ಬೆಳಗಾವಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ಮಚ್ಚೆ ಮಾರುತಿ ಗಲ್ಲಿ ನಿವಾಸಿ ಅಕ್ಷಯ ಶಂಕರ ಚೌಗಲೆ, ಬಸವನಕುಡಚಿ ನಿವಾಸಿಗಳಾದ ಮಹೇಶ ಭಾವುಕನ್ನಾ ಅನಗೋಳಕರ, ಆಕಾಶ ಭಾವುಕನ್ನಾ ಅನಗೋಳಕರ ಬಂಧಿತರು. ವಾಘವಾಡೆ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಠಾಣೆಗೆ ಕರೆದಂತು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 6,50,000 ಮೌಲ್ಯದ 18 ದ್ವಿಚಕ್ರ …
Read More »ಬರೆಯಲು ಜಾಗವಿಲ್ಲವೆಂದು ಬೇರೆ ಚೀಟಿ ಕೇಳಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ?
ಚಿಕ್ಕಮಗಳೂರು: ಈ ಚೀಟಿಯಲ್ಲಿ ಬರೆಯಲು ಜಾಗ ಇಲ್ಲ ಬೇರೆ ಚೀಟಿ ಬರೆಸಿಕೊಂಡು ಬನ್ನಿ ಎಂದಿದ್ದಕ್ಕೆ ರೋಗಿಯ ಜೊತೆ ಬಂದಿದ್ದ ಯುವಕ, ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪವೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಹಮದ್ ಎಂಬ ಹುಡುಗ ವಯಸ್ಸಾದ ವೃದ್ಧರೊಬ್ಬರನ್ನು ಸಂತೋಷ್ ಎಂಬ ವೈದ್ಯರ ಕೊಠಡಿ ಮುಂಭಾಗ ಕೂರಿಸಿ ವೈದ್ಯರ ಬಳಿ ಚೀಟಿ ತೆಗೆದುಕೊಂಡು ಹೋಗಿದ್ದಾನೆ. ಈ ವೇಳೆ ವೈದ್ಯ …
Read More »ಬೆಳಗಾವಿಯಲ್ಲೂ ಲಾಕ್ ಡೌನ್ :ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹ…..
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತಲಿದ್ದು, ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡುವಂತೆ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹಿಸಿದೆ. ಈ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹೀರೇಮಠ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಮನವಿ ಸಲ್ಲಿಸಿದೆ. ಬೆಳಗಾವಿ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬೆಳಗಾವಿಯಲ್ಲಿಯೂ ಲಾಕ್ ಡೌನ್ …
Read More »ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 9 2ಜನರಿಗೆ ಕೊರೋನಾ ಸೋಂಕು
ಬೆಳಗಾವಿ – ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡುವ ಮುನ್ನವೇ ಬೆಳಗಾವಿ ಜಿಲ್ಲೆಯ ಕೊರೋನಾ ಸೋಂಕಿತರ ವಿವರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ಪ್ರಕಾರ ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 92ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನು ಹೊಸಕಿ ಹಾಕಿದ್ದು, ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಟ್ಟಿಯಲ್ಲಿ ಸೋಂಕಿತರ ಹೆಸರು, ವಿಳಾಸ, ಸಂಪರ್ಕ ಸಂಖೆಯ ಎಲ್ಲವೂ ನಮೂದಾಗಿದ್ದು, ಎಲ್ಲ ನಿಯಮಗಳನ್ನು ಮೀರಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದೆ. …
Read More »ಬೆಡ್ ಸಿಗದೆ ಕೊರೊನಾಗೆ ಪೌರ ಕಾರ್ಮಿಕ ಮಹಿಳೆ ಸಾವು
ಬೆಂಗಳೂರು: ಕೊರೊನಾ ವೈರಸ್ ಭಯ, ಲಾಕ್ಡೌನ್ ನಡುವೆಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದ ಪೌರ ಕಾರ್ಮಿಕ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ 5-6 ಆಸ್ಪತ್ರೆಗಳಿಗೆ ಅಲೆದಾಡಿದರೂ, ಬೆಡ್ ಸಿಕ್ಕಿಲ್ಲ. ಹೀಗಾಗಿ ಕೊರೊನಾ ವಾರಿಯರ್ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಳದ ವಿಶ್ವನಾಥ ನಾಗನಹಳ್ಳಿಯ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಕಲಿದ್ದು, ಚಿಕಿತ್ಸೆಗಾಗಿ ಮಹಿಳೆ ಐದಾರು ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದರೂ ಎಲ್ಲಿಯೂ ಬೆಡ್ ಸಿಕ್ಕಿಲ್ಲ. ಐದು ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ ಎಂದು ಹೇಳಿ ಕಳುಹಿಸಲಾಗಿದೆ. …
Read More »ಇಂದಿನ ಸಂಜೆಯ ಹೆಲ್ತ ಬುಲೆಟಿನ್ ನಲ್ಲಿ ಬೆಳಗಾವಿಗೆ ಕಾದಿದೆಯ ಬಿಗ್ ಶಾಕ….?
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ ಈ ವರೆಗೆ ಕಿಲ್ಲರ್ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು ಇಂದು ಗುರುವಾರವೂ ಮಹಾಮಾರಿಯ ಸಂಕಟ ಮುಂದುವರೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ 602 ಸೊಂಕಿತರು ಪತ್ತೆಯಾಗಿದ್ದಾರೆ,ಇಂದು ಗುರುವಾರ ಸಂಜೆ ಬಿಡುಗಡೆಯಾಗುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 70 ಕ್ಕೂ ಹೆಚ್ಚು ಜನ ಸೊಂಕಿತರು ಪತ್ತೆಯಾಗುವ ಸಾದ್ಯತೆ ಇದೆ. https://youtu.be/B9KE2v3hacw ಬೆಳಗಾವಿ …
Read More »ಕೊರೋನಾ ಸೋಂಕಿತರಿಗೆ ಇನ್ನು ಮುಂದೆ ಸಾರ್ವಜನಿಕ ಆಸ್ಪತ್ರೆ ಗೋಕಾಕದಲ್ಲಿ ಚಿಕಿತ್ಸೆ ಪ್ರಾರಂಭ
ಗೋಕಾಕ :ನಾಳೆ ಶುಕ್ರವಾರದಿಂದ ಕೊರೋನಾ ಸೋಂಕಿತರಿಗೆ ಗೋಕಾಕ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವದು ಸರಕಾರ ಹಾಗೂ ಇಲಾಖೆಯ ನಿರ್ದೇಶನದಂತೆ ತಾಲೂಕಿನ ಕೊರೋನಾ ಸೋಂಕು ದೃಡಪಟ್ಟವರನ್ನು ಶುಕ್ರವಾರದಿಂದ ಸ್ಥಳೀಯ ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವದು ಇದಕ್ಕಾಗಿ ಈಗಾಗಲೇ ಎಲ್ಲ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಆರೋಗ್ಯ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 100 ಹಾಸಿಗೆ ಉಳ್ಳ ಸುಸಜ್ಜಿತ ಪ್ರತ್ಯೇಕ ವಾರ್ಡನ್ನು ಸಿದ್ದಗೊಳಿಸಲಾಗಿದ್ದು, …
Read More »ಗುಡಿ ಗಂಡಾರಗಳಲ್ಲಿ ದೇವರಿಲ್ಲ. ಈ ದೇಶವನ್ನು ಕಟ್ಟಿದ ಶ್ರಮಜೀವಿಗಳೇ ನಿಜವಾದ ದೇವರುಗಳು: ಆರ್.ಎಸ್.ದರ್ಗೆ
ಬೆಳಗಾವಿ: ಗುಡಿ ಗಂಡಾರಗಳಲ್ಲಿ ದೇವರಿಲ್ಲ. ಈ ದೇಶವನ್ನು ಕಟ್ಟಿದ ಶ್ರಮಜೀವಿಗಳೇ ನಿಜವಾದ ದೇವರುಗಳು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಹೇಳಿದ್ದಾರೆ. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ವತಿಯಿಂದ ಜುಲೈ 27 ರÀವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗುರುವಾರದಂದು ಅಲೆಮಾರಿ ಬುಡಕಟ್ಟು ಜನಾಂಗದ ಹೋರಾಟಗಾರ ಮಲ್ಲೇಶ ಹೆಳವರ ಅವರನ್ನು ಶ್ರೀನಗರದಲ್ಲಿಯ ಅವರ ನಿವಾಸದಲ್ಲಿ ಸತ್ಕರಿಸಿ ಅವರು ಮಾತನಾಡಿದರು. …
Read More »ಬೆಂಗಳೂರಿನಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ತೆರೆಯಲು ಮುಂದಾದ ಸರ್ಕಾರ
ಬೆಂಗಳೂರು,ಜು.16- ಕೊರೋನಾ ಮಟ್ಟಹಾಕಲು ಕಠಿಣ ಕ್ರಮಗಳನ್ನು ತೆಗೆದುಕೊಂಡು ದಿಟ್ಟ ಹೋರಾಟ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ ನಗರದಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕೋವಿಡ್-19 ನಿರ್ವಹಣೆಯ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು ನಿನ್ನೆಯಷ್ಟೇ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಿದ್ದು, ಸಭೆಯಲ್ಲಿ ಬೆಂಗಳೂರು ನಗರದಲ್ಲಿ 2 ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಈಗಾಗಲೇ ನಗರದಲ್ಲಿ 8 ಕೋವಿಡ್ ಕೇರ್ ಕೇಂದ್ರಗಳು ಅಸ್ತಿತ್ವದಲ್ಲಿದ್ದು, …
Read More »ಜಿಲ್ಲಾಸ್ಪತ್ರೆಯಲ್ಲಿ 14 ಮಂದಿಗೆ ಕೊರೊನಾ ಪಾಸಿಟಿವ್- ಆಸ್ಪತ್ರೆ ಸೀಲ್ ಡೌನ್…..
ಉಡುಪಿ: ಜಿಲ್ಲಾ ಸರ್ಕಾರಿ ಆಸ್ಪತ್ರೆಗೂ ಕೋವಿಡ್ 19 ಆವರಿಸಿದ್ದು, ಜಿಲ್ಲಾಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು, ರೋಗಿಗಳು, ಸಿಬ್ಬಂದಿ ಸೇರಿ ಒಟ್ಟು 14 ಮಂದಿಗೆ ಸೋಂಕಾಗಿದೆ ಎಂಬ ಮಾಹಿತಿಯಿದೆ. ಗ್ಯಾಂಗ್ರಿನ್ ಸಮಸ್ಯೆಗೆ ದಾಖಲಾಗಿದ್ದ ರೋಗಿಗೆ ಕೊರೊನಾ ಆವರಿಸಿದ್ದು, ಶಸ್ತ್ರಚಿಕಿತ್ಸೆಯ ನಂತರ ಜ್ವರಕ್ಕೆ ತುತ್ತಾಗಿದ್ದರು. ಈತನ ವಾರ್ಡ್ನಲ್ಲಿದ್ದ ಒಟ್ಟು 9 ರೋಗಿಗಳಿಗೂ ಸೋಂಕು ತಗುಲಿದೆ. ಚಿಕಿತ್ಸೆ ನೀಡಿದ ಇಬ್ಬರು ವೈದ್ಯರು, ಓರ್ವ ನರ್ಸ್ ಗೆ ಕೊರೊನಾ ಅಂಟಿದೆ. ಫ್ಲೋರ್ ಸ್ವಚ್ಛತಾ ಕೆಲಸ …
Read More »
Laxmi News 24×7