ಬೆಂಗಳೂರು: ಕೊರೊನಾ ಸ್ಫೋಟದ ಮಧ್ಯೆ, ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೂನ್ 8ರಿಂದಲೇ ದಾಖಲಾತಿ ಪ್ರಕ್ರಿಯೆಗಳು ಶುರುವಾಗಲಿವೆ. ಮೊದಲು ರಾಜ್ಯದಲ್ಲಿ ಶಾಲೆ ಪ್ರಾರಂಭ ಮಾಡುವ ಸಂಬಂಧ ಜೂನ್ 10ರಿಂದ ಮೂರು ದಿನಗಳ ಕಾಲ ಎಲ್ಲ ಶಾಲೆಗಳಲ್ಲಿ ಪೋಷಕರ, ಎಸ್ಡಿಎಂಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳ ಪ್ರಾರಂಭಕ್ಕೆ ಚಾಲನೆ ಕೊಟ್ಟಿರುವ ಸರ್ಕಾರ ಮೊದಲ ಹಂತವಾಗಿ ಶಾಲೆಗಳ ಕಚೇರಿ …
Read More »ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ……….
ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, …
Read More »ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು
ರಾಮನಗರ: ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು ಅಂತಾ ಮಾಜಿ ಸಿಎಂ ಹೆಚ್ . ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರಸ್ವಾಮಿ ಅವರನ್ನು ಸಿಎಂ ಮಾಡಿ ಕೆಲವರು ಬಾರಿ ಬೆಂಬಲ ಕೊಟ್ಟಿದ್ರು. ಯಾರಿಂದ ಅಧಿಕಾರ ಕಳೆದುಕೊಂಡೆ ಅಂತಾ ನನಗೆ ಗೊತ್ತು. ಕೆಲವರು ಕುಮಾರಸ್ವಾಮಿ ಅವರನ್ನು ಉಳಿಸಿದ್ದೆ ನಾವು ಅಂತಾ ಪ್ರಚಾರ ಪಡೆದುಕೊಂಡಿದ್ದಾರೆ …
Read More »ಮೊಳಕೆ ಒಡೆಯದ ಕಳಪೆ ಬೀಜ – ಉತ್ತಮ ಮಳೆಯಾದ್ರೂ ಮಂಕಾದ ರೈತರು…….
ರಾಯಚೂರು: ರೈತರು ದೇಶದ ಬೆನ್ನೆಲುಬು ಅನ್ನೋದು ಕೇವಲ ಮಾತಿಗೆ ಸೀಮಿತವಾಗಿದೆ. ರೈತರಿಗೆ ಮಾತ್ರ ಅನ್ಯಾಯವಾಗುತ್ತಲೇ ಇದೆ. ಸಾಲಸೂಲ ಮಾಡಿ ಜಮೀನಿನಲ್ಲಿ ಬಿತ್ತನೆ ಮಾಡಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಅನ್ನದಾತರು ಇರುತ್ತಾರೆ. ಆದರೆ ರೈತರಿಗೆ ಮೋಸ ಮಾಡಲೆಂದೇ ಇರುವ ಕಳಪೆ ಬೀಜ ತಯಾರಿಕಾ ಕಂಪನಿಗಳು ಮಾತ್ರ ರೈತರ ಬದುಕನ್ನೇ ಮುಳುಗಿಸುತ್ತಿವೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಖುಷಿಯಾಗಿದ್ದ ರಾಯಚೂರಿನ ಸಿಂಧನೂರು, ಮಸ್ಕಿ ತಾಲೂಕಿನ ಈ ರೈತರು ಈಗ ಮೋಸಹೊಗಿದ್ದಾರೆ. ಸೂರ್ಯಕಾಂತಿ ಬೀಜ ಬಿತ್ತಿ …
Read More »ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ.
ನವದೆಹಲಿ: ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ …
Read More »ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿ………..
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 200ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಆದರೆ ಒಂದೇ ದಿನ 380ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಸೋಮವಾರದವರೆಗೆ ರಾಜ್ಯದಲ್ಲೇ ಬೆಂಗಳೂರಿನಲ್ಲಿ(385) ಅತ್ಯಧಿಕ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಬರೋಬ್ಬರಿ 150 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಉಡುಪಿ ಮೊದಲ ಸ್ಥಾನಕ್ಕೆ ಏರಿದೆ. …
Read More »ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ
ಬೆಳಗಾವಿ: ಜಿಲ್ಲಾ ಉಸ್ತುವಾರಿ ಪಟ್ಟ ಸವಾಲುಗಳಿಂದ ಕೂಡಿದೆ ಒಳ್ಳೆಯ ಕೆಲಸ ಮಾಡಲಿ ಎಂದು ಜಿಲ್ಲೆಯ ನೂತನ ಉಸ್ತುವಾರಿ ಮಂತ್ರಿಗಳಾಗಿ ನೇಮಕಗೊಂಡ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆಗಳನ್ನು ನೀಡಿದ್ದಾರೆ. ಇಂದು ಯಮಕನಮರಡಿ ಕ್ಷೇತ್ರದಲ್ಲಿ ಮಾತನಾಡಿದ ಅವರು ಒಳ್ಳೆಯ ಕೆಲಸ ಮಾಡಬೇಕು. ಕೊರೋನಾ ಇನ್ನೂ ನಿಯಂತ್ರಣದಲ್ಲಿ ಬಂದಿಲ್ಲ. ಹೊಸ ಉಸ್ತುವಾರಿಗಳಿಗೆ ಇದು ಸವಾಲಾಗಿದೆ ಎಂದರು. ಇನ್ನೂ ಜಿಲ್ಲೆಯಲ್ಲಿ ಪ್ರವಾಹ ಬರುವ ನಿರೀಕ್ಷಯಿದೆ. ಅದಕ್ಕೆ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಾಕ್ ಡೌನ್, …
Read More »ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …
Read More »ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್…………………
ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೊರೊನಾ ಲಾಕ್ಡೌನ್ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ರಾಜ್ಯ …
Read More »ಔಷಧಿ ಪೂರೈಕೆ ಬಿಲ್ ಬಿಡುಗಡೆಗೂ ಕಮಿಷನ್..!
ಬೆಂಗಳೂರು, ಜೂ.2- ಲಾಕ್ಡೌನ್ನಿಂದ ಔಷಧ ಪೂರೈಕೆ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಗೆ ಹತ್ತಾರು ಕೋಟಿ ಮಲ್ಯದ ಔಷಧ ಪೂರೈಸಲಾಗಿದ್ದರೂ ಬಿಲ್ ಕ್ಲಿಯರ್ ಆಗುತ್ತಿಲ್ಲ. ಇದೀಗ ಬರೀ ಕೋವಿಡ್ಗೆ ಸಂಬಂಧಪಟ್ಟ ಔಷಧಿಗಳಿಗೆ ಮಾತ್ರ ಪೇಮೆಂಟ್ ಆಗುತ್ತಿದ್ದು, ಸೋಂಕಿನ ನೆಪವೊಡ್ಡಿ ಬಾಕಿ ಬಿಲ್ಗಳನ್ನು ಚುಕ್ತಾ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಔಷಧ ಪೂರೈಸಿದ್ದ ಸರಬರಾಜುದಾರರಿಗೆ …
Read More »
Laxmi News 24×7