Breaking News

ಜಿಲ್ಲೆ

ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,  ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು ತಗುಲಿದೆ. ರಾಜ್ಯಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಮಹಿಳಾ ಆಂಕರ್ ಗಳಿಗೆ ಮತ್ತು ಇಬ್ಬರು ಕ್ಯಾಮರಾ ಮನ್ ಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಅವರನ್ನು ನಿಗದಿತ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸಿ ಕ್ವಾರಂಟೈನ್ ಗೆ …

Read More »

ರಾಜ್ಯಾದ್ಯಂತ ಜುಲೈ 4 ರಿಂದ 7 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಹವಾಮಾನ ಇಲಾಖೆ ರಾಜ್ಯದ ಜನತೆಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಇನ್ನೂ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, …

Read More »

ಬೆಳಗಾವಿಯಲ್ಲಿ ಕರ್ತವ್ಯ ನಿಭಾಯಿಸಿದ ಪೊಲೀಸ್ ಪೇದೆ ಗಳಿಗುಕೊರೋನ್ ಸೋಂಕು..

ಬೆಳಗಾವಿ- ನಿಪ್ಪಾಣಿಯ ಕುಗನೊಳ್ಳಿ,ರಾಯಬಾಗ ಸೇರಿದಂತೆ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ ಮೂವರು ಪೋಲೀಸ್ ಪೇದೆಗಳಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಮೂವರನ್ನು ಐಸೋಲೇಟ್ ಮಾಡಲಾಗಿದೆ. ಸೊಂಕು ಪತ್ತೆಯಾದ ಮೂವರು ಡಿ ಆರ್ ಪೇದೆಗಳು ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ್ದು ಈ ಮೂವರು ಪೇದೆಗಳು ಬೆಳಗಾವಿ ನಗರದ ಪೋಲೀಸ್ ಹೆಡ್ ಕ್ವಾಟರ್ಸ್ ನಲ್ಲಿ ವಾಸವಾಗಿದ್ದರು. ಈ ಮೂವರು ಪೋಲೀಸ್ ಪೇದೆಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು …

Read More »

ಪ್ರತಿಭಟನೆಯಲ್ಲಿ ಸಮಾಜಿಕ ಅಂತರ ಪಾಲಿಸದೇ ನಿರ್ಲಕ್ಷತೆಯನ್ನ ವಹಿಸಿದ್ದಾರೆ.

ಕೋಲಾರ: ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ವರ್ತಕರಿಂದ ಪ್ರತಿಭಟನೆಯನ್ನು ಮಾಡುತ್ತಿದ್ದು, ಪ್ರತಿಭಟನೆಯಲ್ಲಿ ಕೋವಿಡ್ ನಿಯಮಗಳು ಉಲ್ಲುಂಘನೆ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಸಮಾಜಿಕ ಅಂತರ ಪಾಲಿಸದೇ ನಿರ್ಲಕ್ಷತೆಯನ್ನ ವಹಿಸಿದ್ದಾರೆ. ಮಾರುಕಟ್ಟೆಯ ಸೆಸ್ ಪಾವತಿಸುವುದಕ್ಕೆ ವಿರೋಧಿಸಿ ಪ್ರತಿಭಟನೆ ಮಾಡಿತ್ತಿದ್ದು, ಕೃಷಿ ಉತ್ಪನ್ನಗಳ ಖರೀದಿಗಾಗಿ ವರ್ತಕರು ಸಮಿತಿಗೆ ಪಾವತಿಸುವ ಸೆಸ್ ಶುಲ್ಕ ಮಾಡಿದ್ದಾರೆ. ಕೋವಿಡ್ ಸಮಸ್ಯೆ ಬಗೆಹರಿಯುವರೆಗು ಸೆಸ್ ಪಾವತಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಸೆಸ್ ಸಂಗ್ರಹ ನಿಲ್ಲಿಸಿದ್ದ ಎಪಿಎಂಸಿ ಕೊರೋನಾ ಮುಂದುವರೆದಿದ್ದರೂ …

Read More »

ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಧುಗಿರಿ: ತಾಲ್ಲೂಕಿನಲ್ಲಿ 12 ಜನರಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 38 ವರ್ಷದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಎಲ್ಲರ ನಿದ್ದೆಗೆಡಿಸಿದೆ. ತಾಲ್ಲೂಕಿನ ಶ್ರಾವಂಡನಹಳ್ಳಿಯ 26 ವರ್ಷದ ಮಹಿಳೆ, ಗೊಂದಿಹಳ್ಳಿಯ 65 ವರ್ಷದ ವೃದ್ದ, ಚಿಕ್ಕದಾಳವಟ್ಟದ 63 ವರ್ಷದ ವೃದ್ಧ, ಅಮರಾವತಿಯ 22 ವರ್ಷ ಯುವಕ, ಆಚೇನಹಳ್ಳಿಯ 8 ವರ್ಷದ ಬಾಲಕ, ಮಧುಗಿರಿ …

Read More »

ರುದ್ರ-ರಮಣೀಯ ತಾಣ ದೇವರಮನೆ ಗುಡ್ಡಕ್ಕೆ ತಾತ್ಕಾಲಿಕವಾಗಿ ಪ್ರವಾಸಿಗರನ್ನ ಸಂಪೂರ್ಣ ನಿಷೇಧ…….

ಚಿಕ್ಕಮಗಳೂರು: ಕೊರೊನಾ ಮಹಾಮಾರಿಯಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ರುದ್ರ-ರಮಣೀಯ ತಾಣ ದೇವರಮನೆ ಗುಡ್ಡಕ್ಕೆ ತಾತ್ಕಾಲಿಕವಾಗಿ ಪ್ರವಾಸಿಗರನ್ನ ಸಂಪೂರ್ಣ ನಿಷೇಧಿಸಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ರುದ್ರ-ರಮಣೀಯ ತಾಣ ದೇವರಮನೆ ಗುಡ್ಡದ ಸೌಂದರ್ಯ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿತ್ತು. ಲಾಕ್‍ಡೌನ್ ಸಡಿಲವಾಗುತ್ತಿದ್ದಂತೆ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜನಜಾತ್ರೆ ಏರ್ಪಡುತ್ತಿತ್ತು. ಅದರಲ್ಲೂ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡಕ್ಕೆ ಭಾರೀ ಪ್ರವಾಸಿಗರು ಭೇಟಿ ಕೊಡುತ್ತಿದ್ದರು. ದೇವರಮನೆ ಗುಡ್ಡಕ್ಕೆ ಬರುತ್ತಿದ್ದ ಪ್ರವಾಸಿಗರು ಎಲ್ಲೆಂದರಲ್ಲಿ ಮಧ್ಯದ ಬಾಟಲಿ ಹಾಗೂ ಪ್ಲಾಸ್ಟಿಕ್, …

Read More »

ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳದಿರಲು ನಿರ್ಧಾರಿಸಿದ್ದಾರೆ.

ಬೆಂಗಳೂರು: ಹೆಮ್ಮಾರಿ ಕೊರೊನಾದಿಂದ ಈಗಾಗಲೇ ಅನೇಕ ನಟರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೀಗ ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ತಮ್ಮ ಹುಟ್ಟುಹಬ್ಬಕ್ಕೂ ಮುನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೇ ತಿಂಗಳ 12ರಂದು ಶಿವಣ್ಣ ಅವರ ಹುಟ್ಟುಹಬ್ಬವಿದೆ. ಪ್ರತಿ ವರ್ಷ ಸಾವಿರಾರು ಅಭಿಮಾನಿಗಳು ಶಿವಣ್ಣ ಅವರ ಮುಂದೆ ಜಮಾಯಿಸುತ್ತಿದ್ದರು. ಹೂವಿನ ಹಾರ, ಕೇಕ್ ತಂದು ಸಂಭ್ರಮಿಸುತ್ತಿದ್ದರು. ಆದರೆ ಈ ಕೊರೊನಾದಿಂದ ಯಾವುದೇ ಸಂಭ್ರಮಕ್ಕೂ …

Read More »

ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ.

ಬೆಳಗಾವಿ: ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬಂದಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಿಬ್ಬಂದಿ ಸೀಲ್‍ಡೌನ್ ಮಾಡಿದ್ದಾರೆ. ಸದ್ಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ. ಜೂ.27ರಂದು 29 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿಸಿ ಕೋವಿಡ್ ಟೆಸ್ಟ್ ಮಾಡಿದಾಗ ಆರೋಪಿಗೆ ಕೊರೊನಾ ದೃಢವಾಗಿತ್ತು. 29 ವರ್ಷದ ರೋಗಿ-18291ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ …

Read More »

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ………..

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …

Read More »

ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಯುವತಿಯ ಬದುಕಿಗೆ ಬೆಳಕಾದ ಕಿಚ್ಚ…………

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು, ಲಾಕ್‍ಡೌನ್ ವೇಳೆ ಕಷ್ಟಕ್ಕೆ ಸಿಲಿಕಿದ್ದ ಆಟೋಚಾಲಕನ ನೆರವಿಗೆ ಬಂದಿದ್ದಾರೆ. ಆಟೋಚಾಲಕನಾಗಿ ಕೆಲಸ ಮಾಡುತ್ತಿದ್ದ ರಿಯಾಜ್ ಲಾಕ್‍ಡೌನ್‍ಗೂ ಮುನ್ನ ತಂಗಿಯ ಮದುವೆ ಫಿಕ್ಸ್ ಮಾಡಿದ್ದರು. ನಂತರದ ದಿನದಲ್ಲಿ ದುಡಿದು ಹಣವನ್ನು ಹೊಂದಿಸಿಕೊಂಡು ತಂಗಿಯ ಮದುವೆ ಮಾಡಲು ಬಯಸಿದ್ದರು. ಆದರೆ ಲಾಕ್‍ಡೌನ್ ಆದ ನಂತರ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲಿಕಿದ್ದರು. ಲಾಕ್‍ಡೌನ್‍ನಿಂದ ಮದುವೆಯ ಖರ್ಚಿಗೆ ಹಣ ಹೊಂದಿಸುವಲ್ಲಿ ವಿಫಲರಾಗಿದ್ದ ರಿಯಾಜ್, ದಿಕ್ಕು ತೋಚದಂತಾಗಿ ಸುದೀಪ್ ಚಾರಿಟೇಬಲ್ …

Read More »