ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಗೂಗಲ್ ತನ್ನೆಲ್ಲ ಉದ್ಯೋಗಿಗಳಿಗೆ ಮುಂದಿನ ವರ್ಷ ಜೂನ್ ಅಂತ್ಯದ ವರೆಗೆ ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಭಾರತ ಸೇರಿ ವಿಶ್ವಾದ್ಯಂತ ಗೂಗಲ್ ಹಾಗೂ ಅಲ್ಫಾಬೆಟ್ ಸಂಸ್ಥೆಯ 2 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಇದು ಅನುಕೂಲವಾಗಲಿದ್ದು, 5 ಸಾವಿರಕ್ಕೂ ಕಡಿಮೆ ಉದ್ಯೋಗಿಗಳಿರುವ ಕಚೇರಿಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದೆ. ಈ ಕುರಿತು …
Read More »ರಾಜಕೀಯ ನಾಯಕರು, ಸಿನಿಮಾ ನಟರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ- ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು: ರಾಜಕೀಯ ನಾಯಕರು, ಸಿನಿಮಾ ನಟರೇ ಕೊರೊನಾ ಮಾರ್ಗಸೂಚಿ, ನಿಯಮ ಉಲ್ಲಂಘಿಸುತ್ತಿದ್ದಾರೆ. ಆದರೂ ಯಾಕೆ ಕ್ರಮ ಕೈಗೊಂಡಿಲ್ಲ ಅಂತ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರಾಕರಿಸಿದ್ದು, ಸಂಸದೆ ಶೋಭಾ ಕರಂದ್ಲಾಜೆ, ನಟ ದರ್ಶನ್ಗೆ ಯಾಕೆ ಅವಕಾಶ ಕೊಟ್ರಿ. ಸೆಲೆಬ್ರಿಟಿಗಳು, ರಾಜಕಾರಣಿಗಳಿಗೆ ಪ್ರತ್ಯೇಕ ಕಾನೂನು ಇದೆಯಾ ಎಂದು ಮುಜರಾಯಿ ಇಲಾಖೆಗೆ ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದ್ದಾರೆಕೆಂಪೇಗೌಡ ಪುತ್ಥಳಿ ಶಿಲಾನ್ಯಾಸ ಕಾರ್ಯಕ್ರಮ, ಡಿಕೆಶಿ ಪುತ್ರಿ ವಿವಾಹ ನಿಶ್ಚಿತಾರ್ಥ …
Read More »‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ : H.D.K.
ಬೆಂಗಳೂರು: ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೊರೊನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ. ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ, 24 ಶಾಸಕರಿಗೆ ನಿಗಮ …
Read More »ಬೆಂಗಳೂರು ಹೋಮ್ ಐಸೋಲೇಷನ್ಗೆ ಹೊಸ ರೂಲ್ಸ್
ಬೆಂಗಳೂರು: ಸಿಲಿಕಾನ್ ಸಿಟಿ ಅರ್ಧ ಲಕ್ಷ ಕೊರೊನಾ ಪ್ರಕರಣಗಳ ಮೈಲಿಗಲ್ಲಿಗೆ ಸನಿಹದಲ್ಲಿದ್ದು, ನಗರದಲ್ಲಿ ಕಂಟೈನ್ಮೆಂಟ್ ಝೋನ್ಗಳ ಸಂಖ್ಯೆ ಇದೀಗ 15 ಸಾವಿರ ದಾಟಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರ ಕೊರೊನಾ ಹತ್ತಿಕ್ಕಲು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ನಿಯಂತ್ರಣಕ್ಕೆ ಸಿಗದೆ ಗಲ್ಲಿಗಲ್ಲಿಯಲ್ಲಿ ಆರ್ಭಟಿಸುತ್ತಿರುವ ಕೊರೊನಾ ಹತ್ತಿಕ್ಕುವ ನೆಪದಲ್ಲಿ ಸರ್ಕಾರ ದಿನಕ್ಕೊಂದು ನಿಯಮ ಜಾರಿಗೆ ತರುತ್ತಿದ್ದು, ಇಂದು ಸಹ ಹಲವು ರೂಲ್ಸ್ ಜಾರಿ ಮಾಡಲಾಗಿದೆ. ಹೋಮ್ ಐಸೋಲೇಷನ್ ಕುರಿತು ನಿಯಮ ರೂಪಿಸಿದ್ದು, …
Read More »ರಾಜ್ಯದಲ್ಲಿ 1 ಲಕ್ಷ ದಾಟಿದ ಸೋಂಕು – 1 ಲಕ್ಷ ಏರಿದ್ದು ಹೇಗೆ? ಟಾಪ್ 10 ಕಾರಣ ಇಲ್ಲಿದೆ
ಬೆಂಗಳೂರು: ರಾಜ್ಯದ ಜನತೆ ಪಾಲಿಗೆ ಕೊರೊನಾ ಪ್ರಕರಣ 1 ಲಕ್ಷ ದಾಟಿದ ದುರ್ದಿನ. ಒಂದೇ ದಿನ 5,324 ಮಂದಿಗೆ ಸೋಂಕು ಬರುವ ಮೂಲಕ ದಾಖಲೆ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಕೊರೋನಾ ಹೆಮ್ಮಾರಿ ಕಾಣಿಸಿಕೊಂಡು ಇಂದಿಗೆ ಬರೋಬ್ಬರಿ 150 ದಿನ. ಮಾರ್ಚ್ 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಕಾಣಿಸಿಕೊಂಡಿತ್ತು. ಮೊದಲ ಮೂರು ತಿಂಗಳು ತೆವಳುತ್ತಾ ಹರಡಿದ್ದ ಕೊರೊನಾ ಸೋಂಕು, ನಂತರ ತೋರಿಸಿದ್ದು ತನ್ನ ರಾಕ್ಷಸಿ ಸ್ವರೂಪ. ಮೊದ ಮೊದಲು ರಾಜ್ಯ ಸರ್ಕಾರ ಕೊರೊನಾ …
Read More »ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ
ಚಾಮರಾಜನಗರ: ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಜಮೀನೊಂದರಲ್ಲಿ ಎಡವಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಯಾಲಕ್ಕೂರು ಗ್ರಾಮದಲ್ಲಿ ನಡೆದಿದೆ. ಶಂಕರ್(22) ಮೃತ ಯುವಕ. ಕೊರೊನಾ ಲಾಕ್ಡೌನ್ ಕಾರಣದಿಂದ ಯಾರೂ ಗುಂಪುಗೂಡದಂತೆ ನಿನ್ನೆ ನಿಷೇಧಾಜ್ಞೆ ಹೇರಲಾಗಿತ್ತು. ಈ ಹಿನ್ನೆಲೆ ನಿನ್ನೆ ಸಂಜೆ ಕುದೇರು ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಯುವಕರ ಗುಂಪೊಂದು ಗ್ರಾಮದ ಪಡಸಾಲೆ ಮೇಲೆ ಗುಂಪಾಗಿ ಕುಳಿತಿದ್ದು, ಪೊಲೀಸ್ ಜೀಪ್ ಕಂಡೊಡನೆ ಗುಂಪಿನಲ್ಲಿದ್ದ …
Read More »ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಆಗ ವೈದ್ಯರು ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು …
Read More »ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ : ಮೂರು ದಿನದಿಂದ ಇದೇ ಟ್ಯಾಂಕ್ ನ ನೀರನ್ನು ನಿವಾಸಿಗಳು ಇದೇ ನೀರನ್ನು ಸೇವಿಸಿದ್ದಾರೆ.
ಬೆಂಗಳೂರು: ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕನ್ಯೂ ಟೌನ್ ನ ನಾಲ್ಕನೆ ಹಂತದಲ್ಲಿ ಘಟನೆ ನಡೆದಿದೆ. ಶುಕ್ರವಾರದಿಂದ ಕಾಣೆಯಾಗಿದ್ದ ಮಹಿಳೆ ಅಪಾರ್ಟ್ಮೆಂಟ್ ನ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದ್ದಾರೆ. ಶುಕ್ರವಾರ ಕಾಣೆಯಾದ ನಂತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹಣಕಾಸಿನ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ಆದರೆ ಕಳೆದ ಮೂರು …
Read More »ಕರ್ನಾಟಕದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ
ಬೆಂಗಳೂರು: ಕರ್ನಾಟಕದಲ್ಲಿ ಇಂದು 5324 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊವಿಡ್ ದೃಢಪಟ್ಟಿರುವುದು ಖಚಿತವಾಗಿದೆ. ಇಂದಿನ ವರದಿ ಬಳಿಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46923ಕ್ಕೆ ಏರಿಕೆಯಾಗಿದೆ. ನಗರದಲ್ಲಿಂದು 784 ಜನರು ಗುಣಮುಖರಾಗಿದ್ದು, 26 ಜನ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 917. ರಾಜ್ಯದಲ್ಲಿಂದು 75 ಮಂದಿ ಕೊರೊನಾಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ಸೋಂಕಿತರ ಮಾಹಿತಿ
ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ವೈರಸ್ ಕ್ರೌರ್ಯ ಮುಂದುವರೆದಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 155 ಸೊಂಕಿತರು ಪತ್ತೆಯಾಗಿದ್ದಾರೆ.ಆದರೆ ಇವತ್ತು ಒಂದೇ ದಿನ 38 ಜನ ಡಿಸ್ಚಾರ್ಜ್. ಇಂದು ಮಹಾಮಾರಿ ವೈರಸ್ ಗೆ 6 ಜನ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರುಗಟ್ಟಲೇ ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಸಿಂಗಲ್ ,ಡಬಲ್,ತ್ರಿಬಲ್ ಸೆಂಚ್ಯುರಿ ಬಾರಿಸಿರುವ ಈ ಒಂದೇ ದಿನ 155 ಜನರಿಗೆ ವಕ್ಕರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿಗೆ ಸೊಂಕಿತರ ಸಂಖ್ಯೆ 2304, ಮರಣದ ಸಂಖ್ಯೆ …
Read More »
Laxmi News 24×7