Breaking News

ಜಿಲ್ಲೆ

ಕೋಲಾರ: ವೈದ್ಯೆ ಸೇರಿ 10 ಮಂದಿಗೆ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಗುರುವಾರ ವೈದ್ಯೆ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಸೋಂಕಿತರ ಸಂಖ್ಯೆ 86ಕ್ಕೆ ಏರಿದೆ. ಕೋಲಾರ ತಾಲ್ಲೂಕು ಒಂದರಲ್ಲೇ 5 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಜಿಲ್ಲಾ ಕೇಂದ್ರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೋವಿಡ್‌-19 ವಾರ್ಡ್‌ನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣಕ್ಕೆ ಈ ಇಬ್ಬರಿಗೆ ಸೋಂಕು ಹರಡಿರುವ …

Read More »

ಸುರಪುರ ನಗರದ ಜನತೆಗೆ ಕುಡಿಯುವ ನೀರಿನ ಅನುಕೂಲ ಸೇರಿ ಜನರಿಗಾಗಿ ಸುಮಾರು 300 ಕೋಟಿ ಅಂದಾಜು ಮೊತ್ತದಲ್ಲಿ ಬ್ರೀಜ್ ಕಮ್ ಬ್ಯಾರೇಜ್ ನಿರ್ಮಾಣ

ಸುರಪುರ: ಹೆಚ್.ವಿಶ್ವನಾಥ ಅವರ ರಾಜಕೀಯ ಭವಿಷ್ಯ ಮುಂದೆ ಉಜ್ವಲವಾಗಲಿದೆ. ವಿಶ್ವನಾಥ ಅವರಿಗಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧ ಎಂದು ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಗರದ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಹೆಚ್.ವಿಶ್ವನಾಥ ಅವರು ಮುಂದೆ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ. ಅವರ ರಾಜಕೀಯ ಭವಿಷ್ಯ ಮುಂದೆ ಹೇಗಾಗಲಿದೆ ಎಂದು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು. ಸುರಪುರ ನಗರದ …

Read More »

ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ

ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ …

Read More »

ಮೆಟ್ರೋ ಸಂಚಾರ ಆರಂಭವಾಗೋದು ಡೌಟ್‌! ಕಾಮಗಾರಿ ವಿಳಂಬ:

ಬೆಂಗಳೂರು(ಜು.03): 2020-21ನೇ ಸಾಲಿನಲ್ಲಿ ಸುಮಾರು 445 ಕೋಟಿ ಆದಾಯ ಗುರಿ ಹೊಂದಿದ್ದ ನಮ್ಮ ಮೆಟ್ರೋ ನಿಗಮ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾ.22ರಿಂದ ಮೆಟ್ರೋ ರೈಲು ಸಂಚಾರ ರದ್ದುಪಡಿಸಿದ್ದರಿಂದ ಅಂದಾಜು 110 ಕೋಟಿಗಿಂತ ಅಧಿಕ ನಷ್ಟಕ್ಕೊಳಗಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್‌ 430 ಕೋಟಿ ಆದಾಯ ಗಳಿಸಿತ್ತು. ಇದರಿಂದ ಸಹಜವಾಗಿಯೇ 2020-21ನೇ ಸಾಲಿನಲ್ಲಿ ಮೆಟ್ರೋ ನಿಗಮ ಸುಮಾರು 445 ಕೋಟಿ ಆದಾಯದ ಗುರಿಯನ್ನು ಹೊಂದಲಾಗಿತ್ತು.ಯಲಚೇನಹಳ್ಳಿ- ನಾಗಸಂದ್ರ(ಹಸಿರು ಮಾರ್ಗ) ಮತ್ತು ಬೈಯ್ಯಪ್ಪನಹಳ್ಳಿ- ಮೈಸೂರು …

Read More »

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು(ಜು.03): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕು ಲಕ್ಷಣಗಳಿದಿದ್ದರೂ ಪಾಸಿಟಿವ್‌ ವರದಿಗಳು ಬರುತ್ತಿವೆ. ಬೆಂಗಳೂರಲ್ಲಿ ಪ್ರತಿನಿತ್ಯ ಸೋಂಕಿನ ಪ್ರಕರಣಗಳು ಅಧಿಕಗೊಳ್ಳುತ್ತಿವೆ. ಇದರಿಂದ ಹಾಸಿಗೆ ಲಭ್ಯವಾಗುತ್ತಿಲ್ಲ ಎಂದು ಜನರು ಭೀತಿಗೊಳಗಾಗಿದ್ದಾರೆ. ಆದರೆ, ಜನರು ಯಾವುದೇ ರೀತಿಯಲ್ಲಿಯೂ ಭಯಗೊಳ್ಳಬೇಕಾದ ಅಗತ್ಯ ಇಲ್ಲ. ಸರ್ಕಾರ ಎಲ್ಲಾ ರೀತಿಯ …

Read More »

ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ

ಸುರಪುರ: ತಾಲೂಕಿನ ಅಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷ್ಣಾ ನದಿಯಲ್ಲಿ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣದ ಕುರಿತು ಹಿಂದೆ ಬಜೆಟ್‍ನಲ್ಲಿಯೆ ಅನುದಾನ ಘೋಷಿಸಲಾಗಿದೆ.ಅದರಂತೆ ಈಗ ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು,ಎರಡು ಮೂರು ಕಡೆಗಳಲ್ಲಿ ಸ್ಥಳ ಗುರುತಿಸಲಾಗುತ್ತಿದೆ. ಸೂಕ್ತ ಸ್ಥಳದಲ್ಲಿ ಸುಮಾರು 300 ಕೋಟಿ ಅಂದಾಜು ವೆಚ್ಚದಲ್ಲಿ ಬ್ರೀಜ್ ಕಮ್ ಬ್ಯಾರೆಜ್ …

Read More »

ಗೋಕಾಕ: ಗೋಕಾಕನಗರದಲ್ಲಿ ಮೊಟ್ಟಮೊದಲ ಬಾರಿ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ.

  ಗೋಕಾಕ :ಇಂದು ಗೋಕಾಕ ನಗರದ ಎಂಟು ವರ್ಷದ ಓರ್ವ ಬಾಲಕಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಗೋಕಾಕ ನಗರದ ಭಜಂತ್ರಿ ಗಲ್ಲಿಯ ಕೊಳಚೆ ಪ್ರದೇಶದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದಾಗ ಈ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.ಯಾವುದೇ ಟ್ರಾವೆಲ್ಲಿಂಗ್ ಹಿಸ್ಟರಿ ಇಲ್ಲ, ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೂ ಬಂದಿರುವುದಿಲ್ಲಾ. ಈ ಬಾಲಕಿಯು ಭಜಂತ್ರಿ ತೋಟ ಕೌಜಲಗಿ ಗ್ರಾಮಕ್ಕೆ ಹೋಗಿದ್ದಾಳೆ ಈಗ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆ ಬೆಳಗಾವಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ.ಭಜಂತ್ರಿ …

Read More »

ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು.

ಮೂಡಲಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಿಯಮಾನುಸಾರ ನಡಿಯುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿ ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು. ಶಿವಾಪೂರ (ಹ), ಖಾನಟ್ಟಿ, ಪಟಗುಂದಿ, ಮೂಡಲಗಿಯಲ್ಲಿ ಗುರುವಾರ ಜರುಗಿದ ಎಸ್.ಎಸ್.ಎಲ್.ಸಿಯ ಕನ್ನಡ ಭಾಷಾ ಪರೀಕ್ಷೆಯ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದರು. ಮೂಡಲಗಿ ತಾಲೂಕಿನಲ್ಲಿ ಪರೀಕ್ಷೆಗಳಲ್ಲಿ ಸರ್ಕಾರದ ನಿಯಮ ಪಾಲಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ದೈಹಿಕ ಅಂತರ, ಸ್ಕ್ರಿನಿಂಗ್, ಮಾಸ್ಕ್, ಸಿಸಿ …

Read More »

ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.

ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು. ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.

Read More »

ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.

ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು. ಉತ್ತಮ ಅವಕಾಶ ಸಿಕ್ಕಿದೆ. …

Read More »