Breaking News

ಜಿಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ………..

ಕೊಪ್ಪಳ: ಹೆಮ್ಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತ 50 ವರ್ಷದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ರೋಗಿ-7105 ಆಗಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಗನಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಆತನ ತಂದೆ-ತಾಯಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೂ ಸೋಂಕು …

Read More »

ಯೋಚಿಸಿ ಮಾತನಾಡುವಂತೆ ಸಿದ್ದುಗೆ ಕೋಟ ಶ್ರೀನಿವಾಸ್ ವಾರ್ನ್

ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯೋಚಿಸಿ ಮಾತನಾಡುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ವಾರ್ನ್ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಚೀನಾ ಗಡಿಯಲ್ಲಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೌನವನ್ನ ದೇಶದ್ರೋಹಕ್ಕೆ ಹೋಲಿಸಿ ಮಾತನಾಡಿದ್ದಕ್ಕೆ ಮಾಜಿ ಸಿಎಂಗೆ ಕೋಟ ತಿರುಗೇಟು ನೀಡಿದರು. ಈಗ ದೇಶದಲ್ಲಿ ತಾಕತ್ತಿನ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಸೈನಿಕರ ಬೆನ್ನಿಗೆ ನಿಂತು ಗುಂಡು ಹಾರಿಸಿ ಎಂದು ಹೇಳುವ ಪ್ರಧಾನಿ ಇದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಯುದ್ಧ …

Read More »

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ …………..

ಬೆಂಗಳೂರು, ಜೂ.18- ಕೊರೊನಾ ಸೋಂಕಿನ ಆತಂಕದ ನಡುವೆ ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಜ್ಜಾಗಿದೆ. ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೋವಿಡ್-19 ನಿಂದಾಗಿ ಮುಂದೂಡಲ್ಪಟ್ಟಿತ್ತು. ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್‍ಕಡ್ಡಾಯವಾಗಿದ್ದು , ಪರೀಕ್ಷಾ …

Read More »

ವಿಧಾನಪರಿಷತ್‍ ಚುನಾವಣೆ ,ನಾಮಪತ್ರ ಸಲ್ಲಿಕೆ ಭರಾಟೆ ,,,,,,,,,,,,

ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು  ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …

Read More »

ಎತ್ತಿನ ಹೊಳೆ ಯೋಜನೆ : ಭೂ ಪರಿಹಾರ ದರ ನಿಗಧಿಗೆ ಸಿಎಂ ಜತೆ ಚರ್ಚೆ

ತುಮಕೂರು, – ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ದರ ನಿಗಧಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ …

Read More »

ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!

ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………

ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …

Read More »

ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………

ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …

Read More »

ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾ ದಿಂದಾಗಿ ಸರ್ಕಾರ ಘೋಷಿಸಿದ ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.  ಇಲ್ಲಿನ ಅಲಾರವಾಡ ಸೇತುವೆಯ ಕೆಳಗಡೆ ಬುಧವಾರ  ಹಿರಿಯ ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜೂ ಟೋಪಗಿ, ಮ್ಯಾಗೋಟಿ ಆಯೋಜಿಸಿದ್ದರು. ಜನರಿಗೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ 23 ರಂದು,ದಾನಿಗಳ ನೆರವಿನಿಂದ, ಆರಂಭಿಸಿದ ” ಹಸಿದವರತ್ತ ನಮ್ಮ ಚಿತ್ತ” …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ

ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ   ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ  ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.  ನಗರದ ತಾ. ಪಂ. ಕಚೇರಿಯಲ್ಲಿ …

Read More »