Breaking News

ಜಿಲ್ಲೆ

ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ- ಹೊರ ರಾಜ್ಯದಿಂದ ಬಂದವ್ರಲ್ಲಿಯೇ ಹೆಚ್ಚು ಪಾಸಿಟಿವ್

ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕಂಟಕವಾಗ್ತಾ ಇದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿನಕ್ಕೆ ಹೆಚ್ಚುತ್ತಲೇ ಇದೆ. ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ ಏರುತ್ತಿದ್ದು 925ಕ್ಕೆ ತಲುಪಿದೆ. ಅರ್ಧದಷ್ಟು ವಿದೇಶದಿಂದ ಬಂದವರಾದರೆ ಇನ್ನರ್ಧ ತಬ್ಲಿಘಿಗಳಿಂದಲೇ ಪ್ರಕರಣಗಳು ಹೆಚ್ಚಾಗಿದೆ. ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಸೇರಿದಂತೆ …

Read More »

ಗ್ರೀನ್ ಝೋನ್‍ನಲ್ಲಿದ್ದ ಹಾಸನ ಜಿಲ್ಲೆಗೆ ಮುಂಬೈ ಕಂಟಕ!…….

ಹಾಸನ: ಗ್ರೀನ್ ಝೋನ್‍ನಲ್ಲಿದ್ದ ಹಾಸನ ಜಿಲ್ಲೆಗೆ ಮಹಾಮಾರಿ ಕೊರೊನಾ ಕಾಲಿಟ್ಟಿದೆ. ಮುಂಬೈಯಿಂದ ಹಾಸನಕ್ಕೆ ಆಗಮಿಸಿದ ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ಪಟ್ಟಿದೆ. ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಚನ್ನರಾಯಪಟ್ಟಣ ತಾಲೂಕಿನ ಐವರು ಮೇ 10ರಂದು ಮುಂಬೈನಿಂದ ಬಂದಿದ್ದರು. ಅದರಲ್ಲಿ ಒಂದೇ ಕುಟುಂಬದ ನಾಲ್ವರು ಒಂದೇ ಕಾರಿನಲ್ಲಿ ಬಂದಿದ್ದರು. ಒಂದೇ ಫ್ಯಾಮಿಲಿಯ ಇಬ್ಬರು ಮಕ್ಕಳು, ಓರ್ವ ಮಹಿಳೆ, ಓರ್ವ ಪುರುಷನಲ್ಲಿ ಸೋಂಕು ದೃಢಪಟ್ಟಿದೆ. ಕಾರ್ ಚಾಲಕನ …

Read More »

ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ವಿತರಣೆ ಮಾಡಿದರು

ಗೋಕಾಕ ನಗರದ ನಾಯಕ ಗಲ್ಲಿ ಅಂಗನವಾಡಿ ಕೋಡ್ ಸಂಖ್ಯೆ 203 ರಲ್ಲಿ ಶಿಶು ಅಭಿವೃದ್ಧಿ ಯೋಜನೆ ಗೋಕಾಕ ವತಿಯಿಂದ ಅಂಗನವಾಡಿಯ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಫುಡ್ ಕಿಟ್ ನ್ನು  ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಅನಿಲ ಕಾಂಬಳೆಯವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಸರೀನ ಕೊಣ್ಣೂರ, ಅಂಗನವಾಡಿ ಕಾರ್ಯಕರ್ತೆ ಕಮಲಾ ನರೇವಾಡಿ ಅಂ.ಸಹಾಯಕಿ ಮಹಾದೇವಿ ಚಿಕ್ಕಪ್ಪಗೋಳ ಹಾಜರಿದ್ದರು.

Read More »

ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಸಿಎಂ ಬಿಎಸ್ವೈ ಪ್ರತಿಕ್ರಿಯೆ ಏನು ಗೊತ್ತೇ..!

ಬೆಂಗಳೂರು: ಕೊರೊನಾ ಲಾಕ್ ಡೌನ್ 4.0 ಆರಂಭಕ್ಕೆ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿದಾರರಿಗೆ ಹೊಸ ಭರವಸೆ ಮತ್ತು ಚೈತನ್ಯವನ್ನು ತುಂಬಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ಜತೆಗೆ, ಲೋಕಲ್ ಸೇ ಗ್ಲೋಬಲ್ ಎನ್ನುವ ಮೋದಿ ಅವರ ಘೋಷಣೆ ಐತಿಹಾಸಿಕ. ಲೋಕಲ್ ಉತ್ಪನ್ನಗಳಿಗೆ ವೋಕೋಲ್ (ಬಾಯಿ ಮಾತಿನ …

Read More »

”ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು” : ಹೆಚ್ಡಿಕೆ

ಬೆಂಗಳೂರು, ಮೇ 12- ರೈತರಿಗೆ ಮಾರಕವಾಗುವ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕರಿಗೂ ಮಾರಕವಾಗಿರುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಖರೀದಿಸಲು ಅವಕಾಶ ನೀಡುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ಎಪಿಎಂಸಿಗಳು ಮುಚ್ಚುವಂತಾಗುತ್ತದೆ ಎಂದು ಆರೋಪಿಸಿದರು. ರಾಜ್ಯ …

Read More »

ಡಾ. ಸಂತೋಷ ಕುರಬೆಟ್ ಅವರು ಶಸ್ತ್ರಚಿಕಿತ್ಸೆ ನೆರವೇರಿಸಿ ಬಾಲಕ ನುಂಗಿದ್ದ ೧೨ ಆಯಸ್ಕಾಂತೀಯ ಬಟನ್ ಹೊರತೆಗೆದು ಜೀವ ಉಳಿಸುವಲ್ಲಿ ಯಶಸ್ವಿ

ಬೆಳಗಾವಿ – ನೆರೆಯ ಗೋವಾ ರಾಜ್ಯದ ೨ ವರ್ಷದ ಮಗುವೊಂದು ತೀವ್ರ ಹೊಟ್ಟೆನೋವು ಹಾಗೂ ಕಪ್ಪಾದ ಬಣ್ಣದ ಮಲದೊಂದಿಗೆ ತೊಂದರೆಯನ್ನು ಅನುಭವಿಸುತ್ತ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಆಗಮಿಸಿತ್ತು. ಇದಕ್ಕೂ ಮುಂಚೆ ಕೊರೊನಾ ವೈರಸ್ ಕೋವಿಡ್ -೧೯ ಸಂದರ್ಭದಲ್ಲಿ ದೇಶಾದ್ಯಂತ ಲಾಕಡೌನ ಪರಿಸ್ಥಿಯಲ್ಲಿ ಬಾಲಕನ ಚಿಕಿತ್ಸೆಗಾಗಿ ಪಾಲಕರು ಸುತ್ತಾಡಿ ಸುಸ್ತಾಗಿದ್ದರು. ಕೊನೆಗೆ ಗೋವಾದ ಜಿಲ್ಲಾಡಳಿತದ ಅನುಮತಿ ಪಡೆದು ಬೆಳಗಾವಿಗೆ ಆಗಮಿಸಿದ್ದರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಲಕನನ್ನು ಎಕ್ಸರೇ ತೆಗೆದು …

Read More »

ಲಾಕ್‍ಡೌನ್‍ನಿಂದ ಪೀಣ್ಯ ಕೈಗಾರಿಕೆ ತತ್ತರಿಸಿದೆ- ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಕಳವಳ

ಪೀಣ್ಯ: ಮಾರಾಣಾಂತಿಕ ಕೋವಿಡ್-19 ಲಾಕ್‍ಡೌನ್‍ನಿಂದ ಪೀಣ್ಯ ಕೈಗಾರಿಕೆ ವಲಯ ಅಕ್ಷರಶಃ ನಲುಗಿದೆ. ಬೆಂಗಳೂರು ಹೊರವಲಯದ ಸಣ್ಣ ಕೈಗಾರಿಕೆಗಳು ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಶ್ರೀನಿವಾಸ ಅಸ್ರಣ್ಣ ಕಳವಳ ವ್ಯಕ್ತಪಡಿಸಿದ್ದಾರೆ. ಕೈಗಾರಿಕ ವಲಯದ ಶೇ.70 ರಷ್ಟು ಭಾಗದ ಕೈಗಾರಿಕೆಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು, ಉಳಿದ ಶೇ.30 ರಷ್ಟು ಕೈಗಾರಿಕೆಗಳು ಕಾರ್ಯ ನಿರ್ವಹಿಸದಿರುವುದು ವಿಷಾದನೀಯ ಸಂಗತಿ. ಸಣ್ಣ ಕೈಗಾರಿಕೆಗಳ ಪರಿಸ್ಥಿತಿ ಗಂಭೀರವಾಗಿದ್ದು, ಮುಚ್ಚುವ ಸ್ಥಿತಿಗೆ ತಲುಪಿವೆ. ಪರಿಣಾಮ ಕಾರ್ಮಿಕರ ನೆರವಿಗೆ …

Read More »

ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯ ಉದ್ಘಾಟನೆ

ಕಾರವಾರ: ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್  ಉದ್ಘಾಟನೆ ಮಾಡಿದರು. ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿ ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಇಂದು ಉದ್ಘಾಟಿಸಿದರು. ಇಷ್ಟು ದಿನ ಉತ್ತರ ಕನ್ನಡ ಜಿಲ್ಲೆಯಲ್ಲಿನ ಸೋಂಕಿತರ ಪರೀಕ್ಷೆಯನ್ನು ಶಿವಮೊಗ್ಗ ಅಥವಾ ಬೆಂಗಳೂರಿಗೆ ಕಳುಹಿಸಿ ವರದಿ ತರಿಸಬೇಕಿತ್ತು. ಇದು ತುಂಬಾ ತಡವಾಗುತ್ತಿತ್ತು. ಇದೀಗ ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿಯೇ ಮಾಡಲು …

Read More »

ಲಾಕ್‍ಡೌನ್ ಡ್ಯೂಟಿ ಮಧ್ಯೆ 20 ಸಾವಿರ ಸಸಿ ಬೆಳೆಸಿದ ರಾಯಚೂರು ಪೊಲೀಸರು……….

ರಾಯಚೂರು: ಬಿಸಿಲನಾಡು ರಾಯಚೂರನ್ನು ಹಸಿರು ಜಿಲ್ಲೆಯನ್ನಾಗಿಸಲು ಜಿಲ್ಲಾ ಪೊಲೀಸ್ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದೆ. ಕೊರೊನಾ ಲಾಕ್ ಡೌನ್ ಸಮಯದಲ್ಲೂ 20 ಸಾವಿರ ಸಸಿಗಳನ್ನು ಬೆಳೆಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಅವರು ಹಸಿರು ಜಿಲ್ಲೆಗಾಗಿ ಪೊಲೀಸ್ ಸಿಬ್ಬಂದಿ, ಸಾರ್ವಜನಿಕರೊಂದಿಗೆ 5 ಲಕ್ಷ ಸಸಿಗಳನ್ನು ನೆಡುವ ಪ್ರತಿಜ್ಞೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ರಾಯಚೂರಿನ ನಾಗರಿಕರ ಸಹಕಾರದೊಂದಿಗೆ …

Read More »

2 ಗಂಟೆಗೆ ಮೊದಲು ಚೆಕ್ ಇನ್, ಕ್ಯಾಬಿನ್ ಲಗೇಜ್ ಇಲ್ಲ – ವಿಮಾನ ಪ್ರಯಾಣಕ್ಕೂ ಮುನ್ನ ಓದಿ

ನವದೆಹಲಿ: ಕೋವಿಡ್ 19 ಬಗ್ಗೆ ಸಂಬಂಧಿಸಿದ ಪ್ರಶ್ನಾವಳಿ, ಕ್ಯಾಬಿನ್ ಲಗೇಜ್ ತಗೆದುಕೊಂಡು ಹೋಗುವಂತಿಲ್ಲ, ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆ ಜೊತೆಗೆ ವಿಮಾನ ಪ್ರಯಾಣಿಸುವ 2 ಗಂಟೆಯ ಮೊದಲು ಚೆಕ್ ಇನ್ – ಇದು ಲಾಕ್‍ಡೌನ್ ತೆರವಾದ ಬಳಿಕ ವಿಮಾನ ಪ್ರಯಾಣಿಕರು ಅನುಸರಿಸಬೇಕಾದ ಕ್ರಮಗಳು. ಕೋವಿಡ್ 19 ನಿಂದಾಗಿ ಮಾರ್ಚ್ 25ರಿಂದ ಪ್ರಯಾಣಿಕ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಈ ನಡುವೆ ದೇಶೀಯ ವಿಮಾನಗಳ ಹಾರಾಟಕ್ಕೆ ವಿಮಾನಯಾನ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಧಿಕೃತವಾಗಿ …

Read More »