ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಕಾಗವಾಡ ಕ್ಷೇತ್ರಕ್ಕೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರನ್ನಾಗಿ ಶಾಸಕ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಗವಾಡ ಕ್ಷೇತ್ರದಿಂದ …
Read More »ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*
ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಮೂಡಲಗಿ ವಲಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ …
Read More »ಸಿನಿಮಾ ಟಿಕೆಟ್ ಸಿಗದೆ ಈಜಲು ಕಾಲುವೆಗಿಳಿದ ಇಬ್ಬರು ಯುವಕರು ನೀರುಪಾಲು
ರಾಯಚೂರು: ಸಿನಿಮಾ ನೋಡಲು ಹೋಗಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಗೆ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ನಿವಾಸಿಗಳಾದ ಯಲ್ಲಾಲಿಂಗ (28), ವೆಂಕಟೇಶ ಮೋಚಿ (30) ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ಮಸ್ಕಿ ಪಟ್ಟಣದ ಬಳಗಾನೂರು ರಸ್ತೆಗೆ ಬರುವ ತುಂಗಭದ್ರಾ ಎಡದಂಡೆ ಕಾಲುವೆಗೆ ಈ ಇಬ್ಬರು ಈಜಲು ತೆರಳಿದ್ದರು. ಮುದಗಲ್ ಪಟ್ಟಣದ ನಾಲ್ವರು ಸ್ನೇಹಿತರು ಶನಿವಾರ ಮಸ್ಕಿ ಪಟ್ಟಣಕ್ಕೆ …
Read More »ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಸಮರ್ಥ ಮಾರ್ಗದರ್ಶನ ಪ್ರಭಾ ಶುಗರ್ಸ್ ಅಧ್ಯಕ್ಷರಾಗಿ ಕಂಬಳಿ, ಉಪಾಧ್ಯಕ್ಷರಾಗಿ ಕಬ್ಬೂರ ಅವಿರೋಧವಾಗಿ ಆಯ್ಕೆ
ಗೋಕಾಕ- ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಅವರು ಪ್ರಕಟಿಸಿದರು. ಇಲ್ಲಿಯವರೆಗೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹೂಲೀಕೇರಿ ತಾಂಡಾ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …
Read More »ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ
ಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ. ಅದೊಂದು ಕುಟುಂಬದ ಟ್ರಸ್ಟ್, ಕಳ್ಳರ ಕೂಟ. ಹೀಗಾಗಿ ಉಚ್ಚಾಟನೆ ಎಂಬ ಪ್ರಶ್ನೆಯೇ ಬರುವುದಿಲ್ಲ. ಆದ್ದರಿಂದ ಈ ಬಗ್ಗೆ ನಾನು ಮಾತನಾಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಹರಿಹಾಯ್ದರು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಇಂದು ದಿ.ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ …
Read More »ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ
ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, ರೈತರೇ ನಮ್ಮ ಆಸ್ತಿ ಎಂದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಡಗೇರಿ (ತಾ. ಹುಕ್ಕೇರಿ)- ನಮ್ಮ ವಿರೋಧಿಗಳು ಸಾವಿರ ಸಲ ಟೀಕಿಸಲಿ, ಬೈಯಲಿ. ಅಂತಹ ಯಾವುದೇ ಟೀಕೆ- ಟಿಪ್ಪಣಿಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಅವುಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಯಾರನ್ನೂ ಟೀಕಿಸುವುದಿಲ್ಲ. ಮತ್ತೊಬ್ಬರನ್ನು ಬೈಯುವಂತಹ ಸಂಸ್ಕೃತಿಯೂ …
Read More »ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ
ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ನಾಡಹಬ್ಬದ ಪ್ರಧಾನ ಕಾರ್ಯದರ್ಶಿ ಡಾ. ಸಿ.ಕೆ.ಜೋರಾಪೂರ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ನಡೆಸುವ ನಾಡಹಬ್ಬಕ್ಕೆ ತನ್ನದೆಯಾದ ಇತಿಹಾಸ ಇದೆ. ಪ್ರಚಲಿತ ವಿಷಯವನ್ನು ಮುಂದಿಟ್ಟುಕೊಂಡು ಚಿಂತನೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸೆ.22 ರಂದು ಸಂಜೆ 6ಕ್ಕೆ ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ …
Read More »ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ
ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ. ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ …
Read More »ಸಹ್ಯಾದ್ರಿ ನಗರ ಬಸ್ ಪಲ್ಟಿ
ಸಹ್ಯಾದ್ರಿ ನಗರ ಬಸ್ ಪಲ್ಟಿ: ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಮುಸ್ತಾಕ್ ಮುಲ್ಲಾ | ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಗಾಯಗೊಂಡ ಪ್ರಯಾಣಿಕರ ಆರೋಗ್ಯವನ್ನು ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಮುಸ್ತಾಕ್ ಮುಲ್ಲಾ ಜಿಲ್ಲಾಸ್ಪತ್ರೆಗೆ ದೌಡಾಯಿಸಿ ವಿಚಾರಣೆ ನಡೆಸಿದರು. ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿರುವುದರಿಂದ ಸಾರಿಗೆಯಲ್ಲಿ ಪ್ರಯಾಣ ಮಾಡುತ್ತಿರುವವರಿಗೆ ಹಾಗೂ ಚಾಲಕ, ನಿರ್ವಾಹಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆ ನೀಡಬೇಕು. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಗಾಯಾಳುಗಳಿಗೆ ಮುಸ್ತಾಕ್ …
Read More »
Laxmi News 24×7