Breaking News

ಜಿಲ್ಲೆ

14 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಾಗಾಟ ಮಾಡುತ್ತಿದ್ದ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಅಕ್ರಮವಾಗಿ ಸುಮಾರು 14 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಾಗಾಟ ಮಾಡುತ್ತಿದ್ದ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಕೆರಲೆ ಗ್ರಾಮದ ಸುಹಾಸ್ ಗಾಯಕವಾಡ್, ಮಗ ಸಂದೀಪ್ ಸುಹಾಸ್ ಗಾಯಕವಾಡ ಹಾಗೂ ಹಿಂಡಲಗಾ ಗೋಕುಲ ನಗರದ ಮಾರುತಿ ಮುರುಗೇಶ್ ಬಂಧಿತ ಆರೋಪಿಗಳು. ಮೂವರು ಆರೋಪಿಗಳು ಕ್ರೂಸರ್ ವಾಹನದಲ್ಲಿ ಮಹರಾಷ್ಟ್ರದಿಂದ ಬೆಳಗಾವಿಗೆ ಬೆಳ್ಳಿ ಸಾಗಿಸುತ್ತಿದ್ದರು, ಹತ್ತರಗಿ ಟೋಲ್ ಬಳಿ  ಪೊಲೀಸರು ವಾಹನ ತಪಾಸಣೆ ವೇಳೆ ಅಕ್ರಮವಾಗಿ ಬೆಳ್ಳಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ …

Read More »

ಧಾರವಾಡದಲ್ಲಿ ದ್ವಿಶತಕ ಬಾರಿಸಿದ ಕೊರೊನಾ ಸಂಖ್ಯೆ…………..

ಧಾರವಾಡ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಧೃಡಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 200ಕ್ಕೆ ತಲುಪಿದೆ. ನವಲಗುಂದ ತಾಲೂಕಿನ ಮೊರಬ ಗ್ರಾಮದ ಮೂವರಿಗೆ ಸೋಂಕು ತಗುಲಿದ್ದು, ಇದೇ ಗ್ರಾಮದಲ್ಲಿ ಈಗಾಗಲೇ 31 ಜನರಿಗೆ ಸೋಂಕು ತಗುಲಿದೆ. ಕಳೆದ ಜೂನ್ 14 ರಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾದ ದಿನವೇ ಮೃತಪಟ್ಟಿದ್ದ 65 ವರ್ಷದ ವೃದ್ಧ ರೋಗಿ ನಂ.7060 ಯಿಂದ ಇಂದು ಮೂವರಿಗೆ ಕೊರೊನಾ ಧೃಡಪಟ್ಟದೆ. ರೋಗಿ ನಂ.9158, 72 …

Read More »

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್,ಸ್ಯಾನಿಟೈಸರ್ ವಿತರಣೆ: ಸತೀಶ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಸೋಮವಾರ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದರು. ಯಮಕನಮರಡಿ ಸೇರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾಸ್ಕ್‌ ವಿತರಸಿದರು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಇರುವಂತೆ ವಿದ್ಯಾರ್ಥಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಕರೆ …

Read More »

ಗ್ರಾಮದ ಜನರಲ್ಲಿ ಆತಂಕ ಮೂಡಿಸಿದ್ದ 8 ವರ್ಷದ ಚಿರತೆ ಸೆರೆ………

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಇಂದು ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ಬಳಿಯ ಸೀಗೆಪಾಳ್ಯ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಅನೇಕ ದಿನಗಳಿಂದ ಉಪಟಳ ನೀಡುತ್ತಿದ್ದ ಸುಮಾರು 8 ವರ್ಷದ ಗಂಡು ಚಿರತೆಯನ್ನು ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಈ ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆ ಸೆರೆಯಾದ ಸ್ಥಳಕ್ಕೆ ನೆಲಮಂಗಲ ವಲಯ ಅರಣ್ಯಾಧಿಕಾರಿಗಳು …

Read More »

ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್…………….

ಚಾಮರಾಜನಗರ: ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗರಾಜಪ್ಪ ಅವರಿಗೆ ಸೇರಿದ ಜಮೀನಿನಲ್ಲಿದ್ದ ಪಾಳು ಬಾವಿಗೆ ಕಳೆದ ಐದು ದಿನಗಳ ಹಿಂದೆ ಚಿರತೆಯೊಂದು ಬಿದ್ದಿತ್ತು. ವಿಷಯ ತಿಳಿದ ಬಂಡೀಪುರ ಅರಣ್ಯಾಧಿಕಾರಿಗಳು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬಾವಿಯ ಪೊಟರೆಯೊಂದಕ್ಕೆ ಚಿರತೆ ಸೇರಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಹೊರಬರಲಿಲ್ಲ. ಅಲ್ಲದೆ ಅರಣ್ಯ ಇಲಾಖೆ ಸಿಬ್ಬಂದಿಗೆ …

Read More »

ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು…….

ಬೆಂಗಳೂರು: ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬಾಲಕೃಷ್ಣ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ನನ್ನ ಮಗಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ವಿಷಯವನ್ನು ನಿಮ್ಮೆಲ್ಲರ ಗಮನಕ್ಕೆ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಚಾರವನ್ನು ತಿಳಿಸಲು ಇಚ್ಛೆ ಪಡುತ್ತೇನೆ. …

Read More »

ಬೆಳಗಾವಿ ಯಲ್ಲಿ ಮನೆ ಮನೆಗೆ ತರಕಾರಿ ಅತೀ ಕಡಿಮೆ ದರದಲ್ಲಿ ಬೇಕಾ ಹಾಗಾದ್ರೆ ಫಾರ್ಮ್ ಯುಗ ಆಪ. ಡೌನಲೋಡ್ ಮಾಡಿ

ಬೆಳಗಾವಿ ಯಲ್ಲಿ ಮನೆ ಮನೆಗೆ ತರಕಾರಿ ಅತೀ ಕಡಿಮೆ ದರದಲ್ಲಿ ಬೇಕಾ ಹಾಗಾದ್ರೆ ಫಾರ್ಮ್ ಯುಗ ಆಪ. ಡೌನಲೋಡ್ ಮಾಡಿ ಬೆಳಗಾವಿ: ಸ್ಮಾರ್ಟ್ ಸಿಟಿ ಕಾಮಗಾರಿಗಳ ಜೊತೆ ಡಿಜಿಟಲ್ ಕಾಮಗಾರಿಗಳು ಕೂಡ ಬೆಳಗಾವಿಯಲ್ಲಿ ನಡೆಯುತ್ತಿವೆ. ಬೆಳಗಾವಿಯಲ್ಲಿ ಮತ್ತೊಂದು ಮೊಬೈಲ್ ಆಪ್ ಲಾಂಚ್ ಆಗಿದೆ ನೀವು ಮುಖಾಂತರ ಮನೆಯಲ್ಲಿ ಕುಳಿತು ತಾಜಾ ತರಕಾರಿಗಳನ್ನು ಮನೆಗೆ ತರಿಸಬಹುದು ಫಾರ್ಮ್ ಯೂ ಅನ್ನೋ ಹೆಸರಲ್ಲಿಯುವ ಹೆಸರಲ್ಲಿ ಒಂದು ಅಫ್ ಲಾಂಚ್ ಆಗಲಿದೆ, ಇದೆ ಜೂನ್ …

Read More »

ಕೊರೊನಾ ಜಾಗೃತಿ ಮೂಡಿಸುತ್ತಾ ತರಕಾರಿ ವ್ಯಾಪಾರ- ವಿಡಿಯೋ ನೋಡಿ……

ಕೋಲಾರ: ಇಡೀ ವಿಶ್ವವನ್ನೇ ಹೆಮ್ಮಾರಿ ಕೊರೊನಾ ವೈರಸ್ ಭಾದಿಸುತ್ತಿದ್ದು, ಎಲ್ಲಿ ಹೋದ್ರೆ ಏನಾಗುತ್ತೊ, ಏನ್ ತಿಂದ್ರೆ ಏನ್ ಬರುತ್ತೊ ಅಂತಾ ಜನ ಭಯಭೀತರಾಗಿದ್ದಾರೆ. ಈ ನಡುವೆ ಕೋಲಾರದ ರೈತ ತಾನು ಬೆಳೆದ ತರಕಾರಿಯನ್ನ ಬೈಕ್ ನಲ್ಲಿ ಇಟ್ಟುಕೊಂಡು ಊರೂರು ಸುತ್ತಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಾ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ರಾಜೇನಹಳ್ಳಿಯ ರೈತ ಯಲ್ಲಪ್ಪ ಮೂರ್ನಾಲ್ಕು ಭಾಷೆಗಳಲ್ಲಿ ಜೋರಾಗಿ ಕೂಗುತ್ತಾ ಸೊಪ್ಪು ತರಕಾರಿ ಮಾರುತ್ತಿದ್ದಾರೆ. ಜಾದೂಗಾರನಂತೆ …

Read More »

ಉದ್ಯಾನ ನಗರಿಯಲ್ಲಿ ವರುಣನ ಸಿಂಚನ- ಅಲ್ಲಲ್ಲಿ ಟ್ರಾಫಿಕ್ ಜಾಮ್…………

ಬೆಂಗಳೂರು: ಉದ್ಯಾನ ನಗರಿಯ ಹಲವೆಡೆ ವರುಣನ ಸಿಂಚನವಾಗಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ನಗರದ ಯಶವಂತಪುರ, ಪೀಣ್ಯ, ಮಲ್ಲೇಶ್ವರ ಸೇರಿದಂತೆ ಹಲವೆಡೆ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದ್ದು ವಾಹನ ಸವಾರರು ಪರದಾಡುವಂತಾಯಿತು. ಬೆಳಗಿನಿಂದಲೂ ಶೆಖೆ ವಾತಾವರಣವಿತ್ತು. ಅಲ್ಲದೆ ಮಧ್ಯಾಹ್ನ ಸಹ ಸ್ವಲ್ಪ ಪ್ರಮಾಣದಲ್ಲಿ ಬಿಸಿಲು ಇತ್ತು. ಆದರೆ ಸಂಹೆ ನಾಲ್ಕು ಗಂಟೆ ಸುಮಾರಿಗೆ ವರಣ ಸಿಂಚನವಾಗಿದೆ. ಮಳೆಯಿಂದಾಗಿ ತುಮಕೂರು ರಸ್ತೆ, ಯಶವಂತಪುರ, …

Read More »

ಜಿಂದಾಲ್ ಕಾರ್ಖಾನೆ ಲಾಕ್‍ಡೌನ್ ಮಾಡೋಕೆ ಆಗಲ್ಲ: ಜಿಲ್ಲಾಧಿಕಾರಿ ನಕುಲ್……

ಬಳ್ಳಾರಿ: ಲಾಕ್‍ಡೌನ್ ಸಡಿಲಿಕೆಯಾದ ಹಿನ್ನೆಲೆ ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯನ್ನು ಸಂಪೂರ್ಣ ಲಾಕ್‍ಡೌನ್ ಮಾಡಲು ಆಗಲ್ಲವೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಜುಬಿಲೆಂಟ್ ಕಾರ್ಖಾನೆ ಸಣ್ಣ ಪ್ರಮಾಣದ ಉತ್ಪಾದನೆ ಹೊಂದಿದೆ. ಅಲ್ಲದೇ ಅದು ಕೇವಲ 1 ಸಾವಿರ ನೌಕರರನ್ನ ಮಾತ್ರ ಹೊಂದಿದೆ. ಹೀಗಾಗಿ, ಕಾರ್ಖಾನೆಯನ್ನು ಲಾಕ್‍ಡೌನ್ ಮಾಡಿ ಕೊರೊನಾ ಸೋಂಕಿತರ ಸಂಖ್ಯೆಯನ್ನು ಸೊನ್ನೆಗೆ ತರಲಾಯಿತು. ಆದರೆ, ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ಸುಮಾರು …

Read More »