ನೂತನವಾಗಿ ಮಂಡ್ಯ ಕೆ ಆರ್ ಪೇಟೆ ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಂಜಿಗೆರೆ ಮಹೇಶ ರವರಿಗೆ ಜನಪ್ರಿಯ ಮಾಜಿ ಶಾಸಕರು ಮತ್ತು ಮಂಡ್ಯ ಕೆಪಿಸಿಸಿ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಕಿಕ್ಕೇರಿ ರವರ ಸಮ್ಮುಖದಲ್ಲಿ ಮಹೇಶ್ ರವರಿಗೆ ಪ್ರೀತಿ-ವಿಶ್ವಾಸದ ಸನ್ಮಾನ ನೆರವೇರಿಸಿ ಪಕ್ಷ ಸಂಘಟನೆಯ ಮತ್ತಷ್ಟು ಬಲಗೊಳಿಸಿ ಪಾದರಸದಂತೆ ಸಂಘಟನೆ ಮಾಡಿ ಎಂದು ಶುಭಹಾರೈಸಿ ತುಂಬು ಹೃದಯದಿಂದ ಅಭಿನಂದಿಸಿದರು. …
Read More »ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.
ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಹುಕಾಲದ ದೊಡ್ಡ ಕನಸೊಂದು ಈಗ ನನಸಾಗುವ ಹಂತಕ್ಕೆ…….
ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಹುಕಾಲದ ದೊಡ್ಡ ಕನಸೊಂದು ಈಗ ನನಸಾಗುವ ಹಂತಕ್ಕೆ ಬಂದು ನಿಂತಿದೆ. ರಾಜಹಂಸಗಡದಲ್ಲಿ, ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣವಾಗುತ್ತಿದ್ದು, ಸ್ಥಳಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐತಿಹಾಸಿಕ ಹಿನ್ನೆಲೆಯ ಸ್ಥಳವಾಗಿರುವ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿಯನ್ನು ನಿರ್ಮಾಣ ಮಾಡಬೇಕೆನ್ನುವ ಬೇಡಿಕೆ ಇಂದು ನಿನ್ನೆಯದಲ್ಲಿ. ಇದಕ್ಕಾಗಿ ಹಲವಾರು ವರ್ಷಗಳಿಂದ ಗಣ್ಯ ನಾಯಕರುಗಳು, …
Read More »ಜಮೀರ್ 420, ಗುಜರಿ ವ್ಯಾಪಾರ ಮಾಡಿ ರಾಜಕಾರಣದಲ್ಲಿ ನಾಟಕ ಮಾಡ್ತಿದ್ದಾನೆ; ರೇಣುಕಾಚಾರ್ಯ
ಬೆಂಗಳೂರು (ಜೂನ್ 03); ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಓರ್ವ 420, ಗುಜರಿ ವ್ಯಾಪಾರ ಮಾಡಿ ಇದೀಗ ರಾಜಕಾರಣದಲ್ಲಿ ನಾಟಕ ಮಾಡುತ್ತಿದ್ದಾನೆ ಎಂದು ಮಾಜಿ ಸಚಿವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏಕ ವಚನದಲ್ಲಿ ದಾಳಿ ನಡೆಸಿದ್ದಾರೆ. ಶಾಸಕ ಜಮೀರ್ ಅಹಮದ್ ಪಾದರಾಯನಪುರ ಗಲಾಟೆಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ಜಾಮೀನಿಗೆ ಸಹಕರಿಸಿದ್ದಾರೆ. ಅಲ್ಲದೆ, ಬಿಡುಗಡೆಗೊಂಡವರನ್ನು ಇಂದು ಪಾದರಾಯನಪುರದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ” ಪಾದರಾಯನಪುರ ಗೂಂಡಾಗಳಿಗೆ …
Read More »ವಿವಾಹದಲ್ಲಿ ವೈದ್ಯ ಭಾಗಿ – ಸುಳ್ಯದಲ್ಲಿ 62 ಮಂದಿಗೆ ಕ್ವಾರಂಟೈನ್
ಮಂಗಳೂರು: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ. ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ ಬಂದಿದ್ದರು. ಭಾನುವಾರ ಅರಂತೋಡು ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿ, ಬಳಿಕ ಯಜಮಾನನ ಕಾರಿನಲ್ಲಿ ತೆರಳಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಂಗಳೂರಿಗೆ ಬಂದ ಬಳಿಕ ಅವರಿಗೆ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಈ ವೈದ್ಯರ ಪ್ರಾಥಮಿಕ ಸಂಪರ್ಕಕ್ಕೆ ಬಂದ …
Read More »ಅಟಲ್ ಭೂ-ಜಲ ಯೋಜನೆಗೆ 1203 ಕೋಟಿ ರೂ. : ಸಚಿವ ಮಾಧುಸ್ವಾಮಿ
ಬೆಂಗಳೂರು, ಜೂ.3- ಅಟಲ್ ಭೂ ಜಲ ಯೋಜನೆಯಡಿ ಅಂತರ್ಜಲ ಅಭಿವೃದ್ಧಿ ಯೋಜನೆಗೆ 1203 ಕೋಟಿ ರೂ. ಒದಗಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 14 ಜಿಲ್ಲೆಗಳಲ್ಲಿನ 41 ತಾಲ್ಲೂಕಿಗೆ ಈ ಹಣ ಒದಗಿಸಿದ್ದು, ನಾಲ್ಕು ವರ್ಷದಲ್ಲಿ ವೆಚ್ಚ ಮಾಡಬೇಕು. ಕೇಂದ್ರ ಸರ್ಕಾರದ ಈ ಅನುದಾನದ ಜತೆಗೆ ರಾಜ್ಯ ಸರ್ಕಾರದ ನೆರವು ಮತ್ತು ನರೇಗಾ ಯೋಜನೆಯನ್ನು ಬಳಸಿಕೊಳ್ಳಬಹುದು ಎಂದರು. ಅಂತರ್ಜಲ ಚೇತನ, ಅಟಲ್ ಭೂ …
Read More »ಕಲ್ಲಂಗಡಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರದಿಂದ ನಿರ್ಧರ………….
ಕಾರವಾರ : ಕೋವಿಡ್–19 ಲಾಕ್ಡೌನ್ನಿಂದಾಗಿ ಜಿಲ್ಲೆಯ ಕಲ್ಲಂಗಡಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರದಿಂದ ನಿರ್ಧರಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾನಿಗೊಳಗಾದ ಕಲ್ಲಂಗಡಿ ಬೆಳೆಗಳಿಗೆ ಪ್ರತಿ ಹೆಕ್ಟೇರ್ ಗೆ ರೂ. 15 ಸಾವಿರ ಗರಿಷ್ಠ ಪರಿಹಾರ ಧನವನ್ನು ಪ್ರತಿ ಫಲಾನುಭವಿಗೆ ಗರಿಷ್ಠ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಮಿತಿಗೊಳಿಸಿ ನೀಡಲಾಗುವುದು. ಅರ್ಜಿ ಸಲ್ಲಿಸಬಯಸುವ ಫಲಾನುಭವಿಯು ಜೂನ್ 12 ರೊಳಗೆ ಸಂಬಂಧಿತ ತಾಲ್ಲೂಕಿನ ತೋಟಗಾರಿಕಾ ಕಛೇರಿಗೆ ನಿಗದಿತ ಅರ್ಜಿ ನಮೂನೆಯೊಂದಿಗೆ …
Read More »ಕೊರೊನಾ ಸೋಂಕು ತಗುಲಿಲ್ಲ ಅಂತಾ ಗೆಳೆಯರ ಜತೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದು, ಇದೀಗ ಆತನಿಗೆ ಕೊರೊನಾ ಸೋಂಕು
ಬೆಳಗಾವಿ: ಮುಂಬೈನಿಂದ ವಾಪಸ್ ಆಗಿದ್ದ ವ್ಯಕ್ತಿ ಕ್ವಾರಂಟೈನ್ ನಿಂದ ಬಿಡುಗಡೆಯಾಗಿ ತನಗೆ ಕೊರೊನಾ ಸೋಂಕು ತಗುಲಿಲ್ಲ ಅಂತಾ ಗೆಳೆಯರ ಜತೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದು, ಇದೀಗ ಆತನಿಗೆ ಕೊರೊನಾ ಸೋಂಕು ಧೃಢಪಟ್ಟಿದೆ. ಹುಕ್ಕೇರಿ ತಾಲೂಕಿನ ಬಿದಿರೆವಾಡಿ ಗ್ರಾಮದ 35 ವರ್ಷ ವ್ಯಕ್ತಿ ಮುಂಬೈನಿಂದ ವಾಪಸ್ ಆಗಿದ್ದ. ಆತನನ್ನ ಆಸ್ತಿಹಾಳ್ ಹೈಸ್ಕೂಲ್ನಲ್ಲಿ ಕ್ವಾರಂಟೀನ್ ಮಾಡಲಾಗಿತ್ತು. ಸರ್ಕಾರ ಇತ್ತೀಚಿಗೆ ಕ್ವಾರಂಟೈನ್ ಅವಧಿಯನ್ನು 14 ದಿನದ ಬದಲು 7 ದಿನಕ್ಕೆ ಕಡಿತ ಮಾಡಿ …
Read More »ಜೈಲಿನಿಂದ ಬಂದ ಪಾದರಾಯನಪುರ ಪುಂಡರಿಗೆ ಭವ್ಯ ಸ್ವಾಗತ ನೀಡಿದ ಶಾಸಕ ಜಮೀರ್..!
ಬೆಂಗಳೂರು,ಜೂ.3- ಪಾದಾರಾಯನಪುರ ದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಬಂಧಿತರಾಗಿದ್ದ 126 ಆರೋಪಿಗಳು ಇಂದು ಬಿಡುಗಡೆಯಾಗಿ ಬಂದಾಗ ಪೊಷಕರ ದಂಡೇ ಅಲ್ಲಿ ನೆರೆದಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾ ಗಿದ್ದರೂ ಬಹಳಷ್ಟು ಮಂದಿ ಅವರನ್ನು ಬರಮಾಡಿಕೊಳ್ಳಲು ಗುಂಪು ಸೇರಿದ್ದು ಕಂಡುಬಂತು. ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಸಹ ಸ್ಥಳದಲ್ಲಿದ್ದು, ಅವರನ್ನು ಸ್ವಾಗತ ಕೋರಿದರು. ಪಾದರಾಯನಪುರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾದ ವೇಳೆ ತಪಾಸಣೆಗೆ ಬಂದಿದ್ದ ಆರೋಗ್ಯ ಕಾರ್ಯಕರ್ತರ ಮೇಲೆ ಹಾಗೂ …
Read More »ಬಿ.ಎಸ್.ಯಡಿಯೂರಪ್ಪ, ನನೆಗುದಿಗೆ ಬಿದ್ದಿದ್ದ ಕಚೇರಿಗಳ ಸ್ಥಳಾಂತರ ಕಾರ್ಯಕ್ಕೆ ಹಠಾತ್ ಆದೇಶಿಸಿದ್ದಾರೆ.
ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ದಾಳವನ್ನು ಮಾಜಿ ಸಚಿವ ಉಮೇಶ ಕತ್ತಿ ಉರುಳಿಸಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನನೆಗುದಿಗೆ ಬಿದ್ದಿದ್ದ ಕಚೇರಿಗಳ ಸ್ಥಳಾಂತರ ಕಾರ್ಯಕ್ಕೆ ಹಠಾತ್ ಆದೇಶಿಸಿದ್ದಾರೆ. ರಾಜ್ಯಮಟ್ಟದ ನಿಗದಿತ ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಬೆಳಗಾವಿ ಸುವರ್ಣಸೌಧಕ್ಕೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಮುಂದಿನ ಸಭೆಯೊಳಗೆ …
Read More »
Laxmi News 24×7