, ಮುನ್ನೂರರ ಗಡಿ ದಾಟುತ್ತಿದೆ. ಜಿಲ್ಲಾಡಳಿತ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾದ್ರೂ ಮುಚ್ಚಿಡುವ ಪ್ರಯತ್ನ? ಮಾಡುತ್ತಿದೆ. ಮೃತದೇಹ ಸಾಗಿಸುವ ವಾಹನದ ಡ್ರೈವರ್ ಹೇಳುವಂತೆ ನಿತ್ಯವೂ ಹದಿನೈದರಿಂದ ಹದಿನೆಂಟು ಸೋಂಕಿತರು ಮೃತಪಡುತ್ತಿದ್ದಾರಂತೆ. ವಯಸ್ಸಾದವರು ಆಸ್ಪತ್ರೆಗೆ ದಾಖಲಾದ್ರೂ ಚಿಕಿತ್ಸೆ …

Read More »

ಸಿಎಂ ಬಿಎಸ್​ವೈ ಮಗ ವಿಜಯೇಂದ್ರಗೆ ಕೊರೋನಾ ನೆಗೆಟಿವ್, ಮಗಳಿಗೆ ಪಾಸಿಟಿವ್

ಬೆಂಗಳೂರು (ಆ.3): ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್​ ಬಂದ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲ ದಿನಗಳಿಂದ ಅವರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ಅವರ ಸಂಪರ್ಕಕ್ಕೆ ಬಂದವರನ್ನು ಹೋಂ ಕ್ವಾರಂಟೈನ್​ ಕೂಡ ಮಾಡಲಾಗುತ್ತಿದೆ. ಈ ಮಧ್ಯೆ ಬಿಎಸ್​ವೈ ಮಗನಿಗೆ ಕೊರೋನಾ ನೆಗೆಟಿವ್​ ಬಂದರೆ, ಮಗಳಿಗೆ ಪಾಸಿಟಿವ್​ ಬಂದಿದೆ. ಭಾನುವಾರ ಟ್ವೀಟ್​ ಮಾಡಿದ್ದ ಬಿಎಸ್​ವೈ ತಮಗೆ ಕೊರೋನಾ ಪಾಸಿಟಿವ್​ ಇರುವುದಾಗಿ ಹೇಳಿಕೊಂಡಿದ್ದರು. ನನ್ನ …

Read More »

ರಾಜ್ಯದಾದ್ಯಂತ ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಇದೇ ಅಗಸ್ಟ್ 10 ರಂದು ಧರಣಿ

ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಇದೇ ಅಗಸ್ಟ್ 10 ರಂದು  ‘ಕಾರ್ಪೊರೇಟ್ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗಿ ಬಂಡವಾಳಗಾರರಿಗೆ, ಕಾರ್ಪೊರೇಟ್ ಕಂಪನಿಗಳಿಗೆ …

Read More »

ರಾಜ್ಯದಲ್ಲಿ ಕೊರೋನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ

ಬೆಂಗಳೂರು : ಭಾನುವಾರವೂ ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು,ಇಂದು 5,532 ಜನರಿಗೆ ಕೋವಿಡ್​-19 ಸೋಂಕು ತಗುಲಿದೆ. ಇಂದು84 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತ ಪ್ರಕರಣಗಳ ಸಂಖ್ಯೆ 1,34,819 ಆಗಿದ್ದು, ಇದರಲ್ಲಿ 57,725 ಜನರು ಬಿಡುಗಡೆಯಾಗಿದ್ದರೆ, 74,590 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 2,496 ಜನರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರು ನಗರದಲ್ಲಿ ಕೋವಿಡ್‌ ಮಹಾಮಾರಿಯ ಆರ್ಭಟ ಎಂದಿನಂತೆ ಮುಂದುವರಿದಿದ್ದು, 2105 ಹೊಸ ಪ್ರಕರಣಗಳು ವರದಿಯಾಗಿವೆ. …

Read More »

ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್‌……….

ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಡಿಯೂರಪ್ಪನವರು ಪ್ರತಿ ದಿನ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರತಿ ದಿನ ಸಿಎಂ ಭೇಟಿಗೆ ಗಣ್ಯರು ಸಹ ಆಗಮಿಸುತ್ತಿದ್ದರು. ಹೀಗಾಗಿ ಪ್ರತಿ ಭಾನುವಾರ ಸಿಎಂಗೆ ಕೋವಿಡ್‌ ಪರೀಕ್ಷೆ ನಡೆಯುತ್ತಿತ್ತು. ನಿನ್ನೆ ನಡೆದ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಭಾನುವಾರ ರಾತ್ರಿ ಟ್ವೀಟ್‌ ಮಾಡಿದ್ದ ಸಿಎಂ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲವೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಕೋರಿದ್ದಾರೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆಗ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. …

Read More »

ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆ

ಗೋಕಾಕ: ಕಳೆದ ಕೆಲವು ದಿನಗಳಿಂದ ತನ್ನ ಆರ್ಭಟ ನಡೆಸಿದ್ದ ಕರೋನಾ ಮಹಾಮಾರಿಯು ಇಂದು ಸ್ವಲ್ಪ ತಗ್ಗಿದೆ. ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಕುಸಿತ ಖಂಡಿದ್ದು, ತಾಲೂಕಿನಲ್ಲಿ ೨ ಸೋಂಕು ಮಾತ್ರ ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು. {LAXMINEWS}ಯೊಂದಿಗೆ ಮಾತನಾಡಿದ ಅವರು  ತಾಲ್ಲೂಕಿನಲಿ ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರಿಗೆ ಕೋವಿಡ್ …

Read More »

ಲಾಕ್‌ಡೌನ್‌ನಲ್ಲೂ 100 ಯಶಸ್ವಿ ಡಯಾಲಿಸಿಸ್‌

ಬೆಳಗಾವಿ: ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ರೋಟರಿ-ಕೆಎಲ್‌ಇ ಡಯಾಲಿಸಿಸ್ ಕೇಂದ್ರದಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲೂ 100 ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್‌ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈಚೆಗೆ ವೈದ್ಯರ ತಂಡಕ್ಕೆ ಶುಭ ಹಾರೈಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಮೂತ್ರಪಿಂಡ ತಜ್ಞ ಡಾ.ವಿಜಯಕುಮಾರ ಪಾಟೀಲ, ‘ಮೂತ್ರಪಿಂಡ ಕಾಯಿಲೆ ಇರುವ ರೋಗಿಗಳಿಗೆ ಡಯಾಲಿಸಿಸ್‌ ಕಡ್ಡಾಯವಾಗಿ ಬೇಕಾಗಿರುವ ಚಿಕಿತ್ಸೆಯಾಗಿದೆ. ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರೋಗಿಗಳು ಹೆದರುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ಧೈರ್ಯವಾಗಿ ಆಸ್ಪತ್ರೆಗೆ …

Read More »