Breaking News

ಜಿಲ್ಲೆ

ವ್ಯಕ್ತಿ ಪೂಜೆ ಬೇಡ . ಪಕ್ಷ ಪೂಜೆ ಮಾಡೋಣ:ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌

ಬೆಂಗಳೂರು: ವ್ಯಕ್ತಿ ಪೂಜೆಯೂ ಬೇಡ . ಪಕ್ಷ ಪೂಜೆ ಮಾಡೋಣ. ಈ ಮೂಲಕ ಪಕ್ಷವನ್ನು ಕಟ್ಟೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಹಿಂಬಾಲಕರು ಬೇಡ. ನನಗೆ ಯಾವುದೇ ಗುಂಪು ಜಾತಿ, ಧರ್ಮದಲ್ಲಿ ನಂಬಿಕೆ ಇಲ್ಲ. ನಮ್ಮದು ಕಾಂಗ್ರೆಸ್ ಗುಂಪು, ಕಾಂಗ್ರೆಸ್ ಧರ್ಮ, ಕಾಂಗ್ರೆಸ್ ಜಾತಿ ಎಂದು ತಿಳಿಸಿದರು. ಕೇರಳ ಮಾದರಿಯಲ್ಲಿ ಎಲ್ಲಾ ನಾಯಕರು ಮೊದಲು …

Read More »

ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮನೆಯ ಮುಂದೆ ಭೂ ಕುಸಿತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಭೂ ಕುಸಿತ ಸಂಭವಿಸಿದೆ. ಜಿಲ್ಲೆಯ ನರಗುಂದದ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆಯವರ ಮನೆ ಮುಂದೆ ಭೂಮಿ ಕುಸಿದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂಮಿ ಕುಸಿತವಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಂತರ್ಜಲ ಹೆಚ್ಚಳ, ನರಗುಂದ …

Read More »

ಆರ್.ಅಶೋಕ್ ಹುಟ್ಟುಹಬ್ಬದ ನೆಪದಲ್ಲಿ ಸಚಿವರ ಡಿನ್ನರ್ ಪಾರ್ಟಿ

ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಹುಟ್ಟುಹಬ್ಬ ಬುಧವಾರವಿದ್ದು, ಈ ಹಿನ್ನೆಲೆಯಲ್ಲಿ ಸಚಿವರೇ ರಾತ್ರಿ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ ಆಯೋಜನೆ ಮಾಡಿದ್ದಾರೆ. ಹೌದು. ಚಿಕ್ಕಮಗಳೂರಿನ ಕೈಮರ ಸಮೀಪ ಇರುವ ಖಾಸಗಿ ಹೋಟೆಲಿನಲ್ಲಿ ಬರ್ತ್ ಡೇ ಪಾರ್ಟಿ ಆಯೋಜಿಸಿದ್ದಾರೆ. ನೈಟ್ ಪಾರ್ಟಿಯಿಂದ ಸೋಂಕು ಹೆಚ್ಚುತ್ತೆ ಅಂದವರೇ ಪಾರ್ಟಿ ಮಾಡಿರುವುದು ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಆರ್.ಅಶೋಕ್ ಹುಟ್ಟುಹಬ್ಬದ ನೆಪದಲ್ಲಿ ಸಚಿವರ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಪಾರ್ಟಿಯಲ್ಲಿ ಶೆಟ್ಟರ್, ಸಿ.ಟಿ.ರವಿ, …

Read More »

ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಯಾವ ದಿನ, ಏನು ಆಹಾರ?

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಯಾವ ದಿನ, ಯಾವ ಆಹಾರ ನೀಡಬೇಕು ಎಂಬುದರ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿ ಮೆನು ಪ್ರಕಾರ ಆಹಾರ ನೀಡುವಂತೆ ಸೂಚಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಹಾಗೂ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿಲ್ಲ. ಸೂಕ್ತ ಆಹಾರವಿಲ್ಲದೆ ಕೊರೊನಾ ರೋಗಿಗಳು ನರಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಸರ್ಕಾರ ತಜ್ಞರ ಜೊತೆ ಚರ್ಚಿಸಿ ಪ್ರತಿ …

Read More »

ಮೂವರು ಆರೋಪಿಗಳಿಗೆ ಸೋಂಕು- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್

ಬೆಂಗಳೂರು: ಮೂವರು ಕೊಲೆ ಆರೋಪಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲು ರೆಡಿಯಾಗಿದೆ. ಈ ಮೂಲಕ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮತ್ತೊಂದು ಸ್ಟೇಷನ್ ಸೀಲ್‍ಡೌನ್‍ಗೆ ಸಿದ್ಧತೆ ನಡೆದಿದೆ. ಪಶ್ಚಿಮ ವಿಭಾಗದ ಪೊಲೀಸರಿಗೆ ಕೊರೊನಾ ಕಂಟಕವಾಗಿದೆ. ಡಿಸಿಪಿ ಕಚೇರಿ, ಎಸಿಪಿ ಕಚೇರಿ, ಉಪ್ಪಾರಪೇಟೆ, ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ, ಜೆಜೆ ಆರ್ ನಗರ, ಕಾಮಾಕ್ಷಿಪಾಳ್ಯ, ಕೆಪಿ ಅಗ್ರಹಾರ, ಕೆಂಗೇರಿ ಪೊಲೀಸ್ ಠಾಣೆಗಳು ಸೀಲ್ …

Read More »

ಮೃತ ಪಟ್ಟು ಎರಡು ಗಂಟೆಗಳಾದರೂ ಮಳೆಯಲ್ಲೇ ಶವವನ್ನು ನೆನೆಯಲು ಬಿಟ್ಟ ಸಿಬ್ಬಂದಿ

ಬಳ್ಳಾರಿ: ಕೊರೊನಾ ಸೋಂಕಿತ ಮೃತದೇಹವನ್ನು ಮಳೆಯಲ್ಲೇ ನೆನೆಯಲು ಬಿಟ್ಟು ಬಳ್ಳಾರಿ ಜಿಲ್ಲೆಯ ಆರೋಗ್ಯ ಇಲಾಖೆ ಮತ್ತೊಮ್ಮೆ ಅಮಾನವೀಯವಾಗಿ ನಡೆದುಕೊಂಡಿದೆ. ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಆರು ಜನರು ಸಾವನ್ನಪ್ಪಿದ್ದರು. ಇದರಲ್ಲಿ ಹೊಸಪೇಟೆ ತಾಲೂಕು ಆಸ್ಪತ್ರೆಯಲ್ಲೂ ಓರ್ವ ಸೋಂಕಿತ ಮೃತಪಟ್ಟಿದ್ದರು. ಈ ವೇಳೆ ಆತನ ಶವವನ್ನು ಆಸ್ಪತ್ರೆಯ ಆವರಣದಲ್ಲಿ ನೆನೆಯಲು ಬಿಟ್ಟು ಆಸ್ಪತ್ರೆಯ ವೈದ್ಯರ ಮತ್ತೊಂದು ಎಡವಟ್ಟು , ಈ ಆಸ್ಪತ್ರೆಗೆ ಪ್ರತಿನಿತ್ಯ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. …

Read More »

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು……….

ಕೊಪ್ಪಳ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವೇಳೆ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದ್ದು, ಇದೀಗ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತಂಕ ಎದರಾಗಿದೆ. ಜಿಲ್ಲೆಯ ಕಾರಟಗಿ ನಗರದ ಖಾಸಗಿ ಶಾಲಾ ಪರೀಕ್ಷಾ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಸೋಂಕು ದೃಢವಾಗಿದೆ. ಕಳೆದ ಎರಡು ವಿಷಯಗಳ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಗೆ ಇಂದು ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಸಮಯದಲ್ಲಿಯೇ ವಿದ್ಯಾರ್ಥಿನಿಗೆ ಕೊರೊನಾ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ರಾಯಚೂರು …

Read More »

ಕೊರೋನಾ ವೈರಸ್ ಬೆಳಗಾವಿ ಜಿಲ್ಲೆಗೆ ಬಿಡದೇ ಕಾಡುತ್ತಿದೆ.

ಬೆಳಗಾವಿ: ನಗರದಲ್ಲಿ ಕೊರೊನಾ ಸೋಂಕಿಗೆ 74 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದೆ. ಗುಡ್ ಶೆಡ್ ರಸ್ತೆ ನಿವಾಸಿಯಾಗಿರುವ 74 ವರ್ಷದ ವ್ಯೆಕ್ತಿಗೆ ನಿನ್ನೆ ಮಧ್ಯಾಹ್ನ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯ ವೈದ್ಯರಿಗೆ ತೋರಿಸಿದಾಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಶಿಫಾರಸ್ಸು ಮಾಡಿದ್ದರು,, …

Read More »

ಬಡ್ಡಿ ಹೆಚ್ಚು ಪಡೆದುಕೊಳ್ಳುತ್ತಿದ್ದರೆ ಎಂದು ಆರೋಪಿಸಿ ಬ್ಯಾಂಕಗಳಿಗೆ ಮುತ್ತಿಗೆ ಹಾಕಿ ಗೋಕಾಕ ರೈತ ಸಂಘಟನೆಯಿಂದ ಪ್ರತಿಭಟನೆ…!

  ಗೋಕಾಕ :ನಿಗದಿ ದರಕಿಂತ ಹೆಚ್ಚು ಬಡ್ಡಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಬಜಾಜ್ ಪೈನಾನ್ಸ್ ಲಿಮಿಟೆಡ್ ಹಾಗೂ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಸೇರಿದಂತೆ ಗೋಕಾಕನ ವಿವಿಧ ಬ್ಯಾಂಕ್ ಕಚೇರಿಯ ಮುಂದೆ ರೈತ ಸಂಘಟನೆಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ಘಟನೆ ಒಂದು ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ನಡೆದಿದೆ… ಸುಮಾರು ವರ್ಷಗಳ ಹಿಂದೆ ಸಾಗಣ್ಣಾ ಹಡಿಗನಾಳ ಹಾಗೂ ಈರಣ್ಣಾ ಹಡಿಗನಾಳ ಅನಾರೋಗ್ಯದಿಂದ ಸಾವನ್ನಪ್ಪಿದು ಅವರ ಸಾವಿಗೆ ಬ್ಯಾಂಕ್ …

Read More »

ಕ್ವಾರಂಟೈನ್ ನಿಯಮಗಳನ್ನು ಗಾಳಿಗೆ ತೂರಿದ ಬೆಳಗಾವಿ ಜಿಲ್ಲೆಯ ಜನರ ಮೇಲೆ ಪ್ರಕರಣ ದಾಖಲಿಸಲು ಸೂಚನೆ

ಬೆಳಗಾವಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಬೆಳಗಾವಿ ಜಿಲ್ಲೆಯ 573 ಜನ ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲು ಕ್ವಾರಂಟೈನ್ ನೊಡಲ್ ಅಧಿಕಾರಿಗಳು ಜಿಲ್ಲೆಯ ಉಪವಿಭಾಗಾಧಿಕಾರಿಗಳುಮತ್ತು ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಮತ್ತು ಪಕ್ಕದ ರಾಜ್ಯಗಳಿಂದ ಬೆಳಗಾವಿ ಜಿಲ್ಲೆಗೆ ಬಂದಿರುವ 573 ಜನ ಹೋಮ್ ಕ್ವಾರಂಟೈನ್ ನಲ್ಲಿ ಇರದೇ ಸುತ್ತಾಡಿದ್ದು ಇವರನ್ನು ಟ್ರ್ಯಾಕ್ ಮಾಡಿರುವ ಕ್ವಾರಂಟೈನ್ ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿರುವ 573 ಜನರ ಪಟ್ಟಿ ಮಾಡಿ ಬೆಳಗಾವಿ ಜಿಲ್ಲೆಯ ಎಲ್ಲ ಉಪ …

Read More »