Breaking News

ಜಿಲ್ಲೆ

ಇವರನ್ನ ಇಟ್ಟುಕೊಂಡರೆ ಪಂಚಾಯಿತಿ ಉದ್ಧಾರವಾಗಲ್ಲ: ಪಿಡಿಒ ವಿರುದ್ಧ ಶಾಸಕ ಗರಂ

ಚಾಮರಾಜನಗರ: ಬಡ ಕೂಲಿಗಾರರಿಗೆ ಭಾರೀ ಮೊಸ ಮಾಡ್ತಿದ್ದಾರೆ, ಇವರನ್ನ ಇಲ್ಲೇ ಇಟ್ಟುಕೊಂಡರೆ ಪಂಚಾಯಿತಿ ಖಂಡಿತ ಉದ್ಧಾರ ಆಗುವುದಿಲ್ಲ ಎಂದು ಶಾಸಕ ಆರ್.ನರೇಂದ್ರ ಪಿಡಿಒಗೆ ಚಳಿ ಬಿಡಿಸಿದರು. ಮಂಗಳವಾರ ಮಂಗಲ ಗ್ರಾಮಪಂಚಾಯಿತಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಆನಂದ್ ಬಂಡವಾಳ ಬಯಲಾಗಿದೆ. ಒಟ್ಟು 1,137 ಜಾಬ್ ಕಾರ್ಡ್ ಇದ್ದರೂ ಕೇವಲ 100-150 ಮಂದಿಗೆ ಮಾತ್ರ ಕೆಲಸ ನೀಡಲಾಗಿದೆ. ಅಲ್ಲದೆ 637 ಮಂದಿ ಕೂಲಿ …

Read More »

ಸಮುದಾಯ ಪರೀಕ್ಷೆಯಲ್ಲಿ 7 ಮಂದಿಗೆ ಪಾಸಿಟಿವ್- ಸೋಂಕಿತರ ಮೊಬೈಲ್ ಸ್ವಿಚ್ಛ್ ಆಫ್

ಬೆಂಗಳೂರು: ಪಾದರಾಯನಪುರದಲ್ಲಿ ನಡೆಸಿದ ಸಮುದಾಯದ ಪರೀಕ್ಷೆಯಲ್ಲಿ ಬರೋಬ್ಬರಿ 7 ಮಂದಿಯಲ್ಲಿ ಸೋಂಕು ಇರೋದು ಪತ್ತೆಯಾಗಿದೆ. ಆದ್ರೆ ಏಳು ಮಂದಿ ಸದ್ಯ ಎಲ್ಲಿದ್ದಾರೆ ಎಂಬ ವಿಚಾರವೇ ನಿಗೂಢವಾಗಿದೆ. ಪರೀಕ್ಷೆ ವೇಳೆ ನೀಡಿದ ಇವರ ಮೊಬೈಲ್ ನಂಬರ್ ಗಳು ಸ್ವಿಚ್ಛ್ ಆಫ್ ಆಗಿವೆ. ಏಳು ಮಂದಿಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಪಾದರಾಯನಪುರದಲ್ಲಿ ಸಮುದಾಯಕ್ಕೆ ಸೋಂಕು ಹಬ್ಬಿದ್ಯಾ ಎಂಬ ಅನುಮಾನ ಮೂಡುತ್ತಿದೆ. ಕೋವಿಡ್-19 ಪರೀಕ್ಷೆ ವೇಳೆ 261 ಮಂದಿ ಪೈಕಿ 7 ಮಂದಿಯಲ್ಲಿ ಸೋಂಕು …

Read More »

20 ಲಕ್ಷ ಕೋಟಿ ರೂ. ಮೊತ್ತದಲ್ಲಿ ಈ ಹಿಂದೆ ಘೋಷಿಸಲಾದ ಕೇಂದ್ರ ಸರಕಾರದ ಪ್ರಾಯೋಜಿತ ನಿಧಿಯೂ ಸೇರಿದೆಯೋ ಅಥವಾ ಇಲ್ಲವೋ:ಪ್ರಿಯಾಂಕ್ ಖರ್ಗೆ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ, ಇದೊಂದು ಗಿಮಿಕ್ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ವೈರಸ್ ನಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಬಡ ಮಧ್ಯಮ ವರ್ಗದ ಜನರು ತೀವ್ರ ಸಂಕಟಕ್ಕೀಡಾಗಿದ್ದಾರೆ. ಕೂಲಿ ಕಾರ್ಮಿಕರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ದೇಶದ ಬೆನ್ನೆಲುಬಾದ ರೈತಾಪಿ ವರ್ಗ …

Read More »

ವಿಜಯಪುರ: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೆ ಯತ್ನ,ಐವರ ವಿರುದ್ಧ ಎಫ್‍ಐಆರ್

ವಿಜಯಪುರ: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೆ ಯತ್ನಿಸಿದ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ದೇವರ ಹಿಪ್ಪರಗಿ ಮತ ಕ್ಷೇತ್ರದ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಲಗೋಡ ಎಲ್‍ಟಿ ಗ್ರಾಮದ ಪ್ರಮೋದ ರಾಠೋಡ (ಎ1), ಲಕ್ಷ್ಮಿ ರಾಠೋಡ (ಎ2), ರವಿ ರಾಠೋಡ(ಎ3), ಸಂಜು ರಾಠೋಡ (ಎ4), ರಾಹುಲ್ ರಾಠೋಡ್ (ಎ5) ಮೇಲೆ ಐಪಿಸಿ ಸೆಕ್ಷನ್ 353, 504ಸ ಅನ್ವಯ …

Read More »

ಬೆಳಗಾವಿ: ಕೋವಿಡ್-೧೯: 5 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-೧೯: 5 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಮೇ 12 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಮೂವರು ಮಹಿಳೆಯು ಸೇರಿದಂತೆ ಒಟ್ಟು ಐದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಐದು ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-482 ಪಿ-485 …

Read More »

ಉಡುಪಿಯಲ್ಲಿ ನಾಳೆಯಿಂದ ಖಾಸಗಿ, ಸರ್ಕಾರಿ ಬಸ್ ಸಂಚಾರ ಆರಂಭ…..

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರ ಆರಂಭವಾಗಲಿದೆ. ಜನತಾ ಕಫ್ರ್ಯೂ ಘೋಷಣೆಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರ ಇರಲಿಲ್ಲ. ಇದೀಗ ಕೆಲವು ಷರತ್ತುಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮೇ 13ರ ಬೆಳಗ್ಗೆಯಿಂದ ಜಿಲ್ಲೆಯೊಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳು ಸಂಚಾರ ಆರಂಭಿಸಲಿವೆ. ಒಂದು ಬಸ್‍ನಲ್ಲಿ ಶೇ.50ರಷ್ಟು ಪ್ರಯಾಣಿಕರು ಮಾತ್ರ ಓಡಾಡಬಹುದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸಿದ …

Read More »

ಕೊರೊನಾ ವಾರಿಯರ್ಸ್‍ಗೆ ಪಾದ ಪೂಜೆ ಮಾಡಿ ದಾದಿಯರ ದಿನಾಚರಣೆ ಆಚರಣೆ

ಹಾವೇರಿ: ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ವಾರಿಯರ್ಸ್ ಕಾಲು ತೊಳೆದು, ಕುಂಕುಮ ಹಚ್ಚಿ, ಪೂಜೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ದಾದಿಯರಿಗೆ ಗ್ರಾಮದ ವಿಶ್ವನಾಥ ಹಿರೇಮಠ ಮತ್ತು ಕೃಷ್ಣ ಈಳಿಗೇರ ಸ್ನೇಹ ಬಳಗದ ವತಿಯಿಂದ ಪಾದ ಪೂಜೆ ನೆರವೇರಿಸಲಾಗಿದೆ. ಈ ಮೂಲಕ ಸ್ನೇಹ ಬಳಗದ ಸದಸ್ಯರು ಕೊರೊನಾ ವಾರಿಯರ್ಸ್ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ. …

Read More »

ಹೆಚ್ಚು ಎಣ್ಣೆ ಕುಡಿದಿದ್ದಕ್ಕೆ ಗೆಳೆಯನ್ನ ಕೊಂದವರು ಅಂದರ್…………

ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್, ಸುಜಿತ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಪಾರ್ಟಿ ಮಧ್ಯೆ ಹೆಚ್ಚು ಮದ್ಯ ತಮಗೆ ಬೇಕೆಂದು ಮೂವರು ಕಿತ್ತಾಡಿಕೊಂಡಿದ್ದಾರೆ. ಮದ್ಯ ಖರೀದಿಗೆ ಕಿಶೋರ್ ಹೆಚ್ಚು ನೀಡಿಲ್ಲ ಎಂದು ರಾಜೇಶ್ ಮತ್ತು ಸುಜಿತ್ ಕಿಡಿಕಾರಿದ್ದಾರೆ. …

Read More »

ಕರ್ನಾಟಕಕ್ಕೆ ಕಾದಿದೆ ದೊಡ್ಡ ಗಂಡಾತರ..? ಬೆಂಗಳೂರಿನ ಮೇಲೆ ಕೊರೋನಾ ಕಾರ್ಮೋಡ…!

ಬೆಂಗಳೂರು, ಮೇ 12- ರಾಜಧಾನಿ ಬೆಂಗಳೂರಿಗೆ ಹೊಸ ಕಂಟಕ ಎದುರಾಗಿದೆ. ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ಮಹಾಮಾರಿ ಕೊರೊನಾ ದಶದಿಕ್ಕುಗಳಿಂದಲೂ ಆವರಿಸುವ ಆತಂಕ ಪ್ರಾರಂಭವಾಗಿದೆ. ಹೊರರಾಜ್ಯಗಳಿಂದ ನಗರಕ್ಕೆ ಸುಮಾರು 30 ಸಾವಿರಕ್ಕೂ ಹೆಚ್ಚು ಕನ್ನಡಿಗರು ಬರುತ್ತಿದ್ದು, ಅವರನ್ನು ಕ್ವಾರಂಟೈನ್ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿಗೆ ವಿವಿಧೆಡೆಯಿಂದ ಬರುತ್ತಿರುವ 30 ಸಾವಿರ ಜನರನ್ನು ನಿಭಾಯಿಸುವುದು ಹೇಗೆ, ಕ್ವಾರಂಟೈನ್ ಮಾಡುವುದು ಹೇಗೆ ಎಂಬ ಟೆನ್ಷನ್ ಅಧಿಕಾರಿಗಳಿಗೆ ಪ್ರಾರಂಭವಾಗಿದೆ. ಇವರಲ್ಲಿ ಸೋಂಕು ತಗುಲಿದವರು …

Read More »

“ಕೊರೋನಾ ಹೆಚ್ಚಾಗಲು ತಬ್ಲಿಘೀಗಳು ಕಾರಣರಲ್ಲ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದರೆ ಜನರ ಕಷ್ಟ ತೀರಲ್ಲ” : ಸಿದ್ದರಾಮಯ್ಯ

ಬೆಂಗಳೂರು, ಮೇ 12- ಕೊರೊನಾ ಸೋಂಕು ಹೆಚ್ಚಾಗಲು ತಬ್ಲಿಘೀಗಳು ಕಾರಣ ಎಂಬ ಆರೋಪದಲ್ಲಿ ಸತ್ಯವಿಲ್ಲ. ಕೋಮುವಾದಿಗಳು ಮತ್ತು ಆರ್‍ಎಸ್‍ಎಸ್‍ನವರು ರಾಜಕೀಯ ಕಾರಣಕ್ಕಾಗಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನಜೀವನವನ್ನು ಸುಧಾರಿಸಲು, ಸೋಂಕನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ಈವರೆಗೆ ನಾವು ಸರ್ಕಾರಕ್ಕೆ …

Read More »