Breaking News

ಜಿಲ್ಲೆ

ಕಲಬುರಗಿಗೆ ಹೊಸ ಟೆನ್ಶನ್ – ಮುಂಬೈನಿಂದ 1,200ಕ್ಕೂ ಹೆಚ್ಚು ಕಾರ್ಮಿಕರು ರಿಟರ್ನ್

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ಹೆಚ್ಚಾದ ಹಿನ್ನೆಲೆಯಲ್ಲಿ ಜನ ಚಿಂತೆಗೀಡಾಗಿದ್ದಾರೆ. ಹೀಗಿರುವಾಗಲೇ ಮುಂಬೈನಿಂದ ಸಾವಿರಾರು ಕೂಲಿ ಕಾರ್ಮಿಕರು ವಿಶೇಷ ರೈಲು ಮೂಲಕ ಕಲಬುರಗಿಗೆ ತಡರಾತ್ರಿ ಆಗಮಿಸಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಹಾಟ್‍ಸ್ಪಾಟ್ ಕಲಬುರಗಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂಬೈನಿಂದ ಸಾವಿರಾರು ವಲಸೆ ಕಾರ್ಮಿಕರು ಶ್ರಮಿಕ್ ಸ್ಪೆಷಲ್ ರೈಲಿನ ಮೂಲಕ ಕಲಬುರಗಿಗೆ ತಡರಾತ್ರಿ 2 ಗಂಟೆಗೆ ಬಂದಿಳಿದಿದ್ದಾರೆ. ಮುಂಬೈನಿಂದ ಬಂದಿಳಿದ ವಲಸಿಗ ಕಾರ್ಮಿಕರನ್ನು ಕಲಬುರಗಿ ಸಂಸದ …

Read More »

ಕೊರೊನಾ ಸೋಂಕಿತನ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಆಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ವಿರೋಧ ವ್ಯಕ್ತ

ದಾವಣಗೆರೆ: ಕೊರೊನಾ ಸೋಂಕಿತನ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಆಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ವಿರೋಧ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿವನಗರದಲ್ಲಿ ಕಂಟೈನ್ಮೆಂಟ್ ಝೋನ್ ಮಾಡಲು ಜನರು ವಿರೋಧ ಮಾಡುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಯುವಕನ ಏರಿಯಾವನ್ನು ಕಂಟೈನ್‍ಮೆಂಟ್ ವಲಯವನ್ನಾಗಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ವೇಳೆ ಕಂಟೈನ್ಮೆಂಟ್ ಝೋನ್ ಮಾಡಬೇಡಿ ಎಂದು ನೂರಾರು ಜನರು ತಡೆದಿದ್ದಾರೆ. ಅಜ್ಮೀರ್‌ನಿಂದ ದಾವಣಗೆರೆಗೆ ಆಗಮಿಸಿದ್ದ 22 ವರ್ಷದ ಯುವಕನಿಗೆ …

Read More »

ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲವಾಗಿ ಸಿಲಿಕಾನ್ ಸಿಟಿಯಲ್ಲಿ ಶೀಘ್ರವೇ ಬಿಎಂಟಿಸಿ ಬಸ್ ಓಡಾಟ ಶುರುವಾಗುತ್ತಾ ಅನ್ನೋ ಸುಳಿವೊಂದು  ಸಿಕ್ಕಿದೆ. ಹೌದು. 48 ದಿನಗಳ ಲಾಕ್‍ಡೌನ್ ಬಳಿಕ ಇಂದಿನಿಂದ ಬಿಎಂಟಿಸಿಯ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಸೂಚಿಸಿದೆ. ಸಾರಿಗೆ ಸಂಸ್ಥೆಯು ತುರ್ತು ಸೇವೆಗೆ ಒಳಪಡುವುದರಿಂದ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ. ಪ್ರಮುಖ ಸೂಚನೆಯೆಂದರೆ ಕೆಲಸಕ್ಕೆ …

Read More »

ಚಿಕ್ಕೋಡಿ:ಕೊಳವೆ ಬಾವಿಗೆ ಬಿದ್ದು ರೈತ ಸಾವು,……..

ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು 18ರಿಂದ 20 …

Read More »

ಕುಂದಾನಗರಿ ಬೆಳಗಾವಿಯಲ್ಲಿ ತಬ್ಲಿಘಿಗಳ ಕಂಟಕ ಮುಗಿಯುವ ಮುನ್ನವೇ ಅಜ್ಮೀರ್ ಯಾತ್ರಿಗಳ ಆತಂಕ ಶುರುವಾಗಿದೆ.

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ತಬ್ಲಿಘಿಗಳ ಕಂಟಕ ಮುಗಿಯುವ ಮುನ್ನವೇ ಅಜ್ಮೀರ್ ಯಾತ್ರಿಗಳ ಆತಂಕ ಶುರುವಾಗಿದೆ. ಅಜ್ಮೀರ್‌ನಿಂದ ಬಂದ 22 ಯಾತ್ರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಾತ್ರಿಗಳ ಎಡವಟ್ಟಿನಿಂದ ಇಡೀ ಜಿಲ್ಲೆಯೇ ಸಂಕಷ್ಟಕ್ಕೆ ಸಿಲುಕುತ್ತಿತ್ತು. ಕಳ್ಳ ದಾರಿಯಲ್ಲಿ ನುಸುಳಲು ಹೊರಟವರನ್ನು ಹಿಡಿದು ಗಂಡಾಂತರ ತಪ್ಪಿಸಿದ ಪೊಲೀಸರ ಕಾರ್ಯದಿಂದ ಜಿಲ್ಲೆಯ ಜನ ನಿಟ್ಟುಸಿರು ಬಿಟ್ಟಿದ್ದಾರೆ. ರಾಜಸ್ಥಾನದ ಅಜ್ಮೀರ್‌ನಿಂದ ಬಂದ ಯಾತ್ರಿಗಳ ಕಹಾನಿಯೇ ಭಯಾನಕವಾಗಿದೆ. ಅಧಿಕಾರಿಗಳು ಮತ್ತು ಪೊಲೀಸರು ಸ್ವಲ್ಪ ಯಾಮಾರಿದರೂ 22 ಮಂದಿ …

Read More »

ಉತ್ತಮ ಆಹಾರ, ಊಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ಕೊರೊನಾ ವಾರಿಯರ್ಸ್ ಆಕ್ರೋಶ

ಶಿವಮೊಗ್ಗ: ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಹಗಲು ರಾತ್ರಿ ಎನ್ನದೇ, ಮನೆಗೂ ಹೋಗದೆ ನರ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಊಟ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸದೆ ಗೋಳಾಡುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮನೆಗೆ ಹೋಗುವಂತಿಲ್ಲ. ಕೊರೊನಾ ವಾರಿಯರ್ ಗಳು ಉಳಿದುಕೊಳ್ಳಲು ಜಿಲ್ಲಾಡಳಿತ ನಗರದ ವಿವಿಧ ಹೋಟೆಲ್ ಗಳಲ್ಲಿ ವ್ಯವಸ್ಥೆ ಮಾಡಿದೆ. ಆದರೆ ಹೋಟೆಲ್ ನಲ್ಲಿ ಕೊಠಡಿಗಳು …

Read More »

ಕೊರೊನಾ ನೆಪದಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಸಂಬಳ ಕೊಡದ ಕಾಲೇಜು!

ಬೆಂಗಳೂರು: ಕೊರೊನಾ ಸೃಷ್ಟಿಸಿದ ಅವಾಂತರಗಳಿಂದ ಒಂದೆಡೆ ಜನಸಾಮಾನ್ಯರು ಕೆಲಸವಿಲ್ಲದೇ ಪರದಾಡುತ್ತಿದ್ದರೆ, ಮತ್ತೊಂದೆಡೆ ದುಡಿದ ಕೆಲಸಕ್ಕೂ ಸಂಬಳ ಸಿಗದೇ ಕೆಲ ಜನ ಒದ್ದಾಡುತ್ತಿದ್ದಾರೆ. ಇದಕ್ಕೆ ನೈಜ ಉದಾಹರಣೆಯೆಂದರೆ ಸೆಕ್ಯೂರಿಟಿ ಗಾರ್ಡ್. ಖಾಸಗಿ ಕಾಲೇಜೊಂದು ಸೆಕ್ಯೂರಿಟಿ ಗಾರ್ಡ್ ಗಳಿಗೆ ಸಂಬಳವನ್ನು ನೀಡದೇ ಸತಾಯಿಸುತ್ತಿದೆ. ಹೌದು. ಕೊರೊನಾದಿಂದಾಗಿ ಬಡವರ ಬದುಕು ಬೀದಿಗೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಲಾಕ್ ಡೌನ್ ಆದ್ರೂ ಕೆಲವೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಎಂಎಸ್ ಪಾಳ್ಯದ …

Read More »

ಬೆಳಗಾವಿ: ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದ ವೃದ್ಧನಿಗೆ ಮತ್ತೆ ಕೊರೊನಾ ಸೋಂಕು

ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದ 60 ವರ್ಷದ ವೃದ್ಧನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಎರಡಲೇ ಅಲೆ ಆರಂಭಗೊಳ್ತಾ ಅನ್ನೋ ಆತಂಕ ಶುರುವಾಗಿದೆ ಕುಡುಚಿ ಪಟ್ಟಣದ 60 ವರ್ಷದ ವೃದ್ಧ (ರೋಗಿ 298) 10 ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿರೋದು ದೃಢವಾಗಿದೆ. ಇದೀಗ ಮತ್ತೆ ವೃದ್ಧನನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ …

Read More »

ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದ ಕಾವೇರಿ ನದಿ ತಟ್ಟದಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ

ಮಡಿಕೇರಿ: ಕಳೆದ ಎರಡು ವರ್ಷಗಳಿಂದ ಮಹಾಮಳೆಗೆ ಕೊಡಗಿನ ಕಾವೇರಿ ನದಿ ತೀರದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನದಿ ತಟದ ಬಡಾವಣೆಗಳಲ್ಲಿ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಕಾವೇರಿ ನದಿಯಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಕೊಪ್ಪದ ಕಾವೇರಿ ಸೇತುವೆ ಕೆಳ ಭಾಗದಲ್ಲಿ ಗಣಪತಿ ಪೂಜೆ ಸಲ್ಲಿಸಿದ ಬಳಿಕ ಜೆಸಿಬಿಯಲ್ಲಿ ಕುಳಿತ ಶಾಸಕ ರಂಜನ್ …

Read More »

ವಿದೇಶಿಗರ ಕ್ವಾರಂಟೈನ್- ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿದ ಗ್ರಾಮಸ್ಥರು

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಬಾಣವಾಡಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದೇಶಿಗರ ಕ್ವಾರಂಟೈನ್ ವಿಚಾರವಾಗಿ, ಮಠದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಬೇಡ ಎಂದು ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದರು. ಇಂದು ಗ್ರಾಮಸ್ಥರ ಜೊತೆ ಜಂಟಿ ಸಭೆ ನಡೆಸಿದ ಅಧಿಕಾರಿಗಳು ಮತ್ತು …

Read More »